Homeಮುಖಪುಟಪ್ರಧಾನಿ ಮೋದಿ ಭಾರತವೆಂಬ ಕಾರನ್ನು ಹಿಂಬದಿ ಕನ್ನಡಿ ನೋಡಿಕೊಂಡು ಓಡಿಸುತ್ತಿದ್ದಾರೆ: ರಾಹುಲ್ ಟೀಕೆ

ಪ್ರಧಾನಿ ಮೋದಿ ಭಾರತವೆಂಬ ಕಾರನ್ನು ಹಿಂಬದಿ ಕನ್ನಡಿ ನೋಡಿಕೊಂಡು ಓಡಿಸುತ್ತಿದ್ದಾರೆ: ರಾಹುಲ್ ಟೀಕೆ

- Advertisement -
- Advertisement -

”ರೈಲು ಅಪಘಾತ ಏಕೆ ಸಂಭವಿಸಿತು ಎಂದು ನೀವು ಭಾರತ ಸರ್ಕಾರವನ್ನು ಕೇಳಿದರೆ, ಅವರು 50 ವರ್ಷಗಳ ಹಿಂದೆ ಇದನ್ನು ಕಾಂಗ್ರೆಸ್ ಮಾಡಿತು” ಎಂದು ಹೇಳುತ್ತಾರೆ. ಅವರನ್ನು ನೀವು ಏನೇ ಕೇಳಿದರು ಅವರ ತಕ್ಷಣದ ಪ್ರತಿಕ್ರಿಯೆ ‘ಪೀಚೆ ದೇಖೋ’ ಎನ್ನುವುದಾಗಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್‌ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದರು.

ನ್ಯೂಯಾರ್ಕ್‌ನಲ್ಲಿ ಭಾರತೀಯ ವಲಸಿಗರ ಸಭೆಯನ್ನುದ್ದೇಶಿಸಿ ಮಾತನಾಡಿದ ರಾಹುಲ್, ”ಕಾಂಗ್ರೆಸ್ ತನ್ನ ಆಳ್ವಿಕೆಯಲ್ಲಿ ಸಂಭವಿಸಿದ ರೈಲು ಅಪಘಾತಗಳಿಗೆ ಬ್ರಿಟಿಷರನ್ನು ದೂಷಿಸಲಿಲ್ಲ ಆದರೆ ಸಚಿವರು ಜವಾಬ್ದಾರಿಯನ್ನು ವಹಿಸಿಕೊಂಡರು. ಆದರೆ ಬಿಜೆಪಿ ಮತ್ತು ಆರ್‌ಎಸ್‌ಎಸ್ ಭವಿಷ್ಯವನ್ನು ನೋಡಲು ಅಸಮರ್ಥವಾಗಿವೆ, ನೀವು ಏನು ಕೇಳಿದರೂ ಅವರು ಹಿಂದೆ ನೋಡುತ್ತಾರೆ, ರೈಲು ಅಪಘಾತ ಏಕೆ ಸಂಭವಿಸಿತು ಎಂದು ನೀವು ಸರ್ಕಾರವನ್ನು ಕೇಳಿದರೆ, ಅವರು 50 ವರ್ಷಗಳ ಹಿಂದೆ ಇದನ್ನು ಕಾಂಗ್ರೆಸ್ ಮಾಡಿತು ಎಂದು ಹೇಳುತ್ತಾರೆ.

ಎನ್‌ಸಿಆರ್‌ಟಿ 10ನೇ ತರಗತಿ ಪಠ್ಯಪುಸ್ತಕದಲ್ಲಿ ನೀವು ಏಕೆ ಆವರ್ತಕ ಕೋಷ್ಟಕ ಮತ್ತು ವಿಕಸನ ಪಠ್ಯ ತಗೆದು ಹಾಕಿದೀರಿ ೆಂದು ಕೇಳಿದರೆ, ಅವರು 60 ವರ್ಷಗಳ ಹಿಂದೆ ಕಾಂಗ್ರೆಸ್ ಮಾಡಿರುವುದನ್ನು ನೋಡಿ ಎಂದು ಅವರ ತಕ್ಷಣದ ಪ್ರತಿಕ್ರಿಯೆ ‘ಪೀಚೆ ದೇಖೋ’ ಎನ್ನುವುದಾಗಿದೆ.

ಒಡಿಶಾದ ಬಾಲಸೋರ್‌ನಲ್ಲಿ ಬೃಹತ್ ಟ್ರಿಪಲ್-ರೈಲು ಘರ್ಷಣೆಯಲ್ಲಿ ಸುಮಾರು 270 ಜನರು ಸಾವನ್ನಪ್ಪಿದರು ಮತ್ತು ನೂರಾರು ಜನರು ಗಾಯಗೊಂಡರು. ಸ್ವಾತಂತ್ರ್ಯದ ನಂತರದ ಅತ್ಯಂತ ಮಾರಕ ರೈಲು ಅಪಘಾತಗಳಲ್ಲಿ ಇದು ಒಂದಾಗಿದೆ. ಸಿಗ್ನಲಿಂಗ್ ಮಿಸ್ಟೇಕ್‌ನಿಂದ ಈ ರೈಲು ಅಪಘಾತ ಸಂಭವಿಸಿದೆ.

ಅಮೆರಿಕದ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಅಲ್ಲಿನ ಜಾವಿಟ್ಸ್ ಸೆಂಟರ್‌ನಲ್ಲಿ ಭಾರತೀಯ-ಅಮೆರಿಕನರನ್ನು ಉದ್ದೇಶಿಸಿ ಮಾತನಾಡಿದರು. ಈ ವೇಳೆ ಒಡಿಶಾ ರೈಲು ದುರಂತದಲ್ಲಿ ಸಾವಿಗೀಡಾದವರಿಗೆ ಒಂದು ನಿಮಿಷಗಳ ಕಾಲ ಮೌನಾಚರಣೆ ನಡೆಸಿ ಅವರ ಆತ್ಮಕ್ಕೆ ಶಾಂತಿ ಕೋರಿದರು.

