Homeಮುಖಪುಟಮೋದಿ ಜನರ ಕಷ್ಟಗಳನ್ನು ಕೇಳದೆ, ಅಪ್ರಸ್ತುತ ವಿಷಯಗಳ ಬಗ್ಗೆ ಮಾತನಾಡುತ್ತಿದ್ದಾರೆ: ಪ್ರಿಯಾಂಕ ಗಾಂಧಿ

ಮೋದಿ ಜನರ ಕಷ್ಟಗಳನ್ನು ಕೇಳದೆ, ಅಪ್ರಸ್ತುತ ವಿಷಯಗಳ ಬಗ್ಗೆ ಮಾತನಾಡುತ್ತಿದ್ದಾರೆ: ಪ್ರಿಯಾಂಕ ಗಾಂಧಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಜನರ ಕಷ್ಟಗಳನ್ನು ಕೇಳುತ್ತಿಲ್ಲ, ಅಪ್ರಸ್ತುತ ವಿಷಯಗಳನ್ನು ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ಧಾಳಿ ನಡೆಸಿದ್ದಾರೆ.

ಅಮೇಥಿಯ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಪರ ಮೊಹಿಯಾ ಕೇಸರಿಯಾದಲ್ಲಿ ಆಯೋಜಿಸಿದ್ದ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಪ್ರಧಾನಿ ಜನರನ್ನು ಪ್ರೀತಿಸುತ್ತಿಲ್ಲ ಮತ್ತು ಯಾವುದೇ ರೈತರ ಮನೆಗೆ ಭೇಟಿ ನೀಡಿಲ್ಲ. ನಿನ್ನೆ ವಾರಣಾಸಿಯಲ್ಲಿ ರೋಡ್ ಶೋ ನಡೆಸಿದ್ದರು. ಎತ್ತರದ ವಾಹನದ ಮೇಲೆ ನಿಂತು ಭದ್ರತಾ ಸಿಬ್ಬಂದಿ ನಡುವೆ ನಿಂತು ಕೈ ಬೀಸಿದರು. ನಿಮ್ಮ ದುಃಖ ಏನೆಂದು ಅವರಿಗೆ ಹೇಗೆ ತಿಳಿಯುತ್ತದೆ? ಅವರು ಯಾವಾಗಲು ಉದ್ಯಮಿಗಳ ಜೊತೆ ಇರುತ್ತಾರೆ ಎಂದು ಹೇಳಿದ್ದಾರೆ.

ಮೋದಿ ಎಂದಿಗೂ ಜನರ ಕಷ್ಟಗಳನ್ನು ಕೇಳುವುದಿಲ್ಲ. ರಾಹುಲ್ ಗಾಂಧಿ ದೇಶವಾಸಿಗಳ ಸಮಸ್ಯೆಗಳನ್ನು ಆಲಿಸಲು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ 4,000 ಕಿಲೋಮೀಟರ್ ಪಾದಯಾತ್ರೆ ನಡೆಸಿದರು. ದೇಶದ ಅತ್ಯುನ್ನತ ಹುದ್ದೆಯಲ್ಲಿರುವ ಪ್ರಧಾನಿಯಂತಹ ವ್ಯಕ್ತಿ ದೇಶದ ಜನರನ್ನು ಪ್ರೀತಿಸುವುದಿಲ್ಲ. ಚುನಾವಣಾ ಪ್ರಚಾರದ ವೇಳೆ ಬಂದಿದ್ದರೆ 10 ವರ್ಷದಲ್ಲಿ ಏನು ಮಾಡಿದ್ದಾರೆ ಎನ್ನುವುದನ್ನಾದರೂ ಹೇಳಬೇಕು. ಅವರು ನಿಮ್ಮೊಂದಿಗೆ ಅಪ್ರಸ್ತುತ ವಿಷಯಗಳನ್ನು ಮಾತನಾಡುತ್ತಿದ್ದಾರೆ. ಚುನಾವಣೆಯ ಸಮಯದಲ್ಲಿ ಎಮ್ಮೆಗಳು, ಮಂಗಳಸೂತ್ರಗಳು ಮತ್ತು ದೇವಸ್ಥಾನಗಳು ಮತ್ತು ಮಸೀದಿಗಳ ಬಗ್ಗೆ ಕೇಳಲು ಬಯಸುವುದಿಲ್ಲ ಎಂದು ಜನರು ಧ್ವನಿ ಎತ್ತಬೇಕು. ಜನರಿಗಿರುವ ಸಮಸ್ಯೆಗಳಿಗೆ ಪರಿಹಾರದ ಬಗ್ಗೆ ಮಾತನಾಡುವಂತೆ ಪ್ರಧಾನಿಗೆ ತಿಳಿಸುವಂತೆ ಅವರು ಕೇಳಿಕೊಂಡಿದ್ದಾರೆ.

