Homeಮುಖಪುಟಬೆಂಗಳೂರು ಟೆಕ್ ಸಮ್ಮಿಟ್-2020ಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು ಟೆಕ್ ಸಮ್ಮಿಟ್-2020ಗೆ ಪ್ರಧಾನಿ ಮೋದಿ ಚಾಲನೆ

ಇಂದಿನಿಂದ ನ. 21ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನ ಖಾಸಗಿ ಹೋಟೆಲ್​​​ನಲ್ಲಿ 23ನೇ ಆವೃತ್ತಿಯ ಬೆಂಗಳೂರು ಟೆಕ್ ಸಮ್ಮಿಟ್-2020 ನಡೆಯಲಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಐದು ವರ್ಷಗಳ ಹಿಂದೆ ಪ್ರಾರಂಭಿಸಿದ ‘ಡಿಜಿಟಲ್ ಇಂಡಿಯಾ’ ಮಿಷನ್ ಅನ್ನು ಸರ್ಕಾರದ ಯೋಜನೆಯಾಗಿ ನೋಡಲಾಗುತ್ತಿಲ್ಲ ಇದು ಜೀವನದ ವಿಧಾನವಾಗಿ ಮಾರ್ಪಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಬೆಂಗಳೂರು ಟೆಕ್ ಸಮ್ಮಿಟ್-2020ಗೆ ಚಾಲನೆ ನೀಡಿ ಮಾತನಾಡಿದ್ದಾರೆ.

ಇಂದಿನಿಂದ ನ. 21ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನ ಖಾಸಗಿ ಹೋಟೆಲ್​​​ನಲ್ಲಿ 23ನೇ ಆವೃತ್ತಿಯ ಬೆಂಗಳೂರು ಟೆಕ್ ಸಮ್ಮಿಟ್-2020 ನಡೆಯಲಿದೆ. ಟೆಕ್ ಸಮ್ಮಿಟ್‌ಗೆ ಪ್ರಧಾನಿ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್​ ಮೂಲಕ ಚಾಲನೆ ನೀಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಡಿಸಿಎಂ ಅಶ್ವತ್ಥ್​​​ ನಾರಾಯಣ್​​ ಸೇರಿದಂತೆ ಅನೇಕ ಗಣ್ಯರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

“ಡಿಜಿಟಲ್ ಇಂಡಿಯಾಕ್ಕೆ ಧನ್ಯವಾದಗಳು, ನಮ್ಮ ರಾಷ್ಟ್ರವು ಅಭಿವೃದ್ಧಿಗೆ ಹೆಚ್ಚು ಮಾನವ ಕೇಂದ್ರಿತ ವಿಧಾನವನ್ನು ನೋಡಿದೆ. ತಂತ್ರಜ್ಞಾನವನ್ನು ಇಷ್ಟು ದೊಡ್ಡ ಪ್ರಮಾಣದಲ್ಲಿ ಬಳಸುವುದರಿಂದ ನಮ್ಮ ಜನರ ಹಲವಾರು ಜೀವನ ಶೈಲಿಯಲ್ಲಿ ಬದಲಾವಣೆಗಳು ಬಂದಿವೆ” ಎಂದು ಪ್ರಧಾನಿ ಹೇಳಿದರು.

ಇದನ್ನೂ ಓದಿ: ’ಸಾಲ್ ಮುಬಾರಕ್‌’ ಪದ ಬಳಕೆಗೆ ಆಕ್ಷೇಪ: ಟ್ರೋಲ್‌‌ಗೊಳಗಾದ ಮೋದಿ ಸಮರ್ಥಕ ಮೋಹನ್‌ದಾಸ್‌ ಪೈ!‌

ಡಿಜಿಟಲ್ ಮತ್ತು ಟೆಕ್ ಪರಿಹಾರಗಳಿಗಾಗಿ ಸರ್ಕಾರ ಯಶಸ್ವಿಯಾಗಿ ಮಾರುಕಟ್ಟೆಯನ್ನು ಸೃಷ್ಟಿಸಿದೆ, ಇದು ತಂತ್ರಜ್ಞಾನವನ್ನು ಎಲ್ಲಾ ಯೋಜನೆಗಳ ಪ್ರಮುಖ ಭಾಗವನ್ನಾಗಿ ಮಾಡಿದೆ. “ನಮ್ಮ ಆಡಳಿತ ಮಾದರಿಯೇ ಟೆಕ್ನಾಲಜಿ ಫಸ್ಟ್ ” ಎಂದು ಪ್ರಧಾನಿ ಮೋದಿ ಹೇಳಿದರು.

ಕೈಗಾರಿಕೆಯಿಂದ ಮಾಹಿತಿ ಯುಗಕ್ಕೆ ಪರಿವರ್ತನೆಯ ಬಗ್ಗೆ ಮಾತನಾಡಿದ ಮೋದಿ, “ಕೈಗಾರಿಕಾ ಯುಗದ ಸಾಧನೆಗಳು ಹಿಂದಿನ ನೋಟ ಕನ್ನಡಿಯಲ್ಲಿವೆ, ಈಗ ನಾವು ಮಾಹಿತಿ ಯುಗದ ಮಧ್ಯದಲ್ಲಿದ್ದೇವೆ. ಭವಿಷ್ಯವು ನಿರೀಕ್ಷೆಗಿಂತ ಬೇಗ ಬರಲಿದೆ ಎಂದು ಮೋದಿ ಹೇಳಿದರು.

ಬೆಂಗಳೂರು ಟೆಕ್ ಸಮ್ಮಿಟ್-2020 ರಲ್ಲಿ‌ 25ಕ್ಕೂ ಹೆಚ್ಚು ದೇಶಗಳು ಭಾಗಿಯಾಗಿವೆ.​ ಸಮ್ಮಿಟ್​​ನಲ್ಲಿ ಕೃಷಿ, ಸಂಶೋಧನೆ ಮತ್ತು ಅಭಿವೃದ್ಧಿ, ಸ್ಟಾರ್ಟ್ ಅಪ್ ಪಾಲುದಾರಿಕೆ ವಲಯಗಳಲ್ಲಿ 7 ಒಪ್ಪಂದಗಳಿಗೆ ಸಹಿ ಹಾಕಲಾಗುತ್ತದೆ. ಜಾಗತಿಕ ಆವಿಷ್ಕಾರ ಮೈತ್ರಿಗೆ ಸಂಬಂಧಿಸಿದಂತೆ 15 ಅಧಿವೇಶನಗಳು ನಡೆಯಲಿವೆ. 60ಕ್ಕೂ ಹೆಚ್ಚು ಭಾಷಣಕಾರರು ಉಪನ್ಯಾಸ ನೀಡಲಿದ್ದಾರೆ. ಆನ್​​ಲೈನ್ ಮೂಲಕ ಸಾರ್ವಜನಿಕರು ಕೂಡ ಸಮ್ಮಿಟ್​ನಲ್ಲಿ ಭಾಗವಹಿಸಬಹುದು.


ಇದನ್ನೂ ಓದಿ: ಜೋ ಬೈಡೆನ್ ಗೆಲುವು; ಭಾರತ-ಅಮೆರಿಕಾದ ಬಾಂಧವ್ಯ ಇನ್ನಷ್ಟು ಉತ್ತಮಗೊಳ್ಳಲಿ- ಮೋದಿ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...