Homeಮುಖಪುಟ'ತಾನು ಜೈವಿಕ ಅಲ್ಲ, ನನ್ನನ್ನು ದೇವರು ಕಳುಹಿಸಿದ್ದಾನೆ' ಎಂದು ಹೇಳಿ ಅಪಹಾಸ್ಯಕ್ಕೀಡಾದ ಪ್ರಧಾನಿ ಮೋದಿ

‘ತಾನು ಜೈವಿಕ ಅಲ್ಲ, ನನ್ನನ್ನು ದೇವರು ಕಳುಹಿಸಿದ್ದಾನೆ’ ಎಂದು ಹೇಳಿ ಅಪಹಾಸ್ಯಕ್ಕೀಡಾದ ಪ್ರಧಾನಿ ಮೋದಿ

- Advertisement -
- Advertisement -

‘ನಾನು ದೇವರಿಂದ ಕಳುಹಿಸಲ್ಪಟ್ಟಿದ್ದೇನೆ ಎಂದು ನನಗೆ ಮನವರಿಕೆಯಾಗಿದೆ, ಈ ರೀತಿಯ ಶಕ್ತಿಯು ಜೈವಿಕ ದೇಹದಿಂದ ಬರಲು ಸಾಧ್ಯವಿಲ್ಲ, ದೇವರು ಮಾತ್ರ ಅಂತಹ ಶಕ್ತಿಯನ್ನು ನೀಡಬಲ್ಲನು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ನೀಡಿದ್ದು, ಇದೀಗ ಅಪಹಾಸ್ಯಕ್ಕೆ ಕಾರಣವಾಗಿದೆ.

ಪ್ರಧಾನಿ ಮೋದಿಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಗಂಗಾನದಿಯ ದಡದಲ್ಲಿ ಮೃತದೇಹಗಳು ಜಮಾಯಿಸುತ್ತಿದ್ದಾಗ, ‘ದೇವರ ದೂತರು’ ತಮ್ಮ ಮೊಬೈಲ್ ಫೋನ್‌ನ ಪ್ಲ್ಯಾಶ್‌ಲೈಟನ್ನು ಆನ್ ಮಾಡಲು ಜನರಿಗೆ ಹೇಳಿದ್ದಾರೆ ಎಂದು ಕೋವಿಡ್‌ ಮೊದಲ ಹಂತದ ಲಾಕ್‌ಡೌನ್‌ ವೇಳೆ ಪ್ರಧಾನಿ ಮೋದಿ ದೀಪಗಳು ಅಥವಾ ಟಾರ್ಚ್‌ಗಳನ್ನು ಬೆಳಗಿಸಲು ನಾಗರಿಕರಿಗೆ ಸೂಚಿಸಿದ್ದನ್ನು ನೆನಪಿಸಿಕೊಂಡಿದ್ದಾರೆ.

ಯಾರಾದರೂ ನಿಮ್ಮ ಬಳಿಗೆ ಬಂದು ಅಂತಹ ಮಾತುಗಳನ್ನು ಹೇಳಿದರೆ, ನೀವು ಏನು ಹೇಳುತ್ತೀರಿ? ನೀನು ನನ್ನನ್ನು ಕ್ಷಮಿಸು ಸಹೋದರ, ನೀನು ನಿನ್ನ ಕೆಲಸ ಮಾಡು, ನನ್ನ ಕೆಲಸ ಮಾಡಲು ನನಗೆ ಬಿಡು ಎಂದು ಹೇಳುತ್ತೀರಿ. ಆದರೆ ಅವರ ಭಕ್ತರು ಪ್ರಧಾನಿಯನ್ನು ಹೊಗಳುತ್ತಾರೆ ಮತ್ತು ಅವರು ದೇವರಿಂದ ಕಳುಹಿಸಲ್ಪಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ. ಸಾಂಕ್ರಾಮಿಕ ರೋಗದ ಸಮಯದಲ್ಲಿ ಚಪ್ಪಾಳೆ ತಟ್ಟುವಂತೆ ಅವರು ಜನರಿಗೆ ಹೇಳಿದ್ದಾರೆ. ಜನರು ಆಸ್ಪತ್ರೆಗಳ ಹೊರಗೆ ಕೊನೆಯುಸಿರೆಳೆದಾಗ, ಪ್ರಧಾನಿ ಇರಲಿಲ್ಲ. ಪ್ರಧಾನಿ ಅಲ್ಲ, ಆದರೆ ದೇವರಿಂದ ಕಳುಹಿಸಲ್ಪಟ್ಟವರು, ಜನರಿಗೆ ಮೊಬೈಲ್ ಫೋನ್ ಪ್ಲ್ಯಾಶ್‌ಲೈಟ್‌ ಆನ್ ಮಾಡಲು ಕೇಳುತ್ತಿದ್ದರು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನ್ಯೂಸ್ 18ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಪ್ರಧಾನಿ ಮೋದಿ, ನನ್ನ ತಾಯಿ ಬದುಕಿರುವವರೆಗೂ ನಾನು ಜೈವಿಕವಾಗಿ ಹುಟ್ಟಿದ್ದೇನೆ ಎಂದು ಭಾವಿಸುತ್ತಿದ್ದೆ. ಆಕೆಯ ನಿಧನದ ನಂತರ, ನನ್ನ ಅನುಭವಗಳನ್ನು ನೋಡಿದಾಗ, ನಾನು ದೇವರಿಂದ ಕಳುಹಿಸಲ್ಪಟ್ಟಿದ್ದೇನೆ ಎಂದು ನನಗೆ ಮನವರಿಕೆಯಾಗಿದೆ. ಈ ಶಕ್ತಿ ನನ್ನ ದೇಹದ್ದಲ್ಲ. ಅದನ್ನು ದೇವರು ನನಗೆ ಕೊಟ್ಟಿದ್ದಾನೆ. ಅದಕ್ಕಾಗಿಯೇ ದೇವರು ನನಗೆ ಸಾಮರ್ಥ್ಯ, ಶಕ್ತಿ, ಶುದ್ಧ ಹೃದಯ ಮತ್ತು ಇದನ್ನು ಮಾಡಲು ಸ್ಫೂರ್ತಿ ನೀಡಿದ್ದಾನೆ. ನಾನು ದೇವರು ಕಳುಹಿಸಿದ ಸಾಧನವಲ್ಲದೆ ಬೇರೇನೂ ಅಲ್ಲ ಎಂದು ಹೇಳಿದ್ದರು.

ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕನ್ಹಯ್ಯಾ ಕುಮಾರ್ ಅವರಿಗೆ ವ್ಯಾಪಕವಾದ ವಿಷಯಗಳ ಬಗ್ಗೆ ಸಾಕಷ್ಟು ಜ್ಞಾನವಿದೆ. ಆದರೆ ಅವನು ಒಂದು ದಿನ ಬಂದು ನನ್ನಲ್ಲಿ ತಾನು ಜೈವಿಕನಲ್ಲ ಮತ್ತು ದೇವರಿಂದ ಕಳುಹಿಸಲ್ಪಟ್ಟವನು ಎಂದು ನನ್ನಲ್ಲಿ ಹೇಳಿದರೆ, ನಾನು ಅದನ್ನು ಯಾರಿಗೂ ಹೇಳಬೇಡಿ ಅಥವಾ ಇದನ್ನು ಜೋರಾಗಿ ಹೇಳಬೇಡಿ ಎಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಆದರೆ ಪ್ರಧಾನಿ ತಾನು ಜೈವಿಕ ಅಲ್ಲ ಎಂದು ಬಹಿರಂಗವಾಗಿ ಹೇಳುತ್ತಿದ್ದಾರೆ. ಬೇರೆ ಎಲ್ಲಾ ಜನರು ಜೈವಿಕರು ಮತ್ತು ನಾನು ಮಾತ್ರ ಅಲ್ಲ ಎಂದು ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ.

ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ದ್ರಾವಿಡ ಮುನ್ನೇತ್ರ ಕಳಗಂ ನಾಯಕ ಎ ರಾಜಾ, ಪೆರಿಯಾರ್ ‘ದೇವರು ಅಸ್ತಿತ್ವದಲ್ಲಿಲ್ಲ’ ಎಂದು ಏಕೆ ಹೇಳಿದರು ಎಂಬುವುದು ಈಗ ಅನೇಕರಿಗೆ ಅರ್ಥವಾಗಿದೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ನ ಲೋಕಸಭಾ ಅಭ್ಯರ್ಥಿ ಮಹುವಾ ಮೊಯಿತ್ರಾ ಮೋದಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದು, ಅವರು ರಾಮನ ಬದಲಿಗೆ ದೇವಸ್ಥಾನಗಳಲ್ಲಿ ನರೇಂದ್ರ ಮೋದಿಯವರ ವಿಗ್ರಹಗಳನ್ನು ಪ್ರತಿಷ್ಠಾಪಿಸಬೇಕಿತ್ತು. ನರೇಂದ್ರ ಮೋದಿ ಮಾತನಾಡುವ ಕ್ಲಿಪ್‌ನ್ನು ನೋಡಿದೆ, ಅವರು ನಿಜವಾಗಿಯೂ ಮಾನವನಲ್ಲ, ದೈವಿಕವಾಗಿ ಹುಟ್ಟಿದ್ದಾರೆ, ನಮ್ಮೆಲ್ಲರನ್ನು ಉದ್ಧಾರ ಮಾಡಲು ಭೂಮಿಗೆ ಕಳುಹಿಸಲಾಗಿದೆ ಎಂದು ಅವರು ನಂಬುತ್ತಾರೆ. ರಾಮಲಲ್ಲಾ ಯಾಕೆ? ಬಿಜೆಪಿಯವರು ಎಲ್ಲ ದೇವಾಲಯಗಳಲ್ಲಿ ನಮೋ ಲಲ್ಲಾಗಳನ್ನು ಪ್ರತಿಷ್ಠಾಪಿಸಬೇಕಿತ್ತು ಎಂದು ಹೇಳಿದ್ದಾರೆ.

ಇದನ್ನು ಓದಿ: ಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಜಿತ್ ಪವಾರ್ ಸಾವು | ಪತನಗೊಂಡ ವಿಮಾನದ ನಿರ್ವಹಣಾ ಸಂಸ್ಥೆಗೂ ಟಿಡಿಪಿಗೂ ನಂಟು : ರೋಹಿತ್ ಪವಾರ್

ಅಜಿತ್ ಪವಾರ್ ಸಾವಿಗೆ ಕಾರಣವಾದ ಪತನಗೊಂಡ ವಿಮಾನದ ನಿರ್ವಾಹಕ ಸಂಸ್ಥೆ ವಿಎಸ್ಆರ್ ವೆಂಚರ್ಸ್ ಮತ್ತು ತೆಲುಗು ದೇಶಂ ಪಕ್ಷದ (ಟಿಡಿಪಿ) ನಡುವೆ ಸಂಬಂಧವಿದೆ ಎಂದು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಶರದ್ ಪವಾರ್ ಬಣದ)...

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...