Homeಮುಖಪುಟಪ್ರಧಾನಿ ಮೋದಿ, 'ವಾಟ್ಸ್ ಆ್ಯಪ್ ಯುನಿವರ್ಸಿಟಿಯ ಕುಲಪತಿ': BRS ನಾಯಕ ಕೆಟಿಆರ್ ತಿರುಗೇಟು

ಪ್ರಧಾನಿ ಮೋದಿ, ‘ವಾಟ್ಸ್ ಆ್ಯಪ್ ಯುನಿವರ್ಸಿಟಿಯ ಕುಲಪತಿ’: BRS ನಾಯಕ ಕೆಟಿಆರ್ ತಿರುಗೇಟು

- Advertisement -
- Advertisement -

ಕೆಸಿಆರ್‌ ಪಕ್ಷವು ಎನ್‌ಡಿಎ ಮೈತ್ರಿಕೂಟವನ್ನು ಸೇರಲು 2020ರಲ್ಲಿ ಬಯಸಿತ್ತು, ಆ ಬೇಡಿಕೆಗೆ ತಾನು ನಿರಾಕರಿಸಿದ್ದೆ ಎಂಬ ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ನೀಡಿದ ಬೆನ್ನಲ್ಲೇ ಬಿಆರ್‌ಎಸ್‌ ಕಾರ್ಯಾಧ್ಯಕ್ಷ ಕೆ.ಟಿ. ರಾಮರಾವ್ ಅವರು, ಪ್ರಧಾನಿ ಮೋದಿ ಅವರು ‘ವಾಟ್ಸ್ ಆ್ಯಪ್ ಯುನಿವರ್ಸಿಟಿಯ ಕುಲಪತಿ’ ಎಂದು ತಿರುಗೇಟು ನೀಡಿದ್ದಾರೆ.

”ಪಿಎಂ ಮೋದಿಯವರ ಬಿಜೆಪಿ ದೊಡ್ಡ ‘ಸುಳ್ಳುʼ ಮತ್ತು ‘ಮೋಸʼದ ಫ್ಯಾಕ್ಟರಿಯಾಗಿದ್ದು, ಅದು ಹಸಿ ಸುಳ್ಳುಗಳನ್ನು ಹೇಳುತ್ತದೆ. ಮೋದಿಯಂತಹ ಮೋಸಗಾರರ ಜೊತೆ ಎಂದಿಗೂ ಬೆರೆಯದ ಹೋರಾಟಗಾರ ಕೆಸಿಆರ್” ಎಂದು ಟ್ವೀಟ್‌ ಮಾಡಿದ್ದಾರೆ.

”ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸಂಪೂರ್ಣ ಸುಳ್ಳು ಹೇಳುವ ಮೂಲಕ ತಮ್ಮ ಸ್ಥಾನಮಾನದ ಬೆಲೆಯನ್ನು ಕುಗ್ಗಿಸಿಕೊಂಡಿದ್ದಾರೆ” ಎಂದು ಕೆಟಿಆರ್ ಟೀಕಿಸಿದರು.

”ಮಾನಸಿಕ ಸ್ಥಿಮಿತ ಕಳೆದುಕೊಂಡು ಎನ್‌ಡಿಎ ಸೇರಲು, ನಾವು ಹುಚ್ಚು ನಾಯಿಯಿಂದ ಕಚ್ಚಿಸಿಕೊಂಡಿಲ್ಲ. ನಮ್ಮ ಪಕ್ಷ ಮತ್ತು ಅದರ ನಾಯಕತ್ವವು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಿಮ್ಮ ಅನುಮತಿ ಏಕೆ ಬೇಕು?” ಎಂದು ಕೆಟಿಆರ್ ಪ್ರಶ್ನಿಸಿದ್ದಾರೆ.

”ಪ್ರಧಾನಿ ಕುಟುಂಬ ರಾಜಕಾರಣದ ಬಗ್ಗೆ ಮಾತನಾಡುವಾಗ, ಬಿಸಿಸಿಐ ಕಾರ್ಯದರ್ಶಿ ಸ್ಥಾನದಲ್ಲಿ ಭಾರತೀಯ ಕ್ರಿಕೆಟ್ ಅನ್ನು ಮುನ್ನಡೆಸುತ್ತಿರುವ ಜಯ್ ಶಾ ಅವರ ನೇಮಕದ ಬಗ್ಗೆಯೂ ಕೇಳಬೇಕು. ತೆಲಂಗಾಣಕ್ಕೆ ಭೇಟಿ ನೀಡಲು ಬಿಜೆಪಿ ಪ್ರವಾಸಿಗರಿಗೆ ಸ್ವಾಗತವಿದೆ. ಹಿಂದಿನ ಚುನಾವಣೆಯಲ್ಲಿ ಬಿಜೆಪಿ 105 ಸ್ಥಾನಗಳಲ್ಲಿ ಠೇವಣಿ ಕಳೆದುಕೊಂಡಿತ್ತು ಮತ್ತು ಈ ಬಾರಿ 110 ಸ್ಥಾನಗಳಲ್ಲಿ ಠೇವಣಿ ಕಳೆದುಕೊಳ್ಳುತ್ತದೆ, ಬಿಜೆಪಿ ಇಲ್ಲಿ ಒಂದು ಸಂಸದ ಸ್ಥಾನವನ್ನು ಸಹ ಗೆಲ್ಲುವುದಿಲ್ಲ” ಎಂದು ಕೆಟಿಆರ್ ಹೇಳಿದರು.

