Homeಮುಖಪುಟಪ್ರಧಾನಿ ಮೋದಿ ಭಾರತವೆಂಬ ಕಾರನ್ನು ಹಿಂಬದಿ ಕನ್ನಡಿ ನೋಡಿಕೊಂಡು ಓಡಿಸುತ್ತಿದ್ದಾರೆ: ರಾಹುಲ್ ಟೀಕೆ

ಪ್ರಧಾನಿ ಮೋದಿ ಭಾರತವೆಂಬ ಕಾರನ್ನು ಹಿಂಬದಿ ಕನ್ನಡಿ ನೋಡಿಕೊಂಡು ಓಡಿಸುತ್ತಿದ್ದಾರೆ: ರಾಹುಲ್ ಟೀಕೆ

- Advertisement -
- Advertisement -

”ರೈಲು ಅಪಘಾತ ಏಕೆ ಸಂಭವಿಸಿತು ಎಂದು ನೀವು ಭಾರತ ಸರ್ಕಾರವನ್ನು ಕೇಳಿದರೆ, ಅವರು 50 ವರ್ಷಗಳ ಹಿಂದೆ ಇದನ್ನು ಕಾಂಗ್ರೆಸ್ ಮಾಡಿತು” ಎಂದು ಹೇಳುತ್ತಾರೆ. ಅವರನ್ನು ನೀವು ಏನೇ ಕೇಳಿದರು ಅವರ ತಕ್ಷಣದ ಪ್ರತಿಕ್ರಿಯೆ ‘ಪೀಚೆ ದೇಖೋ’ ಎನ್ನುವುದಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ನ್ಯೂಯಾರ್ಕ್‌ನಲ್ಲಿ ಭಾರತೀಯ ವಲಸಿಗರ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್, ”ಕಾಂಗ್ರೆಸ್ ತನ್ನ ಆಳ್ವಿಕೆಯಲ್ಲಿ ಸಂಭವಿಸಿದ ರೈಲು ಅಪಘಾತಗಳಿಗೆ ಬ್ರಿಟಿಷರನ್ನು ದೂಷಿಸಲಿಲ್ಲ ಆದರೆ ಸಚಿವರು ಜವಾಬ್ದಾರಿಯನ್ನು ವಹಿಸಿಕೊಂಡರು. ಆದರೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ಭವಿಷ್ಯವನ್ನು ನೋಡಲು ಅಸಮರ್ಥವಾಗಿವೆ, ನೀವು ಏನು ಕೇಳಿದರೂ ಅವರು ಹಿಂದೆ ನೋಡುತ್ತಾರೆ, ರೈಲು ಅಪಘಾತ ಏಕೆ ಸಂಭವಿಸಿತು ಎಂದು ನೀವು ಸರ್ಕಾರವನ್ನು ಕೇಳಿದರೆ, ಅವರು 50 ವರ್ಷಗಳ ಹಿಂದೆ ಇದನ್ನು ಕಾಂಗ್ರೆಸ್ ಮಾಡಿತು ಎಂದು ಹೇಳುತ್ತಾರೆ.

ಎನ್‌ಸಿಆರ್‌ಟಿ 10ನೇ ತರಗತಿ ಪಠ್ಯಪುಸ್ತಕದಲ್ಲಿ ನೀವು ಏಕೆ ಆವರ್ತಕ ಕೋಷ್ಟಕ ಮತ್ತು ವಿಕಸನ ಪಠ್ಯ ತಗೆದು ಹಾಕಿದೀರಿ ೆಂದು ಕೇಳಿದರೆ, ಅವರು 60 ವರ್ಷಗಳ ಹಿಂದೆ ಕಾಂಗ್ರೆಸ್ ಮಾಡಿರುವುದನ್ನು ನೋಡಿ ಎಂದು ಅವರ ತಕ್ಷಣದ ಪ್ರತಿಕ್ರಿಯೆ ‘ಪೀಚೆ ದೇಖೋ’ ಎನ್ನುವುದಾಗಿದೆ.

ಒಡಿಶಾದ ಬಾಲಸೋರ್‌ನಲ್ಲಿ ಬೃಹತ್ ಟ್ರಿಪಲ್-ರೈಲು ಘರ್ಷಣೆಯಲ್ಲಿ ಸುಮಾರು 270 ಜನರು ಸಾವನ್ನಪ್ಪಿದರು ಮತ್ತು ನೂರಾರು ಜನರು ಗಾಯಗೊಂಡರು. ಸ್ವಾತಂತ್ರ್ಯದ ನಂತರದ ಅತ್ಯಂತ ಮಾರಕ ರೈಲು ಅಪಘಾತಗಳಲ್ಲಿ ಇದು ಒಂದಾಗಿದೆ. ಸಿಗ್ನಲಿಂಗ್ ಮಿಸ್ಟೇಕ್‌ನಿಂದ ಈ ರೈಲು ಅಪಘಾತ ಸಂಭವಿಸಿದೆ.

