Homeಮುಖಪುಟಪ್ರಧಾನಿ ಮೋದಿ, 'ವಾಟ್ಸ್ ಆ್ಯಪ್ ಯುನಿವರ್ಸಿಟಿಯ ಕುಲಪತಿ': BRS ನಾಯಕ ಕೆಟಿಆರ್ ತಿರುಗೇಟು

ಪ್ರಧಾನಿ ಮೋದಿ, ‘ವಾಟ್ಸ್ ಆ್ಯಪ್ ಯುನಿವರ್ಸಿಟಿಯ ಕುಲಪತಿ’: BRS ನಾಯಕ ಕೆಟಿಆರ್ ತಿರುಗೇಟು

- Advertisement -
- Advertisement -

ಕೆಸಿಆರ್‌ ಪಕ್ಷವು ಎನ್‌ಡಿಎ ಮೈತ್ರಿಕೂಟವನ್ನು ಸೇರಲು 2020ರಲ್ಲಿ ಬಯಸಿತ್ತು, ಆ ಬೇಡಿಕೆಗೆ ತಾನು ನಿರಾಕರಿಸಿದ್ದೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ ಬೆನ್ನಲ್ಲೇ ಬಿಆರ್‌ಎಸ್‌ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಅವರು, ಪ್ರಧಾನಿ ಮೋದಿ ಅವರು ‘ವಾಟ್ಸ್ ಆ್ಯಪ್ ಯುನಿವರ್ಸಿಟಿಯ ಕುಲಪತಿ’ ಎಂದು ತಿರುಗೇಟು ನೀಡಿದ್ದಾರೆ.

”ಪಿಎಂ ಮೋದಿಯವರ ಬಿಜೆಪಿ ದೊಡ್ಡ ‘ಸುಳ್ಳುʼ ಮತ್ತು ‘ಮೋಸʼದ ಫ್ಯಾಕ್ಟರಿಯಾಗಿದ್ದು, ಅದು ಹಸಿ ಸುಳ್ಳುಗಳನ್ನು ಹೇಳುತ್ತದೆ. ಮೋದಿಯಂತಹ ಮೋಸಗಾರರ ಜೊತೆ ಎಂದಿಗೂ ಬೆರೆಯದ ಹೋರಾಟಗಾರ ಕೆಸಿಆರ್” ಎಂದು ಟ್ವೀಟ್‌ ಮಾಡಿದ್ದಾರೆ.

”ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂಪೂರ್ಣ ಸುಳ್ಳು ಹೇಳುವ ಮೂಲಕ ತಮ್ಮ ಸ್ಥಾನಮಾನದ ಬೆಲೆಯನ್ನು ಕುಗ್ಗಿಸಿಕೊಂಡಿದ್ದಾರೆ” ಎಂದು ಕೆಟಿಆರ್ ಟೀಕಿಸಿದರು.

”ಮಾನಸಿಕ ಸ್ಥಿಮಿತ ಕಳೆದುಕೊಂಡು ಎನ್‌ಡಿಎ ಸೇರಲು, ನಾವು ಹುಚ್ಚು ನಾಯಿಯಿಂದ ಕಚ್ಚಿಸಿಕೊಂಡಿಲ್ಲ. ನಮ್ಮ ಪಕ್ಷ ಮತ್ತು ಅದರ ನಾಯಕತ್ವವು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಿಮ್ಮ ಅನುಮತಿ ಏಕೆ ಬೇಕು?” ಎಂದು ಕೆಟಿಆರ್ ಪ್ರಶ್ನಿಸಿದ್ದಾರೆ.

”ಪ್ರಧಾನಿ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವಾಗ, ಬಿಸಿಸಿಐ ಕಾರ್ಯದರ್ಶಿ ಸ್ಥಾನದಲ್ಲಿ ಭಾರತೀಯ ಕ್ರಿಕೆಟ್ ಅನ್ನು ಮುನ್ನಡೆಸುತ್ತಿರುವ ಜಯ್ ಶಾ ಅವರ ನೇಮಕದ ಬಗ್ಗೆಯೂ ಕೇಳಬೇಕು. ತೆಲಂಗಾಣಕ್ಕೆ ಭೇಟಿ ನೀಡಲು ಬಿಜೆಪಿ ಪ್ರವಾಸಿಗರಿಗೆ ಸ್ವಾಗತವಿದೆ. ಹಿಂದಿನ ಚುನಾವಣೆಯಲ್ಲಿ ಬಿಜೆಪಿ 105 ಸ್ಥಾನಗಳಲ್ಲಿ ಠೇವಣಿ ಕಳೆದುಕೊಂಡಿತ್ತು ಮತ್ತು ಈ ಬಾರಿ 110 ಸ್ಥಾನಗಳಲ್ಲಿ ಠೇವಣಿ ಕಳೆದುಕೊಳ್ಳುತ್ತದೆ, ಬಿಜೆಪಿ ಇಲ್ಲಿ ಒಂದು ಸಂಸದ ಸ್ಥಾನವನ್ನು ಸಹ ಗೆಲ್ಲುವುದಿಲ್ಲ” ಎಂದು ಕೆಟಿಆರ್ ಹೇಳಿದರು.

