Homeಮುಖಪುಟಪ್ರಧಾನಿ ಮೋದಿ ಭಾರತವೆಂಬ ಕಾರನ್ನು ಹಿಂಬದಿ ಕನ್ನಡಿ ನೋಡಿಕೊಂಡು ಓಡಿಸುತ್ತಿದ್ದಾರೆ: ರಾಹುಲ್ ಟೀಕೆ

ಪ್ರಧಾನಿ ಮೋದಿ ಭಾರತವೆಂಬ ಕಾರನ್ನು ಹಿಂಬದಿ ಕನ್ನಡಿ ನೋಡಿಕೊಂಡು ಓಡಿಸುತ್ತಿದ್ದಾರೆ: ರಾಹುಲ್ ಟೀಕೆ

- Advertisement -
- Advertisement -

”ರೈಲು ಅಪಘಾತ ಏಕೆ ಸಂಭವಿಸಿತು ಎಂದು ನೀವು ಭಾರತ ಸರ್ಕಾರವನ್ನು ಕೇಳಿದರೆ, ಅವರು 50 ವರ್ಷಗಳ ಹಿಂದೆ ಇದನ್ನು ಕಾಂಗ್ರೆಸ್ ಮಾಡಿತು” ಎಂದು ಹೇಳುತ್ತಾರೆ. ಅವರನ್ನು ನೀವು ಏನೇ ಕೇಳಿದರು ಅವರ ತಕ್ಷಣದ ಪ್ರತಿಕ್ರಿಯೆ ‘ಪೀಚೆ ದೇಖೋ’ ಎನ್ನುವುದಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ನ್ಯೂಯಾರ್ಕ್‌ನಲ್ಲಿ ಭಾರತೀಯ ವಲಸಿಗರ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್, ”ಕಾಂಗ್ರೆಸ್ ತನ್ನ ಆಳ್ವಿಕೆಯಲ್ಲಿ ಸಂಭವಿಸಿದ ರೈಲು ಅಪಘಾತಗಳಿಗೆ ಬ್ರಿಟಿಷರನ್ನು ದೂಷಿಸಲಿಲ್ಲ ಆದರೆ ಸಚಿವರು ಜವಾಬ್ದಾರಿಯನ್ನು ವಹಿಸಿಕೊಂಡರು. ಆದರೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ಭವಿಷ್ಯವನ್ನು ನೋಡಲು ಅಸಮರ್ಥವಾಗಿವೆ, ನೀವು ಏನು ಕೇಳಿದರೂ ಅವರು ಹಿಂದೆ ನೋಡುತ್ತಾರೆ, ರೈಲು ಅಪಘಾತ ಏಕೆ ಸಂಭವಿಸಿತು ಎಂದು ನೀವು ಸರ್ಕಾರವನ್ನು ಕೇಳಿದರೆ, ಅವರು 50 ವರ್ಷಗಳ ಹಿಂದೆ ಇದನ್ನು ಕಾಂಗ್ರೆಸ್ ಮಾಡಿತು ಎಂದು ಹೇಳುತ್ತಾರೆ.

ಎನ್‌ಸಿಆರ್‌ಟಿ 10ನೇ ತರಗತಿ ಪಠ್ಯಪುಸ್ತಕದಲ್ಲಿ ನೀವು ಏಕೆ ಆವರ್ತಕ ಕೋಷ್ಟಕ ಮತ್ತು ವಿಕಸನ ಪಠ್ಯ ತಗೆದು ಹಾಕಿದೀರಿ ೆಂದು ಕೇಳಿದರೆ, ಅವರು 60 ವರ್ಷಗಳ ಹಿಂದೆ ಕಾಂಗ್ರೆಸ್ ಮಾಡಿರುವುದನ್ನು ನೋಡಿ ಎಂದು ಅವರ ತಕ್ಷಣದ ಪ್ರತಿಕ್ರಿಯೆ ‘ಪೀಚೆ ದೇಖೋ’ ಎನ್ನುವುದಾಗಿದೆ.

ಒಡಿಶಾದ ಬಾಲಸೋರ್‌ನಲ್ಲಿ ಬೃಹತ್ ಟ್ರಿಪಲ್-ರೈಲು ಘರ್ಷಣೆಯಲ್ಲಿ ಸುಮಾರು 270 ಜನರು ಸಾವನ್ನಪ್ಪಿದರು ಮತ್ತು ನೂರಾರು ಜನರು ಗಾಯಗೊಂಡರು. ಸ್ವಾತಂತ್ರ್ಯದ ನಂತರದ ಅತ್ಯಂತ ಮಾರಕ ರೈಲು ಅಪಘಾತಗಳಲ್ಲಿ ಇದು ಒಂದಾಗಿದೆ. ಸಿಗ್ನಲಿಂಗ್ ಮಿಸ್ಟೇಕ್‌ನಿಂದ ಈ ರೈಲು ಅಪಘಾತ ಸಂಭವಿಸಿದೆ.

