Homeಮುಖಪುಟಎಂಎಸ್‌ಪಿ ಕುರಿತು ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ: ಎಐಕೆಎಂಎಸ್ ಆರೋಪ

ಎಂಎಸ್‌ಪಿ ಕುರಿತು ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ: ಎಐಕೆಎಂಎಸ್ ಆರೋಪ

ಭಾರತೀಯ ಸಂಪನ್ಮೂಲಗಳನ್ನು ವಿದೇಶಿ ಕಂಪನಿಗಳಿಗೆ ಹಸ್ತಾಂತರಿಸುವುದನ್ನು ಪ್ರಧಾನ ಮಂತ್ರಿ “ಆತ್ಮ್ ನಿರ್ಭರ್” ಎಂದು ಕರೆಯುತ್ತಾರೆ.

- Advertisement -
- Advertisement -

ಪ್ರಮುಖ ರೈತ ಸಂಘಟನೆಗಳಲ್ಲಿ ಒಂದಾದ ಆಲ್ ಇಂಡಿಯಾ ಕಿಸಾನ್ ಮಜ್ದೂರ್ ಸಭಾ, (ಎಐಕೆಎಂಎಸ್) ಪ್ರಧಾನ ಮಂತ್ರಿಯವರು ರೈತರ ಕುರಿತು ಸಂಸತ್ತಿನಲ್ಲಿ ಅಪಹಾಸ್ಯ ಮಾಡಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ತಮ್ಮದೇ ದೇಶದ ಹೆಣಗಾಡುತ್ತಿರುವ ರೈತರನ್ನು ‘ವಿದೇಶಿ ವಿನಾಶಕಾರಿ ಸಿದ್ಧಾಂತಕ್ಕೆ’ (FDI-Foreign Destructive Ideology) ತಲೆ ಒಡ್ಡಿದವರು ಮತ್ತು ರೈತರ ಹೋರಾಟದ ವಿಷಯಗಳ ಬಗ್ಗೆ ಅಜ್ಞಾನವನ್ನು ಹೊಂದಿದವರು ಪ್ರತಿಭಟನೆ ಮಾಡುತ್ತಿದ್ದಾರೆ ಎಂಬ ಪ್ರಧಾನಿ ಹೇಳಿಕೆಗೆ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ. ಹಕ್ಕೊತ್ತಾಯಗಳನ್ನು ಮುಂದಿಡುತ್ತಿರುವ ರೈತರಿಗೆ ‘ಆಂದೋಲನ್ ಜೀವಿ’ ಎಂಬ ಹಣೆಪಟ್ಟೆ ಕಟ್ಟುವುದು ರೈತರಿಗೆ ಮಾಡಿದ ಅವಮಾನ ಮತ್ತು ಅವರ ಅಧಿಕಾರದ ದುರುಪಯೋಗವಾಗಿದೆ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಡಾ. ಆಶಿಶ್ ಮಿತ್ತಲ್ ತಿಳಿಸಿದ್ದಾರೆ.

11 ಸುತ್ತಿನ ಮಾತುಕತೆಯ ಸಂದರ್ಭದಲ್ಲಿ ರೈತರ ಹಕ್ಕುಗಳನ್ನು ಸ್ಪಷ್ಟವಾಗಿ ಹಾಳುಮಾಡುವ ವಿವಿಧ ಷರತ್ತುಗಳ ಕುರಿತು ರೈತ ಮುಖಂಡರು ಗಮನಸೆಳೆದಿದ್ದಾರೆ. ಇದೆಲ್ಲ ಪ್ರಧಾನ ಮಂತ್ರಿಗೆ ತಿಳಿದಿಲ್ಲ ಅನ್ನುವುದನ್ನು ಒಪ್ಪಲಾದೀತೆ? ಇದು ತಮಾಷೆಯಲ್ಲ, ಸತ್ಯವೆಂದರೆ ಪ್ರಧಾನಿ ಸಮಸ್ಯೆಯನ್ನು ಪರಿಹರಿಸಲು ಬಯಸುವುದಿಲ್ಲ ಮತ್ತು ಕಾರ್ಪೊರೇಟ್ ಲೂಟಿಯನ್ನು ಉತ್ತೇಜಿಸಲು ಮುಂದುವರಿಯಲು ಬಯಸುತ್ತಾರೆ ಎಂದು ಸಂಘಟನೆ ಆರೋಪಿಸಿದೆ.

