Homeಚಳವಳಿಪ್ರಧಾನಿ ಮೋದಿ ರೈತರನ್ನು ಅವಮಾನಿಸುತ್ತಿದ್ದಾರೆ; ಪ್ರಧಾನಿ ಹೇಳಿಕೆಗೆ ತಿರುಗೇಟು

ಪ್ರಧಾನಿ ಮೋದಿ ರೈತರನ್ನು ಅವಮಾನಿಸುತ್ತಿದ್ದಾರೆ; ಪ್ರಧಾನಿ ಹೇಳಿಕೆಗೆ ತಿರುಗೇಟು

ಪ್ರಧಾನಿಯಾಗಿರುವ, ತನ್ನಲ್ಲಿ ಐವತ್ತಾರಿಂಚು ಎದೆಯಿದೆಯೆಂದು ತೋರಿಸಿಕೊಳ್ಳುವ ದೊಡ್ಡ ಮನುಷ್ಯ, ರೈತರನ್ನು ಕರೆದು ಮಾತನಾಡುವುದೋ, ಅವರ ಕೂಗಿಗೆ ಸ್ಪಂದಿಸುವುದೋ, ಸಾಂತ್ವನ ಮಾಡುವುದೋ ಮಾಡುತ್ತಿಲ್ಲ.

- Advertisement -
- Advertisement -

ಕೇಂದ್ರದ ಹೊಸ ಕೃಷಿಕಾನೂನನ್ನು ವಿರೋಧಿಸಿ ನಿರಂತರವಾಗಿ ಹದಿನೈದು ದಿನದಿಂದ ರೈತರು ದೇಶದಾದ್ಯಂತ ಹೋರಾಟ ನಡೆಸುತ್ತಿದ್ದು, ನಿನ್ನೆ ಮುಂಜಾನೆ ದೆಹಲಿಯ ಇಂಡಿಯಾ ಗೇಟ್ ಬಳಿ ನಡೆದ ಪ್ರತಿಭಟನೆಯಲ್ಲಿ ಟ್ರಾಕ್ಟ‌‌ರ್‌ ಒಂದನ್ನು ಸುಟ್ಟು, ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿಯನ್ನು ನೇಣಿಗೇರಿಸಿ ತಮ್ಮ ಆಕ್ರೋಶದ ತೀವ್ರತೆಯನ್ನು ವ್ಯಕ್ತಪಡಿಸಿದ್ದರು.

ಟ್ರಾಕ್ಟರ್‌‌‌ ಸುಟ್ಟ ರೈತರ ವಿರುದ್ದ ಈಗಾಗಲೆ ಕೇಸು ದಾಖಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ, “ಹೊಸ ಕೃಷಿ ಕಾನೂನುಗಳನ್ನು ವಿರೋಧಿಸುವವರು ನಿಜವಾಗಿ ರೈತರನ್ನು ಅವಮಾನಿಸುತ್ತಿದ್ದಾರೆ. ಪ್ರತಿಭಟನಾಕಾರರು ರೈತರು ಗೌರವಿಸುವ ಕೃಷಿ ಉಪಕರಣಗಳು ಮತ್ತು ಯಂತ್ರೋಪಕರಣಗಳನ್ನು ಸುಟ್ಟು ರೈತರನ್ನು ಅವಮಾನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ರೈತರ ಬಗ್ಗೆ ಪ್ರಧಾನಿ ನೀಡಿರುವ ಹೇಳಿಕೆಗೆ ಹಲವಾರು ರೈತ ಹೋರಾಟಗಾರರು ಪ್ರತಿಕ್ರಿಯೆ ನೀಡಿದ್ದು ಪ್ರಧಾನಿಯೆ ರೈತರಿಗೆ ಅವಮಾನ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗೆ ವಿರೋಧ: ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರಾಕ್ಟರ್ ಸುಟ್ಟು ರೈತರ ದಿಟ್ಟ ಪ್ರತಿಭಟನೆ

ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ಬಡಗಲಪುರ ನಾಗೇಂದ್ರ ಮಾತನಾಡಿ, “ರೈತರ ಬದುಕನ್ನು ಕಿತ್ತು ತಮ್ಮ ಗೆಳೆಯರಿಗೆ ಹಾಗೂ ಕಾರ್ಪೊರೇಟ್‌ ಕಂಪೆನಿಗಳ ವಶಕ್ಕೆ ನೀಡಿರುವ ಮೋದಿಗೆ ರೈತರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ” ಎಂದು ಹೇಳಿದರು.

