Homeಮುಖಪುಟಎಂಎಸ್‌ಪಿ ಕುರಿತು ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ: ಎಐಕೆಎಂಎಸ್ ಆರೋಪ

ಎಂಎಸ್‌ಪಿ ಕುರಿತು ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ: ಎಐಕೆಎಂಎಸ್ ಆರೋಪ

ಭಾರತೀಯ ಸಂಪನ್ಮೂಲಗಳನ್ನು ವಿದೇಶಿ ಕಂಪನಿಗಳಿಗೆ ಹಸ್ತಾಂತರಿಸುವುದನ್ನು ಪ್ರಧಾನ ಮಂತ್ರಿ “ಆತ್ಮ್ ನಿರ್ಭರ್” ಎಂದು ಕರೆಯುತ್ತಾರೆ.

- Advertisement -
- Advertisement -

ಪ್ರಮುಖ ರೈತ ಸಂಘಟನೆಗಳಲ್ಲಿ ಒಂದಾದ ಆಲ್ ಇಂಡಿಯಾ ಕಿಸಾನ್ ಮಜ್ದೂರ್ ಸಭಾ, (ಎಐಕೆಎಂಎಸ್) ಪ್ರಧಾನ ಮಂತ್ರಿಯವರು ರೈತರ ಕುರಿತು ಸಂಸತ್ತಿನಲ್ಲಿ ಅಪಹಾಸ್ಯ ಮಾಡಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ತಮ್ಮದೇ ದೇಶದ ಹೆಣಗಾಡುತ್ತಿರುವ ರೈತರನ್ನು ‘ವಿದೇಶಿ ವಿನಾಶಕಾರಿ ಸಿದ್ಧಾಂತಕ್ಕೆ’ (FDI-Foreign Destructive Ideology) ತಲೆ ಒಡ್ಡಿದವರು ಮತ್ತು ರೈತರ ಹೋರಾಟದ ವಿಷಯಗಳ ಬಗ್ಗೆ ಅಜ್ಞಾನವನ್ನು ಹೊಂದಿದವರು ಪ್ರತಿಭಟನೆ ಮಾಡುತ್ತಿದ್ದಾರೆ ಎಂಬ ಪ್ರಧಾನಿ ಹೇಳಿಕೆಗೆ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ. ಹಕ್ಕೊತ್ತಾಯಗಳನ್ನು ಮುಂದಿಡುತ್ತಿರುವ ರೈತರಿಗೆ ‘ಆಂದೋಲನ್ ಜೀವಿ’ ಎಂಬ ಹಣೆಪಟ್ಟೆ ಕಟ್ಟುವುದು ರೈತರಿಗೆ ಮಾಡಿದ ಅವಮಾನ ಮತ್ತು ಅವರ ಅಧಿಕಾರದ ದುರುಪಯೋಗವಾಗಿದೆ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಡಾ. ಆಶಿಶ್ ಮಿತ್ತಲ್ ತಿಳಿಸಿದ್ದಾರೆ.

11 ಸುತ್ತಿನ ಮಾತುಕತೆಯ ಸಂದರ್ಭದಲ್ಲಿ ರೈತರ ಹಕ್ಕುಗಳನ್ನು ಸ್ಪಷ್ಟವಾಗಿ ಹಾಳುಮಾಡುವ ವಿವಿಧ ಷರತ್ತುಗಳ ಕುರಿತು ರೈತ ಮುಖಂಡರು ಗಮನಸೆಳೆದಿದ್ದಾರೆ. ಇದೆಲ್ಲ ಪ್ರಧಾನ ಮಂತ್ರಿಗೆ ತಿಳಿದಿಲ್ಲ ಅನ್ನುವುದನ್ನು ಒಪ್ಪಲಾದೀತೆ? ಇದು ತಮಾಷೆಯಲ್ಲ, ಸತ್ಯವೆಂದರೆ ಪ್ರಧಾನಿ ಸಮಸ್ಯೆಯನ್ನು ಪರಿಹರಿಸಲು ಬಯಸುವುದಿಲ್ಲ ಮತ್ತು ಕಾರ್ಪೊರೇಟ್ ಲೂಟಿಯನ್ನು ಉತ್ತೇಜಿಸಲು ಮುಂದುವರಿಯಲು ಬಯಸುತ್ತಾರೆ ಎಂದು ಸಂಘಟನೆ ಆರೋಪಿಸಿದೆ.

