Homeಮುಖಪುಟಅಗ್ನಿಪಥ ಯೋಜನೆ: ದೇಶದ ಜನರಿಗೆ ಏನು ಬೇಕೆಂದು ಪ್ರಧಾನಿಗೆ ಅರ್ಥವಾಗುತ್ತಿಲ್ಲ - ರಾಹುಲ್ ಗಾಂಧಿ

ಅಗ್ನಿಪಥ ಯೋಜನೆ: ದೇಶದ ಜನರಿಗೆ ಏನು ಬೇಕೆಂದು ಪ್ರಧಾನಿಗೆ ಅರ್ಥವಾಗುತ್ತಿಲ್ಲ – ರಾಹುಲ್ ಗಾಂಧಿ

’ಪ್ರಧಾನಿ ಮೋದಿ ತಮ್ಮ ಸ್ನೇಹಿತರ ಮಾತು ಬಿಟ್ಟು ಬೇರೆನು ಕೇಳುವುದಿಲ್ಲ’

- Advertisement -
- Advertisement -

“ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ನೇಹಿತರ ಮಾತುಗಳನ್ನು ಹೊರತುಪಡಿಸಿ ಬೇರೆ ಏನನ್ನೂ ಕೇಳದ ಕಾರಣ ದೇಶದ ಜನರಿಗೆ ಏನು ಬೇಕು ಎಂದು ಅವರಿಗೆ ಅರ್ಥವಾಗುತ್ತಿಲ್ಲ” ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶುಕ್ರವಾರ (ಜೂನ್ 17) ಆರೋಪಿಸಿದ್ದಾರೆ.

ಸಶಸ್ತ್ರ ಪಡೆಗಳಿಗೆ ನೇಮಕಾತಿಗಾಗಿ ‘ಅಗ್ನಿಪಥ’ ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ಅಗ್ನಿಪಥ ಯೋಜನೆಯ ವಿರುದ್ಧದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ನೋಟು ಅಮಾನ್ಯೀಕರಣ ಮತ್ತು ಮೂರು ಕೃಷಿ ಕಾನೂನುಗಳಂತಹ ಇತರ ವಿವಾದಾತ್ಮಕ ಕ್ರಮಗಳನ್ನು ಉಲ್ಲೇಖಿಸಿದ್ದಾರೆ.

ಭಾರಿ ಪ್ರತಿಭಟನೆ ಬೆನ್ನಲ್ಲೇ ’ಅಗ್ನಿಪಥ’ ಯೋಜನೆಗೆ ನೇಮಕಾತಿಗಾಗಿ ಒಕ್ಕೂಟ ಸರ್ಕಾರವು ಗರಿಷ್ಠ ವಯೋಮಿತಿಯನ್ನು 21 ವರ್ಷದಿಂದ 23 ವರ್ಷಕ್ಕೆ ಏರಿಸಿದೆ.  ದೇಶದ ಹಲವಾರು ಭಾಗಗಳಲ್ಲಿ ಈ ಯೋಜನೆಯ ವಿರುದ್ಧ ಯುವಕರು ಪ್ರತಿಭಟನೆ ನಡೆಸುತ್ತಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ‘ಅಗ್ನಿ ಪಥ್’ ಯೋಜನೆ ಸೇನೆಗೆ ಅಪಾಯಕಾರಿ: ಕೊಡಗಿನ ವೀರ ಯೋಧರ ಆತಂಕ

