Homeಮುಖಪುಟಪ್ರಧಾನಿ ಮೋದಿ, 'ವಾಟ್ಸ್ ಆ್ಯಪ್ ಯುನಿವರ್ಸಿಟಿಯ ಕುಲಪತಿ': BRS ನಾಯಕ ಕೆಟಿಆರ್ ತಿರುಗೇಟು

ಪ್ರಧಾನಿ ಮೋದಿ, ‘ವಾಟ್ಸ್ ಆ್ಯಪ್ ಯುನಿವರ್ಸಿಟಿಯ ಕುಲಪತಿ’: BRS ನಾಯಕ ಕೆಟಿಆರ್ ತಿರುಗೇಟು

- Advertisement -
- Advertisement -

ಕೆಸಿಆರ್‌ ಪಕ್ಷವು ಎನ್‌ಡಿಎ ಮೈತ್ರಿಕೂಟವನ್ನು ಸೇರಲು 2020ರಲ್ಲಿ ಬಯಸಿತ್ತು, ಆ ಬೇಡಿಕೆಗೆ ತಾನು ನಿರಾಕರಿಸಿದ್ದೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ ಬೆನ್ನಲ್ಲೇ ಬಿಆರ್‌ಎಸ್‌ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಅವರು, ಪ್ರಧಾನಿ ಮೋದಿ ಅವರು ‘ವಾಟ್ಸ್ ಆ್ಯಪ್ ಯುನಿವರ್ಸಿಟಿಯ ಕುಲಪತಿ’ ಎಂದು ತಿರುಗೇಟು ನೀಡಿದ್ದಾರೆ.

”ಪಿಎಂ ಮೋದಿಯವರ ಬಿಜೆಪಿ ದೊಡ್ಡ ‘ಸುಳ್ಳುʼ ಮತ್ತು ‘ಮೋಸʼದ ಫ್ಯಾಕ್ಟರಿಯಾಗಿದ್ದು, ಅದು ಹಸಿ ಸುಳ್ಳುಗಳನ್ನು ಹೇಳುತ್ತದೆ. ಮೋದಿಯಂತಹ ಮೋಸಗಾರರ ಜೊತೆ ಎಂದಿಗೂ ಬೆರೆಯದ ಹೋರಾಟಗಾರ ಕೆಸಿಆರ್” ಎಂದು ಟ್ವೀಟ್‌ ಮಾಡಿದ್ದಾರೆ.

”ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂಪೂರ್ಣ ಸುಳ್ಳು ಹೇಳುವ ಮೂಲಕ ತಮ್ಮ ಸ್ಥಾನಮಾನದ ಬೆಲೆಯನ್ನು ಕುಗ್ಗಿಸಿಕೊಂಡಿದ್ದಾರೆ” ಎಂದು ಕೆಟಿಆರ್ ಟೀಕಿಸಿದರು.

”ಮಾನಸಿಕ ಸ್ಥಿಮಿತ ಕಳೆದುಕೊಂಡು ಎನ್‌ಡಿಎ ಸೇರಲು, ನಾವು ಹುಚ್ಚು ನಾಯಿಯಿಂದ ಕಚ್ಚಿಸಿಕೊಂಡಿಲ್ಲ. ನಮ್ಮ ಪಕ್ಷ ಮತ್ತು ಅದರ ನಾಯಕತ್ವವು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಿಮ್ಮ ಅನುಮತಿ ಏಕೆ ಬೇಕು?” ಎಂದು ಕೆಟಿಆರ್ ಪ್ರಶ್ನಿಸಿದ್ದಾರೆ.

”ಪ್ರಧಾನಿ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವಾಗ, ಬಿಸಿಸಿಐ ಕಾರ್ಯದರ್ಶಿ ಸ್ಥಾನದಲ್ಲಿ ಭಾರತೀಯ ಕ್ರಿಕೆಟ್ ಅನ್ನು ಮುನ್ನಡೆಸುತ್ತಿರುವ ಜಯ್ ಶಾ ಅವರ ನೇಮಕದ ಬಗ್ಗೆಯೂ ಕೇಳಬೇಕು. ತೆಲಂಗಾಣಕ್ಕೆ ಭೇಟಿ ನೀಡಲು ಬಿಜೆಪಿ ಪ್ರವಾಸಿಗರಿಗೆ ಸ್ವಾಗತವಿದೆ. ಹಿಂದಿನ ಚುನಾವಣೆಯಲ್ಲಿ ಬಿಜೆಪಿ 105 ಸ್ಥಾನಗಳಲ್ಲಿ ಠೇವಣಿ ಕಳೆದುಕೊಂಡಿತ್ತು ಮತ್ತು ಈ ಬಾರಿ 110 ಸ್ಥಾನಗಳಲ್ಲಿ ಠೇವಣಿ ಕಳೆದುಕೊಳ್ಳುತ್ತದೆ, ಬಿಜೆಪಿ ಇಲ್ಲಿ ಒಂದು ಸಂಸದ ಸ್ಥಾನವನ್ನು ಸಹ ಗೆಲ್ಲುವುದಿಲ್ಲ” ಎಂದು ಕೆಟಿಆರ್ ಹೇಳಿದರು.

