Homeಮುಖಪುಟಅಗ್ನಿಪಥ ಯೋಜನೆ: ದೇಶದ ಜನರಿಗೆ ಏನು ಬೇಕೆಂದು ಪ್ರಧಾನಿಗೆ ಅರ್ಥವಾಗುತ್ತಿಲ್ಲ - ರಾಹುಲ್ ಗಾಂಧಿ

ಅಗ್ನಿಪಥ ಯೋಜನೆ: ದೇಶದ ಜನರಿಗೆ ಏನು ಬೇಕೆಂದು ಪ್ರಧಾನಿಗೆ ಅರ್ಥವಾಗುತ್ತಿಲ್ಲ – ರಾಹುಲ್ ಗಾಂಧಿ

’ಪ್ರಧಾನಿ ಮೋದಿ ತಮ್ಮ ಸ್ನೇಹಿತರ ಮಾತು ಬಿಟ್ಟು ಬೇರೆನು ಕೇಳುವುದಿಲ್ಲ’

- Advertisement -
- Advertisement -

“ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಸ್ನೇಹಿತರ ಮಾತುಗಳನ್ನು ಹೊರತುಪಡಿಸಿ ಬೇರೆ ಏನನ್ನೂ ಕೇಳದ ಕಾರಣ ದೇಶದ ಜನರಿಗೆ ಏನು ಬೇಕು ಎಂದು ಅವರಿಗೆ ಅರ್ಥವಾಗುತ್ತಿಲ್ಲ” ಎಂದು ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಶುಕ್ರವಾರ (ಜೂನ್ 17) ಆರೋಪಿಸಿದ್ದಾರೆ.

ಸಶಸ್ತ್ರ ಪಡೆಗಳಿಗೆ ನೇಮಕಾತಿಗಾಗಿ ‘ಅಗ್ನಿಪಥ’ ಯೋಜನೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಶುಕ್ರವಾರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.  ಅಗ್ನಿಪಥ ಯೋಜನೆಯ ವಿರುದ್ಧದ ಪ್ರತಿಭಟನೆಗಳು ಹಿಂಸಾಚಾರಕ್ಕೆ ತಿರುಗುತ್ತಿದ್ದಂತೆ ಟ್ವೀಟ್ ಮಾಡಿರುವ ರಾಹುಲ್ ಗಾಂಧಿ, ನೋಟು ಅಮಾನ್ಯೀಕರಣ ಮತ್ತು ಮೂರು ಕೃಷಿ ಕಾನೂನುಗಳಂತಹ ಇತರ ವಿವಾದಾತ್ಮಕ ಕ್ರಮಗಳನ್ನು ಉಲ್ಲೇಖಿಸಿದ್ದಾರೆ.

ಭಾರಿ ಪ್ರತಿಭಟನೆ ಬೆನ್ನಲ್ಲೇ ’ಅಗ್ನಿಪಥ’ ಯೋಜನೆಗೆ ನೇಮಕಾತಿಗಾಗಿ ಒಕ್ಕೂಟ ಸರ್ಕಾರವು ಗರಿಷ್ಠ ವಯೋಮಿತಿಯನ್ನು 21 ವರ್ಷದಿಂದ 23 ವರ್ಷಕ್ಕೆ ಏರಿಸಿದೆ.  ದೇಶದ ಹಲವಾರು ಭಾಗಗಳಲ್ಲಿ ಈ ಯೋಜನೆಯ ವಿರುದ್ಧ ಯುವಕರು ಪ್ರತಿಭಟನೆ ನಡೆಸುತ್ತಿದ್ದಾರೆ. 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಇದನ್ನೂ ಓದಿ: ‘ಅಗ್ನಿ ಪಥ್’ ಯೋಜನೆ ಸೇನೆಗೆ ಅಪಾಯಕಾರಿ: ಕೊಡಗಿನ ವೀರ ಯೋಧರ ಆತಂಕ

“ಶ್ರೇಣಿ ಇಲ್ಲ, ಪಿಂಚಣಿ ಇಲ್ಲ. 2 ವರ್ಷಗಳಿಂದ ನೇರ ನೇಮಕಾತಿ ಇಲ್ಲ. 4 ವರ್ಷಗಳ ನಂತರ ಸ್ಥಿರ ಭವಿಷ್ಯವಿಲ್ಲ. ಸೇನೆಯ ಬಗ್ಗೆ ಗೌರವವಿಲ್ಲ. ಪ್ರಧಾನಿಗಳೇ ದೇಶದ ನಿರುದ್ಯೋಗಿ ಯುವಕರ ದನಿಯನ್ನು ಆಲಿಸಿ, ಅವರನ್ನು ಅಗ್ನಿಪಥದಲ್ಲಿ ಓಡಿಸುವ ಮೂಲಕ ಅವರ ಸಂಯಮದ ಅಗ್ನಿ ಪರೀಕ್ಷೆ ಮಾಡಬೇಡಿ” ಎಂದು ರಾಹುಲ್ ಗಾಂಧಿ ಒತ್ತಾಯಿಸಿದ್ದಾರೆ.

