Homeಮುಖಪುಟಪ್ರಧಾನಿ ಮೋದಿ ಭಾರತವೆಂಬ ಕಾರನ್ನು ಹಿಂಬದಿ ಕನ್ನಡಿ ನೋಡಿಕೊಂಡು ಓಡಿಸುತ್ತಿದ್ದಾರೆ: ರಾಹುಲ್ ಟೀಕೆ

ಪ್ರಧಾನಿ ಮೋದಿ ಭಾರತವೆಂಬ ಕಾರನ್ನು ಹಿಂಬದಿ ಕನ್ನಡಿ ನೋಡಿಕೊಂಡು ಓಡಿಸುತ್ತಿದ್ದಾರೆ: ರಾಹುಲ್ ಟೀಕೆ

- Advertisement -
- Advertisement -

”ರೈಲು ಅಪಘಾತ ಏಕೆ ಸಂಭವಿಸಿತು ಎಂದು ನೀವು ಭಾರತ ಸರ್ಕಾರವನ್ನು ಕೇಳಿದರೆ, ಅವರು 50 ವರ್ಷಗಳ ಹಿಂದೆ ಇದನ್ನು ಕಾಂಗ್ರೆಸ್ ಮಾಡಿತು” ಎಂದು ಹೇಳುತ್ತಾರೆ. ಅವರನ್ನು ನೀವು ಏನೇ ಕೇಳಿದರು ಅವರ ತಕ್ಷಣದ ಪ್ರತಿಕ್ರಿಯೆ ‘ಪೀಚೆ ದೇಖೋ’ ಎನ್ನುವುದಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ನ್ಯೂಯಾರ್ಕ್‌ನಲ್ಲಿ ಭಾರತೀಯ ವಲಸಿಗರ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್, ”ಕಾಂಗ್ರೆಸ್ ತನ್ನ ಆಳ್ವಿಕೆಯಲ್ಲಿ ಸಂಭವಿಸಿದ ರೈಲು ಅಪಘಾತಗಳಿಗೆ ಬ್ರಿಟಿಷರನ್ನು ದೂಷಿಸಲಿಲ್ಲ ಆದರೆ ಸಚಿವರು ಜವಾಬ್ದಾರಿಯನ್ನು ವಹಿಸಿಕೊಂಡರು. ಆದರೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ಭವಿಷ್ಯವನ್ನು ನೋಡಲು ಅಸಮರ್ಥವಾಗಿವೆ, ನೀವು ಏನು ಕೇಳಿದರೂ ಅವರು ಹಿಂದೆ ನೋಡುತ್ತಾರೆ, ರೈಲು ಅಪಘಾತ ಏಕೆ ಸಂಭವಿಸಿತು ಎಂದು ನೀವು ಸರ್ಕಾರವನ್ನು ಕೇಳಿದರೆ, ಅವರು 50 ವರ್ಷಗಳ ಹಿಂದೆ ಇದನ್ನು ಕಾಂಗ್ರೆಸ್ ಮಾಡಿತು ಎಂದು ಹೇಳುತ್ತಾರೆ.

ಎನ್‌ಸಿಆರ್‌ಟಿ 10ನೇ ತರಗತಿ ಪಠ್ಯಪುಸ್ತಕದಲ್ಲಿ ನೀವು ಏಕೆ ಆವರ್ತಕ ಕೋಷ್ಟಕ ಮತ್ತು ವಿಕಸನ ಪಠ್ಯ ತಗೆದು ಹಾಕಿದೀರಿ ೆಂದು ಕೇಳಿದರೆ, ಅವರು 60 ವರ್ಷಗಳ ಹಿಂದೆ ಕಾಂಗ್ರೆಸ್ ಮಾಡಿರುವುದನ್ನು ನೋಡಿ ಎಂದು ಅವರ ತಕ್ಷಣದ ಪ್ರತಿಕ್ರಿಯೆ ‘ಪೀಚೆ ದೇಖೋ’ ಎನ್ನುವುದಾಗಿದೆ.

ಒಡಿಶಾದ ಬಾಲಸೋರ್‌ನಲ್ಲಿ ಬೃಹತ್ ಟ್ರಿಪಲ್-ರೈಲು ಘರ್ಷಣೆಯಲ್ಲಿ ಸುಮಾರು 270 ಜನರು ಸಾವನ್ನಪ್ಪಿದರು ಮತ್ತು ನೂರಾರು ಜನರು ಗಾಯಗೊಂಡರು. ಸ್ವಾತಂತ್ರ್ಯದ ನಂತರದ ಅತ್ಯಂತ ಮಾರಕ ರೈಲು ಅಪಘಾತಗಳಲ್ಲಿ ಇದು ಒಂದಾಗಿದೆ. ಸಿಗ್ನಲಿಂಗ್ ಮಿಸ್ಟೇಕ್‌ನಿಂದ ಈ ರೈಲು ಅಪಘಾತ ಸಂಭವಿಸಿದೆ.

