Homeಮುಖಪುಟಪ್ರಧಾನಿ ಮೋದಿ ಭಾರತವೆಂಬ ಕಾರನ್ನು ಹಿಂಬದಿ ಕನ್ನಡಿ ನೋಡಿಕೊಂಡು ಓಡಿಸುತ್ತಿದ್ದಾರೆ: ರಾಹುಲ್ ಟೀಕೆ

ಪ್ರಧಾನಿ ಮೋದಿ ಭಾರತವೆಂಬ ಕಾರನ್ನು ಹಿಂಬದಿ ಕನ್ನಡಿ ನೋಡಿಕೊಂಡು ಓಡಿಸುತ್ತಿದ್ದಾರೆ: ರಾಹುಲ್ ಟೀಕೆ

- Advertisement -
- Advertisement -

”ರೈಲು ಅಪಘಾತ ಏಕೆ ಸಂಭವಿಸಿತು ಎಂದು ನೀವು ಭಾರತ ಸರ್ಕಾರವನ್ನು ಕೇಳಿದರೆ, ಅವರು 50 ವರ್ಷಗಳ ಹಿಂದೆ ಇದನ್ನು ಕಾಂಗ್ರೆಸ್ ಮಾಡಿತು” ಎಂದು ಹೇಳುತ್ತಾರೆ. ಅವರನ್ನು ನೀವು ಏನೇ ಕೇಳಿದರು ಅವರ ತಕ್ಷಣದ ಪ್ರತಿಕ್ರಿಯೆ ‘ಪೀಚೆ ದೇಖೋ’ ಎನ್ನುವುದಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ನ್ಯೂಯಾರ್ಕ್‌ನಲ್ಲಿ ಭಾರತೀಯ ವಲಸಿಗರ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್, ”ಕಾಂಗ್ರೆಸ್ ತನ್ನ ಆಳ್ವಿಕೆಯಲ್ಲಿ ಸಂಭವಿಸಿದ ರೈಲು ಅಪಘಾತಗಳಿಗೆ ಬ್ರಿಟಿಷರನ್ನು ದೂಷಿಸಲಿಲ್ಲ ಆದರೆ ಸಚಿವರು ಜವಾಬ್ದಾರಿಯನ್ನು ವಹಿಸಿಕೊಂಡರು. ಆದರೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ಭವಿಷ್ಯವನ್ನು ನೋಡಲು ಅಸಮರ್ಥವಾಗಿವೆ, ನೀವು ಏನು ಕೇಳಿದರೂ ಅವರು ಹಿಂದೆ ನೋಡುತ್ತಾರೆ, ರೈಲು ಅಪಘಾತ ಏಕೆ ಸಂಭವಿಸಿತು ಎಂದು ನೀವು ಸರ್ಕಾರವನ್ನು ಕೇಳಿದರೆ, ಅವರು 50 ವರ್ಷಗಳ ಹಿಂದೆ ಇದನ್ನು ಕಾಂಗ್ರೆಸ್ ಮಾಡಿತು ಎಂದು ಹೇಳುತ್ತಾರೆ.

ಎನ್‌ಸಿಆರ್‌ಟಿ 10ನೇ ತರಗತಿ ಪಠ್ಯಪುಸ್ತಕದಲ್ಲಿ ನೀವು ಏಕೆ ಆವರ್ತಕ ಕೋಷ್ಟಕ ಮತ್ತು ವಿಕಸನ ಪಠ್ಯ ತಗೆದು ಹಾಕಿದೀರಿ ೆಂದು ಕೇಳಿದರೆ, ಅವರು 60 ವರ್ಷಗಳ ಹಿಂದೆ ಕಾಂಗ್ರೆಸ್ ಮಾಡಿರುವುದನ್ನು ನೋಡಿ ಎಂದು ಅವರ ತಕ್ಷಣದ ಪ್ರತಿಕ್ರಿಯೆ ‘ಪೀಚೆ ದೇಖೋ’ ಎನ್ನುವುದಾಗಿದೆ.

ಒಡಿಶಾದ ಬಾಲಸೋರ್‌ನಲ್ಲಿ ಬೃಹತ್ ಟ್ರಿಪಲ್-ರೈಲು ಘರ್ಷಣೆಯಲ್ಲಿ ಸುಮಾರು 270 ಜನರು ಸಾವನ್ನಪ್ಪಿದರು ಮತ್ತು ನೂರಾರು ಜನರು ಗಾಯಗೊಂಡರು. ಸ್ವಾತಂತ್ರ್ಯದ ನಂತರದ ಅತ್ಯಂತ ಮಾರಕ ರೈಲು ಅಪಘಾತಗಳಲ್ಲಿ ಇದು ಒಂದಾಗಿದೆ. ಸಿಗ್ನಲಿಂಗ್ ಮಿಸ್ಟೇಕ್‌ನಿಂದ ಈ ರೈಲು ಅಪಘಾತ ಸಂಭವಿಸಿದೆ.

