Homeಮುಖಪುಟಎಂಎಸ್‌ಪಿ ಕುರಿತು ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ: ಎಐಕೆಎಂಎಸ್ ಆರೋಪ

ಎಂಎಸ್‌ಪಿ ಕುರಿತು ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ: ಎಐಕೆಎಂಎಸ್ ಆರೋಪ

ಭಾರತೀಯ ಸಂಪನ್ಮೂಲಗಳನ್ನು ವಿದೇಶಿ ಕಂಪನಿಗಳಿಗೆ ಹಸ್ತಾಂತರಿಸುವುದನ್ನು ಪ್ರಧಾನ ಮಂತ್ರಿ “ಆತ್ಮ್ ನಿರ್ಭರ್” ಎಂದು ಕರೆಯುತ್ತಾರೆ.

- Advertisement -
- Advertisement -

ಪ್ರಮುಖ ರೈತ ಸಂಘಟನೆಗಳಲ್ಲಿ ಒಂದಾದ ಆಲ್ ಇಂಡಿಯಾ ಕಿಸಾನ್ ಮಜ್ದೂರ್ ಸಭಾ, (ಎಐಕೆಎಂಎಸ್) ಪ್ರಧಾನ ಮಂತ್ರಿಯವರು ರೈತರ ಕುರಿತು ಸಂಸತ್ತಿನಲ್ಲಿ ಅಪಹಾಸ್ಯ ಮಾಡಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ತಮ್ಮದೇ ದೇಶದ ಹೆಣಗಾಡುತ್ತಿರುವ ರೈತರನ್ನು ‘ವಿದೇಶಿ ವಿನಾಶಕಾರಿ ಸಿದ್ಧಾಂತಕ್ಕೆ’ (FDI-Foreign Destructive Ideology) ತಲೆ ಒಡ್ಡಿದವರು ಮತ್ತು ರೈತರ ಹೋರಾಟದ ವಿಷಯಗಳ ಬಗ್ಗೆ ಅಜ್ಞಾನವನ್ನು ಹೊಂದಿದವರು ಪ್ರತಿಭಟನೆ ಮಾಡುತ್ತಿದ್ದಾರೆ ಎಂಬ ಪ್ರಧಾನಿ ಹೇಳಿಕೆಗೆ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ. ಹಕ್ಕೊತ್ತಾಯಗಳನ್ನು ಮುಂದಿಡುತ್ತಿರುವ ರೈತರಿಗೆ ‘ಆಂದೋಲನ್ ಜೀವಿ’ ಎಂಬ ಹಣೆಪಟ್ಟೆ ಕಟ್ಟುವುದು ರೈತರಿಗೆ ಮಾಡಿದ ಅವಮಾನ ಮತ್ತು ಅವರ ಅಧಿಕಾರದ ದುರುಪಯೋಗವಾಗಿದೆ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಡಾ. ಆಶಿಶ್ ಮಿತ್ತಲ್ ತಿಳಿಸಿದ್ದಾರೆ.

11 ಸುತ್ತಿನ ಮಾತುಕತೆಯ ಸಂದರ್ಭದಲ್ಲಿ ರೈತರ ಹಕ್ಕುಗಳನ್ನು ಸ್ಪಷ್ಟವಾಗಿ ಹಾಳುಮಾಡುವ ವಿವಿಧ ಷರತ್ತುಗಳ ಕುರಿತು ರೈತ ಮುಖಂಡರು ಗಮನಸೆಳೆದಿದ್ದಾರೆ. ಇದೆಲ್ಲ ಪ್ರಧಾನ ಮಂತ್ರಿಗೆ ತಿಳಿದಿಲ್ಲ ಅನ್ನುವುದನ್ನು ಒಪ್ಪಲಾದೀತೆ? ಇದು ತಮಾಷೆಯಲ್ಲ, ಸತ್ಯವೆಂದರೆ ಪ್ರಧಾನಿ ಸಮಸ್ಯೆಯನ್ನು ಪರಿಹರಿಸಲು ಬಯಸುವುದಿಲ್ಲ ಮತ್ತು ಕಾರ್ಪೊರೇಟ್ ಲೂಟಿಯನ್ನು ಉತ್ತೇಜಿಸಲು ಮುಂದುವರಿಯಲು ಬಯಸುತ್ತಾರೆ ಎಂದು ಸಂಘಟನೆ ಆರೋಪಿಸಿದೆ.

