Homeಮುಖಪುಟಪ್ರಧಾನಿ ಮೋದಿ ವಿದೇಶ ಪ್ರವಾಸ | 32 ತಿಂಗಳಿಗೆ 258 ಕೋಟಿ ರೂ. ವೆಚ್ಚ!

ಪ್ರಧಾನಿ ಮೋದಿ ವಿದೇಶ ಪ್ರವಾಸ | 32 ತಿಂಗಳಿಗೆ 258 ಕೋಟಿ ರೂ. ವೆಚ್ಚ!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಮೇ 2022 ರಿಂದ ಡಿಸೆಂಬರ್ 2024 ರವರೆಗೆ ಮಾಡಿದ 38 ವಿದೇಶ ಪ್ರವಾಸಗಳಿಗೆ ಕೇಂದ್ರ ಸರ್ಕಾರ 258.9 ಕೋಟಿ ರೂ. ಖರ್ಚು ಮಾಡಿದೆ ಎಂದು ವರದಿಯಾಗಿದೆ. ಈ ಅವಧಿಯಲ್ಲಿ ಮೋದಿ ಅವರು ಜೂನ್ 2023 ರಲ್ಲಿ ಮಾಡಿದ ಅತ್ಯಂತ ದುಬಾರಿ ಪ್ರವಾಸ ಅಮೆರಿಕದ್ದಾಗಿದ್ದು, ಇದಕ್ಕೆ ರೂ. 22 ಕೋಟಿಗೂ ಹೆಚ್ಚು ವೆಚ್ಚವಾಗಿದೆ ಎಂದು ಸರ್ಕಾರ ಗುರುವಾರ ರಾಜ್ಯಸಭೆಗೆ ತಿಳಿಸಿದೆ. ಪ್ರಧಾನಿ ಮೋದಿ ವಿದೇಶ ಪ್ರವಾಸ

ಪ್ರಧಾನಿಯವರ ಸೆಪ್ಟೆಂಬರ್ 2024 ರ ಅಮೆರಿಕ ಭೇಟಿಗೆ ರೂ. 15 ಕೋಟಿಗೂ ಹೆಚ್ಚು ಖರ್ಚು ಮಾಡಲಾಗಿದೆ ಎಂದು ಅದು ತಿಳಿಸಿದೆ. ಪ್ರಧಾನಿ ನಿಯೋಗದ ವಸತಿ, ಸಾರಿಗೆ, ಭದ್ರತೆ ಮತ್ತು ಹಾರ್ಡ್‌ವೇರ್, ಸ್ಥಳ ಶುಲ್ಕಗಳು ಮತ್ತು “ವಿವಿಧ” ಖರ್ಚು ವೆಚ್ಚಗಳು ಇದರಲ್ಲಿ ಸೇರಿದೆ ಎಂದು ಸರ್ಕಾರ ಹೇಳಿದೆ. ಅದಾಗ್ಯೂ, ವಿವಿಧ ವೆಚ್ಚಗಳು ಅಂದರೆ ಏನು ಎಂದು ವ್ಯಾಖ್ಯಾನಿಸಲಾಗಿಲ್ಲ.

2022 ರಲ್ಲಿ ಮೋದಿ ಜರ್ಮನಿ, ಡೆನ್ಮಾರ್ಕ್, ಫ್ರಾನ್ಸ್, ನೇಪಾಳ, ಯುನೈಟೆಡ್ ಅರಬ್ ಎಮಿರೇಟ್ಸ್, ಜಪಾನ್, ಉಜ್ಬೇಕಿಸ್ತಾನ್ ಮತ್ತು ಇಂಡೋನೇಷ್ಯಾಕ್ಕೆ ಭೇಟಿ ನೀಡಿದ್ದರು. 2023 ರಲ್ಲಿ, ಪಪುವಾ ನ್ಯೂಗಿನಿಯಾ, ಆಸ್ಟ್ರೇಲಿಯಾ, ಜಪಾನ್, ಯುಎಸ್, ಯುಎಇ, ಈಜಿಪ್ಟ್, ದಕ್ಷಿಣ ಆಫ್ರಿಕಾ, ಇಂಡೋನೇಷ್ಯಾ ಮತ್ತು ಗ್ರೀಸ್ ದೇಶಗಳಿಗೆ ಪ್ರಧಾನಿ ಭೇಟಿ ನೀಡಿದ್ದರು.