ಮಂಡಿ ಬೈಪಾಸ್ ಕಾಯ್ದೆಯ ಸೆಕ್ಷನ್ 5 ಸ್ಪಷ್ಟವಾಗಿ ಹೇಳುವಂತೆ, ಖಾಸಗಿ ಮಂಡಿ ಮಾಲೀಕರು ಬೆಳೆ ದರವನ್ನು ಲೈನ್ (ರೂಟಿನ್) ವ್ಯಾಪಾರಕ್ಕೆ ಅನುಗುಣವಾಗಿ ನಿರ್ಧರಿಸುತ್ತಾರೆ, ಆದರೆ ಎಂಎಸ್ಪಿ ಪ್ರಕಾರವಲ್ಲ. ಇದರರ್ಥ ಖಾಸಗಿ ಮಂಡಿಗಳು ಪಂಜಾಬ್ ರೈತರಿಗೆ ಭತ್ತಕ್ಕಾಗಿ ಕ್ವಿಂಟಲ್‌ಗೆ 900 ರೂ. ದರವನ್ನು ನೀಡುತ್ತವೆ, ಆದರೆ 1886 ರೂ.ಗಳ ಎಂಎಸ್ಪಿ ನೀಡುವುದಿಲ್ಲ…..’ ಎಂದು ಎಐಕೆಎಂಎಸ್ ಆರೋಪಿಸಿದೆ.

ಸೆಕ್ಷನ್ 5 (2) ರ ಪ್ರಕಾರ ಖಾಸಗಿ ಕಂಪನಿಗಳು ತಮ್ಮದೇ ಆದ ವ್ಯಾಪಾರದ ನಿಯಮಗಳನ್ನು ನಿರ್ಧರಿಸುತ್ತವೆ ಮತ್ತು ಬೆಳೆ ವ್ಯಾಪಾರದ ಎಲ್ಲಾ ವಿವಾದ ಇತ್ಯರ್ಥಗಳು ಅವರ ನಿಯಮಗಳ ಪ್ರಕಾರವೇ ನಡೆಯುತ್ತವೆ, ಆದರೆ ಎಂಎಸ್ಪಿ ಪ್ರಜಾರ ಅಲ್ಲಿ ವಹಿವಾಟು ನಡೆಯುವುದೇ ಇಲ್ಲ’ ಎಂದು ಎಐಕೆಎಂಎಸ್ ವಿವರಣೆ ನೀಡಿದೆ.

‘ಗುತ್ತಿಗೆ ಕಾಯ್ದೆಯ ಸೆಕ್ಷನ್ 9, ರೈತರಿಗೆ ಸಾಲಕ್ಕಾಗಿ ಬ್ಯಾಂಕುಗಳೊಂದಿಗೆ ಭೂಮಿಯನ್ನು ಅಡಮಾನ ಇಡಲು ಆದೇಶಿಸುತ್ತದೆ. ಸೆಕ್ಷನ್ 14 (2 ಮತ್ತು 7) ರ ಪ್ರಕಾರ ಅವರು ಪ್ರಾಯೋಜಕ ಕಂಪನಿಯಿಂದ ಮುಂಗಡ ಪಡೆದರೆ, ವಸೂಲಿಗಳು ‘ಭೂ ಆದಾಯದ ಬಾಕಿ’ ಆಗಿರುತ್ತವೆ….’
‘ಈ ಕಾಯಿದೆಗಳು ಆಹಾರಧಾನ್ಯವನ್ನು ಅನಧಿಕೃತವಾಗಿ ಶೇಖರಿಸಲು, ಕಪ್ಪು ಮಾರುಕಟ್ಟೆ (ಬ್ಲಾಕ್ ಮಾರ್ಕೆಟ್) ಸೃಷ್ಟಿಸಲು, ಆಹಾರದ ಬೆಲೆಗಳನ್ನು ಹೆಚ್ಚಿಸಲು ಮತ್ತು ಸರ್ಕಾರಿ ಖರೀದಿ ಮತ್ತು ಪಿಡಿಎಸ್ ಅನ್ನು ರದ್ದುಗೊಳಿಸಲು ಪರವಾನಗಿ ನೀಡುತ್ತವೆ’ ಎಂದು ಎಐಕೆಎಂಎಸ್ ಆರೋಪಿಸಿದೆ.