ಮಂಡಿ ಬೈಪಾಸ್ ಕಾಯ್ದೆಯ ಸೆಕ್ಷನ್ 5 ಸ್ಪಷ್ಟವಾಗಿ ಹೇಳುವಂತೆ, ಖಾಸಗಿ ಮಂಡಿ ಮಾಲೀಕರು ಬೆಳೆ ದರವನ್ನು ಲೈನ್ (ರೂಟಿನ್) ವ್ಯಾಪಾರಕ್ಕೆ ಅನುಗುಣವಾಗಿ ನಿರ್ಧರಿಸುತ್ತಾರೆ, ಆದರೆ ಎಂಎಸ್ಪಿ ಪ್ರಕಾರವಲ್ಲ. ಇದರರ್ಥ ಖಾಸಗಿ ಮಂಡಿಗಳು ಪಂಜಾಬ್ ರೈತರಿಗೆ ಭತ್ತಕ್ಕಾಗಿ ಕ್ವಿಂಟಲ್‌ಗೆ 900 ರೂ. ದರವನ್ನು ನೀಡುತ್ತವೆ, ಆದರೆ 1886 ರೂ.ಗಳ ಎಂಎಸ್ಪಿ ನೀಡುವುದಿಲ್ಲ…..’ ಎಂದು ಎಐಕೆಎಂಎಸ್ ಆರೋಪಿಸಿದೆ.

ಸೆಕ್ಷನ್ 5 (2) ರ ಪ್ರಕಾರ ಖಾಸಗಿ ಕಂಪನಿಗಳು ತಮ್ಮದೇ ಆದ ವ್ಯಾಪಾರದ ನಿಯಮಗಳನ್ನು ನಿರ್ಧರಿಸುತ್ತವೆ ಮತ್ತು ಬೆಳೆ ವ್ಯಾಪಾರದ ಎಲ್ಲಾ ವಿವಾದ ಇತ್ಯರ್ಥಗಳು ಅವರ ನಿಯಮಗಳ ಪ್ರಕಾರವೇ ನಡೆಯುತ್ತವೆ, ಆದರೆ ಎಂಎಸ್ಪಿ ಪ್ರಜಾರ ಅಲ್ಲಿ ವಹಿವಾಟು ನಡೆಯುವುದೇ ಇಲ್ಲ’ ಎಂದು ಎಐಕೆಎಂಎಸ್ ವಿವರಣೆ ನೀಡಿದೆ.

‘ಗುತ್ತಿಗೆ ಕಾಯ್ದೆಯ ಸೆಕ್ಷನ್ 9, ರೈತರಿಗೆ ಸಾಲಕ್ಕಾಗಿ ಬ್ಯಾಂಕುಗಳೊಂದಿಗೆ ಭೂಮಿಯನ್ನು ಅಡಮಾನ ಇಡಲು ಆದೇಶಿಸುತ್ತದೆ. ಸೆಕ್ಷನ್ 14 (2 ಮತ್ತು 7) ರ ಪ್ರಕಾರ ಅವರು ಪ್ರಾಯೋಜಕ ಕಂಪನಿಯಿಂದ ಮುಂಗಡ ಪಡೆದರೆ, ವಸೂಲಿಗಳು ‘ಭೂ ಆದಾಯದ ಬಾಕಿ’ ಆಗಿರುತ್ತವೆ….’
‘ಈ ಕಾಯಿದೆಗಳು ಆಹಾರಧಾನ್ಯವನ್ನು ಅನಧಿಕೃತವಾಗಿ ಶೇಖರಿಸಲು, ಕಪ್ಪು ಮಾರುಕಟ್ಟೆ (ಬ್ಲಾಕ್ ಮಾರ್ಕೆಟ್) ಸೃಷ್ಟಿಸಲು, ಆಹಾರದ ಬೆಲೆಗಳನ್ನು ಹೆಚ್ಚಿಸಲು ಮತ್ತು ಸರ್ಕಾರಿ ಖರೀದಿ ಮತ್ತು ಪಿಡಿಎಸ್ ಅನ್ನು ರದ್ದುಗೊಳಿಸಲು ಪರವಾನಗಿ ನೀಡುತ್ತವೆ’ ಎಂದು ಎಐಕೆಎಂಎಸ್ ಆರೋಪಿಸಿದೆ.