ಮಂಡಿ ಬೈಪಾಸ್ ಕಾಯ್ದೆಯ ಸೆಕ್ಷನ್ 5 ಸ್ಪಷ್ಟವಾಗಿ ಹೇಳುವಂತೆ, ಖಾಸಗಿ ಮಂಡಿ ಮಾಲೀಕರು ಬೆಳೆ ದರವನ್ನು ಲೈನ್ (ರೂಟಿನ್) ವ್ಯಾಪಾರಕ್ಕೆ ಅನುಗುಣವಾಗಿ ನಿರ್ಧರಿಸುತ್ತಾರೆ, ಆದರೆ ಎಂಎಸ್ಪಿ ಪ್ರಕಾರವಲ್ಲ. ಇದರರ್ಥ ಖಾಸಗಿ ಮಂಡಿಗಳು ಪಂಜಾಬ್ ರೈತರಿಗೆ ಭತ್ತಕ್ಕಾಗಿ ಕ್ವಿಂಟಲ್‌ಗೆ 900 ರೂ. ದರವನ್ನು ನೀಡುತ್ತವೆ, ಆದರೆ 1886 ರೂ.ಗಳ ಎಂಎಸ್ಪಿ ನೀಡುವುದಿಲ್ಲ…..’ ಎಂದು ಎಐಕೆಎಂಎಸ್ ಆರೋಪಿಸಿದೆ.

ಸೆಕ್ಷನ್ 5 (2) ರ ಪ್ರಕಾರ ಖಾಸಗಿ ಕಂಪನಿಗಳು ತಮ್ಮದೇ ಆದ ವ್ಯಾಪಾರದ ನಿಯಮಗಳನ್ನು ನಿರ್ಧರಿಸುತ್ತವೆ ಮತ್ತು ಬೆಳೆ ವ್ಯಾಪಾರದ ಎಲ್ಲಾ ವಿವಾದ ಇತ್ಯರ್ಥಗಳು ಅವರ ನಿಯಮಗಳ ಪ್ರಕಾರವೇ ನಡೆಯುತ್ತವೆ, ಆದರೆ ಎಂಎಸ್ಪಿ ಪ್ರಜಾರ ಅಲ್ಲಿ ವಹಿವಾಟು ನಡೆಯುವುದೇ ಇಲ್ಲ’ ಎಂದು ಎಐಕೆಎಂಎಸ್ ವಿವರಣೆ ನೀಡಿದೆ.

‘ಗುತ್ತಿಗೆ ಕಾಯ್ದೆಯ ಸೆಕ್ಷನ್ 9, ರೈತರಿಗೆ ಸಾಲಕ್ಕಾಗಿ ಬ್ಯಾಂಕುಗಳೊಂದಿಗೆ ಭೂಮಿಯನ್ನು ಅಡಮಾನ ಇಡಲು ಆದೇಶಿಸುತ್ತದೆ. ಸೆಕ್ಷನ್ 14 (2 ಮತ್ತು 7) ರ ಪ್ರಕಾರ ಅವರು ಪ್ರಾಯೋಜಕ ಕಂಪನಿಯಿಂದ ಮುಂಗಡ ಪಡೆದರೆ, ವಸೂಲಿಗಳು ‘ಭೂ ಆದಾಯದ ಬಾಕಿ’ ಆಗಿರುತ್ತವೆ….’
‘ಈ ಕಾಯಿದೆಗಳು ಆಹಾರಧಾನ್ಯವನ್ನು ಅನಧಿಕೃತವಾಗಿ ಶೇಖರಿಸಲು, ಕಪ್ಪು ಮಾರುಕಟ್ಟೆ (ಬ್ಲಾಕ್ ಮಾರ್ಕೆಟ್) ಸೃಷ್ಟಿಸಲು, ಆಹಾರದ ಬೆಲೆಗಳನ್ನು ಹೆಚ್ಚಿಸಲು ಮತ್ತು ಸರ್ಕಾರಿ ಖರೀದಿ ಮತ್ತು ಪಿಡಿಎಸ್ ಅನ್ನು ರದ್ದುಗೊಳಿಸಲು ಪರವಾನಗಿ ನೀಡುತ್ತವೆ’ ಎಂದು ಎಐಕೆಎಂಎಸ್ ಆರೋಪಿಸಿದೆ.