ನೀವು ಜಾಗೃತರಾದರೆ, ಅವರು ಅಸಹಾಯಕರಾಗುತ್ತಾರೆ. ದೇಶದಲ್ಲಿ ಅದ್ಭುತ ರಾಜಕೀಯ ನಡೆಯುತ್ತಿದೆ. ಪ್ರಧಾನಿ ಮತ್ತು ಅಮೇಥಿ ಸಂಸದೆ ಸ್ಮೃತಿ ಇರಾನಿ ಸೇರಿದಂತೆ ಬಿಜೆಪಿ ನಾಯಕರು ಸಾರ್ವಜನಿಕರ ಜೊತೆ ನಮಗೆ ಯಾವುದೇ ಹೊಣೆಗಾರಿಕೆ ಇಲ್ಲ ಎಂದು ಭಾವಿಸುತ್ತಾರೆ. ಅವರು ಧರ್ಮದ ಆಧಾರದ ಮೇಲೆ ಮತವನ್ನು ಪಡೆಯುವುದಾಗಿ ಭಾವಿಸುತ್ತಾರೆ ಎಂದು ಹೇಳಿದ್ದಾರೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಶ್ಲಾಘಿಸಿದ ಪ್ರಿಯಾಂಕಾ ಗಾಂಧಿ, ರಾಜೀವ್ ಗಾಂಧಿ ಮಾತ್ರವಲ್ಲ, ಬಿಜೆಪಿಯ ಅಟಲ್ ಬಿಹಾರಿ ವಾಜಪೇಯಿ ಕೂಡ ಸಭ್ಯ ಮನುಷ್ಯರಾಗಿದ್ದರು. ಅವರಿಗೆ ಜನರ ಬಗ್ಗೆ ಗೌರವವಿತ್ತು. ಜನರ ಕಡೆಗೆ ಸ್ವಲ್ಪ ಉತ್ತರದಾಯಿತ್ವವಿದೆ ಮತ್ತು ಕೆಲವು ಕೆಲಸಗಳನ್ನು ಮಾಡಬೇಕಾಗಿದೆ ಎಂದು ಅವರು ಅರ್ಥಮಾಡಿಕೊಂಡಿದ್ದರು. ಮೋದಿ ಅವರು ರೈತರಿಗೆ ಏನು ಮಾಡಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ. ಅಲ್ಲೊಂದು ಇಲ್ಲೊಂದು ಮಾತನಾಡುತ್ತಾ ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಮೋದಿ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಿದ ಪ್ರಿಯಾಂಕಾ ಗಾಂಧಿ, ಅವರು ಚುನಾವಣಾ ಬಾಂಡ್‌ಗಳ ಅತಿದೊಡ್ಡ ಭ್ರಷ್ಟಾಚಾರ ಯೋಜನೆಯನ್ನು ತಂದರು, ಇದರಲ್ಲಿ ದೇಣಿಗೆ ನೀಡುವ ವ್ಯಕ್ತಿಯ ಹೆಸರು ರಹಸ್ಯವಾಗಿರುತ್ತಿತ್ತು ಎಂದು ಹೇಳಿದ್ದಾರೆ.