‘ಈ ಕಾಯ್ದೆಗಳ ಯಾವುದೇ ವಿಳಂಬ ಅನುಷ್ಠಾನ / ಅಮಾನತು ಪ್ರಕ್ರಿಯೆಗಳನ್ನು ಸ್ವೀಕರಿಸಲು ರೈತರು ನಿರಾಕರಿಸುವುದು ಈ ಕಾಯಿದೆಗಳಲ್ಲಿನ ಅಂತಹ ನಿಬಂಧನೆಗಳು ಅವರ ವಿರುದ್ಧ ಇವೆ ಎಂಬ ಕಾರಣಕ್ಕೇ. ಈ ಕಾನೂನುಗಳನ್ನು ಖಾಸಗಿ ಬಂಡವಾಳಶಾಹಿಗಳ ಲಾಭಕ್ಕಷ್ಟೇ ಜಾರಿ ಮಾಡಲಾಗಿದೆ’ಎಂದು ಎಐಕೆಎಂಎಸ್ ಪ್ರಕಟನೆಯಲ್ಲಯ ತಿಳಿಸಿದೆ.

ಸಿಂಘು
ಟಿಕ್ರಿ ಗಡಿಯಲ್ಲಿ ರೈತರು ಪ್ರತಿಭಟಿಸುತ್ತಿರುವುದು

ಭಾರತೀಯ ಪಶುಸಂಗೋಪನೆ ಮತ್ತು ಹಸಿರು ಕ್ರಾಂತಿಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳು ಸತ್ಯವನ್ನು ತಪ್ಪಾಗಿ ನಿರೂಪಿಸಿದ್ದಾರೆ. ಹಾಲು ಉತ್ಪಾದನೆಯು ರೈತರಿಗೆ ಪ್ರಯೋಜನಕಾರಿಯಾಗಿದೆ, ಅಲ್ಲಿ ಸರ್ಕಾರ ಸಹಕಾರಿ ಹಾಲು ವಲಯವು ಲಾಭದಾಯಕ ದರವನ್ನು ನೀಡಿದರೆ, ಹಸಿರು ಕ್ರಾಂತಿಯು ಎಂಎಸ್ಪಿ ದರಗಳು ಮತ್ತು ಸರ್ಕಾರಿ ಸಂಗ್ರಹಣೆಯ ಮೇಲೆ ಮಾತ್ರ ಉಳಿದಿದೆ. ಈಗ ಈ ಕಾನೂನುಗಳ ಪ್ರಕಾರ ಸರ್ಕಾರಿ ಖರೀದಿ ಮತ್ತು ಸರ್ಕಾರಿ ಮಂಡಳಿಗಳನ್ನು ಖಾಸಗೀಕರಣ ಮಾಡಲು ಹೊರಟಿದೆ. ಇದರಿಂದ ಈ ವರ್ಗದ ರೈತರು ಸಹ ತಮ್ಮ ಭೂಮಿ ಮತ್ತು ಜೀವನೋಪಾಯದಿಂದ ವಂಚಿತರಾಗುತ್ತಾರೆ.