2024 ರಲ್ಲಿ, ಪ್ರಧಾನ ಮಂತ್ರಿ ಯುಎಇ, ಭೂತಾನ್, ಕತಾರ್, ಇಟಲಿ, ಆಸ್ಟ್ರಿಯಾ, ರಷ್ಯಾ, ಪೋಲೆಂಡ್, ಉಕ್ರೇನ್, ಬ್ರೂನಿ ದಾರುಸ್ಸಲಾಮ್, ಅಮೆರಿಕ, ಸಿಂಗಾಪುರ, ಲಾವೋಸ್, ಬ್ರೆಜಿಲ್, ಗಯಾನಾ ಮತ್ತು ಕುವೈತ್‌ಗೆ ಪ್ರಯಾಣ ಬೆಳೆಸಿದ್ದರು.

ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಶ್ನೆಗೆ ಲಿಖಿತ ಉತ್ತರವಾಗಿ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವೆ ಪಬಿತ್ರ ಮಾರ್ಗರಿಟಾ ಅವರು ಈ ಡೇಟಾವನ್ನು ಒದಗಿಸಿದ್ದಾರೆ. ಕಾಂಗ್ರೆಸ್ ಮುಖ್ಯಸ್ಥರಾದ ಖರ್ಗೆ ಅವರು ಪ್ರಧಾನಿಯವರ ವಿದೇಶ ಪ್ರವಾಸಗಳ ವ್ಯವಸ್ಥೆಗಾಗಿ ಭಾರತೀಯ ರಾಜತಾಂತ್ರಿಕ ಕಾರ್ಯಾಚರಣೆಗಳು ಮಾಡಿದ ವೆಚ್ಚದ ವಿವರಗಳನ್ನು ಕೋರಿದ್ದರು. ಪ್ರಧಾನಿ ಮೋದಿ ವಿದೇಶ ಪ್ರವಾಸ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿಯ ಇಬ್ಬರು ಎಂಎಲ್‌ಸಿಗಳಿಗೆ ಕಾಂಗ್ರೆಸ್ ಸೇರುವಂತೆ ಸದನದಲ್ಲೆ ಆಫರ್ ನೀಡಿದ ಡಿ.ಕೆ. ಶಿವಕುಮಾರ್!

ಬಿಜೆಪಿಯ ಇಬ್ಬರು ಎಂಎಲ್‌ಸಿಗಳಿಗೆ ಕಾಂಗ್ರೆಸ್ ಸೇರುವಂತೆ ಸದನದಲ್ಲೆ ಆಫರ್ ನೀಡಿದ ಡಿ.ಕೆ. ಶಿವಕುಮಾರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಮೀನು ನಿರಾಕರಣೆ : ಸುಪ್ರೀಂ ಕೋರ್ಟ್‌ಗೆ ಮರುಪರಿಶೀಲನಾ ಅರ್ಜಿ ಸಲ್ಲಿಸಿದ ಉಮರ್ ಖಾಲಿದ್

ದೆಹಲಿ ಗಲಭೆ ಪ್ರಕರಣದಲ್ಲಿ ಜಾಮೀನು ನಿರಾಕರಿಸಿದ ಜನವರಿ 5ರ ಆದೇಶವನ್ನು ಮರು ಪರಿಶೀಲಿಸುವಂತೆ ಕೋರಿ ಉಮರ್ ಖಾಲಿದ್ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಈ ಅರ್ಜಿ ವಿಚಾರಣೆ ಬುಧವಾರಕ್ಕೆ (ಏ.15) ನಿಗದಿಯಾಗಿದೆ ಎಂದು...

ಜಾರ್ಖಂಡ್| ಅಬಕಾರಿ ಕಾನ್‌ಸ್ಟೆಬಲ್ ಪರೀಕ್ಷೆ ಪತ್ರಿಕೆ ಸೋರಿಕೆ ಪ್ರಕರಣ; 159 ಅಭ್ಯರ್ಥಿಗಳ ಬಂಧನ

ರಾಂಚಿಯಲ್ಲಿ ನಿರ್ಮಾಣ ಹಂತದಲ್ಲಿರುವ ಮನೆಯಿಂದ 159 ಅಭ್ಯರ್ಥಿಗಳನ್ನು ಪೊಲೀಸರು ಬಂಧಿಸಿದ ನಂತರ ಪರೀಕ್ಷೆ ಪತ್ರಿಕೆ ಸೋರಿಕೆ ಕೃತ್ಯ ಬೆಳಕಿಗೆ ಬಂದಿದೆ. ತಮರ್ ಪೊಲೀಸ್ ಠಾಣೆ ವ್ಯಾಪ್ತಿಯ ರಾರ್ಗಾಂವ್‌ನಲ್ಲಿರುವ ಸ್ಥಳದಲ್ಲಿ ಅಭ್ಯರ್ಥಿಗಳನ್ನು ಒಟ್ಟುಗೂಡಿಸಲಾಗಿದ್ದು, ಪರೀಕ್ಷೆಗೆ ಮೊದಲು...