ಮುಂಬರುವ ತೆಲಂಗಾಣದ ರಾಜ್ಯ ಚುನಾವಣೆಗಾಗಿ ಬಿಜೆಪಿ ಚುನಾವಣಾ ಪ್ರಚಾರವನ್ನು ಅಧಿಕೃತವಾಗಿ ಪ್ರಾರಂಭಿಸಿದೆ. ಕಳೆದ ಮೂರು ದಿನಗಳಲ್ಲಿ ಮೋದಿಯವರು ತಮ್ಮ ಎರಡನೇ ಸಾರ್ವಜನಿಕ ಸಭೆಯನ್ನು ನಡೆಸಿದರು. ಆಗಸ್ಟ್‌ನಲ್ಲಿ ಬಿಆರ್‌ಎಸ್ ರಾಜ್ಯದ 119 ಸ್ಥಾನಗಳ ಪೈಕಿ 115 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಎರಡೂ ಪಕ್ಷಗಳ ನಡುವೆ ಪಕ್ಷಾಂತರದ ಅಲೆ ಆರಂಭವಾಗಿದೆ. ಮುಂದಿನ 10 ದಿನಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಮ್ಮ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ.

ಇತ್ತೀಚಿನ ದಿನಗಳಲ್ಲಿ ದೇಶದ ವಿವಿಧ ಪಕ್ಷಗಳು ಎನ್‌ಡಿಎ ತೊರೆದಿವೆ ಎಂದು ಕೆಟಿಆರ್ ಮಂಗಳವಾರ ಹೇಳಿದ್ದಾರೆ. ”ಶಿವಸೇನೆ, ಟಿಡಿಪಿ (ತೆಲುಗು ದೇಶಂ ಪಕ್ಷ), ಜೆಡಿಯು (ಜನತಾ ದಳ-ಯುನೈಟೆಡ್), ಶಿರೋಮಣಿ ಅಕಾಲಿದಳದಂತಹ ಪಕ್ಷಗಳು ಈಗಾಗಲೇ ಎನ್‌ಡಿಎ ತೊರೆದಿವೆ ಮತ್ತು ಪ್ರಸ್ತುತ ಸಿಬಿಐ, ಇಡಿ ಮತ್ತು ಐಟಿ ಮಾತ್ರ ಎನ್‌ಡಿಎ ಭಾಗವಾಗಿದೆ” ಎಂದು ಅವರು ಹೇಳಿದರು.

”ತೆಲಂಗಾಣ ಜನತೆಯ ಆಶೀರ್ವಾದದೊಂದಿಗೆ ಬಿಆರ್‌ಎಸ್ ಪ್ರಜಾಸತ್ತಾತ್ಮಕವಾಗಿ ಎರಡು ಬಾರಿ ಆಯ್ಕೆಯಾಗಿ ಸರ್ಕಾರ ರಚಿಸಿದೆ. ಈ ಟ್ರೆಂಡ್ ಮುಂದುವರಿಯಲಿದ್ದು, ಕೆಸಿಆರ್ ಶೀಘ್ರದಲ್ಲೇ ಹ್ಯಾಟ್ರಿಕ್ ಸಿಎಂ ಆಗಲಿದ್ದಾರೆ. ಸಿಎಂ ಕೆಸಿಆರ್ ಒಬ್ಬ ಹೋರಾಟಗಾರ, ಅವರು ಸುಳ್ಳು ಹೇಳಲು ಹೆಸರಾದ ಮೋದಿಯಂತಹ ಮೋಸಗಾರರೊಂದಿಗೆ ಯಾವುದೇ ರೀತಿಯ ಸಹವಾಸವನ್ನು ಹೊಂದಲು ಬಯಸುವುದಿಲ್ಲ” ಎಂದು ಎಂದು ಕೆಟಿಆರ್ ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದ ಪಾಲಿನ 15,000 ಕೋಟಿ ಬಿಡುಗಡೆಗೆ ದೆಹಲಿಯಲ್ಲಿ ಧರಣಿ ಕುಳಿತ ಟಿಎಂಸಿ ಸಂಸದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...