Homeಮುಖಪುಟ12 ಕೋಟಿ ಮೌಲ್ಯದ ಪ್ರಧಾನಿ ಮೋದಿಯವರ ಹೊಸ ಕಾರು: ವಿಶೇಷತೆಗಳು ಇಲ್ಲಿವೆ

12 ಕೋಟಿ ಮೌಲ್ಯದ ಪ್ರಧಾನಿ ಮೋದಿಯವರ ಹೊಸ ಕಾರು: ವಿಶೇಷತೆಗಳು ಇಲ್ಲಿವೆ

- Advertisement -
- Advertisement -

ರೇಂಜ್ ರೋವರ್ ವೋಗ್ ಮತ್ತು ಟೊಯೋಟಾ ಲ್ಯಾಂಡ್ ಕ್ರೂಸರ್‌ಗಿಂತ ಅತ್ಯಧಿಕವಾಗಿ ನವೀಕೃತಗೊಂಡಿರುವ ಹೊಸ ಮರ್ಸಿಡಿಸ್-ಮೇಬ್ಯಾಕ್ S 650 ಗಾರ್ಡ್ (Mercedes-Maybach S 650 Guard) ಕಾರನ್ನು ಪ್ರಧಾನಿ ನರೇಂದ್ರ ಮೋದಿ ಈಗ ಬಳಸುತ್ತಿದ್ದಾರೆ.

ಇತ್ತೀಚೆಗೆ ದೆಹಲಿಯ ಹೈದರಾಬಾದ್ ಹೌಸ್‌ನಲ್ಲಿ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಅವರನ್ನು ಸ್ವಾಗತಿಸಲು ಆಗಮಿಸಿದಾಗ ಶಸ್ತ್ರಸಜ್ಜಿತ ಮರ್ಸಿಡಿಸ್-ಮೇಬ್ಯಾಕ್ S 650 ಕಾಣಿಸಿಕೊಂಡಿದ್ದಾರೆ. ಈ ಕಾರು ಈಗ ಎಲ್ಲರ ಗಮನ ಸೆಳೆದಿದೆ.

ಮೇಬ್ಯಾಕ್ S 650 ಗಾರ್ಡ್ VR10-ಮಟ್ಟದ ರಕ್ಷಣೆ ನೀಡುತ್ತದೆ. ಅಂದರೆ ಅತ್ಯುನ್ನತ ಮಟ್ಟದ ಶಸ್ತ್ರಸಜ್ಜಿತ ರಕ್ಷಣೆಯನ್ನು ನೀಡುತ್ತದೆ. ಇದರ ನವೀಕರಿಸಿದ ಕಿಟಕಿಗಳು ಮತ್ತು ಕಾರ್‌ ಬಾಡಿ ಗುಂಡುಗಳ ದಾಳಿ ಮತ್ತು AK-47 ರೈಫಲ್‌ಗಳಿಂದ ನಡೆಯಬಹುದಾದ ಆಕ್ರಮಣವನ್ನು ತಡೆದುಕೊಳ್ಳುತ್ತದೆ.

ಇದನ್ನೂ ಓದಿ: ಚಂಡೀಗಢ ಚುನಾವಣೆ: ವಿವಾದಿತ ಕೃಷಿ ಕಾಯ್ದೆಗಳ ರದ್ದುಗೊಳಿಸಿದ ಬಳಿಕ ಬಿಜೆಪಿಗೆ ಮೊದಲ ಮುಖಭಂ

ಸ್ಫೋಟಕ ನಿರೋಧಕ ವಾಹನ (ERV) 2010 ರೇಟಿಂಗ್ ಪಡೆದಿರುವ ಈ ಕಾರು ಸ್ಫೋಟಗಳಂಥ ಘಟನೆ ನಡೆದಾಗ ಹೆಚ್ಚಿನ ಪ್ರತಿರೋಧಕ ಒಡ್ಡುತ್ತದೆ. ಕಿಟಕಿಗಳು ಒಳಭಾಗದಲ್ಲಿ ಪಾಲಿಕಾರ್ಬೊನೇಟ್ ಲೇಪನವನ್ನು ಹೊಂದಿವೆ. ಕಾರಿನ ಒಳಭಾಗವು ನೇರ ಸ್ಫೋಟದಿಂದ ಒಳಗಿರುವವರನ್ನು ರಕ್ಷಿಸಲು ಹೆಚ್ಚು ಶಸ್ತ್ರಸಜ್ಜಿತವಾಗಿದೆ. ಗ್ಯಾಸ್ ದಾಳಿಯ ಸಂದರ್ಭದಲ್ಲಿ ಕ್ಯಾಬಿನ್ ಪ್ರತ್ಯೇಕ ಗಾಳಿಯ ಪೂರೈಕೆಯನ್ನು ಸಹ ನೀಡುತ್ತದೆ.

ಪ್ರಧಾನಿ ನರೇಂದ್ರ ಮೋದಿ ಬಳಸುತ್ತಿರುವ ಈ ಕಾರು 6.0-ಲೀಟರ್ ಸಾಮರ್ಥ್ಯದ ಟ್ವಿನ್-ಟರ್ಬೊ V12 ಎಂಜಿನ್‌ನಿಂದ ಚಾಲಿತವಾಗುತ್ತದೆ. ಗಂಟೆಗೆ ಇದರ ಗರಿಷ್ಠ ವೇಗ 160 km. ಕಾರು ವಿಶೇಷವಾದ ರನ್-ಫ್ಲಾಟ್ ಟೈರ್‌ಗಳನ್ನು ಹೊಂದಿದೆ. ಟೈರ್‌ಗಳಿಗೆ ಹಾನಿಯಾದರೆ ಅಥವಾ ಗಾಳಿ ಹೋಗಿ ಪಂಕ್ಚರ್ ಆದರೂ ಫ್ಲ್ಯಾಟ್ ಟೈರ್‌ಗಳಲ್ಲಿ ಚಲಿಸುವ ಮೂಲಕ ಸಮಸ್ಯೆ ಉಂಟಾಗದಂತೆ ನೋಡಿಕೊಳ್ಳುತ್ತದೆ. ಈ ಕಾರಿನ ಬೆಲೆ 12 ಕೋಟಿ ರೂಪಾಯಿ.

ಮರ್ಸಿಡೆಸ್-ಮೇಬ್ಯಾಕ್ ಎಸ್600 ಗಾರ್ಡ್ ವಾಹನವು ಕಳೆದ ವರ್ಷ ಭಾರತದಲ್ಲಿ ಬಿಡುಗಡೆಯಾಗಿತ್ತು. ಆಗ ಅದರ ಬೆಲೆ 10.5 ಕೋಟಿಯಿತ್ತು. ಈಗ ಪ್ರಧಾನಿ ಬಳಸುತ್ತಿರುವ ಹೊಸ ಮರ್ಸಿಡಿಸ್-ಮೇಬ್ಯಾಕ್ S 650 ಗಾರ್ಡ್ ಬೆಲೆ 12 ಕೋಟಿ ರೂಪಾಯಿಯಾಗಿದೆ.


ಇದನ್ನೂ ಓದಿ: ಮಂಗಳೂರು: ತೆರವುಗೊಳಿಸಲು ಬಂದ ಅಧಿಕಾರಿಗಳಿಗೆ ಕಾನೂನು ಪಾಠ ಮಾಡಿದ ಬೀದಿಬದಿ ವ್ಯಾಪಾರಿಗಳು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...