ಅಮೆರಿಕದ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅಲ್ಲಿನ ಜಾವಿಟ್ಸ್ ಸೆಂಟರ್‌ನಲ್ಲಿ ಭಾರತೀಯ-ಅಮೆರಿಕನರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಒಡಿಶಾ ರೈಲು ದುರಂತದಲ್ಲಿ ಸಾವಿಗೀಡಾದವರಿಗೆ ಒಂದು ನಿಮಿಷಗಳ ಕಾಲ ಮೌನಾಚರಣೆ ನಡೆಸಿ ಅವರ ಆತ್ಮಕ್ಕೆ ಶಾಂತಿ ಕೋರಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ: ರಾಹುಲ್ ಗಾಂಧಿ

”ನನಗಿನ್ನೂ ನೆನಪಿದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರೈಲು ಅಪಘಾತವೊಂದು ನಡೆದಿತ್ತು. ”ಆಗ ರೈಲ್ವೇ ಸಚಿವರು ಈಗ ನಡೆದ ಅಪಘಾತಕ್ಕೆ ಬ್ರಿಟಿಷರು ಕಾರಣ ಎಂದು ಹೇಳಿರಲಿಲ್ಲ. ಇದರ ಸಂಪೂರ್ಣ ಹೊಣೆ ನನ್ನದು ಎಂದು ಒಪ್ಪಿಕೊಂಡು ರಾಜೀನಾಮೆ ನೀಡುತ್ತೇನೆ” ಎಂದಿದ್ದರು. ಆದರೆ ಇತ್ತೀಚೆಗೆ ಭಾರತದಲ್ಲಿ ತಪ್ಪುಗಳು ನಡೆದರೂ ಅದನ್ನು ಒಪ್ಪಿಕೊಳ್ಳುವ ಮನಸ್ಥಿತಿಯಿಲ್ಲ ಎಂದು ಪರೋಕ್ಷವಾಗಿ ಬಿಜೆಪಿ ಕುರಿತು ಟೀಕಿಸಿದ್ದಾರೆ.

‘ಮೋದಿ ಹಿಂಬದಿಯ ಕನ್ನಡಿ ನೋಡಿಕೊಂಡು ಕಾರು ಓಡಿಸುತ್ತಾರೆ’

”ಈಗ ಯೋಚಿಸಿ. ನೀವೆಲ್ಲರೂ ನಿಮ್ಮ ಕಾರುಗಳನ್ನು ಚಲಾಯಿಸಿಕೊಂಡು ಇಲ್ಲಿಗೆ ಬಂದಿದ್ದೀರಿ. ನೀವು ಕೇವಲ ನಿಮ್ಮ ಹಿಂಬದಿಯ ಕನ್ನಡಿ ನೋಡುತ್ತಿದ್ದರೆ ಊಹಿಸಿ. ನಿಮ್ಮ ಕಾರನ್ನು ನೀವು ಹೇಗೆ ಓಡಿಸಬಹುದೇ? ನಿಮಗೆ ಒಂದರ ನಂತರ ಒಂದರಂತೆ ಅಪಘಾತಗಳು ಸಂಭವಿಸುತ್ತವೆ. ಇದು ಸಧ್ಯದ ಭಾರತದ ವಿದ್ಯಮಾನವಾಗಿದೆ” ಎಂದರು.

”ಅವರು (ಪ್ರಧಾನಿ ಮೋದಿ) ಭಾರತವೆಂಬ ಕಾರನ್ನು ಹಿಂಬದಿ ಕನ್ನಡಿ ನೋಡಿಕೊಂಡು ಓಡಿಸುತ್ತಿದ್ದಾರೆ. ಕಾರು ಅಪಘಾತಗೊಂಡು ನಿಂತಾಗ ಅದು ಏಕೆ ಮುಂದೆ ಸಾಗುತ್ತಿಲ್ಲ ಎಂಬುವುದರ ಬಗ್ಗೆ ಅವರಿಗೆ ಅರಿವಿಲ್ಲ. ಪ್ರಧಾನಿಯಿಂದ ಹಿಡಿದು ಬಿಜೆಪಿಯ ಯಾರೊಬ್ಬರು ಭವಿಷ್ಯದ ಬಗ್ಗೆ ಮಾತನಾಡುವುದಿಲ್ಲ. ಹಿಂದೆ ಆಗಿ ಹೋಗಿರುವುದರ ಬಗ್ಗೆ ಮಾತ್ರ ಮಾತನಾಡುತ್ತಾರೆ. ಭವಿಷ್ಯದ ಬಗ್ಗೆ ಯೋಚಿಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್ ಅಸಮರ್ಥವಾಗಿವೆ. ಅವರು ಯಾವಾಗಲೂ ಹಿಂದಿನ ಬಗ್ಗೆ ಮಾತನಾಡುತ್ತಾರೆ ಮತ್ತು ಅವರು ಯಾವಾಗಲೂ ಹಿಂದಿನದಕ್ಕಾಗಿ ಯಾರನ್ನಾದರೂ ದೂಷಿಸುತ್ತಾರೆ” ಎಂದು ರಾಹುಲ್ ಗಾಂಧಿ ಹೇಳಿದರು.

”ಭಾರತದಲ್ಲಿ ಹಿಂದಿನಿಂದಲೂ ಕಾಂಗ್ರೆಸ್ ಮತ್ತು ಬಿಜೆಪಿ/ ಆರ್‌ಎಸ್‌ಎಸ್‌ ಪ್ರತಿಪಾದಿಸುವ ಸಿದ್ದಾಂತಗಳ ನಡುವೆ ಹೋರಾಟ ನಡೆಯುತ್ತಿದೆ. ಒಂದು ಕಡೆ ಮಹಾತ್ಮಗಾಂಧಿ ಮತ್ತು ಇನ್ನೊಂದು ಕಡೆಯಲ್ಲಿ ನಾಥರಾಂ ಗೋಡೆ ಇದ್ದಾರೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...