Homeಅಂತರಾಷ್ಟ್ರೀಯಪ್ರಧಾನಿ ಮೋದಿ ಬಾಂಗ್ಲಾ ಭೇಟಿ: ಬಾಂಗ್ಲಾದಲ್ಲಿ ತೀವ್ರಗೊಂಡ ’ಮೋದಿ ನಾಟ್ ವೆಲ್ಕಮ್’ ಪ್ರತಿಭಟನೆ

ಪ್ರಧಾನಿ ಮೋದಿ ಬಾಂಗ್ಲಾ ಭೇಟಿ: ಬಾಂಗ್ಲಾದಲ್ಲಿ ತೀವ್ರಗೊಂಡ ’ಮೋದಿ ನಾಟ್ ವೆಲ್ಕಮ್’ ಪ್ರತಿಭಟನೆ

ಮೋದಿ ಮುಖ್ಯಮಂತ್ರಿಯಾಗಿದ್ದಾಗ 2002 ರಲ್ಲಿ ಭಾರತದ ಗುಜರಾತ್‌ನಲ್ಲಿ 1,000 ಕ್ಕೂ ಹೆಚ್ಚು ಮುಸ್ಲಿಮರು ಕೊಲ್ಲಲ್ಪಟ್ಟರು ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ.

- Advertisement -
- Advertisement -

ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಬಾಂಗ್ಲಾದೇಶ ಸ್ವಾತಂತ್ರ್ಯದ ಸುವರ್ಣ ಮಹೋತ್ಸವ ಆಚರಣೆಯಲ್ಲಿ ಪಾಲ್ಗೊಳ್ಳಲು ತೆರಳಿದ್ದು, ಬಾಂಗ್ಲಾದಲ್ಲಿ ತೀವ್ರ ಸ್ವರೂಪದ ಪ್ರತಿಭಟನೆಗೆ ಸಾಕ್ಷಿಯಾಗಿದೆ. ಸುವರ್ಣ ಮಹೋತ್ಸವದ ಅತಿಥಿ ಪ್ರಧಾನಿ ಮೋದಿ ಎಂದು ಘೋಷಣೆಯಾದಾಗಿನಿಂದಲೂ ಪ್ರತಿಭಟನೆಗಳು ನಡೆಯುತ್ತಿವೆ.

ಇದೇ 27ರವರೆಗೆ ಬಾಂಗ್ಲಾದೇಶ ರಾಜಧಾನಿ ಢಾಕಾದಲ್ಲಿ ದೇಶದ ಸ್ವಾತಂತ್ರ್ಯೋತ್ಸವ ಸಂಭ್ರಮಾಚರಣೆ ಕಾರ್ಯಕ್ರಮಗಳು ನಡೆಯುತ್ತಿವೆ. ಈ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳಲು ಬಾಂಗ್ಲಾದೇಶಕ್ಕೆ ಭಾರತದ ಪ್ರಧಾನಿ ತೆರಳಿದ್ದು, ದೇಶದ ಸ್ಥಾಪಕ ಮತ್ತು ಹಾಲಿ ಪ್ರಧಾನಿ ಶೇಖ್ ಹಸೀನಾ ಅವರ ತಂದೆ ’ಬಂಗಬಂಧು’ ಶೇಖ್ ಮುಜಿಬುರ್ ರಹಮಾನ್ ಅವರ ಜನ್ಮ ಶತಮಾನೋತ್ಸವದಲ್ಲಿಯೂ ಭಾಗಿಯಾಗಲಿದ್ದಾರೆ.

ಮೋದಿಯವರ ಭೇಟಿಯು ಢಾಕಾದ ಮುಖ್ಯ ಮಸೀದಿಯಲ್ಲಿ ಹಿಂಸಾತ್ಮಕ ಪ್ರತಿಭಟನೆಗೆ ಕಾರಣವಾಯಿತು. ಪೊಲೀಸರು ಅಶ್ರುವಾಯು ಮತ್ತು ರಬ್ಬರ್ ಗುಂಡುಗಳನ್ನು ಬಳಸಿ ಸಾವಿರಾರು ಮಂದಿ ಪ್ರತಿಭಟನಾಕಾರರನ್ನು ಚದುರಿಸುವ ಪ್ರಯತ್ನ ನಡೆಸಿದ್ದಾರೆ.

ಇದನ್ನೂ ಓದಿ: ರೈತ ಮುಖಂಡ ರಾಕೇಶ್‌ ಟಿಕಾಯತ್‌ ವಿರುದ್ದ FIR: ಕೇಸು ರದ್ದು ಮಾಡಿ ಎಂದು ಕುಮಾರಸ್ವಾಮಿ…

ಶುಕ್ರವಾರ ನಮಾಜ್ ನಂತರ ಮೊಕರ್ರಾಮ್ ಮಸೀದಿ ಬಳಿ ನೂರಾರು ಪ್ರತಿಭಟನಾಕಾರರು ಮೋದಿಯವರಿಗೆ ಅಗೌರವ ತೋರುವ ಸಂಕೇತವಾಗಿ ಬೂಟುಗಳನ್ನು ಬೀಸಲು ಪ್ರಾರಂಭಿಸಿದ ನಂತರ ಹಿಂಸಾತ್ಮಕ ಘರ್ಷಣೆಗಳು ಸಂಭವಿಸಿದವು.

