Homeಮುಖಪುಟಮೋದಿ ಡಿಗ್ರಿ ವಿವಾದ: ಕೇಜ್ರಿವಾಲ್‌ ಸಲ್ಲಿಸಿದ ಮರು ಪರಿಶೀಲನಾ ಅರ್ಜಿ ವಜಾ

ಮೋದಿ ಡಿಗ್ರಿ ವಿವಾದ: ಕೇಜ್ರಿವಾಲ್‌ ಸಲ್ಲಿಸಿದ ಮರು ಪರಿಶೀಲನಾ ಅರ್ಜಿ ವಜಾ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಪ್ರಮಾಣಪತ್ರಗಳನ್ನು ನೀಡುವಂತೆ ಮುಖ್ಯ ಮಾಹಿತಿ ಆಯೋಗ (ಸಿಐಸಿ) ಗುಜರಾತ್ ವಿಶ್ವವಿದ್ಯಾಲಯಕ್ಕೆ ನಿರ್ದೇಶನ ನೀಡಿದ್ದಕ್ಕೆ ಹೈಕೋರ್ಟ್ ತಡೆ ನೀಡಿತ್ತು ಮತ್ತು ಕೇಜ್ರಿವಾಲ್ಗೆ 25,000ರೂ.ದಂಡವನ್ನು ವಿಧಿಸಿತ್ತು. ತೀರ್ಪನ್ನು ಮರುಪರಿಶೀಲಿಸುವಂತೆ ಕೋರಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಯನ್ನು ಗುಜರಾತ್ ಹೈಕೋರ್ಟ್ ಗುರುವಾರ ವಜಾಗೊಳಿಸಿದೆ.

ನ್ಯಾಯಮೂರ್ತಿ ಬಿರೇನ್ ವೈಷ್ಣವ್ ಅವರ ಪೀಠವು ಕೇಜ್ರಿವಾಲ್ ಅವರ ಮರುಪರಿಶೀಲನಾ ಅರ್ಜಿಯನ್ನು ವಜಾಗೊಳಿಸಿದೆ. ಮಾ.31ರಂದು ನೀಡಿದ್ದ ತೀರ್ಪಿನ ಅನುಷ್ಠಾನಕ್ಕೆ ತಡೆ ಕೋರಿ ದೆಹಲಿ ಸಿಎಂ ನ್ಯಾಯಾಲಯದ ಮೊರೆ ಹೋಗಿದ್ದರು.

2016ರಲ್ಲಿ ಸರ್ಕಾರಿ ಸ್ವಾಮ್ಯದ ಗುಜರಾತ್ ವಿಶ್ವವಿದ್ಯಾನಿಲಯವು ಪ್ರಧಾನಿ ನರೇಂದ್ರ ಮೋದಿ ಅವರ ಶೈಕ್ಷಣಿಕ ಪದವಿ ಪ್ರಮಾಣಪತ್ರಗಳನ್ನು ನೀಡುವಂತೆ ಸಿಐಸಿ ಹೊರಡಿಸಿದ್ದ ಆದೇಶಕ್ಕೆ ತಡೆ ಕೋರಿ ಹೈಕೋರ್ಟ್ಮೊರೆ ಹೋಗಿತ್ತು. ಹೈಕೋರ್ಟ್ಇದಕ್ಕೆ ತಡೆ ನೀಡಿತ್ತು ಮತ್ತು ಕೇಜ್ರಿವಾಲ್ಗೆ ಪದೇ ಪದೇ ಮಾಹಿತಿ ಕೇಳಿದ್ದಕ್ಕೆ 25,000 ದಂಡ ವಿಧಿಸಿತ್ತು. ಕೇಜ್ರಿವಾಲ್ ಅವರಿಗೆ ವಿಧಿಸಿರುವ ದಂಡವನ್ನು ಗುಜರಾತ್ ರಾಜ್ಯ ಕಾನೂನು ಸೇವಾ ಪ್ರಾಧಿಕಾರದಲ್ಲಿ ಠೇವಣಿ ಇರಿಸಬೇಕು ಎಂದು ಹೈಕೋರ್ಟ್ ಸೂಚನೆ ನೀಡಿದೆ. ತೀರ್ಪಿಗೆ ತಡೆ ನೀಡಲು ಕೂಡ ನ್ಯಾಯಮೂರ್ತಿ ಬಿರೇನ್ ವೈಷ್ಣವ್ ಅವರ ಪೀಠ ನಿರಾಕರಿಸಿದೆ.

ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಪ್ರಧಾನಿ ಮೋದಿ ಅವರ ಸ್ನಾತಕೋತ್ತರ ಪದವಿಯ ವಿವರಗಳನ್ನು ನೀಡುವಂತೆ 2016ರಲ್ಲಿ ಪ್ರಧಾನಿ ಕಾರ್ಯಾಲಯದ ಸಾರ್ವಜನಿಕ ಮಾಹಿತಿ ಅಧಿಕಾರಿ(PIO) ಮತ್ತು ವಿಶ್ವವಿದ್ಯಾಲಯಗಳ ಸಾರ್ವಜನಿಕ ಮಾಹಿತಿ ಅಧಿಕಾರಿ(PIO)ಗಳಿಗೆ ಮಾಹಿತಿ ಆಯೋಗದ ಮುಖ್ಯಸ್ಥ ರು(CIC) ಆದೇಶಿಸಿದ್ದರು.

ಯಾವುದೇ ಸಾರ್ವಜನಿಕ ಆಡಳಿತ ಹುದ್ದೆಯಲ್ಲಿರುವ ಯಾರೇ ಆಗಿರಲಿ, ಅವರ ಸಾರ್ವಜನಿಕ ಚಟುವಟಿಕೆಗಳಿಗೆ ಸಂಬಂಧವಿಲ್ಲದೆ ಇರುವ, ಇನ್ನೊಬ್ಬರ ವೈಯಕ್ತಿಕ ವಿಷಯಗಳನ್ನೆಲ್ಲ ಮಾಹಿತಿ ಹಕ್ಕು ಕಾಯ್ದೆಯಡಿ ಕೇಳುವಂತಿಲ್ಲ.  ಪ್ರಧಾನಿ ನರೇಂದ್ರ ಮೋದಿಯವರ ಪದವಿ ಬಗ್ಗೆ ಸಾರ್ವಜನಿಕ ಡೊಮೇನ್ನಲ್ಲಿ ಮಾಹಿತಿ ನೀಡಲಾಗಿದೆ. ಗುಜರಾತ್ವಿಶ್ವವಿದ್ಯಾಲಯವೂ ಕೂಡ ಹಿಂದೆ ತನ್ನ ವೆಬ್ಸೈಟ್​​ನಲ್ಲಿ ಬಗ್ಗೆ ವಿವರವನ್ನು ನೀಡಿತ್ತು ಎಂದು ಗುಜರಾತ್ವಿಶ್ವವಿದ್ಯಾಲಯದ ಪರ ವಕೀಲರಾದ ಸಾಲಿಸಿಟರ್ ಜನರಲ್ ತುಷಾರ್ಮೆಹ್ತಾ ವಾದಿಸಿದ್ದರು.

ಆರ್ಟಿಐ ಕಾಯ್ದೆಯ ದುರುಪಯೋಗ ಆಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರ ಪದವಿ ಪ್ರಮಾಣ ಪತ್ರ ಪಡೆಯಲು ಆರ್ಟಿಐ ಕಾಯ್ದೆ ಅನ್ವಯ ಮಾಡಲು ಆಗುವುದಿಲ್ಲ. ಯಾರೋ ಒಬ್ಬರ ಬಾಲಿಶ ಕುತೂಹಲ ಸಾರ್ವಜನಿಕ ಹಿತಾಸಕ್ತಿ ಆಗುವುದಿಲ್ಲ ಎಂದು ಕೋರ್ಟ್​​ಗೆ ವಾದದ ವೇಳೆ ತುಷಾರ್ಮೆಹ್ತಾ ತಿಳಿಸಿದ್ದರು.

ಇದನ್ನು ಓದಿ: ಸಾಹಿತಿಗಳಿಗೆ ಬೆದರಿಕೆ ಪತ್ರ: ಸಾವರ್ಕರ್ ಕುರಿತ ಪುಸ್ತಕ ಓದುತ್ತಿದ್ದ ಆರೋಪಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯ ಸರ್ಕಾರ ‘ವಿಬಿ–ಜಿ ರಾಮ್ ಜಿ ಕಾಯ್ದೆ’ ತಿರಸ್ಕರಿಸಬೇಕು : ಮನರೇಗಾ ರಕ್ಷಣಾ ಒಕ್ಕೂಟದ ಮಹಾ ಪಂಚಾಯತ್‌ ಆಗ್ರಹ

ನರೇಗಾ ಯೋಜನೆ ಮುಂದುವರಿಸಲು ರಾಷ್ಟ್ರಪತಿ ಆದೇಶ ಹೊರಡಿಸಬೇಕು. ವಿಬಿ–ಜಿ ರಾಮ್‌ ಜಿ ಕಾಯ್ದೆಯನ್ನು ರಾಜ್ಯ ಸರ್ಕಾರ ತಿರಸ್ಕರಿಸಬೇಕು ಎಂದು ಆಗ್ರಹಿಸಿ 'ಮನರೇಗಾ ರಕ್ಷಣಾ ಒಕ್ಕೂಟ'ದ ಮಹಾ ಪಂಚಾಯತ್‌ನಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. ಸೋಮವಾರ (ಫೆ.2)...

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...