‘ಈ ಕಾಯ್ದೆಗಳ ಯಾವುದೇ ವಿಳಂಬ ಅನುಷ್ಠಾನ / ಅಮಾನತು ಪ್ರಕ್ರಿಯೆಗಳನ್ನು ಸ್ವೀಕರಿಸಲು ರೈತರು ನಿರಾಕರಿಸುವುದು ಈ ಕಾಯಿದೆಗಳಲ್ಲಿನ ಅಂತಹ ನಿಬಂಧನೆಗಳು ಅವರ ವಿರುದ್ಧ ಇವೆ ಎಂಬ ಕಾರಣಕ್ಕೇ. ಈ ಕಾನೂನುಗಳನ್ನು ಖಾಸಗಿ ಬಂಡವಾಳಶಾಹಿಗಳ ಲಾಭಕ್ಕಷ್ಟೇ ಜಾರಿ ಮಾಡಲಾಗಿದೆ’ಎಂದು ಎಐಕೆಎಂಎಸ್ ಪ್ರಕಟನೆಯಲ್ಲಯ ತಿಳಿಸಿದೆ.

ಸಿಂಘು
ಟಿಕ್ರಿ ಗಡಿಯಲ್ಲಿ ರೈತರು ಪ್ರತಿಭಟಿಸುತ್ತಿರುವುದು

ಭಾರತೀಯ ಪಶುಸಂಗೋಪನೆ ಮತ್ತು ಹಸಿರು ಕ್ರಾಂತಿಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳು ಸತ್ಯವನ್ನು ತಪ್ಪಾಗಿ ನಿರೂಪಿಸಿದ್ದಾರೆ. ಹಾಲು ಉತ್ಪಾದನೆಯು ರೈತರಿಗೆ ಪ್ರಯೋಜನಕಾರಿಯಾಗಿದೆ, ಅಲ್ಲಿ ಸರ್ಕಾರ ಸಹಕಾರಿ ಹಾಲು ವಲಯವು ಲಾಭದಾಯಕ ದರವನ್ನು ನೀಡಿದರೆ, ಹಸಿರು ಕ್ರಾಂತಿಯು ಎಂಎಸ್ಪಿ ದರಗಳು ಮತ್ತು ಸರ್ಕಾರಿ ಸಂಗ್ರಹಣೆಯ ಮೇಲೆ ಮಾತ್ರ ಉಳಿದಿದೆ. ಈಗ ಈ ಕಾನೂನುಗಳ ಪ್ರಕಾರ ಸರ್ಕಾರಿ ಖರೀದಿ ಮತ್ತು ಸರ್ಕಾರಿ ಮಂಡಳಿಗಳನ್ನು ಖಾಸಗೀಕರಣ ಮಾಡಲು ಹೊರಟಿದೆ. ಇದರಿಂದ ಈ ವರ್ಗದ ರೈತರು ಸಹ ತಮ್ಮ ಭೂಮಿ ಮತ್ತು ಜೀವನೋಪಾಯದಿಂದ ವಂಚಿತರಾಗುತ್ತಾರೆ.