ಮುಂಬರುವ ತೆಲಂಗಾಣದ ರಾಜ್ಯ ಚುನಾವಣೆಗಾಗಿ ಬಿಜೆಪಿ ಚುನಾವಣಾ ಪ್ರಚಾರವನ್ನು ಅಧಿಕೃತವಾಗಿ ಪ್ರಾರಂಭಿಸಿದೆ. ಕಳೆದ ಮೂರು ದಿನಗಳಲ್ಲಿ ಮೋದಿಯವರು ತಮ್ಮ ಎರಡನೇ ಸಾರ್ವಜನಿಕ ಸಭೆಯನ್ನು ನಡೆಸಿದರು. ಆಗಸ್ಟ್‌ನಲ್ಲಿ ಬಿಆರ್‌ಎಸ್ ರಾಜ್ಯದ 119 ಸ್ಥಾನಗಳ ಪೈಕಿ 115 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಎರಡೂ ಪಕ್ಷಗಳ ನಡುವೆ ಪಕ್ಷಾಂತರದ ಅಲೆ ಆರಂಭವಾಗಿದೆ. ಮುಂದಿನ 10 ದಿನಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ತಮ್ಮ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡುವ ನಿರೀಕ್ಷೆಯಿದೆ.

ಇತ್ತೀಚಿನ ದಿನಗಳಲ್ಲಿ ದೇಶದ ವಿವಿಧ ಪಕ್ಷಗಳು ಎನ್‌ಡಿಎ ತೊರೆದಿವೆ ಎಂದು ಕೆಟಿಆರ್ ಮಂಗಳವಾರ ಹೇಳಿದ್ದಾರೆ. ”ಶಿವಸೇನೆ, ಟಿಡಿಪಿ (ತೆಲುಗು ದೇಶಂ ಪಕ್ಷ), ಜೆಡಿಯು (ಜನತಾ ದಳ-ಯುನೈಟೆಡ್), ಶಿರೋಮಣಿ ಅಕಾಲಿದಳದಂತಹ ಪಕ್ಷಗಳು ಈಗಾಗಲೇ ಎನ್‌ಡಿಎ ತೊರೆದಿವೆ ಮತ್ತು ಪ್ರಸ್ತುತ ಸಿಬಿಐ, ಇಡಿ ಮತ್ತು ಐಟಿ ಮಾತ್ರ ಎನ್‌ಡಿಎ ಭಾಗವಾಗಿದೆ” ಎಂದು ಅವರು ಹೇಳಿದರು.

”ತೆಲಂಗಾಣ ಜನತೆಯ ಆಶೀರ್ವಾದದೊಂದಿಗೆ ಬಿಆರ್‌ಎಸ್ ಪ್ರಜಾಸತ್ತಾತ್ಮಕವಾಗಿ ಎರಡು ಬಾರಿ ಆಯ್ಕೆಯಾಗಿ ಸರ್ಕಾರ ರಚಿಸಿದೆ. ಈ ಟ್ರೆಂಡ್ ಮುಂದುವರಿಯಲಿದ್ದು, ಕೆಸಿಆರ್ ಶೀಘ್ರದಲ್ಲೇ ಹ್ಯಾಟ್ರಿಕ್ ಸಿಎಂ ಆಗಲಿದ್ದಾರೆ. ಸಿಎಂ ಕೆಸಿಆರ್ ಒಬ್ಬ ಹೋರಾಟಗಾರ, ಅವರು ಸುಳ್ಳು ಹೇಳಲು ಹೆಸರಾದ ಮೋದಿಯಂತಹ ಮೋಸಗಾರರೊಂದಿಗೆ ಯಾವುದೇ ರೀತಿಯ ಸಹವಾಸವನ್ನು ಹೊಂದಲು ಬಯಸುವುದಿಲ್ಲ” ಎಂದು ಎಂದು ಕೆಟಿಆರ್ ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದ ಪಾಲಿನ 15,000 ಕೋಟಿ ಬಿಡುಗಡೆಗೆ ದೆಹಲಿಯಲ್ಲಿ ಧರಣಿ ಕುಳಿತ ಟಿಎಂಸಿ ಸಂಸದರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...