Homeಚಳವಳಿಪ್ರಧಾನಿ ಮೋದಿ ರೈತರನ್ನು ಅವಮಾನಿಸುತ್ತಿದ್ದಾರೆ; ಪ್ರಧಾನಿ ಹೇಳಿಕೆಗೆ ತಿರುಗೇಟು

ಪ್ರಧಾನಿ ಮೋದಿ ರೈತರನ್ನು ಅವಮಾನಿಸುತ್ತಿದ್ದಾರೆ; ಪ್ರಧಾನಿ ಹೇಳಿಕೆಗೆ ತಿರುಗೇಟು

ಪ್ರಧಾನಿಯಾಗಿರುವ, ತನ್ನಲ್ಲಿ ಐವತ್ತಾರಿಂಚು ಎದೆಯಿದೆಯೆಂದು ತೋರಿಸಿಕೊಳ್ಳುವ ದೊಡ್ಡ ಮನುಷ್ಯ, ರೈತರನ್ನು ಕರೆದು ಮಾತನಾಡುವುದೋ, ಅವರ ಕೂಗಿಗೆ ಸ್ಪಂದಿಸುವುದೋ, ಸಾಂತ್ವನ ಮಾಡುವುದೋ ಮಾಡುತ್ತಿಲ್ಲ.

- Advertisement -
- Advertisement -

ಕೇಂದ್ರದ ಹೊಸ ಕೃಷಿಕಾನೂನನ್ನು ವಿರೋಧಿಸಿ ನಿರಂತರವಾಗಿ ಹದಿನೈದು ದಿನದಿಂದ ರೈತರು ದೇಶದಾದ್ಯಂತ ಹೋರಾಟ ನಡೆಸುತ್ತಿದ್ದು, ನಿನ್ನೆ ಮುಂಜಾನೆ ದೆಹಲಿಯ ಇಂಡಿಯಾ ಗೇಟ್ ಬಳಿ ನಡೆದ ಪ್ರತಿಭಟನೆಯಲ್ಲಿ ಟ್ರಾಕ್ಟ‌‌ರ್‌ ಒಂದನ್ನು ಸುಟ್ಟು, ಪ್ರಧಾನಿ ನರೇಂದ್ರ ಮೋದಿಯವರ ಪ್ರತಿಕೃತಿಯನ್ನು ನೇಣಿಗೇರಿಸಿ ತಮ್ಮ ಆಕ್ರೋಶದ ತೀವ್ರತೆಯನ್ನು ವ್ಯಕ್ತಪಡಿಸಿದ್ದರು.

ಟ್ರಾಕ್ಟರ್‌‌‌ ಸುಟ್ಟ ರೈತರ ವಿರುದ್ದ ಈಗಾಗಲೆ ಕೇಸು ದಾಖಲಾಗಿದೆ ಎಂದು ಮಾಧ್ಯಮಗಳು ವರದಿ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ, “ಹೊಸ ಕೃಷಿ ಕಾನೂನುಗಳನ್ನು ವಿರೋಧಿಸುವವರು ನಿಜವಾಗಿ ರೈತರನ್ನು ಅವಮಾನಿಸುತ್ತಿದ್ದಾರೆ. ಪ್ರತಿಭಟನಾಕಾರರು ರೈತರು ಗೌರವಿಸುವ ಕೃಷಿ ಉಪಕರಣಗಳು ಮತ್ತು ಯಂತ್ರೋಪಕರಣಗಳನ್ನು ಸುಟ್ಟು ರೈತರನ್ನು ಅವಮಾನಿಸುತ್ತಿದ್ದಾರೆ” ಎಂದು ಹೇಳಿದ್ದಾರೆ.

ರೈತರ ಬಗ್ಗೆ ಪ್ರಧಾನಿ ನೀಡಿರುವ ಹೇಳಿಕೆಗೆ ಹಲವಾರು ರೈತ ಹೋರಾಟಗಾರರು ಪ್ರತಿಕ್ರಿಯೆ ನೀಡಿದ್ದು ಪ್ರಧಾನಿಯೆ ರೈತರಿಗೆ ಅವಮಾನ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಕೃಷಿ ಮಸೂದೆಗೆ ವಿರೋಧ: ದೆಹಲಿಯ ಇಂಡಿಯಾ ಗೇಟ್ ಬಳಿ ಟ್ರಾಕ್ಟರ್ ಸುಟ್ಟು ರೈತರ ದಿಟ್ಟ ಪ್ರತಿಭಟನೆ

ಕರ್ನಾಟಕ ರಾಜ್ಯ ರೈತ ಸಂಘದ ಮುಖಂಡರಾದ ಬಡಗಲಪುರ ನಾಗೇಂದ್ರ ಮಾತನಾಡಿ, “ರೈತರ ಬದುಕನ್ನು ಕಿತ್ತು ತಮ್ಮ ಗೆಳೆಯರಿಗೆ ಹಾಗೂ ಕಾರ್ಪೊರೇಟ್‌ ಕಂಪೆನಿಗಳ ವಶಕ್ಕೆ ನೀಡಿರುವ ಮೋದಿಗೆ ರೈತರ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ” ಎಂದು ಹೇಳಿದರು.