ಇದನ್ನೂ ಓದಿ: ಪ್ರಧಾನಿ ಮೋದಿ ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ: ರಾಹುಲ್ ಗಾಂಧಿ

”ನನಗಿನ್ನೂ ನೆನಪಿದೆ ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ರೈಲು ಅಪಘಾತವೊಂದು ನಡೆದಿತ್ತು. ”ಆಗ ರೈಲ್ವೇ ಸಚಿವರು ಈಗ ನಡೆದ ಅಪಘಾತಕ್ಕೆ ಬ್ರಿಟಿಷರು ಕಾರಣ ಎಂದು ಹೇಳಿರಲಿಲ್ಲ. ಇದರ ಸಂಪೂರ್ಣ ಹೊಣೆ ನನ್ನದು ಎಂದು ಒಪ್ಪಿಕೊಂಡು ರಾಜೀನಾಮೆ ನೀಡುತ್ತೇನೆ” ಎಂದಿದ್ದರು. ಆದರೆ ಇತ್ತೀಚೆಗೆ ಭಾರತದಲ್ಲಿ ತಪ್ಪುಗಳು ನಡೆದರೂ ಅದನ್ನು ಒಪ್ಪಿಕೊಳ್ಳುವ ಮನಸ್ಥಿತಿಯಿಲ್ಲ ಎಂದು ಪರೋಕ್ಷವಾಗಿ ಬಿಜೆಪಿ ಕುರಿತು ಟೀಕಿಸಿದ್ದಾರೆ.

‘ಮೋದಿ ಹಿಂಬದಿಯ ಕನ್ನಡಿ ನೋಡಿಕೊಂಡು ಕಾರು ಓಡಿಸುತ್ತಾರೆ’

”ಈಗ ಯೋಚಿಸಿ. ನೀವೆಲ್ಲರೂ ನಿಮ್ಮ ಕಾರುಗಳನ್ನು ಚಲಾಯಿಸಿಕೊಂಡು ಇಲ್ಲಿಗೆ ಬಂದಿದ್ದೀರಿ. ನೀವು ಕೇವಲ ನಿಮ್ಮ ಹಿಂಬದಿಯ ಕನ್ನಡಿ ನೋಡುತ್ತಿದ್ದರೆ ಊಹಿಸಿ. ನಿಮ್ಮ ಕಾರನ್ನು ನೀವು ಹೇಗೆ ಓಡಿಸಬಹುದೇ? ನಿಮಗೆ ಒಂದರ ನಂತರ ಒಂದರಂತೆ ಅಪಘಾತಗಳು ಸಂಭವಿಸುತ್ತವೆ. ಇದು ಸಧ್ಯದ ಭಾರತದ ವಿದ್ಯಮಾನವಾಗಿದೆ” ಎಂದರು.

”ಅವರು (ಪ್ರಧಾನಿ ಮೋದಿ) ಭಾರತವೆಂಬ ಕಾರನ್ನು ಹಿಂಬದಿ ಕನ್ನಡಿ ನೋಡಿಕೊಂಡು ಓಡಿಸುತ್ತಿದ್ದಾರೆ. ಕಾರು ಅಪಘಾತಗೊಂಡು ನಿಂತಾಗ ಅದು ಏಕೆ ಮುಂದೆ ಸಾಗುತ್ತಿಲ್ಲ ಎಂಬುವುದರ ಬಗ್ಗೆ ಅವರಿಗೆ ಅರಿವಿಲ್ಲ. ಪ್ರಧಾನಿಯಿಂದ ಹಿಡಿದು ಬಿಜೆಪಿಯ ಯಾರೊಬ್ಬರು ಭವಿಷ್ಯದ ಬಗ್ಗೆ ಮಾತನಾಡುವುದಿಲ್ಲ. ಹಿಂದೆ ಆಗಿ ಹೋಗಿರುವುದರ ಬಗ್ಗೆ ಮಾತ್ರ ಮಾತನಾಡುತ್ತಾರೆ. ಭವಿಷ್ಯದ ಬಗ್ಗೆ ಯೋಚಿಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್ ಅಸಮರ್ಥವಾಗಿವೆ. ಅವರು ಯಾವಾಗಲೂ ಹಿಂದಿನ ಬಗ್ಗೆ ಮಾತನಾಡುತ್ತಾರೆ ಮತ್ತು ಅವರು ಯಾವಾಗಲೂ ಹಿಂದಿನದಕ್ಕಾಗಿ ಯಾರನ್ನಾದರೂ ದೂಷಿಸುತ್ತಾರೆ” ಎಂದು ರಾಹುಲ್ ಗಾಂಧಿ ಹೇಳಿದರು.

”ಭಾರತದಲ್ಲಿ ಹಿಂದಿನಿಂದಲೂ ಕಾಂಗ್ರೆಸ್ ಮತ್ತು ಬಿಜೆಪಿ/ ಆರ್‌ಎಸ್‌ಎಸ್‌ ಪ್ರತಿಪಾದಿಸುವ ಸಿದ್ದಾಂತಗಳ ನಡುವೆ ಹೋರಾಟ ನಡೆಯುತ್ತಿದೆ. ಒಂದು ಕಡೆ ಮಹಾತ್ಮಗಾಂಧಿ ಮತ್ತು ಇನ್ನೊಂದು ಕಡೆಯಲ್ಲಿ ನಾಥರಾಂ ಗೋಡೆ ಇದ್ದಾರೆ” ಎಂದು ಹೇಳಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...