ಇದನ್ನು ಓದಿ: ಗಾಝಾದಲ್ಲಿ ಭಾರತೀಯ ಸೇನಾ ನಿವೃತ್ತ ಅಧಿಕಾರಿಯನ್ನು ಹತ್ಯೆ ಮಾಡಿದ ಇಸ್ರೇಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಫ್ಘಾನಿಸ್ತಾನದ ಆಸ್ಪತ್ರೆ ಮೇಲೆ ಪಾಕಿಸ್ತಾನದಿಂದ ವಾಯುದಾಳಿ ; ಕನಿಷ್ಠ 400 ಸಾವು : ವರದಿ

ರಾಜಧಾನಿ ಕಾಬೂಲ್‌ನಲ್ಲಿ ಮಾದಕ ವ್ಯಸನಿಗಳಿಗೆ ಚಿಕಿತ್ಸೆ ನೀಡುತ್ತಿದ್ದ ಆಸ್ಪತ್ರೆಯ ಮೇಲೆ ಪಾಕಿಸ್ತಾನದ ಮಿಲಿಟರಿ ವಾಯು ದಾಳಿ ನಡೆಸಿದ್ದು, ಕನಿಷ್ಠ 400 ಜನರು ಸಾವನ್ನಪ್ಪಿದ್ದಾರೆ ಎಂದು ಅಫ್ಘಾನಿಸ್ತಾನ ಆರೋಪಿಸಿದೆ. ಅಲ್‌-ಜಝೀರಾ ವರದಿಯ ಪ್ರಕಾರ, ಅಫ್ಘಾನಿಸ್ತಾನದ ಆರೋಪವನ್ನು...

‘ನನ್ನ ಮನೆ ಮೇಲೆ ದಾಳಿ ಮಾಡಿ… ಹೇಗೆ ಎದುರಿಸಬೇಕೆಂದು ಗೊತ್ತಿದೆ..’; ಬಿಜೆಪಿಗೆ ಮಮತಾ ಬ್ಯಾನರ್ಜಿ ಸವಾಲು

"ತಮ್ಮ ನಿವಾಸ ಮತ್ತು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ನಾಯಕರ ನಿವಾಸವನ್ನು ಗುರಿಯಾಗಿಸಿಕೊಳ್ಳುವಂತೆ" ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸೋಮವಾರ ಬಿಜೆಪಿಗೆ ಸವಾಲು ಹಾಕಿದರು. ರಾಜ್ಯದಲ್ಲಿ, ಟಿಎಂಸಿ ನಾಯಕರ ಮೇಲಿನ ದಾಳಿಗೆ...

ಬೆಂಗಳೂರು: ವಿಶೇಷ ಪೂಜೆ ಹೆಸರಿನಲ್ಲಿ ಐಟಿ ಅಧಿಕಾರಿಗೆ 35 ಲಕ್ಷ ವಂಚನೆ: 59 ವರ್ಷದ ‘ಗಿಳಿ ಶಾಸ್ತ್ರ’ ಹೇಳುವ ವ್ಯಕ್ತಿ ಬಂಧನ

ಬೆಂಗಳೂರು: ವಿಶೇಷ ಪೂಜೆ ಮಾಡುವುದಾಗಿ ಹೇಳಿಕೊಂಡು ಆದಾಯ ತೆರಿಗೆ ಅಧಿಕಾರಿಗೆ 35 ಲಕ್ಷ ರೂಪಾಯಿ ವಂಚಿಸಿದ ಆರೋಪದ ಮೇಲೆ ತಮಿಳುನಾಡು ಮೂಲದ 59 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಥೇಣಿಯ ಶೇಖರ್...