“ಪ್ರಧಾನಿಯಾಗಿರುವ, ತನ್ನಲ್ಲಿ ಐವತ್ತಾರಿಂಚು ಎದೆಯಿದೆಯೆಂದು ತೋರಿಸಿಕೊಳ್ಳುವ ದೊಡ್ಡ ಮನುಷ್ಯ, ರೈತರನ್ನು ಕರೆದು ಮಾತನಾಡುವುದೋ, ಅವರ ಕೂಗಿಗೆ ಸ್ಪಂದಿಸುವುದೋ, ಅವರಿಗೆ ಸಾಂತ್ವನ ಮಾಡುವುದೋ ಮಾಡುತ್ತಿಲ್ಲ. ನಿಜವಾಗಿ ಮೋದಿಯೇ ರೈತರಿಗೆ ಅವಮಾನ ಮಾಡಿದ್ದಾರೆ. ಅದರಲ್ಲೂ ರೈತರ ಜೊತೆ ಸೌಜನ್ಯಕ್ಕೂ ಚರ್ಚೆ ಮಾಡದೆ ಮಸೂದೆಗಳನ್ನು ಪಾಸ್‌ ಮಾಡಿರುವವರು ರೈತರ ಬಗ್ಗೆ ಕನಿಕರ ತೋರಿಸುವುದು ಖಂಡನೀಯ” ಎಂದು ಬಡಗಲಪುರ ನಾಗೇಂದ್ರ ಹೇಳಿದರು.

ಕರ್ನಾಟಕ ರಾಜ್ಯ ರೈತ ಸಂಘದ ನಾಯಕ ಕೋಡಿಹಳ್ಳಿ ಚಂದ್ರಶೇಖರ್ ಮಾತನಾಡಿ, “ಪ್ರಧಾನಿ ಒಬ್ಬ ಸುಳ್ಳುಗಾರ, ಸುಳ್ಳನ್ನೇ ಸತ್ಯವೆಂದು ನಂಬಿಸುವಲ್ಲಿ ಇದುವರೆಗೂ ಅವರು ಯಶಸ್ವಿಯಾಗಿದ್ದಾರೆ. ನಲವತ್ತು ವರ್ಷದ ಹಿಂದೆ ಏನೂ ಅಲ್ಲದೆ ಸಂಘಟನೆ ಈಗ ಬಲಾಡ್ಯಗೊಂಡು ದೇಶದ ಆಡಳಿತ ಹಿಡಿದಿದ್ದಾರೆಂದರೆ ಅದಕ್ಕೆ ಕಾರಣ ಈ ಸುಳ್ಳುಗಳೇ. ಆದರೆ ಅವರ ಸಾಧನೆ ಏನು?” ಎಂದು ಪ್ರಶ್ನಿಸಿದರು.

“ರೈತ ಹೋರಾಟಗಾರರು ಟ್ರಾಕ್ಟರ್‌ ಸುಟ್ಟಿದ್ದು ಸರ್ಕಾರದ ಗಮನ ಸೆಳೆಯಲು, ಕೃಷಿ ಕ್ಷೇತ್ರಕ್ಕೆ ಸರ್ಕಾರ ಮಾಡಿದ ದ್ರೋಹವನ್ನು ತಿಳಿಸಲು, ಅದಕ್ಕೆ ಪ್ರಧಾನಿ ಉತ್ತರ ಕೊಡಬೇಕು. ರೈತರು ಕ್ರಿಮಿನಲ್‌ಗಳಲ್ಲ, ಕೃಷಿಯನ್ನು ನಾಶಮಾಡಲು ಹೊರಟಿದ್ದಕ್ಕೆ, ಕೃಷಿ ಮಾರುಕಟ್ಟೆಯನ್ನು ದಿವಾಳಿ ಮಾಡಲು ಹೊರಟಿದ್ದಕ್ಕೆ ರೈತರು ಪ್ರತಿಭಟನೆ ಮಾಡಿದ್ದಾರೆ. ಸರ್ಕಾರ ರೈತರ ಬಾಯಿಗೆ ವಿಷ ಹಾಕಿ, ರೈತರ ಮೇಲೆ ಕ್ರಿಮಿನಲ್ ಕೇಸು ಹಾಕಿ ಕಾರ್ಪೊರೇಟ್‌ಗಳಿಗೆ ಲಾಭ ಮಾಡಲು ಹೊರಟಿದೆ. ರೈತರು ಟ್ರಾಕ್ಟರ್‌ಗೆ ಬೆಂಕಿ ಹಾಕಿರುವುದು ಪ್ರಧಾನಿ ಮಾತನಾಡಲಿ ಎಂದಾಗಿದೆ. ಅದನ್ನು ಬಿಟ್ಟು ರೈತರಿಗೆ ಅವಮಾನ ಎಂದರೆ ಏನರ್ಥ ? ರೈತರಿಗೆ ಅವಮಾನ ಯಾರು ಮಾಡುತ್ತಿದ್ದಾರೆ ಎಂದು ಇಡಿ ದೇಶಕ್ಕೆ ಗೊತ್ತಿದೆ” ಎಂದು ಕೋಡಿಹಳ್ಳಿ ಚಂದ್ರಶೇಖರ್‌ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಕರ್ನಾಟಕ ಬಂದ್: ರೈತ ಪರ ಹೋರಾಟಕ್ಕೆ ಬೆಂಗಳೂರಿನಲ್ಲಿ ಅಭೂತಪೂರ್ವ ಬೆಂಬಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...