“ಶ್ರೇಣಿ ಇಲ್ಲ, ಪಿಂಚಣಿ ಇಲ್ಲ. 2 ವರ್ಷಗಳಿಂದ ನೇರ ನೇಮಕಾತಿ ಇಲ್ಲ. 4 ವರ್ಷಗಳ ನಂತರ ಸ್ಥಿರ ಭವಿಷ್ಯವಿಲ್ಲ. ಸೇನೆಯ ಬಗ್ಗೆ ಗೌರವವಿಲ್ಲ. ಪ್ರಧಾನಿಗಳೇ ದೇಶದ ನಿರುದ್ಯೋಗಿ ಯುವಕರ ದನಿಯನ್ನು ಆಲಿಸಿ, ಅವರನ್ನು ಅಗ್ನಿಪಥದಲ್ಲಿ ಓಡಿಸುವ ಮೂಲಕ ಅವರ ಸಂಯಮದ ಅಗ್ನಿ ಪರೀಕ್ಷೆ ಮಾಡಬೇಡಿ” ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಜಿಎಸ್‌ಟಿ, ನೋಟ್‌ಬಾನ್, ಕೃಷಿ ಕಾನೂನುಗಳು ಮತ್ತು ಈಗ ಅಗ್ನಿಪಥ್‌ನಂತಹ ಯೋಜನೆಗಳನ್ನು ತಮ್ಮ ಟ್ವೀಟ್‌ನಲ್ಲಿ ಉಲ್ಲೇಖಿಸಿರುವ ಅವರು, ಅವುಗಳನ್ನು ಜನರ ಕಲ್ಯಾಣಕ್ಕಾಗಿ ಯೋಜಿಸಲಾಗಿದೆ ಎಂದರು ಆದರೆ, ನಾಗರಿಕರಿಂದಲೇ ತಿರಸ್ಕರಿಸಲಾಗಿದೆ ಎಂದು ಒಕ್ಕೂಟ ಸರ್ಕರದ ಯೋಜನೆಗಳಿಗೆ ಉಂಟಾದ ಪ್ರತಿಭಟನೆಗಳ ಬಗ್ಗೆ ತಿಳಿಸಿದ್ದಾರೆ.

“ಅಗ್ನಿಪಥ್ – ಯುವಕರು ತಿರಸ್ಕರಿಸಿದರು. ಕೃಷಿ ಕಾನೂನುಗಳು – ರೈತರು ತಿರಸ್ಕರಿಸಿದರು. ನೋಟ್‌ಬಾನ್ – ಅರ್ಥಶಾಸ್ತ್ರಜ್ಞರು ತಿರಸ್ಕರಿಸಿದರು. ಜಿಎಸ್‌ಟಿ – ವ್ಯಾಪಾರಿಗಳು ತಿರಸ್ಕರಿಸಿದರು. ದೇಶದ ಜನರಿಗೆ ಏನು ಬೇಕು ಎಂದು ಪ್ರಧಾನಿಗೆ ಅರ್ಥವಾಗುತ್ತಿಲ್ಲ, ಏಕೆಂದರೆ ಅವರು ತಮ್ಮ ಸ್ನೇಹಿತರ ಮಾತುಗಳನ್ನು ಹೊರತುಪಡಿಸಿ ಏನನ್ನೂ ಕೇಳುವುದಿಲ್ಲ” ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಈ ಯೋಜನೆಯನ್ನು ಹಿಂತೆಗೆದುಕೊಳ್ಳುವಂತೆ ಪ್ರಧಾನಿಯನ್ನು ಒತ್ತಾಯಿಸಿದ್ದರು. ಬಿಜೆಪಿ ಸರ್ಕಾರವು 24 ಗಂಟೆಗಳಲ್ಲಿ ಹೊಸ ಸೇನಾ ನೇಮಕಾತಿ ಯೋಜನೆಯ ನಿಯಮಗಳನ್ನು ಬದಲಾಯಿಸಬೇಕಾಗಿದೆ ಎಂದು ಹೇಳಿದ್ದರು.

ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ‘ಅಗ್ನಿಪಥ್‌‌’ ಯೋಜನೆ ವಿರೋಧಿಸಿ ಮತ್ತು ಸೇನಾ ನೇಮಕಾತಿ ಮಾಡುವಂತೆ ಆಗ್ರಹಿಸಿ ಬಿಹಾರ, ಉತ್ತರ ಪ್ರದೇಶ, ಹರಿಯಾಣ ಮತ್ತು ಜಮ್ಮುವಿನಲ್ಲಿ ಸೇನಾ ಉದ್ಯೋಗಾಕಾಂಕ್ಷಿಗಳು ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಹಾರದಲ್ಲಿ ಪ್ರತಿಭಟನೆ ಹಿಂಸೆಗೆ ತಿರುಗಿದೆ. ಇದೇ ವೇಳೆ ಬಿಹಾರದ ನಾವಡದಲ್ಲಿ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಲಾಗಿದ್ದು, ಕಚೇರಿಯನ್ನು ಧ್ವಂಸ ಮಾಡಲಾಗಿದೆ.


ಇದನ್ನೂ ಓದಿ: ಅಗ್ನಿಪಥ್‌ ಯೋಜನೆ: ಯುವಕರಿಗೆ 4 ವರ್ಷಗಳಲ್ಲ, ಪೂರ್ಣಾವಧಿಯ ಉದ್ಯೋಗ ನೀಡಿ- ಕೇಜ್ರಿವಾಲ್ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...