Homeಮುಖಪುಟಎಂಎಸ್‌ಪಿ ಕುರಿತು ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ: ಎಐಕೆಎಂಎಸ್ ಆರೋಪ

ಎಂಎಸ್‌ಪಿ ಕುರಿತು ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ: ಎಐಕೆಎಂಎಸ್ ಆರೋಪ

ಭಾರತೀಯ ಸಂಪನ್ಮೂಲಗಳನ್ನು ವಿದೇಶಿ ಕಂಪನಿಗಳಿಗೆ ಹಸ್ತಾಂತರಿಸುವುದನ್ನು ಪ್ರಧಾನ ಮಂತ್ರಿ “ಆತ್ಮ್ ನಿರ್ಭರ್” ಎಂದು ಕರೆಯುತ್ತಾರೆ.

- Advertisement -
- Advertisement -

ಪ್ರಮುಖ ರೈತ ಸಂಘಟನೆಗಳಲ್ಲಿ ಒಂದಾದ ಆಲ್ ಇಂಡಿಯಾ ಕಿಸಾನ್ ಮಜ್ದೂರ್ ಸಭಾ, (ಎಐಕೆಎಂಎಸ್) ಪ್ರಧಾನ ಮಂತ್ರಿಯವರು ರೈತರ ಕುರಿತು ಸಂಸತ್ತಿನಲ್ಲಿ ಅಪಹಾಸ್ಯ ಮಾಡಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ತಮ್ಮದೇ ದೇಶದ ಹೆಣಗಾಡುತ್ತಿರುವ ರೈತರನ್ನು ‘ವಿದೇಶಿ ವಿನಾಶಕಾರಿ ಸಿದ್ಧಾಂತಕ್ಕೆ’ (FDI-Foreign Destructive Ideology) ತಲೆ ಒಡ್ಡಿದವರು ಮತ್ತು ರೈತರ ಹೋರಾಟದ ವಿಷಯಗಳ ಬಗ್ಗೆ ಅಜ್ಞಾನವನ್ನು ಹೊಂದಿದವರು ಪ್ರತಿಭಟನೆ ಮಾಡುತ್ತಿದ್ದಾರೆ ಎಂಬ ಪ್ರಧಾನಿ ಹೇಳಿಕೆಗೆ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ. ಹಕ್ಕೊತ್ತಾಯಗಳನ್ನು ಮುಂದಿಡುತ್ತಿರುವ ರೈತರಿಗೆ ‘ಆಂದೋಲನ್ ಜೀವಿ’ ಎಂಬ ಹಣೆಪಟ್ಟೆ ಕಟ್ಟುವುದು ರೈತರಿಗೆ ಮಾಡಿದ ಅವಮಾನ ಮತ್ತು ಅವರ ಅಧಿಕಾರದ ದುರುಪಯೋಗವಾಗಿದೆ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಡಾ. ಆಶಿಶ್ ಮಿತ್ತಲ್ ತಿಳಿಸಿದ್ದಾರೆ.

11 ಸುತ್ತಿನ ಮಾತುಕತೆಯ ಸಂದರ್ಭದಲ್ಲಿ ರೈತರ ಹಕ್ಕುಗಳನ್ನು ಸ್ಪಷ್ಟವಾಗಿ ಹಾಳುಮಾಡುವ ವಿವಿಧ ಷರತ್ತುಗಳ ಕುರಿತು ರೈತ ಮುಖಂಡರು ಗಮನಸೆಳೆದಿದ್ದಾರೆ. ಇದೆಲ್ಲ ಪ್ರಧಾನ ಮಂತ್ರಿಗೆ ತಿಳಿದಿಲ್ಲ ಅನ್ನುವುದನ್ನು ಒಪ್ಪಲಾದೀತೆ? ಇದು ತಮಾಷೆಯಲ್ಲ, ಸತ್ಯವೆಂದರೆ ಪ್ರಧಾನಿ ಸಮಸ್ಯೆಯನ್ನು ಪರಿಹರಿಸಲು ಬಯಸುವುದಿಲ್ಲ ಮತ್ತು ಕಾರ್ಪೊರೇಟ್ ಲೂಟಿಯನ್ನು ಉತ್ತೇಜಿಸಲು ಮುಂದುವರಿಯಲು ಬಯಸುತ್ತಾರೆ ಎಂದು ಸಂಘಟನೆ ಆರೋಪಿಸಿದೆ.

