Homeಮುಖಪುಟಮೋದಿ ಜನರ ಕಷ್ಟಗಳನ್ನು ಕೇಳದೆ, ಅಪ್ರಸ್ತುತ ವಿಷಯಗಳ ಬಗ್ಗೆ ಮಾತನಾಡುತ್ತಿದ್ದಾರೆ: ಪ್ರಿಯಾಂಕ ಗಾಂಧಿ

ಮೋದಿ ಜನರ ಕಷ್ಟಗಳನ್ನು ಕೇಳದೆ, ಅಪ್ರಸ್ತುತ ವಿಷಯಗಳ ಬಗ್ಗೆ ಮಾತನಾಡುತ್ತಿದ್ದಾರೆ: ಪ್ರಿಯಾಂಕ ಗಾಂಧಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಜನರ ಕಷ್ಟಗಳನ್ನು ಕೇಳುತ್ತಿಲ್ಲ, ಅಪ್ರಸ್ತುತ ವಿಷಯಗಳನ್ನು ಮಾತನಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ಧಾಳಿ ನಡೆಸಿದ್ದಾರೆ.

ಅಮೇಥಿಯ ಕಾಂಗ್ರೆಸ್ ಅಭ್ಯರ್ಥಿ ಕಿಶೋರಿ ಲಾಲ್ ಶರ್ಮಾ ಪರ ಮೊಹಿಯಾ ಕೇಸರಿಯಾದಲ್ಲಿ ಆಯೋಜಿಸಿದ್ದ ಚುನಾವಣಾ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕಾ ಗಾಂಧಿ, ಪ್ರಧಾನಿ ಜನರನ್ನು ಪ್ರೀತಿಸುತ್ತಿಲ್ಲ ಮತ್ತು ಯಾವುದೇ ರೈತರ ಮನೆಗೆ ಭೇಟಿ ನೀಡಿಲ್ಲ. ನಿನ್ನೆ ವಾರಣಾಸಿಯಲ್ಲಿ ರೋಡ್ ಶೋ ನಡೆಸಿದ್ದರು. ಎತ್ತರದ ವಾಹನದ ಮೇಲೆ ನಿಂತು ಭದ್ರತಾ ಸಿಬ್ಬಂದಿ ನಡುವೆ ನಿಂತು ಕೈ ಬೀಸಿದರು. ನಿಮ್ಮ ದುಃಖ ಏನೆಂದು ಅವರಿಗೆ ಹೇಗೆ ತಿಳಿಯುತ್ತದೆ? ಅವರು ಯಾವಾಗಲು ಉದ್ಯಮಿಗಳ ಜೊತೆ ಇರುತ್ತಾರೆ ಎಂದು ಹೇಳಿದ್ದಾರೆ.

ಮೋದಿ ಎಂದಿಗೂ ಜನರ ಕಷ್ಟಗಳನ್ನು ಕೇಳುವುದಿಲ್ಲ. ರಾಹುಲ್ ಗಾಂಧಿ ದೇಶವಾಸಿಗಳ ಸಮಸ್ಯೆಗಳನ್ನು ಆಲಿಸಲು ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ 4,000 ಕಿಲೋಮೀಟರ್ ಪಾದಯಾತ್ರೆ ನಡೆಸಿದರು. ದೇಶದ ಅತ್ಯುನ್ನತ ಹುದ್ದೆಯಲ್ಲಿರುವ ಪ್ರಧಾನಿಯಂತಹ ವ್ಯಕ್ತಿ ದೇಶದ ಜನರನ್ನು ಪ್ರೀತಿಸುವುದಿಲ್ಲ. ಚುನಾವಣಾ ಪ್ರಚಾರದ ವೇಳೆ ಬಂದಿದ್ದರೆ 10 ವರ್ಷದಲ್ಲಿ ಏನು ಮಾಡಿದ್ದಾರೆ ಎನ್ನುವುದನ್ನಾದರೂ ಹೇಳಬೇಕು. ಅವರು ನಿಮ್ಮೊಂದಿಗೆ ಅಪ್ರಸ್ತುತ ವಿಷಯಗಳನ್ನು ಮಾತನಾಡುತ್ತಿದ್ದಾರೆ. ಚುನಾವಣೆಯ ಸಮಯದಲ್ಲಿ ಎಮ್ಮೆಗಳು, ಮಂಗಳಸೂತ್ರಗಳು ಮತ್ತು ದೇವಸ್ಥಾನಗಳು ಮತ್ತು ಮಸೀದಿಗಳ ಬಗ್ಗೆ ಕೇಳಲು ಬಯಸುವುದಿಲ್ಲ ಎಂದು ಜನರು ಧ್ವನಿ ಎತ್ತಬೇಕು. ಜನರಿಗಿರುವ ಸಮಸ್ಯೆಗಳಿಗೆ ಪರಿಹಾರದ ಬಗ್ಗೆ ಮಾತನಾಡುವಂತೆ ಪ್ರಧಾನಿಗೆ ತಿಳಿಸುವಂತೆ ಅವರು ಕೇಳಿಕೊಂಡಿದ್ದಾರೆ.