ನೋಯ್ಡಾ: ವೇತನ ಹೆಚ್ಚಳಕ್ಕೆ ಒತ್ತಾಯಿಸಿ ನಡೆದ ಕಾರ್ಮಿಕರ ಪ್ರತಿಭಟನೆಯಲ್ಲಿ ಹೆಚ್ಚಿದ ಹಿಂಸಾಚಾರ; ಕಲ್ಲು ತೂರಾಟ, ವಾಹನಗಳು ಧ್ವಂಸ

ನೋಯ್ಡಾ: ಉತ್ತರ ಪ್ರದೇಶದ ನೋಯ್ಡಾದಲ್ಲಿ ವೇತನ ಹೆಚ್ಚಳ ಸೇರಿದಂತೆ ಹಲವು ಬೇಡಿಕೆಗಳಿಗಾಗಿ ಕಾರ್ಮಿಕರು ನಡೆಸುತ್ತಿದ್ದ ಪ್ರತಿಭಟನೆ ಸೋಮವಾರ ತೀವ್ರ ಹಿಂಸಾಚಾರಕ್ಕೆ ತಿರುಗಿದೆ. ಪ್ರತಿಭಟನೆಯ ಸಮಯದಲ್ಲಿ, ವಾಹನಗಳು ಮತ್ತು ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಲಾಗಿದ್ದು, ಕಲ್ಲು ತೂರಾಟ...

‘ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ ಅವರ ನಿಜವಾದ ವಿಷಯ..’; ಕೇಂದ್ರದ ಮೇಲೆ ಸೋನಿಯಾ ಗಾಂಧಿ ವಾಗ್ದಾಳಿ

ಮಹಿಳಾ ಮೀಸಲಾತಿಯಲ್ಲ, ಡಿಲಿಮಿಟೇಶನ್ (ಕ್ಷೇತ್ರ ಪುನರ್‌ ವಿಂಗಡಣೆ) ನಿರ್ಣಯವು ಏಪ್ರಿಲ್ 16 ರಿಂದ 18 ರವರೆಗೆ ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆಯುವ ಕೇಂದ್ರದ ನಿರ್ಧಾರದ ಹಿಂದಿನ ಪ್ರಮುಖ ವಿಷಯವಾಗಿದೆ ಎಂದು ಕಾಂಗ್ರೆಸ್ ಸಂಸದೀಯ...

ಜಾತಿ ದೌರ್ಜನ್ಯಕ್ಕೆ ದಲಿತ ವಿದ್ಯಾರ್ಥಿ ಬಲಿ | ಸಂತಾಪ ಸೂಚಿಸಲು ಬಾರದ ಕಾಲೇಜು ಸಿಬ್ಬಂದಿ : ಅನುಮಾನ ವ್ಯಕ್ತಪಡಿಸಿದ ಶಿಕ್ಷಣ ಸಚಿವ

ಜಾತಿ ದೌರ್ಜನ್ಯದ ಆರೋಪ ಮಾಡಿ ದಲಿತ ವಿದ್ಯಾರ್ಥಿ ನಿತಿನ್ ರಾಜ್ ಸಾವಿಗೆ ಶರಣಾದ ನಂತರ, ಅವರ ಕಾಲೇಜಿನ ಒಬ್ಬನೇ ಒಬ್ಬ ಪ್ರತಿನಿಧಿಯೂ ಮನೆಗೆ ಭೇಟಿ ನೀಡದಿರುವುದು 'ಗಂಭೀರವಾದ ವಿಷಯ' ಎಂದು ಕೇರಳದ ಸಾರ್ವಜನಿಕ...

ಹಂಗೇರಿ ಚುನಾವಣೆಯಲ್ಲಿ ತೀವ್ರ ಬಲಪಂಥೀಯ ವಿಕ್ಟರ್ ಒರ್ಬಾನ್‌ಗೆ ಸೋಲು : ಟ್ರಂಪ್ ಆಪ್ತನ ಯುಗಾಂತ್ಯ

ಹಂಗೇರಿಯ ಸಾರ್ವತ್ರಿಕ ಚುನಾವಣೆಯಲ್ಲಿ, ಕಳೆದ 16 ವರ್ಷಗಳಿಂದ ದೇಶವನ್ನು ಆಳಿದ ತೀವ್ರ ಬಲಪಂಥೀಯ ಮತ್ತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಪ್ತ ವಿಕ್ಟರ್ ಒರ್ಬಾನ್ ಸೋಲಾಗಿದೆ. ಆರ್ಥಿಕ ಸ್ಥಗಿತ ಮತ್ತು ಹೆಚ್ಚುತ್ತಿರುವ ಜೀವನ ವೆಚ್ಚದ...