ಬಿಹಾರ| ರಾಜ್ಯಸಭಾ ಚುನಾವಣೆ ಮತದಾನದಿಂದ ಹೊರಗುಳಿದ ನಾಲ್ವರು ಶಾಸಕರು; ಮಹಾಘಟಬಂಧನ್‌ಗೆ ಹಿನ್ನಡೆ

ಸೋಮವಾರ ಸಂಜೆ 4 ಗಂಟೆಗೆ ಮುಕ್ತಾಯಗೊಂಡ ರಾಜ್ಯಸಭಾ ಚುನಾವಣೆಯಲ್ಲಿ ನಾಲ್ವರು ಶಾಸಕರು ಮತದಾನದಿಂದ ಹೊರಗುಳಿಯುವ ಮೂಲಕ ಬಿಹಾರದ ಮಹಾಘಟಬಂಧನ್‌ಗೆ ಭಾರಿ ಹಿನ್ನಡೆಯಾಗಿದೆ. ಐದನೇ ಸ್ಥಾನಕ್ಕಾಗಿ ನಡೆಯುವ ಸ್ಪರ್ಧೆಯಲ್ಲಿ ವಿರೋಧ ಮೈತ್ರಿಕೂಟದ ನಿರೀಕ್ಷೆಗೆ ಭಾರಿ...

ರಾಜ್ಯಸಭೆಯಲ್ಲಿ LPG ಕೊರತೆ ಪ್ರಸ್ತಾಪಿಸಿದ ಮಲ್ಲಿಕಾರ್ಜುನ ಖರ್ಗೆ; ಪ್ರತಿಪಕ್ಷ ಅರಾಜಕತೆ ಸೃಷ್ಟಿಸಲು ಯತ್ನಿಸುತ್ತಿದೆ ಎಂದ ಸರ್ಕಾರ !

ನವದೆಹಲಿ: ರಾಜ್ಯಸಭೆಯಲ್ಲಿ ಸೋಮವಾರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಎಲ್‌ಪಿಜಿ ಕೊರತೆಯ ವಿಷಯವನ್ನು ಪ್ರಸ್ತಾಪಿಸಿದರು ಮತ್ತು ಅಡುಗೆ ಅನಿಲದ ಬಿಕ್ಕಟ್ಟು ಮತ್ತು ಕಾಳಸಂತೆಕೋರತನವನ್ನು ತಡೆಯಲು ಸರ್ಕಾರ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿಲ್ಲ ಎಂದು...

ಬೆಂಗಳೂರು| ಹಣ ನೀಡಲು ನಿರಾಕರಿಸಿದ ವ್ಯಕ್ತಿಯನ್ನು ಮಕ್ಕಳ ಮುಂದೆಯೇ ಥಳಿಸಿ ಕೊಂದ ಗುಂಪು

ಹಣ ನೀಡಲು ನಿರಾಕರಿಸಿದ ತಂದೆಯನ್ನು ಮಕ್ಕಳ ಮುಂದೆಯೇ ಗುಂಪೊಂದು ಥಳಿಸಿ ಕೊಂದಿರುವ ಘಟನೆ ಬೆಂಗಳೂರಿನ ವಿಲ್ಸನ್ ಗಾರ್ಡನ್‌ನಲ್ಲಿ ಭಾನುವಾರ ರಾತ್ರಿ ನಡೆದಿದೆ. ವಿಲ್ಸನ್ ಗಾರ್ಡನ್‌ನ ಬಡಾ ಮಕನ್ ರಸ್ತೆ ಬಳಿ ರಶೀದ್ ಪಾಷಾ ಎಂದು...

