Homeಮುಖಪುಟ'ಅಸಂವಿಧಾನಿಕ' ಚುನಾವಣಾ ಬಾಂಡ್ ಯೋಜನೆಯನ್ನು ಸಮರ್ಥಿಸಿಕೊಂಡ ಪ್ರಧಾನಿ ಮೋದಿ

‘ಅಸಂವಿಧಾನಿಕ’ ಚುನಾವಣಾ ಬಾಂಡ್ ಯೋಜನೆಯನ್ನು ಸಮರ್ಥಿಸಿಕೊಂಡ ಪ್ರಧಾನಿ ಮೋದಿ

- Advertisement -
- Advertisement -

“ಚುನಾವಣಾ ಬಾಂಡ್ ಯೋಜನೆಯ ರದ್ದತಿ ಕುರಿತು ಪ್ರಾಮಾಣಿಕವಾಗಿ ಚಿಂತಿಸಿದಾಗ ಪ್ರತಿಯೊಬ್ಬರು ವಿಷಾದಿಸಲಿದ್ದಾರೆ. ಚುನಾವಣಾ ಬಾಂಡ್ ಯೋಜನೆಯ ರದ್ದತಿ ದೇಶವನ್ನು ಸಂಪೂರ್ಣವಾಗಿ ಕಪ್ಪು ಹಣದೆಡೆಗೆ ತಳ್ಳಲಿದೆ” ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಸುದ್ದಿ ಸಂಸ್ಥೆ ಎಎನ್‌ಐಗೆ ನೀಡಿದ ವಿಶೇಷ ಸಂದರ್ಶನದಲ್ಲಿ ಮಾತನಾಡಿದ ಅವರು, ಸುಪ್ರೀಂ ಕೋರ್ಟ್ ‘ಅಸಂವಿಧಾನಿಕ’ ಎಂದು ರದ್ದುಪಡಿಸಿರುವ ಯೋಜನೆಯನ್ನು ಸಮರ್ಥಿಸಿಕೊಂಡಿದ್ದಾರೆ.

“ಕಪ್ಪು ಹಣದ ವಿರುದ್ದ ಹೋರಾಡಲು ನಮ್ಮ ಸರ್ಕಾರ ಚುನಾವಣಾ ಬಾಂಡ್ ಯೋಜನೆಯನ್ನು ಜಾರಿಗೊಳಿಸಿತ್ತು. ಇದು ಅಪರಾಧ ಚಟುವಟಿಕೆಗಳಿಂದ ರಾಜಕೀಯ ಪಕ್ಷಗಳಿಗೆ ಸಂದಾಯವಾಗುತ್ತಿದ್ದ ಲೆಕ್ಕಕ್ಕೆ ಸಿಗದ ಹಣದ ಲೆಕ್ಕ ತಿಳಿಯಲು ಸಹಕಾರಿಯಾಗಿತ್ತು” ಎಂದು ಪ್ರಧಾನಿ ಹೇಳಿದ್ದಾರೆ.

“ಪ್ರತಿಪಕ್ಷಗಳು ಯೋಜನೆಯ ಕುರಿತು ಸುಳ್ಳು ಹರಡುತ್ತಿವೆ ಎಂದ ಮೋದಿ, ಚುನಾವಣೆಯ ಸಮಯದಲ್ಲಿ ಕಪ್ಪು ಹಣಕ್ಕೆ ಕಡಿವಾಣ ಹಾಕಲು ನಾವು ಯೋಜನೆ ಪರಿಚಯಿಸಿದೆವು. ನಮ್ಮ ಭಾರತೀಯ ಜನತಾ ಪಕ್ಷ (ಬಿಜೆಪಿ) ವೇ ಯೋಜನೆಯ ದೊಡ್ಡ ಫಲಾನುಭವಿ” ಎಂದಿದ್ದಾರೆ.