‘ಈ ಕಾಯ್ದೆಗಳ ಯಾವುದೇ ವಿಳಂಬ ಅನುಷ್ಠಾನ / ಅಮಾನತು ಪ್ರಕ್ರಿಯೆಗಳನ್ನು ಸ್ವೀಕರಿಸಲು ರೈತರು ನಿರಾಕರಿಸುವುದು ಈ ಕಾಯಿದೆಗಳಲ್ಲಿನ ಅಂತಹ ನಿಬಂಧನೆಗಳು ಅವರ ವಿರುದ್ಧ ಇವೆ ಎಂಬ ಕಾರಣಕ್ಕೇ. ಈ ಕಾನೂನುಗಳನ್ನು ಖಾಸಗಿ ಬಂಡವಾಳಶಾಹಿಗಳ ಲಾಭಕ್ಕಷ್ಟೇ ಜಾರಿ ಮಾಡಲಾಗಿದೆ’ಎಂದು ಎಐಕೆಎಂಎಸ್ ಪ್ರಕಟನೆಯಲ್ಲಯ ತಿಳಿಸಿದೆ.

ಸಿಂಘು
ಟಿಕ್ರಿ ಗಡಿಯಲ್ಲಿ ರೈತರು ಪ್ರತಿಭಟಿಸುತ್ತಿರುವುದು

ಭಾರತೀಯ ಪಶುಸಂಗೋಪನೆ ಮತ್ತು ಹಸಿರು ಕ್ರಾಂತಿಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳು ಸತ್ಯವನ್ನು ತಪ್ಪಾಗಿ ನಿರೂಪಿಸಿದ್ದಾರೆ. ಹಾಲು ಉತ್ಪಾದನೆಯು ರೈತರಿಗೆ ಪ್ರಯೋಜನಕಾರಿಯಾಗಿದೆ, ಅಲ್ಲಿ ಸರ್ಕಾರ ಸಹಕಾರಿ ಹಾಲು ವಲಯವು ಲಾಭದಾಯಕ ದರವನ್ನು ನೀಡಿದರೆ, ಹಸಿರು ಕ್ರಾಂತಿಯು ಎಂಎಸ್ಪಿ ದರಗಳು ಮತ್ತು ಸರ್ಕಾರಿ ಸಂಗ್ರಹಣೆಯ ಮೇಲೆ ಮಾತ್ರ ಉಳಿದಿದೆ. ಈಗ ಈ ಕಾನೂನುಗಳ ಪ್ರಕಾರ ಸರ್ಕಾರಿ ಖರೀದಿ ಮತ್ತು ಸರ್ಕಾರಿ ಮಂಡಳಿಗಳನ್ನು ಖಾಸಗೀಕರಣ ಮಾಡಲು ಹೊರಟಿದೆ. ಇದರಿಂದ ಈ ವರ್ಗದ ರೈತರು ಸಹ ತಮ್ಮ ಭೂಮಿ ಮತ್ತು ಜೀವನೋಪಾಯದಿಂದ ವಂಚಿತರಾಗುತ್ತಾರೆ.

