Homeಮುಖಪುಟಪ್ರಧಾನಿ ಮೋದಿ ಭಾರತವೆಂಬ ಕಾರನ್ನು ಹಿಂಬದಿ ಕನ್ನಡಿ ನೋಡಿಕೊಂಡು ಓಡಿಸುತ್ತಿದ್ದಾರೆ: ರಾಹುಲ್ ಟೀಕೆ

ಪ್ರಧಾನಿ ಮೋದಿ ಭಾರತವೆಂಬ ಕಾರನ್ನು ಹಿಂಬದಿ ಕನ್ನಡಿ ನೋಡಿಕೊಂಡು ಓಡಿಸುತ್ತಿದ್ದಾರೆ: ರಾಹುಲ್ ಟೀಕೆ

- Advertisement -
- Advertisement -

”ರೈಲು ಅಪಘಾತ ಏಕೆ ಸಂಭವಿಸಿತು ಎಂದು ನೀವು ಭಾರತ ಸರ್ಕಾರವನ್ನು ಕೇಳಿದರೆ, ಅವರು 50 ವರ್ಷಗಳ ಹಿಂದೆ ಇದನ್ನು ಕಾಂಗ್ರೆಸ್ ಮಾಡಿತು” ಎಂದು ಹೇಳುತ್ತಾರೆ. ಅವರನ್ನು ನೀವು ಏನೇ ಕೇಳಿದರು ಅವರ ತಕ್ಷಣದ ಪ್ರತಿಕ್ರಿಯೆ ‘ಪೀಚೆ ದೇಖೋ’ ಎನ್ನುವುದಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ನ್ಯೂಯಾರ್ಕ್‌ನಲ್ಲಿ ಭಾರತೀಯ ವಲಸಿಗರ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್, ”ಕಾಂಗ್ರೆಸ್ ತನ್ನ ಆಳ್ವಿಕೆಯಲ್ಲಿ ಸಂಭವಿಸಿದ ರೈಲು ಅಪಘಾತಗಳಿಗೆ ಬ್ರಿಟಿಷರನ್ನು ದೂಷಿಸಲಿಲ್ಲ ಆದರೆ ಸಚಿವರು ಜವಾಬ್ದಾರಿಯನ್ನು ವಹಿಸಿಕೊಂಡರು. ಆದರೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ಭವಿಷ್ಯವನ್ನು ನೋಡಲು ಅಸಮರ್ಥವಾಗಿವೆ, ನೀವು ಏನು ಕೇಳಿದರೂ ಅವರು ಹಿಂದೆ ನೋಡುತ್ತಾರೆ, ರೈಲು ಅಪಘಾತ ಏಕೆ ಸಂಭವಿಸಿತು ಎಂದು ನೀವು ಸರ್ಕಾರವನ್ನು ಕೇಳಿದರೆ, ಅವರು 50 ವರ್ಷಗಳ ಹಿಂದೆ ಇದನ್ನು ಕಾಂಗ್ರೆಸ್ ಮಾಡಿತು ಎಂದು ಹೇಳುತ್ತಾರೆ.

ಎನ್‌ಸಿಆರ್‌ಟಿ 10ನೇ ತರಗತಿ ಪಠ್ಯಪುಸ್ತಕದಲ್ಲಿ ನೀವು ಏಕೆ ಆವರ್ತಕ ಕೋಷ್ಟಕ ಮತ್ತು ವಿಕಸನ ಪಠ್ಯ ತಗೆದು ಹಾಕಿದೀರಿ ೆಂದು ಕೇಳಿದರೆ, ಅವರು 60 ವರ್ಷಗಳ ಹಿಂದೆ ಕಾಂಗ್ರೆಸ್ ಮಾಡಿರುವುದನ್ನು ನೋಡಿ ಎಂದು ಅವರ ತಕ್ಷಣದ ಪ್ರತಿಕ್ರಿಯೆ ‘ಪೀಚೆ ದೇಖೋ’ ಎನ್ನುವುದಾಗಿದೆ.

ಒಡಿಶಾದ ಬಾಲಸೋರ್‌ನಲ್ಲಿ ಬೃಹತ್ ಟ್ರಿಪಲ್-ರೈಲು ಘರ್ಷಣೆಯಲ್ಲಿ ಸುಮಾರು 270 ಜನರು ಸಾವನ್ನಪ್ಪಿದರು ಮತ್ತು ನೂರಾರು ಜನರು ಗಾಯಗೊಂಡರು. ಸ್ವಾತಂತ್ರ್ಯದ ನಂತರದ ಅತ್ಯಂತ ಮಾರಕ ರೈಲು ಅಪಘಾತಗಳಲ್ಲಿ ಇದು ಒಂದಾಗಿದೆ. ಸಿಗ್ನಲಿಂಗ್ ಮಿಸ್ಟೇಕ್‌ನಿಂದ ಈ ರೈಲು ಅಪಘಾತ ಸಂಭವಿಸಿದೆ.

