Homeಮುಖಪುಟ'ತಾನು ಜೈವಿಕ ಅಲ್ಲ, ನನ್ನನ್ನು ದೇವರು ಕಳುಹಿಸಿದ್ದಾನೆ' ಎಂದು ಹೇಳಿ ಅಪಹಾಸ್ಯಕ್ಕೀಡಾದ ಪ್ರಧಾನಿ ಮೋದಿ

‘ತಾನು ಜೈವಿಕ ಅಲ್ಲ, ನನ್ನನ್ನು ದೇವರು ಕಳುಹಿಸಿದ್ದಾನೆ’ ಎಂದು ಹೇಳಿ ಅಪಹಾಸ್ಯಕ್ಕೀಡಾದ ಪ್ರಧಾನಿ ಮೋದಿ

- Advertisement -
- Advertisement -

‘ನಾನು ದೇವರಿಂದ ಕಳುಹಿಸಲ್ಪಟ್ಟಿದ್ದೇನೆ ಎಂದು ನನಗೆ ಮನವರಿಕೆಯಾಗಿದೆ, ಈ ರೀತಿಯ ಶಕ್ತಿಯು ಜೈವಿಕ ದೇಹದಿಂದ ಬರಲು ಸಾಧ್ಯವಿಲ್ಲ, ದೇವರು ಮಾತ್ರ ಅಂತಹ ಶಕ್ತಿಯನ್ನು ನೀಡಬಲ್ಲನು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ನೀಡಿದ್ದು, ಇದೀಗ ಅಪಹಾಸ್ಯಕ್ಕೆ ಕಾರಣವಾಗಿದೆ.

ಪ್ರಧಾನಿ ಮೋದಿಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಗಂಗಾನದಿಯ ದಡದಲ್ಲಿ ಮೃತದೇಹಗಳು ಜಮಾಯಿಸುತ್ತಿದ್ದಾಗ, ‘ದೇವರ ದೂತರು’ ತಮ್ಮ ಮೊಬೈಲ್ ಫೋನ್‌ನ ಪ್ಲ್ಯಾಶ್‌ಲೈಟನ್ನು ಆನ್ ಮಾಡಲು ಜನರಿಗೆ ಹೇಳಿದ್ದಾರೆ ಎಂದು ಕೋವಿಡ್‌ ಮೊದಲ ಹಂತದ ಲಾಕ್‌ಡೌನ್‌ ವೇಳೆ ಪ್ರಧಾನಿ ಮೋದಿ ದೀಪಗಳು ಅಥವಾ ಟಾರ್ಚ್‌ಗಳನ್ನು ಬೆಳಗಿಸಲು ನಾಗರಿಕರಿಗೆ ಸೂಚಿಸಿದ್ದನ್ನು ನೆನಪಿಸಿಕೊಂಡಿದ್ದಾರೆ.

ಯಾರಾದರೂ ನಿಮ್ಮ ಬಳಿಗೆ ಬಂದು ಅಂತಹ ಮಾತುಗಳನ್ನು ಹೇಳಿದರೆ, ನೀವು ಏನು ಹೇಳುತ್ತೀರಿ? ನೀನು ನನ್ನನ್ನು ಕ್ಷಮಿಸು ಸಹೋದರ, ನೀನು ನಿನ್ನ ಕೆಲಸ ಮಾಡು, ನನ್ನ ಕೆಲಸ ಮಾಡಲು ನನಗೆ ಬಿಡು ಎಂದು ಹೇಳುತ್ತೀರಿ. ಆದರೆ ಅವರ ಭಕ್ತರು ಪ್ರಧಾನಿಯನ್ನು ಹೊಗಳುತ್ತಾರೆ ಮತ್ತು ಅವರು ದೇವರಿಂದ ಕಳುಹಿಸಲ್ಪಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ. ಸಾಂಕ್ರಾಮಿಕ ರೋಗದ ಸಮಯದಲ್ಲಿ ಚಪ್ಪಾಳೆ ತಟ್ಟುವಂತೆ ಅವರು ಜನರಿಗೆ ಹೇಳಿದ್ದಾರೆ. ಜನರು ಆಸ್ಪತ್ರೆಗಳ ಹೊರಗೆ ಕೊನೆಯುಸಿರೆಳೆದಾಗ, ಪ್ರಧಾನಿ ಇರಲಿಲ್ಲ. ಪ್ರಧಾನಿ ಅಲ್ಲ, ಆದರೆ ದೇವರಿಂದ ಕಳುಹಿಸಲ್ಪಟ್ಟವರು, ಜನರಿಗೆ ಮೊಬೈಲ್ ಫೋನ್ ಪ್ಲ್ಯಾಶ್‌ಲೈಟ್‌ ಆನ್ ಮಾಡಲು ಕೇಳುತ್ತಿದ್ದರು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನ್ಯೂಸ್ 18ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಪ್ರಧಾನಿ ಮೋದಿ, ನನ್ನ ತಾಯಿ ಬದುಕಿರುವವರೆಗೂ ನಾನು ಜೈವಿಕವಾಗಿ ಹುಟ್ಟಿದ್ದೇನೆ ಎಂದು ಭಾವಿಸುತ್ತಿದ್ದೆ. ಆಕೆಯ ನಿಧನದ ನಂತರ, ನನ್ನ ಅನುಭವಗಳನ್ನು ನೋಡಿದಾಗ, ನಾನು ದೇವರಿಂದ ಕಳುಹಿಸಲ್ಪಟ್ಟಿದ್ದೇನೆ ಎಂದು ನನಗೆ ಮನವರಿಕೆಯಾಗಿದೆ. ಈ ಶಕ್ತಿ ನನ್ನ ದೇಹದ್ದಲ್ಲ. ಅದನ್ನು ದೇವರು ನನಗೆ ಕೊಟ್ಟಿದ್ದಾನೆ. ಅದಕ್ಕಾಗಿಯೇ ದೇವರು ನನಗೆ ಸಾಮರ್ಥ್ಯ, ಶಕ್ತಿ, ಶುದ್ಧ ಹೃದಯ ಮತ್ತು ಇದನ್ನು ಮಾಡಲು ಸ್ಫೂರ್ತಿ ನೀಡಿದ್ದಾನೆ. ನಾನು ದೇವರು ಕಳುಹಿಸಿದ ಸಾಧನವಲ್ಲದೆ ಬೇರೇನೂ ಅಲ್ಲ ಎಂದು ಹೇಳಿದ್ದರು.

ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕನ್ಹಯ್ಯಾ ಕುಮಾರ್ ಅವರಿಗೆ ವ್ಯಾಪಕವಾದ ವಿಷಯಗಳ ಬಗ್ಗೆ ಸಾಕಷ್ಟು ಜ್ಞಾನವಿದೆ. ಆದರೆ ಅವನು ಒಂದು ದಿನ ಬಂದು ನನ್ನಲ್ಲಿ ತಾನು ಜೈವಿಕನಲ್ಲ ಮತ್ತು ದೇವರಿಂದ ಕಳುಹಿಸಲ್ಪಟ್ಟವನು ಎಂದು ನನ್ನಲ್ಲಿ ಹೇಳಿದರೆ, ನಾನು ಅದನ್ನು ಯಾರಿಗೂ ಹೇಳಬೇಡಿ ಅಥವಾ ಇದನ್ನು ಜೋರಾಗಿ ಹೇಳಬೇಡಿ ಎಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಆದರೆ ಪ್ರಧಾನಿ ತಾನು ಜೈವಿಕ ಅಲ್ಲ ಎಂದು ಬಹಿರಂಗವಾಗಿ ಹೇಳುತ್ತಿದ್ದಾರೆ. ಬೇರೆ ಎಲ್ಲಾ ಜನರು ಜೈವಿಕರು ಮತ್ತು ನಾನು ಮಾತ್ರ ಅಲ್ಲ ಎಂದು ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ.

ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ದ್ರಾವಿಡ ಮುನ್ನೇತ್ರ ಕಳಗಂ ನಾಯಕ ಎ ರಾಜಾ, ಪೆರಿಯಾರ್ ‘ದೇವರು ಅಸ್ತಿತ್ವದಲ್ಲಿಲ್ಲ’ ಎಂದು ಏಕೆ ಹೇಳಿದರು ಎಂಬುವುದು ಈಗ ಅನೇಕರಿಗೆ ಅರ್ಥವಾಗಿದೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ನ ಲೋಕಸಭಾ ಅಭ್ಯರ್ಥಿ ಮಹುವಾ ಮೊಯಿತ್ರಾ ಮೋದಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದು, ಅವರು ರಾಮನ ಬದಲಿಗೆ ದೇವಸ್ಥಾನಗಳಲ್ಲಿ ನರೇಂದ್ರ ಮೋದಿಯವರ ವಿಗ್ರಹಗಳನ್ನು ಪ್ರತಿಷ್ಠಾಪಿಸಬೇಕಿತ್ತು. ನರೇಂದ್ರ ಮೋದಿ ಮಾತನಾಡುವ ಕ್ಲಿಪ್‌ನ್ನು ನೋಡಿದೆ, ಅವರು ನಿಜವಾಗಿಯೂ ಮಾನವನಲ್ಲ, ದೈವಿಕವಾಗಿ ಹುಟ್ಟಿದ್ದಾರೆ, ನಮ್ಮೆಲ್ಲರನ್ನು ಉದ್ಧಾರ ಮಾಡಲು ಭೂಮಿಗೆ ಕಳುಹಿಸಲಾಗಿದೆ ಎಂದು ಅವರು ನಂಬುತ್ತಾರೆ. ರಾಮಲಲ್ಲಾ ಯಾಕೆ? ಬಿಜೆಪಿಯವರು ಎಲ್ಲ ದೇವಾಲಯಗಳಲ್ಲಿ ನಮೋ ಲಲ್ಲಾಗಳನ್ನು ಪ್ರತಿಷ್ಠಾಪಿಸಬೇಕಿತ್ತು ಎಂದು ಹೇಳಿದ್ದಾರೆ.

ಇದನ್ನು ಓದಿ: ಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...