ಮುಂಬರುವ ತೆಲಂಗಾಣದ ರಾಜ್ಯ ಚುನಾವಣೆಗಾಗಿ ಬಿಜೆಪಿ ಚುನಾವಣಾ ಪ್ರಚಾರವನ್ನು ಅಧಿಕೃತವಾಗಿ ಪ್ರಾರಂಭಿಸಿದೆ. ಕಳೆದ ಮೂರು ದಿನಗಳಲ್ಲಿ ಮೋದಿಯವರು ತಮ್ಮ ಎರಡನೇ ಸಾರ್ವಜನಿಕ ಸಭೆಯನ್ನು ನಡೆಸಿದರು. ಆಗಸ್ಟ್‌ನಲ್ಲಿ ಬಿಆರ್‌ಎಸ್ ರಾಜ್ಯದ 119 ಸ್ಥಾನಗಳ ಪೈಕಿ 115 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಎರಡೂ ಪಕ್ಷಗಳ ನಡುವೆ ಪಕ್ಷಾಂತರದ ಅಲೆ ಆರಂಭವಾಗಿದೆ. ಮುಂದಿನ 10 ದಿನಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಮ್ಮ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ.

ಇತ್ತೀಚಿನ ದಿನಗಳಲ್ಲಿ ದೇಶದ ವಿವಿಧ ಪಕ್ಷಗಳು ಎನ್‌ಡಿಎ ತೊರೆದಿವೆ ಎಂದು ಕೆಟಿಆರ್ ಮಂಗಳವಾರ ಹೇಳಿದ್ದಾರೆ. ”ಶಿವಸೇನೆ, ಟಿಡಿಪಿ (ತೆಲುಗು ದೇಶಂ ಪಕ್ಷ), ಜೆಡಿಯು (ಜನತಾ ದಳ-ಯುನೈಟೆಡ್), ಶಿರೋಮಣಿ ಅಕಾಲಿದಳದಂತಹ ಪಕ್ಷಗಳು ಈಗಾಗಲೇ ಎನ್‌ಡಿಎ ತೊರೆದಿವೆ ಮತ್ತು ಪ್ರಸ್ತುತ ಸಿಬಿಐ, ಇಡಿ ಮತ್ತು ಐಟಿ ಮಾತ್ರ ಎನ್‌ಡಿಎ ಭಾಗವಾಗಿದೆ” ಎಂದು ಅವರು ಹೇಳಿದರು.

”ತೆಲಂಗಾಣ ಜನತೆಯ ಆಶೀರ್ವಾದದೊಂದಿಗೆ ಬಿಆರ್‌ಎಸ್ ಪ್ರಜಾಸತ್ತಾತ್ಮಕವಾಗಿ ಎರಡು ಬಾರಿ ಆಯ್ಕೆಯಾಗಿ ಸರ್ಕಾರ ರಚಿಸಿದೆ. ಈ ಟ್ರೆಂಡ್ ಮುಂದುವರಿಯಲಿದ್ದು, ಕೆಸಿಆರ್ ಶೀಘ್ರದಲ್ಲೇ ಹ್ಯಾಟ್ರಿಕ್ ಸಿಎಂ ಆಗಲಿದ್ದಾರೆ. ಸಿಎಂ ಕೆಸಿಆರ್ ಒಬ್ಬ ಹೋರಾಟಗಾರ, ಅವರು ಸುಳ್ಳು ಹೇಳಲು ಹೆಸರಾದ ಮೋದಿಯಂತಹ ಮೋಸಗಾರರೊಂದಿಗೆ ಯಾವುದೇ ರೀತಿಯ ಸಹವಾಸವನ್ನು ಹೊಂದಲು ಬಯಸುವುದಿಲ್ಲ” ಎಂದು ಎಂದು ಕೆಟಿಆರ್ ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದ ಪಾಲಿನ 15,000 ಕೋಟಿ ಬಿಡುಗಡೆಗೆ ದೆಹಲಿಯಲ್ಲಿ ಧರಣಿ ಕುಳಿತ ಟಿಎಂಸಿ ಸಂಸದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...

ಹತ್ಯಾಕಾಂಡಕ್ಕೆ ಸಮನಾದ NEET ಹಗರಣ ನಡೆಯಲು ಬಿಟ್ಟ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಲಿ

ನೀಟ್ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳು ಲೀಕ್ ಆದ ನಂತರದ ಬೆಳವಣಿಗೆಗಳನ್ನು ಇಡೀ ದೇಶ ಗಮನಿಸುತ್ತಿದೆ. ಅದರಲ್ಲೂ ವಿಶೇಷವಾಗಿ ಜೂನ್ ಆರಂಭದಿಂದ ಇಲ್ಲಿಯವರೆಗೆ ದೇಶದ ವಿದ್ಯಾರ್ಥಿಗಳು ನಡೆಸುತ್ತಿರುವ ಆಂದೋಲನವನ್ನು ದೇಶದ ಜನತೆ ನೋಡುತ್ತಿದ್ದಾರೆ. ದೇಶದ...

ಸಿಜೆಪಿ ಮತ್ತು ಜೆನ್‌ ಜಿಫಿಕೇಶನ್: ಪ್ರಸ್ತುತ ಬೆಳವಣಿಗೆ, ಭವಿಷ್ಯದ ಸಾಧ್ಯತೆ

ಇತ್ತೀಚಿನ ಬೆಳವಣಿಗೆಗಳು ಕಳೆದ ಒಂದು ತಿಂಗಳಿಂದ ನಡೆಯುತ್ತಿರುವ ಸಿಜೆಪಿ (ಕಾಕ್ರೋಚ್‌ ಜನತಾ ಪಕ್ಷ) ಪ್ರತಿಭಟನೆ ಈಗ ತಾರ್ಕಿಕ ಹಂತಕ್ಕೆ ತಲಪುತ್ತಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಕಾರಣಕ್ಕೆ ನೀಟ್‌ನ (ರಾಷ್ಟ್ರೀಯ ಅರ್ಹತಾ ಹಾಗೂ ಪ್ರವೇಶ ಪರೀಕ್ಷೆ) ಮೊದಲ...