“ಚುನಾವಣೆಯ ಸಮಯದಲ್ಲಿ ಕಪ್ಪು ಹಣಕ್ಕೆ ಕಡಿವಾಣ ಹಾಕುವುದು ಹೇಗೆ? ಪಾರದರ್ಶಕತೆ ಕಾಪಾಡುವುದು ಹೇಗೆ? ಎಂಬುವುದು ನನ್ನನ್ನು ಕಾಡುತ್ತಿದ್ದ ವಿಷಯ. ಅದಕ್ಕಾಗಿ ನಾವು ಒಂದು ಮಾರ್ಗ ಕಂಡುಕೊಂಡೆವು. ಆದರೆ, ಚುನಾವಣಾ ಬಾಂಡ್ ಯೋಜನೆ ಪರಿಪೂರ್ಣವಾದದ್ದು ಎಂದು ನಾನು ಹೇಳಲ್ಲ. ಅದರಲ್ಲೂ ಸಣ್ಣಪುಟ್ಟ ನೂನ್ಯತೆಗಳು ಇರಬಹುದು” ಎಂದು ಮೋದಿ ಹೇಳಿದ್ದಾರೆ.

ಕಾರ್ಪೋರೇಟ್ ವ್ಯಕ್ತಿಗಳು ಮತ್ತು ಸಂಸ್ಥೆಗಳು ಬಾಂಡ್ ಖರೀದಿಸಿ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡುತ್ತಿದ್ದ ಚುನಾವಣಾ ಬಾಂಡ್ ಯೋಜನೆಯನ್ನು ಫೆ.15ರಂದು ಮುಖ್ಯ ನ್ಯಾಯಮೂರ್ತಿ ಡಿ.ವೈ ಚಂದ್ರಚೂಡ್ ಅವರನ್ನು ಒಳಗೊಂಡ ಸುಪ್ರೀಂ ಕೋರ್ಟ್ ಪೀಠ ರದ್ದುಗೊಳಿಸಿದೆ.

ಯೋಜನೆಯ ರದ್ದತಿ ವೇಳೆ ಇದು ‘ಅಸಂವಿಧಾನಿಕ ಮತ್ತು ಜನರ ಮಾಹಿತಿ ಹಕ್ಕಿಗೆ ವಿರುದ್ದವಾಗಿದೆ’ ಎಂದು ಸುಪ್ರೀಂ ಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಸುಪ್ರೀಂ ಕೋರ್ಟ್ ಆದೇಶದಂತೆ ಚುನಾವಣಾ ಬಾಂಡ್‌ಗಳ ಮಾಹಿತಿಯನ್ನು ಸ್ಟೇಟ್‌ ಬ್ಯಾಂಕ್ ಆಫ್‌ ಇಂಡಿಯಾ (ಎಸ್‌ಬಿಐ) ಭಾರತೀಯ ಚುನಾವಣಾ ಆಯೋಗಕ್ಕೆ ನೀಡಿತ್ತು. ಆ ಮಾಹಿತಿಯನ್ನು ಚುನಾವಣಾ ಆಯೋಗ ತನ್ನ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದೆ. ಚುನಾವಣಾ ಆಯೋಗದ ವೆಬ್‌ಸೈಟ್‌ನಲ್ಲಿರುವ ಮಾಹಿತಿಯನ್ನು ನೋಡಿದರೆ, ಹಲವು ಕಾರ್ಪೋರೇಟ್ ಸಂಸ್ಥೆಗಳು ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿ ಲಾಭ ಪಡೆದುಕೊಂಡಿರುವುದು ಗೊತ್ತಾಗುತ್ತದೆ.

ಮತ್ತೊಂದು ಗಮನಾರ್ಹ ಸಂಗತಿಯೆಂದರೆ, ಚುನಾವಣಾ ಬಾಂಡ್ ಯೋಜನೆಯನ್ನು ರಾಜಕೀಯ ಪಕ್ಷಗಳ ದೇಣಿಗೆ ಪಾರದರ್ಶಕವಾಗಿಸಲು ನಾವು ಪರಿಚಯಿಸಿದೆವು ಎಂದು ಪ್ರಧಾನಿ ನರೇಂದ್ರ ಮೋದಿ ಪದೇ ಪದೇ ಹೇಳುತ್ತಿದ್ದಾರೆ. ಆದರೆ, ಸುಪ್ರೀಂ ಕೋರ್ಟ್ ಆದೇಶಿಸುವವರೆಗೆ ಚುನಾವಣಾ ಬಾಂಡ್ ಮೂಲಕ ರಾಜಕೀಯ ಪಕ್ಷಗಳು ಪಡೆದ ದೇಣಿಗೆಗಳ ಮಾಹಿತಿ ಯಾರಿಗೂ ಗೊತ್ತಾಗುತ್ತಿರಲಿಲ್ಲ. ಮಾಹಿತಿ ಹಕ್ಕು ಕಾಯ್ದೆ (ಆರ್‌ಟಿಐ) ಅಡಿ ಅರ್ಜಿ ಹಾಕಿದರೂ ಮಾಹಿತಿ ಸಿಗುತ್ತಿರಲಿಲ್ಲ. ಈ ಕಾರಣಕ್ಕಾಗಿಯೇ ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್ ಯೋಜನೆ ಜನರ ಮಾಹಿತಿ ಹಕ್ಕಿನ ವಿರುದ್ದವಿದೆ ಎಂದಿರುವುದು.

