Homeಮುಖಪುಟ'ತಾನು ಜೈವಿಕ ಅಲ್ಲ, ನನ್ನನ್ನು ದೇವರು ಕಳುಹಿಸಿದ್ದಾನೆ' ಎಂದು ಹೇಳಿ ಅಪಹಾಸ್ಯಕ್ಕೀಡಾದ ಪ್ರಧಾನಿ ಮೋದಿ

‘ತಾನು ಜೈವಿಕ ಅಲ್ಲ, ನನ್ನನ್ನು ದೇವರು ಕಳುಹಿಸಿದ್ದಾನೆ’ ಎಂದು ಹೇಳಿ ಅಪಹಾಸ್ಯಕ್ಕೀಡಾದ ಪ್ರಧಾನಿ ಮೋದಿ

- Advertisement -
- Advertisement -

‘ನಾನು ದೇವರಿಂದ ಕಳುಹಿಸಲ್ಪಟ್ಟಿದ್ದೇನೆ ಎಂದು ನನಗೆ ಮನವರಿಕೆಯಾಗಿದೆ, ಈ ರೀತಿಯ ಶಕ್ತಿಯು ಜೈವಿಕ ದೇಹದಿಂದ ಬರಲು ಸಾಧ್ಯವಿಲ್ಲ, ದೇವರು ಮಾತ್ರ ಅಂತಹ ಶಕ್ತಿಯನ್ನು ನೀಡಬಲ್ಲನು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ನೀಡಿದ್ದು, ಇದೀಗ ಅಪಹಾಸ್ಯಕ್ಕೆ ಕಾರಣವಾಗಿದೆ.

ಪ್ರಧಾನಿ ಮೋದಿಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಗಂಗಾನದಿಯ ದಡದಲ್ಲಿ ಮೃತದೇಹಗಳು ಜಮಾಯಿಸುತ್ತಿದ್ದಾಗ, ‘ದೇವರ ದೂತರು’ ತಮ್ಮ ಮೊಬೈಲ್ ಫೋನ್‌ನ ಪ್ಲ್ಯಾಶ್‌ಲೈಟನ್ನು ಆನ್ ಮಾಡಲು ಜನರಿಗೆ ಹೇಳಿದ್ದಾರೆ ಎಂದು ಕೋವಿಡ್‌ ಮೊದಲ ಹಂತದ ಲಾಕ್‌ಡೌನ್‌ ವೇಳೆ ಪ್ರಧಾನಿ ಮೋದಿ ದೀಪಗಳು ಅಥವಾ ಟಾರ್ಚ್‌ಗಳನ್ನು ಬೆಳಗಿಸಲು ನಾಗರಿಕರಿಗೆ ಸೂಚಿಸಿದ್ದನ್ನು ನೆನಪಿಸಿಕೊಂಡಿದ್ದಾರೆ.

ಯಾರಾದರೂ ನಿಮ್ಮ ಬಳಿಗೆ ಬಂದು ಅಂತಹ ಮಾತುಗಳನ್ನು ಹೇಳಿದರೆ, ನೀವು ಏನು ಹೇಳುತ್ತೀರಿ? ನೀನು ನನ್ನನ್ನು ಕ್ಷಮಿಸು ಸಹೋದರ, ನೀನು ನಿನ್ನ ಕೆಲಸ ಮಾಡು, ನನ್ನ ಕೆಲಸ ಮಾಡಲು ನನಗೆ ಬಿಡು ಎಂದು ಹೇಳುತ್ತೀರಿ. ಆದರೆ ಅವರ ಭಕ್ತರು ಪ್ರಧಾನಿಯನ್ನು ಹೊಗಳುತ್ತಾರೆ ಮತ್ತು ಅವರು ದೇವರಿಂದ ಕಳುಹಿಸಲ್ಪಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ. ಸಾಂಕ್ರಾಮಿಕ ರೋಗದ ಸಮಯದಲ್ಲಿ ಚಪ್ಪಾಳೆ ತಟ್ಟುವಂತೆ ಅವರು ಜನರಿಗೆ ಹೇಳಿದ್ದಾರೆ. ಜನರು ಆಸ್ಪತ್ರೆಗಳ ಹೊರಗೆ ಕೊನೆಯುಸಿರೆಳೆದಾಗ, ಪ್ರಧಾನಿ ಇರಲಿಲ್ಲ. ಪ್ರಧಾನಿ ಅಲ್ಲ, ಆದರೆ ದೇವರಿಂದ ಕಳುಹಿಸಲ್ಪಟ್ಟವರು, ಜನರಿಗೆ ಮೊಬೈಲ್ ಫೋನ್ ಪ್ಲ್ಯಾಶ್‌ಲೈಟ್‌ ಆನ್ ಮಾಡಲು ಕೇಳುತ್ತಿದ್ದರು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನ್ಯೂಸ್ 18ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಪ್ರಧಾನಿ ಮೋದಿ, ನನ್ನ ತಾಯಿ ಬದುಕಿರುವವರೆಗೂ ನಾನು ಜೈವಿಕವಾಗಿ ಹುಟ್ಟಿದ್ದೇನೆ ಎಂದು ಭಾವಿಸುತ್ತಿದ್ದೆ. ಆಕೆಯ ನಿಧನದ ನಂತರ, ನನ್ನ ಅನುಭವಗಳನ್ನು ನೋಡಿದಾಗ, ನಾನು ದೇವರಿಂದ ಕಳುಹಿಸಲ್ಪಟ್ಟಿದ್ದೇನೆ ಎಂದು ನನಗೆ ಮನವರಿಕೆಯಾಗಿದೆ. ಈ ಶಕ್ತಿ ನನ್ನ ದೇಹದ್ದಲ್ಲ. ಅದನ್ನು ದೇವರು ನನಗೆ ಕೊಟ್ಟಿದ್ದಾನೆ. ಅದಕ್ಕಾಗಿಯೇ ದೇವರು ನನಗೆ ಸಾಮರ್ಥ್ಯ, ಶಕ್ತಿ, ಶುದ್ಧ ಹೃದಯ ಮತ್ತು ಇದನ್ನು ಮಾಡಲು ಸ್ಫೂರ್ತಿ ನೀಡಿದ್ದಾನೆ. ನಾನು ದೇವರು ಕಳುಹಿಸಿದ ಸಾಧನವಲ್ಲದೆ ಬೇರೇನೂ ಅಲ್ಲ ಎಂದು ಹೇಳಿದ್ದರು.

ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕನ್ಹಯ್ಯಾ ಕುಮಾರ್ ಅವರಿಗೆ ವ್ಯಾಪಕವಾದ ವಿಷಯಗಳ ಬಗ್ಗೆ ಸಾಕಷ್ಟು ಜ್ಞಾನವಿದೆ. ಆದರೆ ಅವನು ಒಂದು ದಿನ ಬಂದು ನನ್ನಲ್ಲಿ ತಾನು ಜೈವಿಕನಲ್ಲ ಮತ್ತು ದೇವರಿಂದ ಕಳುಹಿಸಲ್ಪಟ್ಟವನು ಎಂದು ನನ್ನಲ್ಲಿ ಹೇಳಿದರೆ, ನಾನು ಅದನ್ನು ಯಾರಿಗೂ ಹೇಳಬೇಡಿ ಅಥವಾ ಇದನ್ನು ಜೋರಾಗಿ ಹೇಳಬೇಡಿ ಎಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಆದರೆ ಪ್ರಧಾನಿ ತಾನು ಜೈವಿಕ ಅಲ್ಲ ಎಂದು ಬಹಿರಂಗವಾಗಿ ಹೇಳುತ್ತಿದ್ದಾರೆ. ಬೇರೆ ಎಲ್ಲಾ ಜನರು ಜೈವಿಕರು ಮತ್ತು ನಾನು ಮಾತ್ರ ಅಲ್ಲ ಎಂದು ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ.

ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ದ್ರಾವಿಡ ಮುನ್ನೇತ್ರ ಕಳಗಂ ನಾಯಕ ಎ ರಾಜಾ, ಪೆರಿಯಾರ್ ‘ದೇವರು ಅಸ್ತಿತ್ವದಲ್ಲಿಲ್ಲ’ ಎಂದು ಏಕೆ ಹೇಳಿದರು ಎಂಬುವುದು ಈಗ ಅನೇಕರಿಗೆ ಅರ್ಥವಾಗಿದೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ನ ಲೋಕಸಭಾ ಅಭ್ಯರ್ಥಿ ಮಹುವಾ ಮೊಯಿತ್ರಾ ಮೋದಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದು, ಅವರು ರಾಮನ ಬದಲಿಗೆ ದೇವಸ್ಥಾನಗಳಲ್ಲಿ ನರೇಂದ್ರ ಮೋದಿಯವರ ವಿಗ್ರಹಗಳನ್ನು ಪ್ರತಿಷ್ಠಾಪಿಸಬೇಕಿತ್ತು. ನರೇಂದ್ರ ಮೋದಿ ಮಾತನಾಡುವ ಕ್ಲಿಪ್‌ನ್ನು ನೋಡಿದೆ, ಅವರು ನಿಜವಾಗಿಯೂ ಮಾನವನಲ್ಲ, ದೈವಿಕವಾಗಿ ಹುಟ್ಟಿದ್ದಾರೆ, ನಮ್ಮೆಲ್ಲರನ್ನು ಉದ್ಧಾರ ಮಾಡಲು ಭೂಮಿಗೆ ಕಳುಹಿಸಲಾಗಿದೆ ಎಂದು ಅವರು ನಂಬುತ್ತಾರೆ. ರಾಮಲಲ್ಲಾ ಯಾಕೆ? ಬಿಜೆಪಿಯವರು ಎಲ್ಲ ದೇವಾಲಯಗಳಲ್ಲಿ ನಮೋ ಲಲ್ಲಾಗಳನ್ನು ಪ್ರತಿಷ್ಠಾಪಿಸಬೇಕಿತ್ತು ಎಂದು ಹೇಳಿದ್ದಾರೆ.

ಇದನ್ನು ಓದಿ: ಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...