ಅಮೆರಿಕದ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅಲ್ಲಿನ ಜಾವಿಟ್ಸ್ ಸೆಂಟರ್‌ನಲ್ಲಿ ಭಾರತೀಯ-ಅಮೆರಿಕನರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಒಡಿಶಾ ರೈಲು ದುರಂತದಲ್ಲಿ ಸಾವಿಗೀಡಾದವರಿಗೆ ಒಂದು ನಿಮಿಷಗಳ ಕಾಲ ಮೌನಾಚರಣೆ ನಡೆಸಿ ಅವರ ಆತ್ಮಕ್ಕೆ ಶಾಂತಿ ಕೋರಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ: ರಾಹುಲ್ ಗಾಂಧಿ

”ನನಗಿನ್ನೂ ನೆನಪಿದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರೈಲು ಅಪಘಾತವೊಂದು ನಡೆದಿತ್ತು. ”ಆಗ ರೈಲ್ವೇ ಸಚಿವರು ಈಗ ನಡೆದ ಅಪಘಾತಕ್ಕೆ ಬ್ರಿಟಿಷರು ಕಾರಣ ಎಂದು ಹೇಳಿರಲಿಲ್ಲ. ಇದರ ಸಂಪೂರ್ಣ ಹೊಣೆ ನನ್ನದು ಎಂದು ಒಪ್ಪಿಕೊಂಡು ರಾಜೀನಾಮೆ ನೀಡುತ್ತೇನೆ” ಎಂದಿದ್ದರು. ಆದರೆ ಇತ್ತೀಚೆಗೆ ಭಾರತದಲ್ಲಿ ತಪ್ಪುಗಳು ನಡೆದರೂ ಅದನ್ನು ಒಪ್ಪಿಕೊಳ್ಳುವ ಮನಸ್ಥಿತಿಯಿಲ್ಲ ಎಂದು ಪರೋಕ್ಷವಾಗಿ ಬಿಜೆಪಿ ಕುರಿತು ಟೀಕಿಸಿದ್ದಾರೆ.

‘ಮೋದಿ ಹಿಂಬದಿಯ ಕನ್ನಡಿ ನೋಡಿಕೊಂಡು ಕಾರು ಓಡಿಸುತ್ತಾರೆ’

”ಈಗ ಯೋಚಿಸಿ. ನೀವೆಲ್ಲರೂ ನಿಮ್ಮ ಕಾರುಗಳನ್ನು ಚಲಾಯಿಸಿಕೊಂಡು ಇಲ್ಲಿಗೆ ಬಂದಿದ್ದೀರಿ. ನೀವು ಕೇವಲ ನಿಮ್ಮ ಹಿಂಬದಿಯ ಕನ್ನಡಿ ನೋಡುತ್ತಿದ್ದರೆ ಊಹಿಸಿ. ನಿಮ್ಮ ಕಾರನ್ನು ನೀವು ಹೇಗೆ ಓಡಿಸಬಹುದೇ? ನಿಮಗೆ ಒಂದರ ನಂತರ ಒಂದರಂತೆ ಅಪಘಾತಗಳು ಸಂಭವಿಸುತ್ತವೆ. ಇದು ಸಧ್ಯದ ಭಾರತದ ವಿದ್ಯಮಾನವಾಗಿದೆ” ಎಂದರು.

”ಅವರು (ಪ್ರಧಾನಿ ಮೋದಿ) ಭಾರತವೆಂಬ ಕಾರನ್ನು ಹಿಂಬದಿ ಕನ್ನಡಿ ನೋಡಿಕೊಂಡು ಓಡಿಸುತ್ತಿದ್ದಾರೆ. ಕಾರು ಅಪಘಾತಗೊಂಡು ನಿಂತಾಗ ಅದು ಏಕೆ ಮುಂದೆ ಸಾಗುತ್ತಿಲ್ಲ ಎಂಬುವುದರ ಬಗ್ಗೆ ಅವರಿಗೆ ಅರಿವಿಲ್ಲ. ಪ್ರಧಾನಿಯಿಂದ ಹಿಡಿದು ಬಿಜೆಪಿಯ ಯಾರೊಬ್ಬರು ಭವಿಷ್ಯದ ಬಗ್ಗೆ ಮಾತನಾಡುವುದಿಲ್ಲ. ಹಿಂದೆ ಆಗಿ ಹೋಗಿರುವುದರ ಬಗ್ಗೆ ಮಾತ್ರ ಮಾತನಾಡುತ್ತಾರೆ. ಭವಿಷ್ಯದ ಬಗ್ಗೆ ಯೋಚಿಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್ ಅಸಮರ್ಥವಾಗಿವೆ. ಅವರು ಯಾವಾಗಲೂ ಹಿಂದಿನ ಬಗ್ಗೆ ಮಾತನಾಡುತ್ತಾರೆ ಮತ್ತು ಅವರು ಯಾವಾಗಲೂ ಹಿಂದಿನದಕ್ಕಾಗಿ ಯಾರನ್ನಾದರೂ ದೂಷಿಸುತ್ತಾರೆ” ಎಂದು ರಾಹುಲ್ ಗಾಂಧಿ ಹೇಳಿದರು.

”ಭಾರತದಲ್ಲಿ ಹಿಂದಿನಿಂದಲೂ ಕಾಂಗ್ರೆಸ್ ಮತ್ತು ಬಿಜೆಪಿ/ ಆರ್‌ಎಸ್‌ಎಸ್‌ ಪ್ರತಿಪಾದಿಸುವ ಸಿದ್ದಾಂತಗಳ ನಡುವೆ ಹೋರಾಟ ನಡೆಯುತ್ತಿದೆ. ಒಂದು ಕಡೆ ಮಹಾತ್ಮಗಾಂಧಿ ಮತ್ತು ಇನ್ನೊಂದು ಕಡೆಯಲ್ಲಿ ನಾಥರಾಂ ಗೋಡೆ ಇದ್ದಾರೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...