ಅಮೆರಿಕದ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅಲ್ಲಿನ ಜಾವಿಟ್ಸ್ ಸೆಂಟರ್‌ನಲ್ಲಿ ಭಾರತೀಯ-ಅಮೆರಿಕನರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಒಡಿಶಾ ರೈಲು ದುರಂತದಲ್ಲಿ ಸಾವಿಗೀಡಾದವರಿಗೆ ಒಂದು ನಿಮಿಷಗಳ ಕಾಲ ಮೌನಾಚರಣೆ ನಡೆಸಿ ಅವರ ಆತ್ಮಕ್ಕೆ ಶಾಂತಿ ಕೋರಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ: ರಾಹುಲ್ ಗಾಂಧಿ

”ನನಗಿನ್ನೂ ನೆನಪಿದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರೈಲು ಅಪಘಾತವೊಂದು ನಡೆದಿತ್ತು. ”ಆಗ ರೈಲ್ವೇ ಸಚಿವರು ಈಗ ನಡೆದ ಅಪಘಾತಕ್ಕೆ ಬ್ರಿಟಿಷರು ಕಾರಣ ಎಂದು ಹೇಳಿರಲಿಲ್ಲ. ಇದರ ಸಂಪೂರ್ಣ ಹೊಣೆ ನನ್ನದು ಎಂದು ಒಪ್ಪಿಕೊಂಡು ರಾಜೀನಾಮೆ ನೀಡುತ್ತೇನೆ” ಎಂದಿದ್ದರು. ಆದರೆ ಇತ್ತೀಚೆಗೆ ಭಾರತದಲ್ಲಿ ತಪ್ಪುಗಳು ನಡೆದರೂ ಅದನ್ನು ಒಪ್ಪಿಕೊಳ್ಳುವ ಮನಸ್ಥಿತಿಯಿಲ್ಲ ಎಂದು ಪರೋಕ್ಷವಾಗಿ ಬಿಜೆಪಿ ಕುರಿತು ಟೀಕಿಸಿದ್ದಾರೆ.

‘ಮೋದಿ ಹಿಂಬದಿಯ ಕನ್ನಡಿ ನೋಡಿಕೊಂಡು ಕಾರು ಓಡಿಸುತ್ತಾರೆ’

”ಈಗ ಯೋಚಿಸಿ. ನೀವೆಲ್ಲರೂ ನಿಮ್ಮ ಕಾರುಗಳನ್ನು ಚಲಾಯಿಸಿಕೊಂಡು ಇಲ್ಲಿಗೆ ಬಂದಿದ್ದೀರಿ. ನೀವು ಕೇವಲ ನಿಮ್ಮ ಹಿಂಬದಿಯ ಕನ್ನಡಿ ನೋಡುತ್ತಿದ್ದರೆ ಊಹಿಸಿ. ನಿಮ್ಮ ಕಾರನ್ನು ನೀವು ಹೇಗೆ ಓಡಿಸಬಹುದೇ? ನಿಮಗೆ ಒಂದರ ನಂತರ ಒಂದರಂತೆ ಅಪಘಾತಗಳು ಸಂಭವಿಸುತ್ತವೆ. ಇದು ಸಧ್ಯದ ಭಾರತದ ವಿದ್ಯಮಾನವಾಗಿದೆ” ಎಂದರು.

”ಅವರು (ಪ್ರಧಾನಿ ಮೋದಿ) ಭಾರತವೆಂಬ ಕಾರನ್ನು ಹಿಂಬದಿ ಕನ್ನಡಿ ನೋಡಿಕೊಂಡು ಓಡಿಸುತ್ತಿದ್ದಾರೆ. ಕಾರು ಅಪಘಾತಗೊಂಡು ನಿಂತಾಗ ಅದು ಏಕೆ ಮುಂದೆ ಸಾಗುತ್ತಿಲ್ಲ ಎಂಬುವುದರ ಬಗ್ಗೆ ಅವರಿಗೆ ಅರಿವಿಲ್ಲ. ಪ್ರಧಾನಿಯಿಂದ ಹಿಡಿದು ಬಿಜೆಪಿಯ ಯಾರೊಬ್ಬರು ಭವಿಷ್ಯದ ಬಗ್ಗೆ ಮಾತನಾಡುವುದಿಲ್ಲ. ಹಿಂದೆ ಆಗಿ ಹೋಗಿರುವುದರ ಬಗ್ಗೆ ಮಾತ್ರ ಮಾತನಾಡುತ್ತಾರೆ. ಭವಿಷ್ಯದ ಬಗ್ಗೆ ಯೋಚಿಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್ ಅಸಮರ್ಥವಾಗಿವೆ. ಅವರು ಯಾವಾಗಲೂ ಹಿಂದಿನ ಬಗ್ಗೆ ಮಾತನಾಡುತ್ತಾರೆ ಮತ್ತು ಅವರು ಯಾವಾಗಲೂ ಹಿಂದಿನದಕ್ಕಾಗಿ ಯಾರನ್ನಾದರೂ ದೂಷಿಸುತ್ತಾರೆ” ಎಂದು ರಾಹುಲ್ ಗಾಂಧಿ ಹೇಳಿದರು.

”ಭಾರತದಲ್ಲಿ ಹಿಂದಿನಿಂದಲೂ ಕಾಂಗ್ರೆಸ್ ಮತ್ತು ಬಿಜೆಪಿ/ ಆರ್‌ಎಸ್‌ಎಸ್‌ ಪ್ರತಿಪಾದಿಸುವ ಸಿದ್ದಾಂತಗಳ ನಡುವೆ ಹೋರಾಟ ನಡೆಯುತ್ತಿದೆ. ಒಂದು ಕಡೆ ಮಹಾತ್ಮಗಾಂಧಿ ಮತ್ತು ಇನ್ನೊಂದು ಕಡೆಯಲ್ಲಿ ನಾಥರಾಂ ಗೋಡೆ ಇದ್ದಾರೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...