Homeಚಳವಳಿಪ್ರಧಾನಿ ಮೋದಿ ರೈತರನ್ನು ಅವಮಾನಿಸುತ್ತಿದ್ದಾರೆ; ಪ್ರಧಾನಿ ಹೇಳಿಕೆಗೆ ತಿರುಗೇಟು

ಪ್ರಧಾನಿ ಮೋದಿ ರೈತರನ್ನು ಅವಮಾನಿಸುತ್ತಿದ್ದಾರೆ; ಪ್ರಧಾನಿ ಹೇಳಿಕೆಗೆ ತಿರುಗೇಟು

ಪ್ರಧಾನಿಯಾಗಿರುವ, ತನ್ನಲ್ಲಿ ಐವತ್ತಾರಿಂಚು ಎದೆಯಿದೆಯೆಂದು ತೋರಿಸಿಕೊಳ್ಳುವ ದೊಡ್ಡ ಮನುಷ್ಯ, ರೈತರನ್ನು ಕರೆದು ಮಾತನಾಡುವುದೋ, ಅವರ ಕೂಗಿಗೆ ಸ್ಪಂದಿಸುವುದೋ, ಸಾಂತ್ವನ ಮಾಡುವುದೋ ಮಾಡುತ್ತಿಲ್ಲ.

- Advertisement -
- Advertisement -

ಕೇಂದ್ರದ ಹೊಸ ಕೃಷಿಕಾನೂನನ್ನು ವಿರೋಧಿಸಿ ನಿರಂತರವಾಗಿ ಹದಿನೈದು ದಿನದಿಂದ ರೈತರು ದೇಶದಾದ್ಯಂತ ಹೋರಾಟ ನಡೆಸುತ್ತಿದ್ದು, ನಿನ್ನೆ ಮುಂಜಾನೆ ದೆಹಲಿಯ ಇಂಡಿಯಾ ಗೇಟ್ ಬಳಿ ನಡೆದ ಪ್ರತಿಭಟನೆಯಲ್ಲಿ ಟ್ರಾಕ್ಟ‌‌ರ್‌ ಒಂದನ್ನು ಸುಟ್ಟು, ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿಯನ್ನು ನೇಣಿಗೇರಿಸಿ ತಮ್ಮ ಆಕ್ರೋಶದ ತೀವ್ರತೆಯನ್ನು ವ್ಯಕ್ತಪಡಿಸಿದ್ದರು.

ಟ್ರಾಕ್ಟರ್‌‌‌ ಸುಟ್ಟ ರೈತರ ವಿರುದ್ದ ಈಗಾಗಲೆ ಕೇಸು ದಾಖಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ, “ಹೊಸ ಕೃಷಿ ಕಾನೂನುಗಳನ್ನು ವಿರೋಧಿಸುವವರು ನಿಜವಾಗಿ ರೈತರನ್ನು ಅವಮಾನಿಸುತ್ತಿದ್ದಾರೆ. ಪ್ರತಿಭಟನಾಕಾರರು ರೈತರು ಗೌರವಿಸುವ ಕೃಷಿ ಉಪಕರಣಗಳು ಮತ್ತು ಯಂತ್ರೋಪಕರಣಗಳನ್ನು ಸುಟ್ಟು ರೈತರನ್ನು ಅವಮಾನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ರೈತರ ಬಗ್ಗೆ ಪ್ರಧಾನಿ ನೀಡಿರುವ ಹೇಳಿಕೆಗೆ ಹಲವಾರು ರೈತ ಹೋರಾಟಗಾರರು ಪ್ರತಿಕ್ರಿಯೆ ನೀಡಿದ್ದು ಪ್ರಧಾನಿಯೆ ರೈತರಿಗೆ ಅವಮಾನ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗೆ ವಿರೋಧ: ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರಾಕ್ಟರ್ ಸುಟ್ಟು ರೈತರ ದಿಟ್ಟ ಪ್ರತಿಭಟನೆ

ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ಬಡಗಲಪುರ ನಾಗೇಂದ್ರ ಮಾತನಾಡಿ, “ರೈತರ ಬದುಕನ್ನು ಕಿತ್ತು ತಮ್ಮ ಗೆಳೆಯರಿಗೆ ಹಾಗೂ ಕಾರ್ಪೊರೇಟ್‌ ಕಂಪೆನಿಗಳ ವಶಕ್ಕೆ ನೀಡಿರುವ ಮೋದಿಗೆ ರೈತರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ” ಎಂದು ಹೇಳಿದರು.