“ಪ್ರಧಾನಿಯಾಗಿರುವ, ತನ್ನಲ್ಲಿ ಐವತ್ತಾರಿಂಚು ಎದೆಯಿದೆಯೆಂದು ತೋರಿಸಿಕೊಳ್ಳುವ ದೊಡ್ಡ ಮನುಷ್ಯ, ರೈತರನ್ನು ಕರೆದು ಮಾತನಾಡುವುದೋ, ಅವರ ಕೂಗಿಗೆ ಸ್ಪಂದಿಸುವುದೋ, ಅವರಿಗೆ ಸಾಂತ್ವನ ಮಾಡುವುದೋ ಮಾಡುತ್ತಿಲ್ಲ. ನಿಜವಾಗಿ ಮೋದಿಯೇ ರೈತರಿಗೆ ಅವಮಾನ ಮಾಡಿದ್ದಾರೆ. ಅದರಲ್ಲೂ ರೈತರ ಜೊತೆ ಸೌಜನ್ಯಕ್ಕೂ ಚರ್ಚೆ ಮಾಡದೆ ಮಸೂದೆಗಳನ್ನು ಪಾಸ್‌ ಮಾಡಿರುವವರು ರೈತರ ಬಗ್ಗೆ ಕನಿಕರ ತೋರಿಸುವುದು ಖಂಡನೀಯ” ಎಂದು ಬಡಗಲಪುರ ನಾಗೇಂದ್ರ ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘದ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, “ಪ್ರಧಾನಿ ಒಬ್ಬ ಸುಳ್ಳುಗಾರ, ಸುಳ್ಳನ್ನೇ ಸತ್ಯವೆಂದು ನಂಬಿಸುವಲ್ಲಿ ಇದುವರೆಗೂ ಅವರು ಯಶಸ್ವಿಯಾಗಿದ್ದಾರೆ. ನಲವತ್ತು ವರ್ಷದ ಹಿಂದೆ ಏನೂ ಅಲ್ಲದೆ ಸಂಘಟನೆ ಈಗ ಬಲಾಡ್ಯಗೊಂಡು ದೇಶದ ಆಡಳಿತ ಹಿಡಿದಿದ್ದಾರೆಂದರೆ ಅದಕ್ಕೆ ಕಾರಣ ಈ ಸುಳ್ಳುಗಳೇ. ಆದರೆ ಅವರ ಸಾಧನೆ ಏನು?” ಎಂದು ಪ್ರಶ್ನಿಸಿದರು.

“ರೈತ ಹೋರಾಟಗಾರರು ಟ್ರಾಕ್ಟರ್‌ ಸುಟ್ಟಿದ್ದು ಸರ್ಕಾರದ ಗಮನ ಸೆಳೆಯಲು, ಕೃಷಿ ಕ್ಷೇತ್ರಕ್ಕೆ ಸರ್ಕಾರ ಮಾಡಿದ ದ್ರೋಹವನ್ನು ತಿಳಿಸಲು, ಅದಕ್ಕೆ ಪ್ರಧಾನಿ ಉತ್ತರ ಕೊಡಬೇಕು. ರೈತರು ಕ್ರಿಮಿನಲ್‌ಗಳಲ್ಲ, ಕೃಷಿಯನ್ನು ನಾಶಮಾಡಲು ಹೊರಟಿದ್ದಕ್ಕೆ, ಕೃಷಿ ಮಾರುಕಟ್ಟೆಯನ್ನು ದಿವಾಳಿ ಮಾಡಲು ಹೊರಟಿದ್ದಕ್ಕೆ ರೈತರು ಪ್ರತಿಭಟನೆ ಮಾಡಿದ್ದಾರೆ. ಸರ್ಕಾರ ರೈತರ ಬಾಯಿಗೆ ವಿಷ ಹಾಕಿ, ರೈತರ ಮೇಲೆ ಕ್ರಿಮಿನಲ್ ಕೇಸು ಹಾಕಿ ಕಾರ್ಪೊರೇಟ್‌ಗಳಿಗೆ ಲಾಭ ಮಾಡಲು ಹೊರಟಿದೆ. ರೈತರು ಟ್ರಾಕ್ಟರ್‌ಗೆ ಬೆಂಕಿ ಹಾಕಿರುವುದು ಪ್ರಧಾನಿ ಮಾತನಾಡಲಿ ಎಂದಾಗಿದೆ. ಅದನ್ನು ಬಿಟ್ಟು ರೈತರಿಗೆ ಅವಮಾನ ಎಂದರೆ ಏನರ್ಥ ? ರೈತರಿಗೆ ಅವಮಾನ ಯಾರು ಮಾಡುತ್ತಿದ್ದಾರೆ ಎಂದು ಇಡಿ ದೇಶಕ್ಕೆ ಗೊತ್ತಿದೆ” ಎಂದು ಕೋಡಿಹಳ್ಳಿ ಚಂದ್ರಶೇಖರ್‌ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕರ್ನಾಟಕ ಬಂದ್: ರೈತ ಪರ ಹೋರಾಟಕ್ಕೆ ಬೆಂಗಳೂರಿನಲ್ಲಿ ಅಭೂತಪೂರ್ವ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...