ಹಾರ್ಮುಝ್ ಜಲಸಂಧಿ ಮೇಲೆ ನಿಯಂತ್ರಣ ಸಾಧಿಸಲು ಮುಂದಾದ ಅಮೆರಿಕ : ಕಠಿಣ ಕ್ರಮದ ಎಚ್ಚರಿಕೆ ನೀಡಿದ ಇರಾನ್

ಇಸ್ಲಾಮಾಬಾದ್‌ನಲ್ಲಿ ಆಯೋಜಿಸಿದ್ದ ಅಮೆರಿಕ-ಇರಾನ್ ನಡುವಿನ ಐತಿಹಾಸಿಕ ಶಾಂತಿ ಮಾತುಕತೆ ವಿಫಲವಾದ ಬೆನ್ನಲ್ಲೇ, ಹಾರ್ಮುಝ್ ಜಲಸಂಧಿಯ ಸುತ್ತಲಿನ ಪರಿಸ್ಥಿತಿ ಗಂಭೀರ ಸ್ವರೂಪ ಪಡೆದುಕೊಂಡಿದೆ.  ಮಾತುಕತೆ ವಿಫಲವಾದ ನಂತರ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಹಾರ್ಮುಝ್...

ಕೇರಳ: ಕಣ್ಣೂರು ದಂತ ಕಾಲೇಜಿನಲ್ಲಿ ದಲಿತ ಬಿಡಿಎಸ್ ವಿದ್ಯಾರ್ಥಿ ಆತ್ಮಹತ್ಯೆ, ಕ್ರೂರ ಜಾತಿ ನಿಂದನೆ, ಅವಮಾನ ಆರೋಪ

ಕೇರಳದಲ್ಲಿ ನಡೆದ ಜಾತಿ ಆಧಾರಿತ ಕಿರುಕುಳದ ಆಘಾತಕಾರಿ ಪ್ರಕರಣದಲ್ಲಿ, ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ಶರಣಾಗಿದ್ದಾನೆ.   ಆರ್‌.ಎಲ್ ನಿತಿನ್ ರಾಜ್ ಅವರ ಕುಟುಂಬವು...

ಜಬ್ಬಾರ್​ರನ್ನು ಎಂಎಲ್‌ಸಿ ಮಾಡಿದ್ದು ನಾವು, ಪಕ್ಷದ ಅನ್ನ ತಿಂದ ಮೇಲೆ ಕೆಲಸ ಮಾಡಬೇಕಿತ್ತು : ಸಚಿವ ಎಸ್.ಎಸ್ ಮಲ್ಲಿಕಾರ್ಜುನ್

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಜನರ ಪ್ರತಿಕ್ರಿಯೆ ಚೆನ್ನಾಗಿತ್ತು, ನಾವು ಗೆಲುವು ಸಾಧಿಸುತ್ತೇವೆ ಎಂಬ ವಿಶ್ವಾಸವಿದೆ. ನಮ್ಮ ಮತದಾರ ಬಂಧುಗಳು ಉತ್ತಮವಾಗಿ ಮತದಾನ ಮಾಡಿದ್ದಾರೆ. ಒಳ್ಳೆಯ ಅಂತರದಲ್ಲಿ ಕಾಂಗ್ರೆಸ್‌ ಪಕ್ಷ ಗೆಲ್ಲುತ್ತೆ,...

ಧಾರವಾಡ: ಯುವ ಕಾಂಗ್ರೆಸ್ ನಾಯಕ ಫೈರೋಜ್ ಖಾನ್ ಪಠಾಣ್ ಹತ್ಯೆ; ಮೂವರು ಆರೋಪಿಗಳ ಬಂಧನ

ಧಾರವಾಡದಲ್ಲಿ ಶುಕ್ರವಾರ ತಡರಾತ್ರಿ ಯುವ ಕಾಂಗ್ರೆಸ್ ನಾಯಕನೊಬ್ಬನನ್ನು ಅವರ ನಿವಾಸದೊಳಗೆ ಬರ್ಬರವಾಗಿ ಹತ್ಯೆ ಮಾಡಲಾಗಿದ್ದು, ನಗರದಾದ್ಯಂತ ಆಘಾತದ ಅಲೆಗಳನ್ನು ಸೃಷ್ಟಿಸಿದೆ. ಮೃತ ವ್ಯಕ್ತಿಯನ್ನು ಫೈರೋಜ್ ಖಾನ್ ಪಠಾಣ್ (34) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ,...