ಅಮೆರಿಕದ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅಲ್ಲಿನ ಜಾವಿಟ್ಸ್ ಸೆಂಟರ್‌ನಲ್ಲಿ ಭಾರತೀಯ-ಅಮೆರಿಕನರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಒಡಿಶಾ ರೈಲು ದುರಂತದಲ್ಲಿ ಸಾವಿಗೀಡಾದವರಿಗೆ ಒಂದು ನಿಮಿಷಗಳ ಕಾಲ ಮೌನಾಚರಣೆ ನಡೆಸಿ ಅವರ ಆತ್ಮಕ್ಕೆ ಶಾಂತಿ ಕೋರಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ: ರಾಹುಲ್ ಗಾಂಧಿ

”ನನಗಿನ್ನೂ ನೆನಪಿದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರೈಲು ಅಪಘಾತವೊಂದು ನಡೆದಿತ್ತು. ”ಆಗ ರೈಲ್ವೇ ಸಚಿವರು ಈಗ ನಡೆದ ಅಪಘಾತಕ್ಕೆ ಬ್ರಿಟಿಷರು ಕಾರಣ ಎಂದು ಹೇಳಿರಲಿಲ್ಲ. ಇದರ ಸಂಪೂರ್ಣ ಹೊಣೆ ನನ್ನದು ಎಂದು ಒಪ್ಪಿಕೊಂಡು ರಾಜೀನಾಮೆ ನೀಡುತ್ತೇನೆ” ಎಂದಿದ್ದರು. ಆದರೆ ಇತ್ತೀಚೆಗೆ ಭಾರತದಲ್ಲಿ ತಪ್ಪುಗಳು ನಡೆದರೂ ಅದನ್ನು ಒಪ್ಪಿಕೊಳ್ಳುವ ಮನಸ್ಥಿತಿಯಿಲ್ಲ ಎಂದು ಪರೋಕ್ಷವಾಗಿ ಬಿಜೆಪಿ ಕುರಿತು ಟೀಕಿಸಿದ್ದಾರೆ.

‘ಮೋದಿ ಹಿಂಬದಿಯ ಕನ್ನಡಿ ನೋಡಿಕೊಂಡು ಕಾರು ಓಡಿಸುತ್ತಾರೆ’

”ಈಗ ಯೋಚಿಸಿ. ನೀವೆಲ್ಲರೂ ನಿಮ್ಮ ಕಾರುಗಳನ್ನು ಚಲಾಯಿಸಿಕೊಂಡು ಇಲ್ಲಿಗೆ ಬಂದಿದ್ದೀರಿ. ನೀವು ಕೇವಲ ನಿಮ್ಮ ಹಿಂಬದಿಯ ಕನ್ನಡಿ ನೋಡುತ್ತಿದ್ದರೆ ಊಹಿಸಿ. ನಿಮ್ಮ ಕಾರನ್ನು ನೀವು ಹೇಗೆ ಓಡಿಸಬಹುದೇ? ನಿಮಗೆ ಒಂದರ ನಂತರ ಒಂದರಂತೆ ಅಪಘಾತಗಳು ಸಂಭವಿಸುತ್ತವೆ. ಇದು ಸಧ್ಯದ ಭಾರತದ ವಿದ್ಯಮಾನವಾಗಿದೆ” ಎಂದರು.

”ಅವರು (ಪ್ರಧಾನಿ ಮೋದಿ) ಭಾರತವೆಂಬ ಕಾರನ್ನು ಹಿಂಬದಿ ಕನ್ನಡಿ ನೋಡಿಕೊಂಡು ಓಡಿಸುತ್ತಿದ್ದಾರೆ. ಕಾರು ಅಪಘಾತಗೊಂಡು ನಿಂತಾಗ ಅದು ಏಕೆ ಮುಂದೆ ಸಾಗುತ್ತಿಲ್ಲ ಎಂಬುವುದರ ಬಗ್ಗೆ ಅವರಿಗೆ ಅರಿವಿಲ್ಲ. ಪ್ರಧಾನಿಯಿಂದ ಹಿಡಿದು ಬಿಜೆಪಿಯ ಯಾರೊಬ್ಬರು ಭವಿಷ್ಯದ ಬಗ್ಗೆ ಮಾತನಾಡುವುದಿಲ್ಲ. ಹಿಂದೆ ಆಗಿ ಹೋಗಿರುವುದರ ಬಗ್ಗೆ ಮಾತ್ರ ಮಾತನಾಡುತ್ತಾರೆ. ಭವಿಷ್ಯದ ಬಗ್ಗೆ ಯೋಚಿಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್ ಅಸಮರ್ಥವಾಗಿವೆ. ಅವರು ಯಾವಾಗಲೂ ಹಿಂದಿನ ಬಗ್ಗೆ ಮಾತನಾಡುತ್ತಾರೆ ಮತ್ತು ಅವರು ಯಾವಾಗಲೂ ಹಿಂದಿನದಕ್ಕಾಗಿ ಯಾರನ್ನಾದರೂ ದೂಷಿಸುತ್ತಾರೆ” ಎಂದು ರಾಹುಲ್ ಗಾಂಧಿ ಹೇಳಿದರು.

”ಭಾರತದಲ್ಲಿ ಹಿಂದಿನಿಂದಲೂ ಕಾಂಗ್ರೆಸ್ ಮತ್ತು ಬಿಜೆಪಿ/ ಆರ್‌ಎಸ್‌ಎಸ್‌ ಪ್ರತಿಪಾದಿಸುವ ಸಿದ್ದಾಂತಗಳ ನಡುವೆ ಹೋರಾಟ ನಡೆಯುತ್ತಿದೆ. ಒಂದು ಕಡೆ ಮಹಾತ್ಮಗಾಂಧಿ ಮತ್ತು ಇನ್ನೊಂದು ಕಡೆಯಲ್ಲಿ ನಾಥರಾಂ ಗೋಡೆ ಇದ್ದಾರೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...