ಮಸೀದಿಯ ಬಳಿಯ ಬೀದಿಗಳಲ್ಲಿ ಭಾರಿ ಪ್ರಮಾಣದಲ್ಲಿ ಹಾಜರಿದ್ದ ಪೊಲೀಸರ ಮೇಲೆ ಪ್ರತಿಭಟನಾಕಾರರು ಕಲ್ಲು ಎಸೆಯುತ್ತಿರುವುದನ್ನು ಸ್ಥಳೀಯ ಮಾಧ್ಯಮಗಳು ತೋರಿಸಿವೆ. ಪತ್ರಕರ್ತರು ಸೇರಿದಂತೆ ಕನಿಷ್ಠ 40 ಜನರು ಈ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಢಾಕಾ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ ಎಂದು ಸೊಮೊಯ್ ಟಿವಿ ವರದಿ ಮಾಡಿದೆ.

PC: Al Jazeera

ಮೋದಿಯ ಭೇಟಿಯನ್ನು ವಿರೋಧಿಸಿ ಬಾಂಗ್ಲಾ ದೇಶದಾದ್ಯಂತ ನಡೆದ ಪ್ರತಿಭಟನೆಗಳಲ್ಲಿ ಶುಕ್ರವಾರ 40 ಮಂದಿ ಗಾಯಗೊಂಡಿದ್ದಾರೆ. ಭಾರತದಲ್ಲಿ ಮುಸ್ಲಿಮರನ್ನು ಹಿಂಸಿಸುತ್ತಿದ್ದಾರೆ ಎಂದು ಆರೋಪಿಸಿ ಈ ಪ್ರತಿಭಟನೆಗಳು ನಡೆದಿವೆ ಎನ್ನಲಾಗಿದೆ.

ಸುಮಾರು 2,000 ಪ್ರತಿಭಟನಾಕಾರರು ಶುಕ್ರವಾರ ಢಾಕಾದಲ್ಲಿ ಮೆರವಣಿಗೆ ನಡೆಸಿದ್ದಾರೆ. ಪ್ರತಿಭಟನೆಯಲ್ಲಿ ಅನೇಕರು ಕಲ್ಲುಗಳನ್ನು ಅಧಿಕಾರಿಗಳ ಮೇಲೆ ಎಸೆದಿದ್ದಾರೆ. ಹತ್ತಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಜನರು ಏನು ತೊಡುತ್ತಾರೆ ಎಂಬುದರಲ್ಲಿ ರಾಜಕಾರಣಿಗಳು ಮೂಗು ತೂರಿಸಬೇಕಿಲ್ಲ: ಸ್ಮೃತಿ ಇರಾನಿ

ಕಳೆದ ಶುಕ್ರವಾರ ಕೂಡ ಬೈತುಲ್ ಮೊಕರ್ರಾಮ್ ಮಸೀದಿಯ ಹೊರಗೆ ನಡೆದ ಮತ್ತೊಂದು ಪ್ರತಿಭಟನೆಯಲ್ಲಿ ಪ್ರತಿಭಟನಾಕಾರರು, ಮೋದಿ ಮುಖ್ಯಮಂತ್ರಿಯಾಗಿದ್ದಾಗ 2002 ರಲ್ಲಿ ಗುಜರಾತ್‌ನಲ್ಲಿ 1,000 ಕ್ಕೂ ಹೆಚ್ಚು ಮುಸ್ಲಿಮರು ಕೊಲ್ಲಲ್ಪಟ್ಟರು ಎಂದು ಆರೋಪಿಸಿದ್ದಾರೆ.

PC: Munir Uz zaman

“ಅವರ (ಮೋದಿ) ಸರ್ಕಾರವು ಹಲವಾರು ಕಾನೂನುಗಳನ್ನು ಜಾರಿಗೆ ತಂದಿದೆ, ಅದು ಮುಸ್ಲಿಮರನ್ನು ಭಾರತದಲ್ಲಿ ಎರಡನೇ ದರ್ಜೆಯ ಪ್ರಜೆಯನ್ನಾಗಿ ಮಾಡುತ್ತದೆ. ಅವರಂತಹ ನಾಯಕನನ್ನು 50 ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲು ಅನುಮತಿಸಬಾರದು” ಎಂದು ಇಸ್ಲಾಮಿಸ್ಟ್ ರಾಜಕೀಯ ಸಂಘಟನೆಯಾದ ಹೆಫಜತ್-ಎ-ಇಸ್ಲಾಂನ ಪ್ರಧಾನ ಕಾರ್ಯದರ್ಶಿ ಮೌಲಾನಾ ಮಾಮುನುಲ್ ಹಕ್ ಹೇಳಿದ್ದಾರೆ.

ಮೋದಿಯ ನೀತಿಗಳು ಬಾಂಗ್ಲಾದೇಶದ ಸ್ಥಾಪನಾ ತತ್ವಗಳ ಮೂಲ ಸಿದ್ಧಾಂತಗಳಿಗೆ ವಿರುದ್ಧವಾಗಿವೆ ಎಂದು ಬಾಂಗ್ಲಾದೇಶ ವಿದ್ಯಾರ್ಥಿ ಸಂಘದ ಅಧ್ಯಕ್ಷ ಫೊಯೆಜ್ ಉಲ್ಲಾ ಹೇಳಿದ್ದಾರೆ.


ಇದನ್ನೂ ಓದಿ: ಭಾರತ್ ಬಂದ್: ಆಂಧ್ರಪ್ರದೇಶ, ಪಂಜಾಬ್ ಪೂರ್ಣ ಸ್ತಬ್ದ – ದೇಶಾದ್ಯಂತ ಉತ್ತಮ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...