ಸರ್ಕಾರವು ಕಿವುಡ ಕಿವಿ ಹೊಂದಿದ್ದು, ಕಾರಣಗಳನ್ನು ಸ್ಪಷ್ಟಪಡಿಸಲು ಶಕ್ತಿ ಇಲ್ಲದ ಕಾರಣಕ್ಕೆ ರೈತರನ್ನು ದೂಷಿಸುತ್ತಿದೆ ಎಂಬುದು ಈಗ ಸ್ಪಷ್ಟವಾಗಿದೆ ಎಂದು ಎಐಕೆಎಂಎಸ್ ಹೇಳಿದೆ.
ಒಬ್ಬ ಪ್ರಧಾನ ಮಂತ್ರಿಯು ತನ್ನ ಜನರನ್ನು ಮರುಳು ಮಾಡಲು ಇಂತಹ ಮಟ್ಟಕ್ಕೆ ಇಳಿಯಬಹುದು ಎಂಬುದು ವಿಚಿತ್ರವಾಗಿದೆ! ದೇಶದ ಸಂಸತ್ತು ಭಾರತೀಯ ಕಾರ್ಪೊರೇಟ್‌ನೊಂದಿಗೆ ಸಂಪರ್ಕ ಹೊಂದಿದ್ದು, ವಿದೇಶಿ ಶೋಷಕ ಕಾರ್ಪೊರೇಟ್ ಶಕ್ತಿಗಳ ಗುಲಾಮ ಆಗಿರುವುದನ್ನು ಇದು ಸೂಚಿಸುತ್ತದೆಯಲ್ಲವೆ? ಸಂಪೂರ್ಣ ಕೃಷಿ ಪ್ರಕ್ರಿಯೆಗಳು, ಕೃಷಿ ಭೂಮಿ, ನೈಸರ್ಗಿಕ ಸಂಪನ್ಮೂಲಗಳು, ಕೃಷಿ ಸಂಸ್ಕರಣೆ, ಸಂಗ್ರಹಣೆ ಮತ್ತು ಮಾರುಕಟ್ಟೆಗಳ ಮೇಲಿನ ನಿಯಂತ್ರಣವನ್ನು ಎಂಎನ್ಸಿ ಮತ್ತು ಭಾರತೀಯ ಕಾರ್ಪೊರೇಟ್ಗೆ ಹಸ್ತಾಂತರಿಸಲು ಕಾನೂನುಗಳು ಅವಕಾಶ ಮಾಡಿಕೊಡುತ್ತಿವೆ. ಇದು ಆರ್ಎಸ್ಎಸ್ ನಿಯಮ ಮತ್ತು ಅದರ ಮೋಸಗೊಳಿಸುವ ಸಿದ್ಧಾಂತದ ಲಕ್ಷಣವಾಗಿದೆ ಎಂದು ಎಐಕೆಎಂಎಸ್ ವಿವರಿಸಿದೆ. ಭಾರತೀಯ ಸಂಪನ್ಮೂಲಗಳನ್ನು ವಿದೇಶಿ ಕಂಪನಿಗಳಿಗೆ ಹಸ್ತಾಂತರಿಸುವುದನ್ನು ಪ್ರಧಾನ ಮಂತ್ರಿ “ಆತ್ಮ್ ನಿರ್ಭರ್” ಎಂದು ಕರೆಯುತ್ತಾರೆ. ವಿದೇಶಿ ಶೋಷಕರ ಸೇವೆ, ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ ಜನರಿಗೆ ದ್ರೋಹ ಬಗೆದ ಅವರ ಪಾತ್ರದ ಪುನರಾವರ್ತನೆಯಾಗಿದೆ ಎಂದು ಸಂಘಟನೆ ಹೇಳಿಕೆ ನೀಡಿದೆ.


ಇದನ್ನೂ ಓದಿ: ಆಂದೋಲನ್ ಜೀವಿಗಳಾಗಲು ಹೆಮ್ಮೆ ಪಡುತ್ತೇವೆ: ಮೋದಿಗೆ ತಿರುಗೇಟು ನೀಡಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...