ಈ ಹಿಂದೆಯೂ ಪ್ರಧಾನಿ ನರೇಂದ್ರ ಚುನಾವಣಾ ಬಾಂಡ್ ಯೋಜನೆಯನ್ನು ಸಮರ್ಥಿಸುವಾಗ ಸುಳ್ಳು ಹೇಳಿಕೆ ಕೊಟ್ಟಿದ್ದರು. ಈ ಕುರಿತು ನಾನುಗೌರಿ.ಕಾಂ ಮಾಡಿರುವ ಫ್ಯಾಕ್ಟ್‌ಚೆಕ್ ವರದಿಯ ಲಿಂಕ್ ಕೆಳಗಿದೆ.

Fact Check: ಚುನಾವಣಾ ಬಾಂಡ್‌ ಕುರಿತು ಪ್ರಧಾನಿ ಮೋದಿ ನೀಡಿರುವ ಹೇಳಿಕೆ ಸುಳ್ಳು 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...

ಪೊಲೀಸರ ಅನುಮತಿ ಪಡೆದಿದ್ದರೂ ನೀಟ್ ಪ್ರತಿಭಟನೆಗೆ ವಾಟ್ಸಾಪ್ ಗ್ರೂಪ್ ರಚಿಸಿದ್ದಕ್ಕಾಗಿ ಅಸ್ಸಾಂನಲ್ಲಿ ಮೂವರು ಮುಸ್ಲಿಂ ವಿದ್ಯಾರ್ಥಿಗಳ ಬಂಧನ

ಅಸ್ಸಾಂನಲ್ಲಿ ಬಿಜೆಪಿ ಸರ್ಕಾರದ ಕೋಮುವಾದಿ ಧೋರಣೆ ಮತ್ತು ಪ್ರಜಾಸತ್ತಾತ್ಮಕ ಹಕ್ಕುಗಳ ದಮನದ ದಾರುಣ ಚಿತ್ರಣವೊಂದು ಮತ್ತೆ ಮುನ್ನೆಲೆಗೆ ಬಂದಿದೆ. ದೇಶಾದ್ಯಂತ ಸದ್ದು ಮಾಡಿದ್ದ 'ನೀಟ್' (NEET) ಅಕ್ರಮಗಳ ವಿರುದ್ಧ ಧ್ವನಿ ಎತ್ತಲು ಮತ್ತು...

‘ವಿದ್ಯಾರ್ಥಿಗಳ ಮೇಲಿನ ವಿಕೃತ ದಾಳಿಗೆ ನಿಮ್ಮ ಸಮ್ಮತಿ ಇತ್ತೇ?’: ಪತ್ರದ ಮೂಲಕ ಅಮಿತ್ ಶಾಗೆ ರಾಹುಲ್ ಗಾಂಧಿ ಪ್ರಶ್ನೆ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಕಾರಣವಾದ ದೇಶವ್ಯಾಪಿ ವಿದ್ಯಾರ್ಥಿ ಆಂದೋಲನದ ವೇಳೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯ ಮತ್ತು ಮಿತಿಮೀರಿದ ಬಲಪ್ರಯೋಗದ ವಿರುದ್ಧ ಲೋಕಸಭೆಯ ವಿರೋಧ...

