Homeಮುಖಪುಟಪ್ರಧಾನಿ ಮೋದಿ ವಿದೇಶ ಪ್ರವಾಸ | 32 ತಿಂಗಳಿಗೆ 258 ಕೋಟಿ ರೂ. ವೆಚ್ಚ!

ಪ್ರಧಾನಿ ಮೋದಿ ವಿದೇಶ ಪ್ರವಾಸ | 32 ತಿಂಗಳಿಗೆ 258 ಕೋಟಿ ರೂ. ವೆಚ್ಚ!

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿ ಅವರು ಮೇ 2022 ರಿಂದ ಡಿಸೆಂಬರ್ 2024 ರವರೆಗೆ ಮಾಡಿದ 38 ವಿದೇಶ ಪ್ರವಾಸಗಳಿಗೆ ಕೇಂದ್ರ ಸರ್ಕಾರ 258.9 ಕೋಟಿ ರೂ. ಖರ್ಚು ಮಾಡಿದೆ ಎಂದು ವರದಿಯಾಗಿದೆ. ಈ ಅವಧಿಯಲ್ಲಿ ಮೋದಿ ಅವರು ಜೂನ್ 2023 ರಲ್ಲಿ ಮಾಡಿದ ಅತ್ಯಂತ ದುಬಾರಿ ಪ್ರವಾಸ ಅಮೆರಿಕದ್ದಾಗಿದ್ದು, ಇದಕ್ಕೆ ರೂ. 22 ಕೋಟಿಗೂ ಹೆಚ್ಚು ವೆಚ್ಚವಾಗಿದೆ ಎಂದು ಸರ್ಕಾರ ಗುರುವಾರ ರಾಜ್ಯಸಭೆಗೆ ತಿಳಿಸಿದೆ. ಪ್ರಧಾನಿ ಮೋದಿ ವಿದೇಶ ಪ್ರವಾಸ

ಪ್ರಧಾನಿಯವರ ಸೆಪ್ಟೆಂಬರ್ 2024 ರ ಅಮೆರಿಕ ಭೇಟಿಗೆ ರೂ. 15 ಕೋಟಿಗೂ ಹೆಚ್ಚು ಖರ್ಚು ಮಾಡಲಾಗಿದೆ ಎಂದು ಅದು ತಿಳಿಸಿದೆ. ಪ್ರಧಾನಿ ನಿಯೋಗದ ವಸತಿ, ಸಾರಿಗೆ, ಭದ್ರತೆ ಮತ್ತು ಹಾರ್ಡ್‌ವೇರ್, ಸ್ಥಳ ಶುಲ್ಕಗಳು ಮತ್ತು “ವಿವಿಧ” ಖರ್ಚು ವೆಚ್ಚಗಳು ಇದರಲ್ಲಿ ಸೇರಿದೆ ಎಂದು ಸರ್ಕಾರ ಹೇಳಿದೆ. ಅದಾಗ್ಯೂ, ವಿವಿಧ ವೆಚ್ಚಗಳು ಅಂದರೆ ಏನು ಎಂದು ವ್ಯಾಖ್ಯಾನಿಸಲಾಗಿಲ್ಲ.

2022 ರಲ್ಲಿ ಮೋದಿ ಜರ್ಮನಿ, ಡೆನ್ಮಾರ್ಕ್, ಫ್ರಾನ್ಸ್, ನೇಪಾಳ, ಯುನೈಟೆಡ್ ಅರಬ್ ಎಮಿರೇಟ್ಸ್, ಜಪಾನ್, ಉಜ್ಬೇಕಿಸ್ತಾನ್ ಮತ್ತು ಇಂಡೋನೇಷ್ಯಾಕ್ಕೆ ಭೇಟಿ ನೀಡಿದ್ದರು. 2023 ರಲ್ಲಿ, ಪಪುವಾ ನ್ಯೂಗಿನಿಯಾ, ಆಸ್ಟ್ರೇಲಿಯಾ, ಜಪಾನ್, ಯುಎಸ್, ಯುಎಇ, ಈಜಿಪ್ಟ್, ದಕ್ಷಿಣ ಆಫ್ರಿಕಾ, ಇಂಡೋನೇಷ್ಯಾ ಮತ್ತು ಗ್ರೀಸ್ ದೇಶಗಳಿಗೆ ಪ್ರಧಾನಿ ಭೇಟಿ ನೀಡಿದ್ದರು.

2024 ರಲ್ಲಿ, ಪ್ರಧಾನ ಮಂತ್ರಿ ಯುಎಇ, ಭೂತಾನ್, ಕತಾರ್, ಇಟಲಿ, ಆಸ್ಟ್ರಿಯಾ, ರಷ್ಯಾ, ಪೋಲೆಂಡ್, ಉಕ್ರೇನ್, ಬ್ರೂನಿ ದಾರುಸ್ಸಲಾಮ್, ಅಮೆರಿಕ, ಸಿಂಗಾಪುರ, ಲಾವೋಸ್, ಬ್ರೆಜಿಲ್, ಗಯಾನಾ ಮತ್ತು ಕುವೈತ್‌ಗೆ ಪ್ರಯಾಣ ಬೆಳೆಸಿದ್ದರು.