ಸರ್ಕಾರವು ಕಿವುಡ ಕಿವಿ ಹೊಂದಿದ್ದು, ಕಾರಣಗಳನ್ನು ಸ್ಪಷ್ಟಪಡಿಸಲು ಶಕ್ತಿ ಇಲ್ಲದ ಕಾರಣಕ್ಕೆ ರೈತರನ್ನು ದೂಷಿಸುತ್ತಿದೆ ಎಂಬುದು ಈಗ ಸ್ಪಷ್ಟವಾಗಿದೆ ಎಂದು ಎಐಕೆಎಂಎಸ್ ಹೇಳಿದೆ.
ಒಬ್ಬ ಪ್ರಧಾನ ಮಂತ್ರಿಯು ತನ್ನ ಜನರನ್ನು ಮರುಳು ಮಾಡಲು ಇಂತಹ ಮಟ್ಟಕ್ಕೆ ಇಳಿಯಬಹುದು ಎಂಬುದು ವಿಚಿತ್ರವಾಗಿದೆ! ದೇಶದ ಸಂಸತ್ತು ಭಾರತೀಯ ಕಾರ್ಪೊರೇಟ್‌ನೊಂದಿಗೆ ಸಂಪರ್ಕ ಹೊಂದಿದ್ದು, ವಿದೇಶಿ ಶೋಷಕ ಕಾರ್ಪೊರೇಟ್ ಶಕ್ತಿಗಳ ಗುಲಾಮ ಆಗಿರುವುದನ್ನು ಇದು ಸೂಚಿಸುತ್ತದೆಯಲ್ಲವೆ? ಸಂಪೂರ್ಣ ಕೃಷಿ ಪ್ರಕ್ರಿಯೆಗಳು, ಕೃಷಿ ಭೂಮಿ, ನೈಸರ್ಗಿಕ ಸಂಪನ್ಮೂಲಗಳು, ಕೃಷಿ ಸಂಸ್ಕರಣೆ, ಸಂಗ್ರಹಣೆ ಮತ್ತು ಮಾರುಕಟ್ಟೆಗಳ ಮೇಲಿನ ನಿಯಂತ್ರಣವನ್ನು ಎಂಎನ್ಸಿ ಮತ್ತು ಭಾರತೀಯ ಕಾರ್ಪೊರೇಟ್ಗೆ ಹಸ್ತಾಂತರಿಸಲು ಕಾನೂನುಗಳು ಅವಕಾಶ ಮಾಡಿಕೊಡುತ್ತಿವೆ. ಇದು ಆರ್ಎಸ್ಎಸ್ ನಿಯಮ ಮತ್ತು ಅದರ ಮೋಸಗೊಳಿಸುವ ಸಿದ್ಧಾಂತದ ಲಕ್ಷಣವಾಗಿದೆ ಎಂದು ಎಐಕೆಎಂಎಸ್ ವಿವರಿಸಿದೆ. ಭಾರತೀಯ ಸಂಪನ್ಮೂಲಗಳನ್ನು ವಿದೇಶಿ ಕಂಪನಿಗಳಿಗೆ ಹಸ್ತಾಂತರಿಸುವುದನ್ನು ಪ್ರಧಾನ ಮಂತ್ರಿ “ಆತ್ಮ್ ನಿರ್ಭರ್” ಎಂದು ಕರೆಯುತ್ತಾರೆ. ವಿದೇಶಿ ಶೋಷಕರ ಸೇವೆ, ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ ಜನರಿಗೆ ದ್ರೋಹ ಬಗೆದ ಅವರ ಪಾತ್ರದ ಪುನರಾವರ್ತನೆಯಾಗಿದೆ ಎಂದು ಸಂಘಟನೆ ಹೇಳಿಕೆ ನೀಡಿದೆ.


ಇದನ್ನೂ ಓದಿ: ಆಂದೋಲನ್ ಜೀವಿಗಳಾಗಲು ಹೆಮ್ಮೆ ಪಡುತ್ತೇವೆ: ಮೋದಿಗೆ ತಿರುಗೇಟು ನೀಡಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...