ನೀವು ಜಾಗೃತರಾದರೆ, ಅವರು ಅಸಹಾಯಕರಾಗುತ್ತಾರೆ. ದೇಶದಲ್ಲಿ ಅದ್ಭುತ ರಾಜಕೀಯ ನಡೆಯುತ್ತಿದೆ. ಪ್ರಧಾನಿ ಮತ್ತು ಅಮೇಥಿ ಸಂಸದೆ ಸ್ಮೃತಿ ಇರಾನಿ ಸೇರಿದಂತೆ ಬಿಜೆಪಿ ನಾಯಕರು ಸಾರ್ವಜನಿಕರ ಜೊತೆ ನಮಗೆ ಯಾವುದೇ ಹೊಣೆಗಾರಿಕೆ ಇಲ್ಲ ಎಂದು ಭಾವಿಸುತ್ತಾರೆ. ಅವರು ಧರ್ಮದ ಆಧಾರದ ಮೇಲೆ ಮತವನ್ನು ಪಡೆಯುವುದಾಗಿ ಭಾವಿಸುತ್ತಾರೆ ಎಂದು ಹೇಳಿದ್ದಾರೆ.

ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರನ್ನು ಶ್ಲಾಘಿಸಿದ ಪ್ರಿಯಾಂಕಾ ಗಾಂಧಿ, ರಾಜೀವ್ ಗಾಂಧಿ ಮಾತ್ರವಲ್ಲ, ಬಿಜೆಪಿಯ ಅಟಲ್ ಬಿಹಾರಿ ವಾಜಪೇಯಿ ಕೂಡ ಸಭ್ಯ ಮನುಷ್ಯರಾಗಿದ್ದರು. ಅವರಿಗೆ ಜನರ ಬಗ್ಗೆ ಗೌರವವಿತ್ತು. ಜನರ ಕಡೆಗೆ ಸ್ವಲ್ಪ ಉತ್ತರದಾಯಿತ್ವವಿದೆ ಮತ್ತು ಕೆಲವು ಕೆಲಸಗಳನ್ನು ಮಾಡಬೇಕಾಗಿದೆ ಎಂದು ಅವರು ಅರ್ಥಮಾಡಿಕೊಂಡಿದ್ದರು. ಮೋದಿ ಅವರು ರೈತರಿಗೆ ಏನು ಮಾಡಿದ್ದಾರೆ ಎಂದು ಹೇಳಲು ಸಾಧ್ಯವಿಲ್ಲ. ಅಲ್ಲೊಂದು ಇಲ್ಲೊಂದು ಮಾತನಾಡುತ್ತಾ ಜನರ ಗಮನವನ್ನು ಬೇರೆಡೆಗೆ ಸೆಳೆಯುತ್ತಿದ್ದಾರೆ ಎಂದು ಹೇಳಿದ್ದಾರೆ.

ಮೋದಿ ವಿರುದ್ಧ ಭ್ರಷ್ಟಾಚಾರದ ಆರೋಪಗಳನ್ನು ಹೊರಿಸಿದ ಪ್ರಿಯಾಂಕಾ ಗಾಂಧಿ, ಅವರು ಚುನಾವಣಾ ಬಾಂಡ್‌ಗಳ ಅತಿದೊಡ್ಡ ಭ್ರಷ್ಟಾಚಾರ ಯೋಜನೆಯನ್ನು ತಂದರು, ಇದರಲ್ಲಿ ದೇಣಿಗೆ ನೀಡುವ ವ್ಯಕ್ತಿಯ ಹೆಸರು ರಹಸ್ಯವಾಗಿರುತ್ತಿತ್ತು ಎಂದು ಹೇಳಿದ್ದಾರೆ.

ಇದನ್ನು ಓದಿ: ಗಾಝಾದಲ್ಲಿ ಭಾರತೀಯ ಸೇನಾ ನಿವೃತ್ತ ಅಧಿಕಾರಿಯನ್ನು ಹತ್ಯೆ ಮಾಡಿದ ಇಸ್ರೇಲ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...

ಬಸವರಾಜ ಕನ್ನಾಳೆ ಸಿಂಡಿಕೇಟ್ ಸದಸ್ಯತ್ವ ರದ್ದಾಗುತ್ತಾ? ರಾಜಭವನದ ಮೌನಕ್ಕೆ ಮೂಡಿದ ಅನುಮಾನ

ತುಮಕೂರು ವಿಶ್ವವಿದ್ಯಾಲಯದ ರಾಜ್ಯಪಾಲರ ನಾಮನಿರ್ದೇಶಿತ ಸಿಂಡಿಕೇಟ್ ಸದಸ್ಯ ಬಸವರಾಜ ಕನ್ನಾಳೆ ಬಂಧನದ ಬೆನ್ನಲ್ಲೇ, ತನಿಖಾ ಸಂಸ್ಥೆಗಳು ತಮ್ಮ ಕಾರ್ಯಾಚರಣೆಯನ್ನು ತೀವ್ರಗೊಳಿಸಿವೆ. ಪ್ರಕರಣಕ್ಕೆ ಸಂಬಂಧಿಸಿದಂತೆ ತುಮಕೂರು ವಿವಿಯ ಪ್ರಭಾರ ಕುಲಪತಿ ಪ್ರೊ. ನಾಗಭೂಷಣ ಅವರಿಂದ...