“ಪ್ರಧಾನಿಯಾಗಿರುವ, ತನ್ನಲ್ಲಿ ಐವತ್ತಾರಿಂಚು ಎದೆಯಿದೆಯೆಂದು ತೋರಿಸಿಕೊಳ್ಳುವ ದೊಡ್ಡ ಮನುಷ್ಯ, ರೈತರನ್ನು ಕರೆದು ಮಾತನಾಡುವುದೋ, ಅವರ ಕೂಗಿಗೆ ಸ್ಪಂದಿಸುವುದೋ, ಅವರಿಗೆ ಸಾಂತ್ವನ ಮಾಡುವುದೋ ಮಾಡುತ್ತಿಲ್ಲ. ನಿಜವಾಗಿ ಮೋದಿಯೇ ರೈತರಿಗೆ ಅವಮಾನ ಮಾಡಿದ್ದಾರೆ. ಅದರಲ್ಲೂ ರೈತರ ಜೊತೆ ಸೌಜನ್ಯಕ್ಕೂ ಚರ್ಚೆ ಮಾಡದೆ ಮಸೂದೆಗಳನ್ನು ಪಾಸ್‌ ಮಾಡಿರುವವರು ರೈತರ ಬಗ್ಗೆ ಕನಿಕರ ತೋರಿಸುವುದು ಖಂಡನೀಯ” ಎಂದು ಬಡಗಲಪುರ ನಾಗೇಂದ್ರ ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘದ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, “ಪ್ರಧಾನಿ ಒಬ್ಬ ಸುಳ್ಳುಗಾರ, ಸುಳ್ಳನ್ನೇ ಸತ್ಯವೆಂದು ನಂಬಿಸುವಲ್ಲಿ ಇದುವರೆಗೂ ಅವರು ಯಶಸ್ವಿಯಾಗಿದ್ದಾರೆ. ನಲವತ್ತು ವರ್ಷದ ಹಿಂದೆ ಏನೂ ಅಲ್ಲದೆ ಸಂಘಟನೆ ಈಗ ಬಲಾಡ್ಯಗೊಂಡು ದೇಶದ ಆಡಳಿತ ಹಿಡಿದಿದ್ದಾರೆಂದರೆ ಅದಕ್ಕೆ ಕಾರಣ ಈ ಸುಳ್ಳುಗಳೇ. ಆದರೆ ಅವರ ಸಾಧನೆ ಏನು?” ಎಂದು ಪ್ರಶ್ನಿಸಿದರು.

“ರೈತ ಹೋರಾಟಗಾರರು ಟ್ರಾಕ್ಟರ್‌ ಸುಟ್ಟಿದ್ದು ಸರ್ಕಾರದ ಗಮನ ಸೆಳೆಯಲು, ಕೃಷಿ ಕ್ಷೇತ್ರಕ್ಕೆ ಸರ್ಕಾರ ಮಾಡಿದ ದ್ರೋಹವನ್ನು ತಿಳಿಸಲು, ಅದಕ್ಕೆ ಪ್ರಧಾನಿ ಉತ್ತರ ಕೊಡಬೇಕು. ರೈತರು ಕ್ರಿಮಿನಲ್‌ಗಳಲ್ಲ, ಕೃಷಿಯನ್ನು ನಾಶಮಾಡಲು ಹೊರಟಿದ್ದಕ್ಕೆ, ಕೃಷಿ ಮಾರುಕಟ್ಟೆಯನ್ನು ದಿವಾಳಿ ಮಾಡಲು ಹೊರಟಿದ್ದಕ್ಕೆ ರೈತರು ಪ್ರತಿಭಟನೆ ಮಾಡಿದ್ದಾರೆ. ಸರ್ಕಾರ ರೈತರ ಬಾಯಿಗೆ ವಿಷ ಹಾಕಿ, ರೈತರ ಮೇಲೆ ಕ್ರಿಮಿನಲ್ ಕೇಸು ಹಾಕಿ ಕಾರ್ಪೊರೇಟ್‌ಗಳಿಗೆ ಲಾಭ ಮಾಡಲು ಹೊರಟಿದೆ. ರೈತರು ಟ್ರಾಕ್ಟರ್‌ಗೆ ಬೆಂಕಿ ಹಾಕಿರುವುದು ಪ್ರಧಾನಿ ಮಾತನಾಡಲಿ ಎಂದಾಗಿದೆ. ಅದನ್ನು ಬಿಟ್ಟು ರೈತರಿಗೆ ಅವಮಾನ ಎಂದರೆ ಏನರ್ಥ ? ರೈತರಿಗೆ ಅವಮಾನ ಯಾರು ಮಾಡುತ್ತಿದ್ದಾರೆ ಎಂದು ಇಡಿ ದೇಶಕ್ಕೆ ಗೊತ್ತಿದೆ” ಎಂದು ಕೋಡಿಹಳ್ಳಿ ಚಂದ್ರಶೇಖರ್‌ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕರ್ನಾಟಕ ಬಂದ್: ರೈತ ಪರ ಹೋರಾಟಕ್ಕೆ ಬೆಂಗಳೂರಿನಲ್ಲಿ ಅಭೂತಪೂರ್ವ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...