‘ಮಗ ಬೇಗನೆ ಮನೆಗೆ ಬರಲಿ..’; ಭಾವುಕರಾದ ಅಭಿಜೀತ್ ದಿಪ್ಕೆ ಅವರ ಪೋಷಕರು

ಸಿಜೆಪಿ ಸಂಸ್ಥಾಪಕ ಅಭಿಜೀತ್ ದಿಪ್ಕೆ ನೇತೃತ್ವದಲ್ಲಿ ನಡೆದ ಅಸಾಧಾರಣ ಹೋರಾಟವು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜಿನಾಮೆಯಲ್ಲಿ ಅಂತಿಮವಾಗಿದೆ. ಈ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿರುವ ಅವರ ಪೋಷಕರು ಭಾವುಕರಾಗಿದ್ದಾರೆ. "ಮಗ ಬೇಗನೆ ಮನೆಗೆ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆ: ಕಾಕ್ರೋಚ್‌ಗಳಿಗೆ ಅಭಿನಂದಿಸಿದ ಸೋನಮ್ ವಾಂಗ್‌ಚುಕ್ – ಪ್ರಕಾಶ್‌ ರಾಜ್

ದೇಶದ ಯುವಜನರ ಹಲವು ದಿನಗಳ ಹೋರಾಟದ ಬಳಿಕ ಮೋದಿ ನೇತೃತ್ವದ ಕೇಂದ್ರ ಸರ್ಕಾರ ವಿದ್ಯಾರ್ಥಿಗಳ ಮುಂದೆ ಮಂಡಿಯೂರಿದೆ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಿದ್ದಾರೆ. ಈ ಗೆಲುವಿಗೆ ಕಾಕ್ರೋಚ್ ಜನತಾ ಪಕ್ಷದ...

ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಜಿರಳೆಗಳ ಹರ್ಷೋದ್ಗಾರ: ದೆಹಲಿ ಪೊಲೀಸರಿಂದ ಸಾರ್ವಜನಿಕ ಕ್ಷಮೆಯಾಚನೆಗೆ ಆಗ್ರಹ

ದೇಶಾದ್ಯಂತ ನಡೆಯುತ್ತಿರುವ ಸಿಜೆಪಿ ಪ್ರತಿಭಟನೆಗಳ ನಡುವೆ ನೀಟ್ ಪತ್ರಿಕೆ ಸೋರಿಕೆಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ರಾಜೀನಾಮೆ ನೀಡಿದ್ದು, ದೆಹಲಿಯ ಜಂತರ್‌ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕಾಕ್ರೋಚ್‌ ಜನತಾ...

ಕಾಕ್ರೋಚ್‌ಗಳಿಗೆ ಮಣಿದ ಮೋದಿ ಸರ್ಕಾರ; ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ನೇತೃತ್ವದಲ್ಲಿ ದೇಶಾದ್ಯಂತ ನಡೆಯುತ್ತಿರುವ ಪ್ರತಿಭಟನೆಗಳ ಮಧ್ಯೆ, ನೀಟ್ ಅಕ್ರಮಗಳಿಗೆ ಸಂಬಂಧಿಸಿದಂತೆ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರು ಇಂದು (ಜುಲೈ 25) ಪ್ರಧಾನ ಮಂತ್ರಿಗಳಿಗೆ ತಮ್ಮ...

ಅಭಿಜೀತ್ ದಿಪ್ಕೆಗೆ ಟೈಫಾಯ್ಡ್; ಪ್ರತಿಭಟನೆ ಮುಂದುವರಿಯಲಿದೆ ಎಂದ ಸಿಜೆಪಿ ಸಂಸ್ಥಾಪಕ

ತನಗೆ ಟೈಫಾಯ್ಡ್ ಇರುವುದು ಪತ್ತೆಯಾಗಿದೆ ಎಂದು ಕಾಕ್ರೋಚ್‌ ಜನತಾ ಪಕ್ಷದ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದಿಪ್ಕೆ ಅವರು ಇಂದು ಹೇಳಿದ್ದಾರೆ. "ನನ್ನ ಅನಾರೋಗ್ಯವು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ...

ಮುಸ್ಲಿಮರ ಬಗ್ಗೆ ನಿಂದನಾತ್ಮಕ, ಪ್ರಚೋದನಕಾರಿ ಹೇಳಿಕೆ : ಸಿ.ಟಿ ರವಿ ವಿರುದ್ಧ FIR

ಮುಸ್ಲಿಮರ ವಿರುದ್ಧ ನಿಂದನಾತ್ಮಕ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ ವಿಧಾನಪರಿಷತ್ ಸದಸ್ಯ ಸಿ.ಟಿ ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. ನಗರದ ಜಾಮಿಯಾ ಮಸೀದಿಯ ಅಧ್ಯಕ್ಷ ಮುದಸ್ಸಿರ್ ಪಾಷಾ ಅವರು...