ಸರ್ಕಾರವು ಕಿವುಡ ಕಿವಿ ಹೊಂದಿದ್ದು, ಕಾರಣಗಳನ್ನು ಸ್ಪಷ್ಟಪಡಿಸಲು ಶಕ್ತಿ ಇಲ್ಲದ ಕಾರಣಕ್ಕೆ ರೈತರನ್ನು ದೂಷಿಸುತ್ತಿದೆ ಎಂಬುದು ಈಗ ಸ್ಪಷ್ಟವಾಗಿದೆ ಎಂದು ಎಐಕೆಎಂಎಸ್ ಹೇಳಿದೆ.
ಒಬ್ಬ ಪ್ರಧಾನ ಮಂತ್ರಿಯು ತನ್ನ ಜನರನ್ನು ಮರುಳು ಮಾಡಲು ಇಂತಹ ಮಟ್ಟಕ್ಕೆ ಇಳಿಯಬಹುದು ಎಂಬುದು ವಿಚಿತ್ರವಾಗಿದೆ! ದೇಶದ ಸಂಸತ್ತು ಭಾರತೀಯ ಕಾರ್ಪೊರೇಟ್‌ನೊಂದಿಗೆ ಸಂಪರ್ಕ ಹೊಂದಿದ್ದು, ವಿದೇಶಿ ಶೋಷಕ ಕಾರ್ಪೊರೇಟ್ ಶಕ್ತಿಗಳ ಗುಲಾಮ ಆಗಿರುವುದನ್ನು ಇದು ಸೂಚಿಸುತ್ತದೆಯಲ್ಲವೆ? ಸಂಪೂರ್ಣ ಕೃಷಿ ಪ್ರಕ್ರಿಯೆಗಳು, ಕೃಷಿ ಭೂಮಿ, ನೈಸರ್ಗಿಕ ಸಂಪನ್ಮೂಲಗಳು, ಕೃಷಿ ಸಂಸ್ಕರಣೆ, ಸಂಗ್ರಹಣೆ ಮತ್ತು ಮಾರುಕಟ್ಟೆಗಳ ಮೇಲಿನ ನಿಯಂತ್ರಣವನ್ನು ಎಂಎನ್ಸಿ ಮತ್ತು ಭಾರತೀಯ ಕಾರ್ಪೊರೇಟ್ಗೆ ಹಸ್ತಾಂತರಿಸಲು ಕಾನೂನುಗಳು ಅವಕಾಶ ಮಾಡಿಕೊಡುತ್ತಿವೆ. ಇದು ಆರ್ಎಸ್ಎಸ್ ನಿಯಮ ಮತ್ತು ಅದರ ಮೋಸಗೊಳಿಸುವ ಸಿದ್ಧಾಂತದ ಲಕ್ಷಣವಾಗಿದೆ ಎಂದು ಎಐಕೆಎಂಎಸ್ ವಿವರಿಸಿದೆ. ಭಾರತೀಯ ಸಂಪನ್ಮೂಲಗಳನ್ನು ವಿದೇಶಿ ಕಂಪನಿಗಳಿಗೆ ಹಸ್ತಾಂತರಿಸುವುದನ್ನು ಪ್ರಧಾನ ಮಂತ್ರಿ “ಆತ್ಮ್ ನಿರ್ಭರ್” ಎಂದು ಕರೆಯುತ್ತಾರೆ. ವಿದೇಶಿ ಶೋಷಕರ ಸೇವೆ, ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ ಜನರಿಗೆ ದ್ರೋಹ ಬಗೆದ ಅವರ ಪಾತ್ರದ ಪುನರಾವರ್ತನೆಯಾಗಿದೆ ಎಂದು ಸಂಘಟನೆ ಹೇಳಿಕೆ ನೀಡಿದೆ.


ಇದನ್ನೂ ಓದಿ: ಆಂದೋಲನ್ ಜೀವಿಗಳಾಗಲು ಹೆಮ್ಮೆ ಪಡುತ್ತೇವೆ: ಮೋದಿಗೆ ತಿರುಗೇಟು ನೀಡಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...