ಅಮೆರಿಕದ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅಲ್ಲಿನ ಜಾವಿಟ್ಸ್ ಸೆಂಟರ್‌ನಲ್ಲಿ ಭಾರತೀಯ-ಅಮೆರಿಕನರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಒಡಿಶಾ ರೈಲು ದುರಂತದಲ್ಲಿ ಸಾವಿಗೀಡಾದವರಿಗೆ ಒಂದು ನಿಮಿಷಗಳ ಕಾಲ ಮೌನಾಚರಣೆ ನಡೆಸಿ ಅವರ ಆತ್ಮಕ್ಕೆ ಶಾಂತಿ ಕೋರಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ: ರಾಹುಲ್ ಗಾಂಧಿ

”ನನಗಿನ್ನೂ ನೆನಪಿದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರೈಲು ಅಪಘಾತವೊಂದು ನಡೆದಿತ್ತು. ”ಆಗ ರೈಲ್ವೇ ಸಚಿವರು ಈಗ ನಡೆದ ಅಪಘಾತಕ್ಕೆ ಬ್ರಿಟಿಷರು ಕಾರಣ ಎಂದು ಹೇಳಿರಲಿಲ್ಲ. ಇದರ ಸಂಪೂರ್ಣ ಹೊಣೆ ನನ್ನದು ಎಂದು ಒಪ್ಪಿಕೊಂಡು ರಾಜೀನಾಮೆ ನೀಡುತ್ತೇನೆ” ಎಂದಿದ್ದರು. ಆದರೆ ಇತ್ತೀಚೆಗೆ ಭಾರತದಲ್ಲಿ ತಪ್ಪುಗಳು ನಡೆದರೂ ಅದನ್ನು ಒಪ್ಪಿಕೊಳ್ಳುವ ಮನಸ್ಥಿತಿಯಿಲ್ಲ ಎಂದು ಪರೋಕ್ಷವಾಗಿ ಬಿಜೆಪಿ ಕುರಿತು ಟೀಕಿಸಿದ್ದಾರೆ.

‘ಮೋದಿ ಹಿಂಬದಿಯ ಕನ್ನಡಿ ನೋಡಿಕೊಂಡು ಕಾರು ಓಡಿಸುತ್ತಾರೆ’

”ಈಗ ಯೋಚಿಸಿ. ನೀವೆಲ್ಲರೂ ನಿಮ್ಮ ಕಾರುಗಳನ್ನು ಚಲಾಯಿಸಿಕೊಂಡು ಇಲ್ಲಿಗೆ ಬಂದಿದ್ದೀರಿ. ನೀವು ಕೇವಲ ನಿಮ್ಮ ಹಿಂಬದಿಯ ಕನ್ನಡಿ ನೋಡುತ್ತಿದ್ದರೆ ಊಹಿಸಿ. ನಿಮ್ಮ ಕಾರನ್ನು ನೀವು ಹೇಗೆ ಓಡಿಸಬಹುದೇ? ನಿಮಗೆ ಒಂದರ ನಂತರ ಒಂದರಂತೆ ಅಪಘಾತಗಳು ಸಂಭವಿಸುತ್ತವೆ. ಇದು ಸಧ್ಯದ ಭಾರತದ ವಿದ್ಯಮಾನವಾಗಿದೆ” ಎಂದರು.

”ಅವರು (ಪ್ರಧಾನಿ ಮೋದಿ) ಭಾರತವೆಂಬ ಕಾರನ್ನು ಹಿಂಬದಿ ಕನ್ನಡಿ ನೋಡಿಕೊಂಡು ಓಡಿಸುತ್ತಿದ್ದಾರೆ. ಕಾರು ಅಪಘಾತಗೊಂಡು ನಿಂತಾಗ ಅದು ಏಕೆ ಮುಂದೆ ಸಾಗುತ್ತಿಲ್ಲ ಎಂಬುವುದರ ಬಗ್ಗೆ ಅವರಿಗೆ ಅರಿವಿಲ್ಲ. ಪ್ರಧಾನಿಯಿಂದ ಹಿಡಿದು ಬಿಜೆಪಿಯ ಯಾರೊಬ್ಬರು ಭವಿಷ್ಯದ ಬಗ್ಗೆ ಮಾತನಾಡುವುದಿಲ್ಲ. ಹಿಂದೆ ಆಗಿ ಹೋಗಿರುವುದರ ಬಗ್ಗೆ ಮಾತ್ರ ಮಾತನಾಡುತ್ತಾರೆ. ಭವಿಷ್ಯದ ಬಗ್ಗೆ ಯೋಚಿಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್ ಅಸಮರ್ಥವಾಗಿವೆ. ಅವರು ಯಾವಾಗಲೂ ಹಿಂದಿನ ಬಗ್ಗೆ ಮಾತನಾಡುತ್ತಾರೆ ಮತ್ತು ಅವರು ಯಾವಾಗಲೂ ಹಿಂದಿನದಕ್ಕಾಗಿ ಯಾರನ್ನಾದರೂ ದೂಷಿಸುತ್ತಾರೆ” ಎಂದು ರಾಹುಲ್ ಗಾಂಧಿ ಹೇಳಿದರು.

”ಭಾರತದಲ್ಲಿ ಹಿಂದಿನಿಂದಲೂ ಕಾಂಗ್ರೆಸ್ ಮತ್ತು ಬಿಜೆಪಿ/ ಆರ್‌ಎಸ್‌ಎಸ್‌ ಪ್ರತಿಪಾದಿಸುವ ಸಿದ್ದಾಂತಗಳ ನಡುವೆ ಹೋರಾಟ ನಡೆಯುತ್ತಿದೆ. ಒಂದು ಕಡೆ ಮಹಾತ್ಮಗಾಂಧಿ ಮತ್ತು ಇನ್ನೊಂದು ಕಡೆಯಲ್ಲಿ ನಾಥರಾಂ ಗೋಡೆ ಇದ್ದಾರೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...