Homeಮುಖಪುಟ'ತಾನು ಜೈವಿಕ ಅಲ್ಲ, ನನ್ನನ್ನು ದೇವರು ಕಳುಹಿಸಿದ್ದಾನೆ' ಎಂದು ಹೇಳಿ ಅಪಹಾಸ್ಯಕ್ಕೀಡಾದ ಪ್ರಧಾನಿ ಮೋದಿ

‘ತಾನು ಜೈವಿಕ ಅಲ್ಲ, ನನ್ನನ್ನು ದೇವರು ಕಳುಹಿಸಿದ್ದಾನೆ’ ಎಂದು ಹೇಳಿ ಅಪಹಾಸ್ಯಕ್ಕೀಡಾದ ಪ್ರಧಾನಿ ಮೋದಿ

- Advertisement -
- Advertisement -

‘ನಾನು ದೇವರಿಂದ ಕಳುಹಿಸಲ್ಪಟ್ಟಿದ್ದೇನೆ ಎಂದು ನನಗೆ ಮನವರಿಕೆಯಾಗಿದೆ, ಈ ರೀತಿಯ ಶಕ್ತಿಯು ಜೈವಿಕ ದೇಹದಿಂದ ಬರಲು ಸಾಧ್ಯವಿಲ್ಲ, ದೇವರು ಮಾತ್ರ ಅಂತಹ ಶಕ್ತಿಯನ್ನು ನೀಡಬಲ್ಲನು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆಯನ್ನು ನೀಡಿದ್ದು, ಇದೀಗ ಅಪಹಾಸ್ಯಕ್ಕೆ ಕಾರಣವಾಗಿದೆ.

ಪ್ರಧಾನಿ ಮೋದಿಯ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ, ಗಂಗಾನದಿಯ ದಡದಲ್ಲಿ ಮೃತದೇಹಗಳು ಜಮಾಯಿಸುತ್ತಿದ್ದಾಗ, ‘ದೇವರ ದೂತರು’ ತಮ್ಮ ಮೊಬೈಲ್ ಫೋನ್‌ನ ಪ್ಲ್ಯಾಶ್‌ಲೈಟನ್ನು ಆನ್ ಮಾಡಲು ಜನರಿಗೆ ಹೇಳಿದ್ದಾರೆ ಎಂದು ಕೋವಿಡ್‌ ಮೊದಲ ಹಂತದ ಲಾಕ್‌ಡೌನ್‌ ವೇಳೆ ಪ್ರಧಾನಿ ಮೋದಿ ದೀಪಗಳು ಅಥವಾ ಟಾರ್ಚ್‌ಗಳನ್ನು ಬೆಳಗಿಸಲು ನಾಗರಿಕರಿಗೆ ಸೂಚಿಸಿದ್ದನ್ನು ನೆನಪಿಸಿಕೊಂಡಿದ್ದಾರೆ.

ಯಾರಾದರೂ ನಿಮ್ಮ ಬಳಿಗೆ ಬಂದು ಅಂತಹ ಮಾತುಗಳನ್ನು ಹೇಳಿದರೆ, ನೀವು ಏನು ಹೇಳುತ್ತೀರಿ? ನೀನು ನನ್ನನ್ನು ಕ್ಷಮಿಸು ಸಹೋದರ, ನೀನು ನಿನ್ನ ಕೆಲಸ ಮಾಡು, ನನ್ನ ಕೆಲಸ ಮಾಡಲು ನನಗೆ ಬಿಡು ಎಂದು ಹೇಳುತ್ತೀರಿ. ಆದರೆ ಅವರ ಭಕ್ತರು ಪ್ರಧಾನಿಯನ್ನು ಹೊಗಳುತ್ತಾರೆ ಮತ್ತು ಅವರು ದೇವರಿಂದ ಕಳುಹಿಸಲ್ಪಟ್ಟಿದ್ದಾರೆ ಎಂದು ಹೇಳುತ್ತಿದ್ದಾರೆ. ಸಾಂಕ್ರಾಮಿಕ ರೋಗದ ಸಮಯದಲ್ಲಿ ಚಪ್ಪಾಳೆ ತಟ್ಟುವಂತೆ ಅವರು ಜನರಿಗೆ ಹೇಳಿದ್ದಾರೆ. ಜನರು ಆಸ್ಪತ್ರೆಗಳ ಹೊರಗೆ ಕೊನೆಯುಸಿರೆಳೆದಾಗ, ಪ್ರಧಾನಿ ಇರಲಿಲ್ಲ. ಪ್ರಧಾನಿ ಅಲ್ಲ, ಆದರೆ ದೇವರಿಂದ ಕಳುಹಿಸಲ್ಪಟ್ಟವರು, ಜನರಿಗೆ ಮೊಬೈಲ್ ಫೋನ್ ಪ್ಲ್ಯಾಶ್‌ಲೈಟ್‌ ಆನ್ ಮಾಡಲು ಕೇಳುತ್ತಿದ್ದರು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