ರಾಜ್ಯಸಭೆಯಲ್ಲಿ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರ ಪ್ರಶ್ನೆಗೆ ಲಿಖಿತ ಉತ್ತರವಾಗಿ ವಿದೇಶಾಂಗ ವ್ಯವಹಾರಗಳ ರಾಜ್ಯ ಸಚಿವೆ ಪಬಿತ್ರ ಮಾರ್ಗರಿಟಾ ಅವರು ಈ ಡೇಟಾವನ್ನು ಒದಗಿಸಿದ್ದಾರೆ. ಕಾಂಗ್ರೆಸ್ ಮುಖ್ಯಸ್ಥರಾದ ಖರ್ಗೆ ಅವರು ಪ್ರಧಾನಿಯವರ ವಿದೇಶ ಪ್ರವಾಸಗಳ ವ್ಯವಸ್ಥೆಗಾಗಿ ಭಾರತೀಯ ರಾಜತಾಂತ್ರಿಕ ಕಾರ್ಯಾಚರಣೆಗಳು ಮಾಡಿದ ವೆಚ್ಚದ ವಿವರಗಳನ್ನು ಕೋರಿದ್ದರು. ಪ್ರಧಾನಿ ಮೋದಿ ವಿದೇಶ ಪ್ರವಾಸ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಬಿಜೆಪಿಯ ಇಬ್ಬರು ಎಂಎಲ್‌ಸಿಗಳಿಗೆ ಕಾಂಗ್ರೆಸ್ ಸೇರುವಂತೆ ಸದನದಲ್ಲೆ ಆಫರ್ ನೀಡಿದ ಡಿ.ಕೆ. ಶಿವಕುಮಾರ್!

ಬಿಜೆಪಿಯ ಇಬ್ಬರು ಎಂಎಲ್‌ಸಿಗಳಿಗೆ ಕಾಂಗ್ರೆಸ್ ಸೇರುವಂತೆ ಸದನದಲ್ಲೆ ಆಫರ್ ನೀಡಿದ ಡಿ.ಕೆ. ಶಿವಕುಮಾರ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಳಗಾವಿಯ ವಿವಿದೆಡೆ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾ

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬೆಳಗಾವಿಯ ವಿವಿಧ ಭಾಗಗಳಲ್ಲಿ ಸೋಮವಾರ (ಜೂ.15) ಜನಜಾಗೃತಿ ಜಾಥಾ ನಡೆಯಿತು. ಬಾಗಲಕೋಟೆಯಿಂದ ಆಗಮಿಸಿದ ಜಾಥಾ ತಂಡವನ್ನು ಯರಗಟ್ಟಿ ಪಟ್ಟಣದಲ್ಲಿ...

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾದ ಎಸ್‌ಐಆರ್ ವಿರೋಧಿ ಜಾಥಾ; ಜನಪರ ಸಂಘಟನೆಗಳ ಬೆಂಬಲ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರೋಧಿಸಿ ನಡೆಯುತ್ತಿರುವ ರಾಜ್ಯ ಮಟ್ಟದ ಜಾಥಾ ಇಂದು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಯಶಸ್ವಿಯಾಗಿ ನಡೆಯಿತು. ಜಾಥಾದ ಮೂರನೇ ದಿನವಾದ ಇಂದು ಗೌರಿಬಿದನೂರು ತಾಲ್ಲೂಕಿನ ಕಾದಲವೇಣಿ ಗ್ರಾಮದಿಂದ ಆರಂಭವಾದ...

SIR ಮೂಲಕ ಕೇಂದ್ರ ಸರ್ಕಾರ ಪ್ರಜಾತಂತ್ರ ವ್ಯವಸ್ಥೆಯನ್ನು ನಾಶ ಮಾಡಲು ಹೊರಟಿದೆ: ಮಾಜಿ ಸಚಿವ ಬಿ.ಬಿ.ಲಿಂಗಯ್ಯ ಆಕ್ರೋಶ

ಕೇಂದ್ರದ ಬಿಜೆಪಿ ಸರ್ಕಾರವು ‘SIR’ ಜಾರಿಯ ಮೂಲಕ ಜನರ ಮತದಾನದ ಹಕ್ಕನ್ನು ಕಿತ್ತುಕೊಳ್ಳಲು ಮತ್ತು ಪ್ರಜಾತಂತ್ರ ವ್ಯವಸ್ಥೆಯನ್ನು ಕಗ್ಗೊಲೆ ಮಾಡಲು ಸಂಚು ರೂಪಿಸಿದೆ ಎಂದು ಮಾಜಿ ಸಚಿವ ಬಿ.ಬಿ. ಲಿಂಗಯ್ಯ ತೀವ್ರ ಆಕ್ರೋಶ...

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...