ಜಿಎಸ್‌ಟಿ, ನೋಟ್‌ಬಾನ್, ಕೃಷಿ ಕಾನೂನುಗಳು ಮತ್ತು ಈಗ ಅಗ್ನಿಪಥ್‌ನಂತಹ ಯೋಜನೆಗಳನ್ನು ತಮ್ಮ ಟ್ವೀಟ್‌ನಲ್ಲಿ ಉಲ್ಲೇಖಿಸಿರುವ ಅವರು, ಅವುಗಳನ್ನು ಜನರ ಕಲ್ಯಾಣಕ್ಕಾಗಿ ಯೋಜಿಸಲಾಗಿದೆ ಎಂದರು ಆದರೆ, ನಾಗರಿಕರಿಂದಲೇ ತಿರಸ್ಕರಿಸಲಾಗಿದೆ ಎಂದು ಒಕ್ಕೂಟ ಸರ್ಕರದ ಯೋಜನೆಗಳಿಗೆ ಉಂಟಾದ ಪ್ರತಿಭಟನೆಗಳ ಬಗ್ಗೆ ತಿಳಿಸಿದ್ದಾರೆ.

“ಅಗ್ನಿಪಥ್ – ಯುವಕರು ತಿರಸ್ಕರಿಸಿದರು. ಕೃಷಿ ಕಾನೂನುಗಳು – ರೈತರು ತಿರಸ್ಕರಿಸಿದರು. ನೋಟ್‌ಬಾನ್ – ಅರ್ಥಶಾಸ್ತ್ರಜ್ಞರು ತಿರಸ್ಕರಿಸಿದರು. ಜಿಎಸ್‌ಟಿ – ವ್ಯಾಪಾರಿಗಳು ತಿರಸ್ಕರಿಸಿದರು. ದೇಶದ ಜನರಿಗೆ ಏನು ಬೇಕು ಎಂದು ಪ್ರಧಾನಿಗೆ ಅರ್ಥವಾಗುತ್ತಿಲ್ಲ, ಏಕೆಂದರೆ ಅವರು ತಮ್ಮ ಸ್ನೇಹಿತರ ಮಾತುಗಳನ್ನು ಹೊರತುಪಡಿಸಿ ಏನನ್ನೂ ಕೇಳುವುದಿಲ್ಲ” ಎಂದು ರಾಹುಲ್ ಗಾಂಧಿ ಹಿಂದಿಯಲ್ಲಿ ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಕೂಡ ಈ ಯೋಜನೆಯನ್ನು ಹಿಂತೆಗೆದುಕೊಳ್ಳುವಂತೆ ಪ್ರಧಾನಿಯನ್ನು ಒತ್ತಾಯಿಸಿದ್ದರು. ಬಿಜೆಪಿ ಸರ್ಕಾರವು 24 ಗಂಟೆಗಳಲ್ಲಿ ಹೊಸ ಸೇನಾ ನೇಮಕಾತಿ ಯೋಜನೆಯ ನಿಯಮಗಳನ್ನು ಬದಲಾಯಿಸಬೇಕಾಗಿದೆ ಎಂದು ಹೇಳಿದ್ದರು.

ಬಿಜೆಪಿ ಸರ್ಕಾರ ಜಾರಿಗೆ ತಂದಿರುವ ‘ಅಗ್ನಿಪಥ್‌‌’ ಯೋಜನೆ ವಿರೋಧಿಸಿ ಮತ್ತು ಸೇನಾ ನೇಮಕಾತಿ ಮಾಡುವಂತೆ ಆಗ್ರಹಿಸಿ ಬಿಹಾರ, ಉತ್ತರ ಪ್ರದೇಶ, ಹರಿಯಾಣ ಮತ್ತು ಜಮ್ಮುವಿನಲ್ಲಿ ಸೇನಾ ಉದ್ಯೋಗಾಕಾಂಕ್ಷಿಗಳು ಭಾರಿ ಪ್ರತಿಭಟನೆ ನಡೆಸುತ್ತಿದ್ದಾರೆ. ಬಿಹಾರದಲ್ಲಿ ಪ್ರತಿಭಟನೆ ಹಿಂಸೆಗೆ ತಿರುಗಿದೆ. ಇದೇ ವೇಳೆ ಬಿಹಾರದ ನಾವಡದಲ್ಲಿ ಬಿಜೆಪಿ ಕಚೇರಿಗೆ ಬೆಂಕಿ ಹಚ್ಚಲಾಗಿದ್ದು, ಕಚೇರಿಯನ್ನು ಧ್ವಂಸ ಮಾಡಲಾಗಿದೆ.


ಇದನ್ನೂ ಓದಿ: ಅಗ್ನಿಪಥ್‌ ಯೋಜನೆ: ಯುವಕರಿಗೆ 4 ವರ್ಷಗಳಲ್ಲ, ಪೂರ್ಣಾವಧಿಯ ಉದ್ಯೋಗ ನೀಡಿ- ಕೇಜ್ರಿವಾಲ್ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...