‘ನಾನು ದೇವರಿಂದ ಕಳುಹಿಸಲ್ಪಟ್ಟಿದ್ದೇನೆ ಎಂದು ನನಗೆ ಮನವರಿಕೆಯಾಗಿದೆ, ಈ ರೀತಿಯ ಶಕ್ತಿಯು ಜೈವಿಕ ದೇಹದಿಂದ ಬರಲು ಸಾಧ್ಯವಿಲ್ಲ, ದೇವರು ಮಾತ್ರ ಅಂತಹ ಶಕ್ತಿಯನ್ನು ನೀಡಬಲ್ಲನು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ನೀಡಿದ್ದು, ಇದೀಗ ಅಪಹಾಸ್ಯಕ್ಕೆ ಕಾರಣವಾಗಿದೆ.
ಪ್ರಧಾನಿ ಮೋದಿಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಗಂಗಾನದಿಯ ದಡದಲ್ಲಿ ಮೃತದೇಹಗಳು ಜಮಾಯಿಸುತ್ತಿದ್ದಾಗ, ‘ದೇವರ ದೂತರು’ ತಮ್ಮ ಮೊಬೈಲ್ ಫೋನ್ನ ಪ್ಲ್ಯಾಶ್ಲೈಟನ್ನು ಆನ್ ಮಾಡಲು ಜನರಿಗೆ ಹೇಳಿದ್ದಾರೆ ಎಂದು ಕೋವಿಡ್ ಮೊದಲ ಹಂತದ ಲಾಕ್ಡೌನ್ ವೇಳೆ ಪ್ರಧಾನಿ ಮೋದಿ ದೀಪಗಳು ಅಥವಾ ಟಾರ್ಚ್ಗಳನ್ನು ಬೆಳಗಿಸಲು ನಾಗರಿಕರಿಗೆ ಸೂಚಿಸಿದ್ದನ್ನು ನೆನಪಿಸಿಕೊಂಡಿದ್ದಾರೆ.
ಯಾರಾದರೂ ನಿಮ್ಮ ಬಳಿಗೆ ಬಂದು ಅಂತಹ ಮಾತುಗಳನ್ನು ಹೇಳಿದರೆ, ನೀವು ಏನು ಹೇಳುತ್ತೀರಿ? ನೀನು ನನ್ನನ್ನು ಕ್ಷಮಿಸು ಸಹೋದರ, ನೀನು ನಿನ್ನ ಕೆಲಸ ಮಾಡು, ನನ್ನ ಕೆಲಸ ಮಾಡಲು ನನಗೆ ಬಿಡು ಎಂದು ಹೇಳುತ್ತೀರಿ. ಆದರೆ ಅವರ ಭಕ್ತರು ಪ್ರಧಾನಿಯನ್ನು ಹೊಗಳುತ್ತಾರೆ ಮತ್ತು ಅವರು ದೇವರಿಂದ ಕಳುಹಿಸಲ್ಪಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ. ಸಾಂಕ್ರಾಮಿಕ ರೋಗದ ಸಮಯದಲ್ಲಿ ಚಪ್ಪಾಳೆ ತಟ್ಟುವಂತೆ ಅವರು ಜನರಿಗೆ ಹೇಳಿದ್ದಾರೆ. ಜನರು ಆಸ್ಪತ್ರೆಗಳ ಹೊರಗೆ ಕೊನೆಯುಸಿರೆಳೆದಾಗ, ಪ್ರಧಾನಿ ಇರಲಿಲ್ಲ. ಪ್ರಧಾನಿ ಅಲ್ಲ, ಆದರೆ ದೇವರಿಂದ ಕಳುಹಿಸಲ್ಪಟ್ಟವರು, ಜನರಿಗೆ ಮೊಬೈಲ್ ಫೋನ್ ಪ್ಲ್ಯಾಶ್ಲೈಟ್ ಆನ್ ಮಾಡಲು ಕೇಳುತ್ತಿದ್ದರು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.