ಅಬಕಾರಿ ನೀತಿ ಪ್ರಕರಣದಲ್ಲಿ ಖುಲಾಸೆ ಪ್ರಶ್ನಿಸಿ ಸಿಬಿಐ ಅರ್ಜಿ; ಪ್ರತಿಕ್ರಿಯಿಸಲು ಕೇಜ್ರಿವಾಲ್-ಸಿಸೋಡಿಯಾಗೆ ಸಮಯ ನೀಡಿದ ದೆಹಲಿ ಹೈಕೋರ್ಟ್

ದೆಹಲಿ ಅಬಕಾರಿ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರ 21 ಜನರ ತಮ್ಮ ಬಿಡುಗಡೆಯನ್ನು ಪ್ರಶ್ನಿಸಿ ಸಿಬಿಐ ಅರ್ಜಿಗೆ ಪ್ರತಿಕ್ರಿಯೆಗಳನ್ನು ಸಲ್ಲಿಸಲು ದೆಹಲಿ...

ಪ್ರಶ್ನೆಗಳಿಗೆ ಉತ್ತರಿಸದ ಸಚಿವರು: ಸದನ ಮುಂದೂಡಿದ ಸ್ಪೀಕರ್ ಯು.ಟಿ ಖಾದರ್

ಶಾಸಕರು ಕೇಳುವ ಪ್ರಶ್ನೆಗಳಿಗೆ ಉತ್ತರ ಒದಗಿಸದ ಸಚಿವರು ಮತ್ತು ಅಧಿಕಾರಿಗಳ ವಿರುದ್ದ ಸೋಮವಾರ (ಮಾ.16) ತೀವ್ರ ಅಸಮಾಧಾನ ವ್ಯಕ್ತಪಡಿಸಿದ ವಿಧಾನಸಭೆಯ ಸ್ಪೀಕರ್ ಯು.ಟಿ ಖಾದರ್, ಸದನವನ್ನು ಮುಂದೂಡಿಕೆ ಮಾಡಿ ಸರ್ಕಾರಕ್ಕೆ ಬಿಸಿ ಮುಟ್ಟಿಸಿದರು. ವಿಧಾನಸಭೆಯಲ್ಲಿ...

‘ಆಪರೇಷನ್ ಸಿಂಧೂರ್’ ಕುರಿತ ಪೋಸ್ಟ್: ಪ್ರೊಫೆಸರ್ ಅಲಿ ಖಾನ್ ಮಹ್ಮದಾಬಾದ್ ವಿರುದ್ಧದ ಪ್ರಕರಣಗಳನ್ನು ಕೈಬಿಟ್ಟ ಹರಿಯಾಣ ಸರ್ಕಾರ

'ಆಪರೇಷನ್ ಸಿಂಧೂರ್' ಕುರಿತು ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದ್ದಕ್ಕಾಗಿ ಅಶೋಕ ವಿಶ್ವವಿದ್ಯಾಲಯದ ಪ್ರಾಧ್ಯಾಪಕ ಅಲಿ ಖಾನ್ ಮಹ್ಮದಾಬಾದ್ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಪ್ರಕರಣ ದಾಖಲಾಗಿತ್ತು. ಅವರ ವಿರುದ್ಧದ ಈ ಪ್ರಕರಣಗಳನ್ನು ಕೈಬಿಟ್ಟಿರುವುದಾಗಿ ಹರಿಯಾಣ...

ಎಲ್‌ಪಿಜಿ ಬಿಕ್ಕಟ್ಟಿನ ನಡುವೆ ಆಧಾರ್ ಮೂಲಕ ‘ಇ-ಕೆವೈಸಿ’ ಮಾಡಿಸಿಕೊಳ್ಳುವಂತೆ ಸರ್ಕಾರದ ಸೂಚನೆ

ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಬಳಸುವ 330 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ತಮ್ಮ ಎಲೆಕ್ಟ್ರಾನಿಕ್ ನೋ ಯುವರ್ ಕಸ್ಟಮರ್ (ಇ-ಕೆವೈಸಿ) ಅನ್ನು ಬಯೋಮೆಟ್ರಿಕ್ ಆಧಾರ್ ದೃಢೀಕರಣ ವ್ಯವಸ್ಥೆಯ ಮೂಲಕ ಮಾಡಿಸಿಕೊಳ್ಳಬೇಕು ಎಂದು ಸರ್ಕಾರ...