Homeಮುಖಪುಟಬೆಂಗಳೂರು ಟೆಕ್ ಸಮ್ಮಿಟ್-2020ಗೆ ಪ್ರಧಾನಿ ಮೋದಿ ಚಾಲನೆ

ಬೆಂಗಳೂರು ಟೆಕ್ ಸಮ್ಮಿಟ್-2020ಗೆ ಪ್ರಧಾನಿ ಮೋದಿ ಚಾಲನೆ

ಇಂದಿನಿಂದ ನ. 21ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನ ಖಾಸಗಿ ಹೋಟೆಲ್​​​ನಲ್ಲಿ 23ನೇ ಆವೃತ್ತಿಯ ಬೆಂಗಳೂರು ಟೆಕ್ ಸಮ್ಮಿಟ್-2020 ನಡೆಯಲಿದೆ.

- Advertisement -
- Advertisement -

ಕೇಂದ್ರ ಸರ್ಕಾರ ಐದು ವರ್ಷಗಳ ಹಿಂದೆ ಪ್ರಾರಂಭಿಸಿದ ‘ಡಿಜಿಟಲ್ ಇಂಡಿಯಾ’ ಮಿಷನ್ ಅನ್ನು ಸರ್ಕಾರದ ಯೋಜನೆಯಾಗಿ ನೋಡಲಾಗುತ್ತಿಲ್ಲ ಇದು ಜೀವನದ ವಿಧಾನವಾಗಿ ಮಾರ್ಪಟ್ಟಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಬೆಂಗಳೂರು ಟೆಕ್ ಸಮ್ಮಿಟ್-2020ಗೆ ಚಾಲನೆ ನೀಡಿ ಮಾತನಾಡಿದ್ದಾರೆ.

ಇಂದಿನಿಂದ ನ. 21ರವರೆಗೆ ಮೂರು ದಿನಗಳ ಕಾಲ ಬೆಂಗಳೂರಿನ ಖಾಸಗಿ ಹೋಟೆಲ್​​​ನಲ್ಲಿ 23ನೇ ಆವೃತ್ತಿಯ ಬೆಂಗಳೂರು ಟೆಕ್ ಸಮ್ಮಿಟ್-2020 ನಡೆಯಲಿದೆ. ಟೆಕ್ ಸಮ್ಮಿಟ್‌ಗೆ ಪ್ರಧಾನಿ ಮೋದಿ ಇಂದು ವಿಡಿಯೋ ಕಾನ್ಫರೆನ್ಸ್​ ಮೂಲಕ ಚಾಲನೆ ನೀಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಡಿಸಿಎಂ ಅಶ್ವತ್ಥ್​​​ ನಾರಾಯಣ್​​ ಸೇರಿದಂತೆ ಅನೇಕ ಗಣ್ಯರು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

“ಡಿಜಿಟಲ್ ಇಂಡಿಯಾಕ್ಕೆ ಧನ್ಯವಾದಗಳು, ನಮ್ಮ ರಾಷ್ಟ್ರವು ಅಭಿವೃದ್ಧಿಗೆ ಹೆಚ್ಚು ಮಾನವ ಕೇಂದ್ರಿತ ವಿಧಾನವನ್ನು ನೋಡಿದೆ. ತಂತ್ರಜ್ಞಾನವನ್ನು ಇಷ್ಟು ದೊಡ್ಡ ಪ್ರಮಾಣದಲ್ಲಿ ಬಳಸುವುದರಿಂದ ನಮ್ಮ ಜನರ ಹಲವಾರು ಜೀವನ ಶೈಲಿಯಲ್ಲಿ ಬದಲಾವಣೆಗಳು ಬಂದಿವೆ” ಎಂದು ಪ್ರಧಾನಿ ಹೇಳಿದರು.

ಇದನ್ನೂ ಓದಿ: ’ಸಾಲ್ ಮುಬಾರಕ್‌’ ಪದ ಬಳಕೆಗೆ ಆಕ್ಷೇಪ: ಟ್ರೋಲ್‌‌ಗೊಳಗಾದ ಮೋದಿ ಸಮರ್ಥಕ ಮೋಹನ್‌ದಾಸ್‌ ಪೈ!‌

ಡಿಜಿಟಲ್ ಮತ್ತು ಟೆಕ್ ಪರಿಹಾರಗಳಿಗಾಗಿ ಸರ್ಕಾರ ಯಶಸ್ವಿಯಾಗಿ ಮಾರುಕಟ್ಟೆಯನ್ನು ಸೃಷ್ಟಿಸಿದೆ, ಇದು ತಂತ್ರಜ್ಞಾನವನ್ನು ಎಲ್ಲಾ ಯೋಜನೆಗಳ ಪ್ರಮುಖ ಭಾಗವನ್ನಾಗಿ ಮಾಡಿದೆ. “ನಮ್ಮ ಆಡಳಿತ ಮಾದರಿಯೇ ಟೆಕ್ನಾಲಜಿ ಫಸ್ಟ್ ” ಎಂದು ಪ್ರಧಾನಿ ಮೋದಿ ಹೇಳಿದರು.

ಕೈಗಾರಿಕೆಯಿಂದ ಮಾಹಿತಿ ಯುಗಕ್ಕೆ ಪರಿವರ್ತನೆಯ ಬಗ್ಗೆ ಮಾತನಾಡಿದ ಮೋದಿ, “ಕೈಗಾರಿಕಾ ಯುಗದ ಸಾಧನೆಗಳು ಹಿಂದಿನ ನೋಟ ಕನ್ನಡಿಯಲ್ಲಿವೆ, ಈಗ ನಾವು ಮಾಹಿತಿ ಯುಗದ ಮಧ್ಯದಲ್ಲಿದ್ದೇವೆ. ಭವಿಷ್ಯವು ನಿರೀಕ್ಷೆಗಿಂತ ಬೇಗ ಬರಲಿದೆ ಎಂದು ಮೋದಿ ಹೇಳಿದರು.

ಬೆಂಗಳೂರು ಟೆಕ್ ಸಮ್ಮಿಟ್-2020 ರಲ್ಲಿ‌ 25ಕ್ಕೂ ಹೆಚ್ಚು ದೇಶಗಳು ಭಾಗಿಯಾಗಿವೆ.​ ಸಮ್ಮಿಟ್​​ನಲ್ಲಿ ಕೃಷಿ, ಸಂಶೋಧನೆ ಮತ್ತು ಅಭಿವೃದ್ಧಿ, ಸ್ಟಾರ್ಟ್ ಅಪ್ ಪಾಲುದಾರಿಕೆ ವಲಯಗಳಲ್ಲಿ 7 ಒಪ್ಪಂದಗಳಿಗೆ ಸಹಿ ಹಾಕಲಾಗುತ್ತದೆ. ಜಾಗತಿಕ ಆವಿಷ್ಕಾರ ಮೈತ್ರಿಗೆ ಸಂಬಂಧಿಸಿದಂತೆ 15 ಅಧಿವೇಶನಗಳು ನಡೆಯಲಿವೆ. 60ಕ್ಕೂ ಹೆಚ್ಚು ಭಾಷಣಕಾರರು ಉಪನ್ಯಾಸ ನೀಡಲಿದ್ದಾರೆ. ಆನ್​​ಲೈನ್ ಮೂಲಕ ಸಾರ್ವಜನಿಕರು ಕೂಡ ಸಮ್ಮಿಟ್​ನಲ್ಲಿ ಭಾಗವಹಿಸಬಹುದು.


ಇದನ್ನೂ ಓದಿ: ಜೋ ಬೈಡೆನ್ ಗೆಲುವು; ಭಾರತ-ಅಮೆರಿಕಾದ ಬಾಂಧವ್ಯ ಇನ್ನಷ್ಟು ಉತ್ತಮಗೊಳ್ಳಲಿ- ಮೋದಿ ಟ್ವೀಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....