ನ್ಯೂಸ್ 18ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಪ್ರಧಾನಿ ಮೋದಿ, ನನ್ನ ತಾಯಿ ಬದುಕಿರುವವರೆಗೂ ನಾನು ಜೈವಿಕವಾಗಿ ಹುಟ್ಟಿದ್ದೇನೆ ಎಂದು ಭಾವಿಸುತ್ತಿದ್ದೆ. ಆಕೆಯ ನಿಧನದ ನಂತರ, ನನ್ನ ಅನುಭವಗಳನ್ನು ನೋಡಿದಾಗ, ನಾನು ದೇವರಿಂದ ಕಳುಹಿಸಲ್ಪಟ್ಟಿದ್ದೇನೆ ಎಂದು ನನಗೆ ಮನವರಿಕೆಯಾಗಿದೆ. ಈ ಶಕ್ತಿ ನನ್ನ ದೇಹದ್ದಲ್ಲ. ಅದನ್ನು ದೇವರು ನನಗೆ ಕೊಟ್ಟಿದ್ದಾನೆ. ಅದಕ್ಕಾಗಿಯೇ ದೇವರು ನನಗೆ ಸಾಮರ್ಥ್ಯ, ಶಕ್ತಿ, ಶುದ್ಧ ಹೃದಯ ಮತ್ತು ಇದನ್ನು ಮಾಡಲು ಸ್ಫೂರ್ತಿ ನೀಡಿದ್ದಾನೆ. ನಾನು ದೇವರು ಕಳುಹಿಸಿದ ಸಾಧನವಲ್ಲದೆ ಬೇರೇನೂ ಅಲ್ಲ ಎಂದು ಹೇಳಿದ್ದರು.
ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕನ್ಹಯ್ಯಾ ಕುಮಾರ್ ಅವರಿಗೆ ವ್ಯಾಪಕವಾದ ವಿಷಯಗಳ ಬಗ್ಗೆ ಸಾಕಷ್ಟು ಜ್ಞಾನವಿದೆ. ಆದರೆ ಅವನು ಒಂದು ದಿನ ಬಂದು ನನ್ನಲ್ಲಿ ತಾನು ಜೈವಿಕನಲ್ಲ ಮತ್ತು ದೇವರಿಂದ ಕಳುಹಿಸಲ್ಪಟ್ಟವನು ಎಂದು ನನ್ನಲ್ಲಿ ಹೇಳಿದರೆ, ನಾನು ಅದನ್ನು ಯಾರಿಗೂ ಹೇಳಬೇಡಿ ಅಥವಾ ಇದನ್ನು ಜೋರಾಗಿ ಹೇಳಬೇಡಿ ಎಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಆದರೆ ಪ್ರಧಾನಿ ತಾನು ಜೈವಿಕ ಅಲ್ಲ ಎಂದು ಬಹಿರಂಗವಾಗಿ ಹೇಳುತ್ತಿದ್ದಾರೆ. ಬೇರೆ ಎಲ್ಲಾ ಜನರು ಜೈವಿಕರು ಮತ್ತು ನಾನು ಮಾತ್ರ ಅಲ್ಲ ಎಂದು ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ.
ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ದ್ರಾವಿಡ ಮುನ್ನೇತ್ರ ಕಳಗಂ ನಾಯಕ ಎ ರಾಜಾ, ಪೆರಿಯಾರ್ ‘ದೇವರು ಅಸ್ತಿತ್ವದಲ್ಲಿಲ್ಲ’ ಎಂದು ಏಕೆ ಹೇಳಿದರು ಎಂಬುವುದು ಈಗ ಅನೇಕರಿಗೆ ಅರ್ಥವಾಗಿದೆ ಎಂದು ಹೇಳಿದ್ದಾರೆ.
ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ನ ಲೋಕಸಭಾ ಅಭ್ಯರ್ಥಿ ಮಹುವಾ ಮೊಯಿತ್ರಾ ಮೋದಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದು, ಅವರು ರಾಮನ ಬದಲಿಗೆ ದೇವಸ್ಥಾನಗಳಲ್ಲಿ ನರೇಂದ್ರ ಮೋದಿಯವರ ವಿಗ್ರಹಗಳನ್ನು ಪ್ರತಿಷ್ಠಾಪಿಸಬೇಕಿತ್ತು. ನರೇಂದ್ರ ಮೋದಿ ಮಾತನಾಡುವ ಕ್ಲಿಪ್ನ್ನು ನೋಡಿದೆ, ಅವರು ನಿಜವಾಗಿಯೂ ಮಾನವನಲ್ಲ, ದೈವಿಕವಾಗಿ ಹುಟ್ಟಿದ್ದಾರೆ, ನಮ್ಮೆಲ್ಲರನ್ನು ಉದ್ಧಾರ ಮಾಡಲು ಭೂಮಿಗೆ ಕಳುಹಿಸಲಾಗಿದೆ ಎಂದು ಅವರು ನಂಬುತ್ತಾರೆ. ರಾಮಲಲ್ಲಾ ಯಾಕೆ? ಬಿಜೆಪಿಯವರು ಎಲ್ಲ ದೇವಾಲಯಗಳಲ್ಲಿ ನಮೋ ಲಲ್ಲಾಗಳನ್ನು ಪ್ರತಿಷ್ಠಾಪಿಸಬೇಕಿತ್ತು ಎಂದು ಹೇಳಿದ್ದಾರೆ.
ಇದನ್ನು ಓದಿ: ಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ


