Homeಮುಖಪುಟಬೆಂಗಳೂರು ಟೆಕ್ ಸಮ್ಮಿಟ್-2020ಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು ಟೆಕ್ ಸಮ್ಮಿಟ್-2020ಗೆ ಪ್ರಧಾನಿ ಮೋದಿ ಚಾಲನೆ

ಇಂದಿನಿಂದ ನ. 21ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನ ಖಾಸಗಿ ಹೋಟೆಲ್​​​ನಲ್ಲಿ 23ನೇ ಆವೃತ್ತಿಯ ಬೆಂಗಳೂರು ಟೆಕ್ ಸಮ್ಮಿಟ್-2020 ನಡೆಯಲಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಐದು ವರ್ಷಗಳ ಹಿಂದೆ ಪ್ರಾರಂಭಿಸಿದ ‘ಡಿಜಿಟಲ್ ಇಂಡಿಯಾ’ ಮಿಷನ್ ಅನ್ನು ಸರ್ಕಾರದ ಯೋಜನೆಯಾಗಿ ನೋಡಲಾಗುತ್ತಿಲ್ಲ ಇದು ಜೀವನದ ವಿಧಾನವಾಗಿ ಮಾರ್ಪಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಬೆಂಗಳೂರು ಟೆಕ್ ಸಮ್ಮಿಟ್-2020ಗೆ ಚಾಲನೆ ನೀಡಿ ಮಾತನಾಡಿದ್ದಾರೆ.

ಇಂದಿನಿಂದ ನ. 21ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನ ಖಾಸಗಿ ಹೋಟೆಲ್​​​ನಲ್ಲಿ 23ನೇ ಆವೃತ್ತಿಯ ಬೆಂಗಳೂರು ಟೆಕ್ ಸಮ್ಮಿಟ್-2020 ನಡೆಯಲಿದೆ. ಟೆಕ್ ಸಮ್ಮಿಟ್‌ಗೆ ಪ್ರಧಾನಿ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್​ ಮೂಲಕ ಚಾಲನೆ ನೀಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಡಿಸಿಎಂ ಅಶ್ವತ್ಥ್​​​ ನಾರಾಯಣ್​​ ಸೇರಿದಂತೆ ಅನೇಕ ಗಣ್ಯರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

“ಡಿಜಿಟಲ್ ಇಂಡಿಯಾಕ್ಕೆ ಧನ್ಯವಾದಗಳು, ನಮ್ಮ ರಾಷ್ಟ್ರವು ಅಭಿವೃದ್ಧಿಗೆ ಹೆಚ್ಚು ಮಾನವ ಕೇಂದ್ರಿತ ವಿಧಾನವನ್ನು ನೋಡಿದೆ. ತಂತ್ರಜ್ಞಾನವನ್ನು ಇಷ್ಟು ದೊಡ್ಡ ಪ್ರಮಾಣದಲ್ಲಿ ಬಳಸುವುದರಿಂದ ನಮ್ಮ ಜನರ ಹಲವಾರು ಜೀವನ ಶೈಲಿಯಲ್ಲಿ ಬದಲಾವಣೆಗಳು ಬಂದಿವೆ” ಎಂದು ಪ್ರಧಾನಿ ಹೇಳಿದರು.

ಇದನ್ನೂ ಓದಿ: ’ಸಾಲ್ ಮುಬಾರಕ್‌’ ಪದ ಬಳಕೆಗೆ ಆಕ್ಷೇಪ: ಟ್ರೋಲ್‌‌ಗೊಳಗಾದ ಮೋದಿ ಸಮರ್ಥಕ ಮೋಹನ್‌ದಾಸ್‌ ಪೈ!‌

ಡಿಜಿಟಲ್ ಮತ್ತು ಟೆಕ್ ಪರಿಹಾರಗಳಿಗಾಗಿ ಸರ್ಕಾರ ಯಶಸ್ವಿಯಾಗಿ ಮಾರುಕಟ್ಟೆಯನ್ನು ಸೃಷ್ಟಿಸಿದೆ, ಇದು ತಂತ್ರಜ್ಞಾನವನ್ನು ಎಲ್ಲಾ ಯೋಜನೆಗಳ ಪ್ರಮುಖ ಭಾಗವನ್ನಾಗಿ ಮಾಡಿದೆ. “ನಮ್ಮ ಆಡಳಿತ ಮಾದರಿಯೇ ಟೆಕ್ನಾಲಜಿ ಫಸ್ಟ್ ” ಎಂದು ಪ್ರಧಾನಿ ಮೋದಿ ಹೇಳಿದರು.

ಕೈಗಾರಿಕೆಯಿಂದ ಮಾಹಿತಿ ಯುಗಕ್ಕೆ ಪರಿವರ್ತನೆಯ ಬಗ್ಗೆ ಮಾತನಾಡಿದ ಮೋದಿ, “ಕೈಗಾರಿಕಾ ಯುಗದ ಸಾಧನೆಗಳು ಹಿಂದಿನ ನೋಟ ಕನ್ನಡಿಯಲ್ಲಿವೆ, ಈಗ ನಾವು ಮಾಹಿತಿ ಯುಗದ ಮಧ್ಯದಲ್ಲಿದ್ದೇವೆ. ಭವಿಷ್ಯವು ನಿರೀಕ್ಷೆಗಿಂತ ಬೇಗ ಬರಲಿದೆ ಎಂದು ಮೋದಿ ಹೇಳಿದರು.

ಬೆಂಗಳೂರು ಟೆಕ್ ಸಮ್ಮಿಟ್-2020 ರಲ್ಲಿ‌ 25ಕ್ಕೂ ಹೆಚ್ಚು ದೇಶಗಳು ಭಾಗಿಯಾಗಿವೆ.​ ಸಮ್ಮಿಟ್​​ನಲ್ಲಿ ಕೃಷಿ, ಸಂಶೋಧನೆ ಮತ್ತು ಅಭಿವೃದ್ಧಿ, ಸ್ಟಾರ್ಟ್ ಅಪ್ ಪಾಲುದಾರಿಕೆ ವಲಯಗಳಲ್ಲಿ 7 ಒಪ್ಪಂದಗಳಿಗೆ ಸಹಿ ಹಾಕಲಾಗುತ್ತದೆ. ಜಾಗತಿಕ ಆವಿಷ್ಕಾರ ಮೈತ್ರಿಗೆ ಸಂಬಂಧಿಸಿದಂತೆ 15 ಅಧಿವೇಶನಗಳು ನಡೆಯಲಿವೆ. 60ಕ್ಕೂ ಹೆಚ್ಚು ಭಾಷಣಕಾರರು ಉಪನ್ಯಾಸ ನೀಡಲಿದ್ದಾರೆ. ಆನ್​​ಲೈನ್ ಮೂಲಕ ಸಾರ್ವಜನಿಕರು ಕೂಡ ಸಮ್ಮಿಟ್​ನಲ್ಲಿ ಭಾಗವಹಿಸಬಹುದು.


ಇದನ್ನೂ ಓದಿ: ಜೋ ಬೈಡೆನ್ ಗೆಲುವು; ಭಾರತ-ಅಮೆರಿಕಾದ ಬಾಂಧವ್ಯ ಇನ್ನಷ್ಟು ಉತ್ತಮಗೊಳ್ಳಲಿ- ಮೋದಿ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...