Homeಮುಖಪುಟನಿಮುನಲ್ಲಿ ನಮ್ಮ ಕೆಚ್ಚೆದೆಯ ಸಶಸ್ತ್ರ ಪಡೆಗಳೊಂದಿಗೆ ಸಂವಹನ ನಡೆಸುತ್ತಿದ್ದೇನೆ: ಮೋದಿ

ನಿಮುನಲ್ಲಿ ನಮ್ಮ ಕೆಚ್ಚೆದೆಯ ಸಶಸ್ತ್ರ ಪಡೆಗಳೊಂದಿಗೆ ಸಂವಹನ ನಡೆಸುತ್ತಿದ್ದೇನೆ: ಮೋದಿ

ಸಂವಾದದಲ್ಲಿ ಸೈನ್ಯ, ವಾಯುಪಡೆ ಮತ್ತು ಐಟಿಬಿಪಿಯ ಸಿಬ್ಬಂದಿ ಉಪಸ್ಥಿತರಿದ್ದು, ನಂತರ ಜೂನ್ 15ರ ಘರ್ಷಣೆಯಲ್ಲಿ ಗಾಯಗೊಂಡ ಹಲವಾರು ಸೈನಿಕರನ್ನು ಭೇಟಿ ಮಾಡಲು ಆಸ್ಪತ್ರೆಗೆ ಪಿಎಂ ಮೋದಿ ಭೇಟಿ ನೀಡಲಿದ್ದಾರೆ.

- Advertisement -
- Advertisement -

“ನಿಮುನಲ್ಲಿ ನಮ್ಮ ಕೆಚ್ಚೆದೆಯ ಸಶಸ್ತ್ರ ಪಡೆಗಳ ಸಿಬ್ಬಂದಿಯೊಂದಿಗೆ ಸಂವಹನ ನಡೆಸುತ್ತಿದ್ದೇನೆ” ಎಂದು ಪ್ರಧಾನಿ ಮೋದಿಯವರು ತಮ್ಮ ಇನ್ಸ್ಟಾಗ್ರಾಮ್ ಖಾತೆಯಲ್ಲಿ ಫೋಟೋವನ್ನು ಹಂಚಿಕೊಂಡಿದ್ದಾರೆ.

ಲಡಾಖ್‌ನ ಗಾಲ್ವಾನ್ ಕಣಿವೆಯಲ್ಲಿ ಭಾರತೀಯ ಮತ್ತು ಚೀನಾದ ಸೈನಿಕರ ನಡುವೆ ಹಿಂಸಾತ್ಮಕ ಘಟನೆ ನಡೆದ ಎರಡು ವಾರಗಳ ನಂತರ, ವಾಸ್ತವಿಕ ಪರಿಸ್ಥಿತಿ ಪರಿಶೀಲಿಸಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ಇಂದು ಲಡಾಖ್‌ಗೆ ಭೇಟಿ ನೀಡಿದ್ದಾರೆ.

ರಕ್ಷಣಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಮತ್ತು ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನಾರವಾನೆ ಕೂಡ ಪ್ರಧಾನಿ ಜೊತೆಗಿದ್ದಾರೆ.

ಪ್ರಧಾನಿ ಪ್ರಸ್ತುತ ನಿಮುವಿನಲ್ಲಿದ್ದಾರೆ. ಅಲ್ಲಿ ಅವರು ಸೇನೆ, ವಾಯುಪಡೆ ಮತ್ತು ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ) ಸಿಬ್ಬಂದಿಗಳೊಂದಿಗೆ ಸಂವಹನ ನಡೆಸುತ್ತಿದ್ದಾರೆ. ಈ ಸ್ಥಳ ಸಮುದ್ರ ಮಟ್ಟದಿಂದ 11,000 ಅಡಿ ಎತ್ತರದಲ್ಲಿದ್ದು ಜನ್ಸ್ಕರ್ ಶ್ರೇಣಿಯಿಂದ ಆವೃತವಾಗಿ ಸಿಂಧೂ ತೀರದಲ್ಲಿದೆ.

ಪರಸ್ಪರ ದೂರದಲ್ಲಿ ಕುಳಿತಿರುವ ಸೈನಿಕರೊಂದಿಗೆ ಮಾತನಾಡುತ್ತಿರುವ ಮೋದಿಯವರ ಫೋಟೊ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಪ್ರಧಾನಿ ಕಚೇರಿಯ ಪ್ರಕಾರ, ಅವರು ನಿಮುನಲ್ಲಿ ಫಾರ್ವರ್ಡ್ ಲೊಕೇಶನ್‌ನಲ್ಲಿದ್ದರು. ಅವರು ಲೇಹ್‌ನಿಂದ ಹೆಲಿಕ್ಯಾಪ್ಟರ್‌ ಮೂಲಕ ಮುಂಜಾನೆ ಅಲ್ಲಿಗೆ ತಲುಪಿದರು ಎನ್ನಲಾಗಿದೆ.

ಸಂವಾದದಲ್ಲಿ ಸೈನ್ಯ, ವಾಯುಪಡೆ ಮತ್ತು ಐಟಿಬಿಪಿಯ ಸಿಬ್ಬಂದಿ ಉಪಸ್ಥಿತರಿದ್ದು, ನಂತರ ಜೂನ್ 15ರ ಘರ್ಷಣೆಯಲ್ಲಿ ಗಾಯಗೊಂಡ ಹಲವಾರು ಸೈನಿಕರನ್ನು ಭೇಟಿ ಮಾಡಲು ಆಸ್ಪತ್ರೆಗೆ ಪಿಎಂ ಮೋದಿ ಭೇಟಿ ನೀಡಲಿದ್ದಾರೆ.

ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ನಿನ್ನೆ ಲೇಹ್‌ಗೆ ಪ್ರಯಾಣಿಸಬೇಕಿತ್ತು ಆದರೆ ಅವರ ಪ್ರವಾಸವನ್ನು ರದ್ದುಪಡಿಸಲಾಗಿದೆ.


ಇದನ್ನೂ ಓದಿ : ಬಿಜೆಪಿ ನಿಕಟವರ್ತಿ ಸಂಸ್ಥೆಗಳ ಚೀನಾ ಹಣಕಾಸು ನಂಟು!: ವಿದೇಶಾಂಗ ಸಚಿವ, ರಕ್ಷಣಾ ಸಲಹೆಗಾರರ ಸಂಬಂಧಿತ ಸಂಸ್ಥೆಗಳಿಗೆ ಚೀನಾದ ಹಣ

ಚೀನಾ ತನ್ನ ನಿಜ ಸ್ವರೂಪವನ್ನು ದೃಢಪಡಿಸುತ್ತಿದೆ; ಅಮೆರಿಕಾ ತೀಕ್ಷ್ಣ ಪ್ರತಿಕ್ರಿಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...