ನ್ಯೂಸ್ 18ಗೆ ನೀಡಿದ ಸಂದರ್ಶನದಲ್ಲಿ ಮಾತನಾಡಿದ ಪ್ರಧಾನಿ ಪ್ರಧಾನಿ ಮೋದಿ, ನನ್ನ ತಾಯಿ ಬದುಕಿರುವವರೆಗೂ ನಾನು ಜೈವಿಕವಾಗಿ ಹುಟ್ಟಿದ್ದೇನೆ ಎಂದು ಭಾವಿಸುತ್ತಿದ್ದೆ. ಆಕೆಯ ನಿಧನದ ನಂತರ, ನನ್ನ ಅನುಭವಗಳನ್ನು ನೋಡಿದಾಗ, ನಾನು ದೇವರಿಂದ ಕಳುಹಿಸಲ್ಪಟ್ಟಿದ್ದೇನೆ ಎಂದು ನನಗೆ ಮನವರಿಕೆಯಾಗಿದೆ. ಈ ಶಕ್ತಿ ನನ್ನ ದೇಹದ್ದಲ್ಲ. ಅದನ್ನು ದೇವರು ನನಗೆ ಕೊಟ್ಟಿದ್ದಾನೆ. ಅದಕ್ಕಾಗಿಯೇ ದೇವರು ನನಗೆ ಸಾಮರ್ಥ್ಯ, ಶಕ್ತಿ, ಶುದ್ಧ ಹೃದಯ ಮತ್ತು ಇದನ್ನು ಮಾಡಲು ಸ್ಫೂರ್ತಿ ನೀಡಿದ್ದಾನೆ. ನಾನು ದೇವರು ಕಳುಹಿಸಿದ ಸಾಧನವಲ್ಲದೆ ಬೇರೇನೂ ಅಲ್ಲ ಎಂದು ಹೇಳಿದ್ದರು.

ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕನ್ಹಯ್ಯಾ ಕುಮಾರ್ ಅವರಿಗೆ ವ್ಯಾಪಕವಾದ ವಿಷಯಗಳ ಬಗ್ಗೆ ಸಾಕಷ್ಟು ಜ್ಞಾನವಿದೆ. ಆದರೆ ಅವನು ಒಂದು ದಿನ ಬಂದು ನನ್ನಲ್ಲಿ ತಾನು ಜೈವಿಕನಲ್ಲ ಮತ್ತು ದೇವರಿಂದ ಕಳುಹಿಸಲ್ಪಟ್ಟವನು ಎಂದು ನನ್ನಲ್ಲಿ ಹೇಳಿದರೆ, ನಾನು ಅದನ್ನು ಯಾರಿಗೂ ಹೇಳಬೇಡಿ ಅಥವಾ ಇದನ್ನು ಜೋರಾಗಿ ಹೇಳಬೇಡಿ ಎಂದು ಕೈ ಮುಗಿದು ಕೇಳಿಕೊಳ್ಳುತ್ತೇನೆ. ಆದರೆ ಪ್ರಧಾನಿ ತಾನು ಜೈವಿಕ ಅಲ್ಲ ಎಂದು ಬಹಿರಂಗವಾಗಿ ಹೇಳುತ್ತಿದ್ದಾರೆ. ಬೇರೆ ಎಲ್ಲಾ ಜನರು ಜೈವಿಕರು ಮತ್ತು ನಾನು ಮಾತ್ರ ಅಲ್ಲ ಎಂದು ಹೇಳುತ್ತಿದ್ದಾರೆ ಎಂದು ಹೇಳಿದ್ದಾರೆ.

ವಿವಾದದ ಬಗ್ಗೆ ಪ್ರತಿಕ್ರಿಯಿಸಿದ ದ್ರಾವಿಡ ಮುನ್ನೇತ್ರ ಕಳಗಂ ನಾಯಕ ಎ ರಾಜಾ, ಪೆರಿಯಾರ್ ‘ದೇವರು ಅಸ್ತಿತ್ವದಲ್ಲಿಲ್ಲ’ ಎಂದು ಏಕೆ ಹೇಳಿದರು ಎಂಬುವುದು ಈಗ ಅನೇಕರಿಗೆ ಅರ್ಥವಾಗಿದೆ ಎಂದು ಹೇಳಿದ್ದಾರೆ.

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್‌ನ ಲೋಕಸಭಾ ಅಭ್ಯರ್ಥಿ ಮಹುವಾ ಮೊಯಿತ್ರಾ ಮೋದಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ್ದು, ಅವರು ರಾಮನ ಬದಲಿಗೆ ದೇವಸ್ಥಾನಗಳಲ್ಲಿ ನರೇಂದ್ರ ಮೋದಿಯವರ ವಿಗ್ರಹಗಳನ್ನು ಪ್ರತಿಷ್ಠಾಪಿಸಬೇಕಿತ್ತು. ನರೇಂದ್ರ ಮೋದಿ ಮಾತನಾಡುವ ಕ್ಲಿಪ್‌ನ್ನು ನೋಡಿದೆ, ಅವರು ನಿಜವಾಗಿಯೂ ಮಾನವನಲ್ಲ, ದೈವಿಕವಾಗಿ ಹುಟ್ಟಿದ್ದಾರೆ, ನಮ್ಮೆಲ್ಲರನ್ನು ಉದ್ಧಾರ ಮಾಡಲು ಭೂಮಿಗೆ ಕಳುಹಿಸಲಾಗಿದೆ ಎಂದು ಅವರು ನಂಬುತ್ತಾರೆ. ರಾಮಲಲ್ಲಾ ಯಾಕೆ? ಬಿಜೆಪಿಯವರು ಎಲ್ಲ ದೇವಾಲಯಗಳಲ್ಲಿ ನಮೋ ಲಲ್ಲಾಗಳನ್ನು ಪ್ರತಿಷ್ಠಾಪಿಸಬೇಕಿತ್ತು ಎಂದು ಹೇಳಿದ್ದಾರೆ.

ಇದನ್ನು ಓದಿ: ಪ್ರತಿ ಮತಗಟ್ಟೆಯ ಮತದಾನದ ಅಂಕಿ-ಅಂಶ ಒದಗಿಸಬೇಕೆಂದು ಕಾನೂನಿನಲ್ಲಿ ನಿರ್ದೇಶನವಿಲ್ಲ: ಚು.ಆಯೋಗ

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...