ಮಂಡಿ ಬೈಪಾಸ್ ಕಾಯ್ದೆಯ ಸೆಕ್ಷನ್ 5 ಸ್ಪಷ್ಟವಾಗಿ ಹೇಳುವಂತೆ, ಖಾಸಗಿ ಮಂಡಿ ಮಾಲೀಕರು ಬೆಳೆ ದರವನ್ನು ಲೈನ್ (ರೂಟಿನ್) ವ್ಯಾಪಾರಕ್ಕೆ ಅನುಗುಣವಾಗಿ ನಿರ್ಧರಿಸುತ್ತಾರೆ, ಆದರೆ ಎಂಎಸ್ಪಿ ಪ್ರಕಾರವಲ್ಲ. ಇದರರ್ಥ ಖಾಸಗಿ ಮಂಡಿಗಳು ಪಂಜಾಬ್ ರೈತರಿಗೆ ಭತ್ತಕ್ಕಾಗಿ ಕ್ವಿಂಟಲ್‌ಗೆ 900 ರೂ. ದರವನ್ನು ನೀಡುತ್ತವೆ, ಆದರೆ 1886 ರೂ.ಗಳ ಎಂಎಸ್ಪಿ ನೀಡುವುದಿಲ್ಲ…..’ ಎಂದು ಎಐಕೆಎಂಎಸ್ ಆರೋಪಿಸಿದೆ.

ಸೆಕ್ಷನ್ 5 (2) ರ ಪ್ರಕಾರ ಖಾಸಗಿ ಕಂಪನಿಗಳು ತಮ್ಮದೇ ಆದ ವ್ಯಾಪಾರದ ನಿಯಮಗಳನ್ನು ನಿರ್ಧರಿಸುತ್ತವೆ ಮತ್ತು ಬೆಳೆ ವ್ಯಾಪಾರದ ಎಲ್ಲಾ ವಿವಾದ ಇತ್ಯರ್ಥಗಳು ಅವರ ನಿಯಮಗಳ ಪ್ರಕಾರವೇ ನಡೆಯುತ್ತವೆ, ಆದರೆ ಎಂಎಸ್ಪಿ ಪ್ರಜಾರ ಅಲ್ಲಿ ವಹಿವಾಟು ನಡೆಯುವುದೇ ಇಲ್ಲ’ ಎಂದು ಎಐಕೆಎಂಎಸ್ ವಿವರಣೆ ನೀಡಿದೆ.

‘ಗುತ್ತಿಗೆ ಕಾಯ್ದೆಯ ಸೆಕ್ಷನ್ 9, ರೈತರಿಗೆ ಸಾಲಕ್ಕಾಗಿ ಬ್ಯಾಂಕುಗಳೊಂದಿಗೆ ಭೂಮಿಯನ್ನು ಅಡಮಾನ ಇಡಲು ಆದೇಶಿಸುತ್ತದೆ. ಸೆಕ್ಷನ್ 14 (2 ಮತ್ತು 7) ರ ಪ್ರಕಾರ ಅವರು ಪ್ರಾಯೋಜಕ ಕಂಪನಿಯಿಂದ ಮುಂಗಡ ಪಡೆದರೆ, ವಸೂಲಿಗಳು ‘ಭೂ ಆದಾಯದ ಬಾಕಿ’ ಆಗಿರುತ್ತವೆ….’
‘ಈ ಕಾಯಿದೆಗಳು ಆಹಾರಧಾನ್ಯವನ್ನು ಅನಧಿಕೃತವಾಗಿ ಶೇಖರಿಸಲು, ಕಪ್ಪು ಮಾರುಕಟ್ಟೆ (ಬ್ಲಾಕ್ ಮಾರ್ಕೆಟ್) ಸೃಷ್ಟಿಸಲು, ಆಹಾರದ ಬೆಲೆಗಳನ್ನು ಹೆಚ್ಚಿಸಲು ಮತ್ತು ಸರ್ಕಾರಿ ಖರೀದಿ ಮತ್ತು ಪಿಡಿಎಸ್ ಅನ್ನು ರದ್ದುಗೊಳಿಸಲು ಪರವಾನಗಿ ನೀಡುತ್ತವೆ’ ಎಂದು ಎಐಕೆಎಂಎಸ್ ಆರೋಪಿಸಿದೆ.

‘ಈ ಕಾಯ್ದೆಗಳ ಯಾವುದೇ ವಿಳಂಬ ಅನುಷ್ಠಾನ / ಅಮಾನತು ಪ್ರಕ್ರಿಯೆಗಳನ್ನು ಸ್ವೀಕರಿಸಲು ರೈತರು ನಿರಾಕರಿಸುವುದು ಈ ಕಾಯಿದೆಗಳಲ್ಲಿನ ಅಂತಹ ನಿಬಂಧನೆಗಳು ಅವರ ವಿರುದ್ಧ ಇವೆ ಎಂಬ ಕಾರಣಕ್ಕೇ. ಈ ಕಾನೂನುಗಳನ್ನು ಖಾಸಗಿ ಬಂಡವಾಳಶಾಹಿಗಳ ಲಾಭಕ್ಕಷ್ಟೇ ಜಾರಿ ಮಾಡಲಾಗಿದೆ’ಎಂದು ಎಐಕೆಎಂಎಸ್ ಪ್ರಕಟನೆಯಲ್ಲಯ ತಿಳಿಸಿದೆ.

ಸಿಂಘು
ಟಿಕ್ರಿ ಗಡಿಯಲ್ಲಿ ರೈತರು ಪ್ರತಿಭಟಿಸುತ್ತಿರುವುದು

ಭಾರತೀಯ ಪಶುಸಂಗೋಪನೆ ಮತ್ತು ಹಸಿರು ಕ್ರಾಂತಿಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳು ಸತ್ಯವನ್ನು ತಪ್ಪಾಗಿ ನಿರೂಪಿಸಿದ್ದಾರೆ. ಹಾಲು ಉತ್ಪಾದನೆಯು ರೈತರಿಗೆ ಪ್ರಯೋಜನಕಾರಿಯಾಗಿದೆ, ಅಲ್ಲಿ ಸರ್ಕಾರ ಸಹಕಾರಿ ಹಾಲು ವಲಯವು ಲಾಭದಾಯಕ ದರವನ್ನು ನೀಡಿದರೆ, ಹಸಿರು ಕ್ರಾಂತಿಯು ಎಂಎಸ್ಪಿ ದರಗಳು ಮತ್ತು ಸರ್ಕಾರಿ ಸಂಗ್ರಹಣೆಯ ಮೇಲೆ ಮಾತ್ರ ಉಳಿದಿದೆ. ಈಗ ಈ ಕಾನೂನುಗಳ ಪ್ರಕಾರ ಸರ್ಕಾರಿ ಖರೀದಿ ಮತ್ತು ಸರ್ಕಾರಿ ಮಂಡಳಿಗಳನ್ನು ಖಾಸಗೀಕರಣ ಮಾಡಲು ಹೊರಟಿದೆ. ಇದರಿಂದ ಈ ವರ್ಗದ ರೈತರು ಸಹ ತಮ್ಮ ಭೂಮಿ ಮತ್ತು ಜೀವನೋಪಾಯದಿಂದ ವಂಚಿತರಾಗುತ್ತಾರೆ.

ಸರ್ಕಾರವು ಕಿವುಡ ಕಿವಿ ಹೊಂದಿದ್ದು, ಕಾರಣಗಳನ್ನು ಸ್ಪಷ್ಟಪಡಿಸಲು ಶಕ್ತಿ ಇಲ್ಲದ ಕಾರಣಕ್ಕೆ ರೈತರನ್ನು ದೂಷಿಸುತ್ತಿದೆ ಎಂಬುದು ಈಗ ಸ್ಪಷ್ಟವಾಗಿದೆ ಎಂದು ಎಐಕೆಎಂಎಸ್ ಹೇಳಿದೆ.
ಒಬ್ಬ ಪ್ರಧಾನ ಮಂತ್ರಿಯು ತನ್ನ ಜನರನ್ನು ಮರುಳು ಮಾಡಲು ಇಂತಹ ಮಟ್ಟಕ್ಕೆ ಇಳಿಯಬಹುದು ಎಂಬುದು ವಿಚಿತ್ರವಾಗಿದೆ! ದೇಶದ ಸಂಸತ್ತು ಭಾರತೀಯ ಕಾರ್ಪೊರೇಟ್‌ನೊಂದಿಗೆ ಸಂಪರ್ಕ ಹೊಂದಿದ್ದು, ವಿದೇಶಿ ಶೋಷಕ ಕಾರ್ಪೊರೇಟ್ ಶಕ್ತಿಗಳ ಗುಲಾಮ ಆಗಿರುವುದನ್ನು ಇದು ಸೂಚಿಸುತ್ತದೆಯಲ್ಲವೆ? ಸಂಪೂರ್ಣ ಕೃಷಿ ಪ್ರಕ್ರಿಯೆಗಳು, ಕೃಷಿ ಭೂಮಿ, ನೈಸರ್ಗಿಕ ಸಂಪನ್ಮೂಲಗಳು, ಕೃಷಿ ಸಂಸ್ಕರಣೆ, ಸಂಗ್ರಹಣೆ ಮತ್ತು ಮಾರುಕಟ್ಟೆಗಳ ಮೇಲಿನ ನಿಯಂತ್ರಣವನ್ನು ಎಂಎನ್ಸಿ ಮತ್ತು ಭಾರತೀಯ ಕಾರ್ಪೊರೇಟ್ಗೆ ಹಸ್ತಾಂತರಿಸಲು ಕಾನೂನುಗಳು ಅವಕಾಶ ಮಾಡಿಕೊಡುತ್ತಿವೆ. ಇದು ಆರ್ಎಸ್ಎಸ್ ನಿಯಮ ಮತ್ತು ಅದರ ಮೋಸಗೊಳಿಸುವ ಸಿದ್ಧಾಂತದ ಲಕ್ಷಣವಾಗಿದೆ ಎಂದು ಎಐಕೆಎಂಎಸ್ ವಿವರಿಸಿದೆ. ಭಾರತೀಯ ಸಂಪನ್ಮೂಲಗಳನ್ನು ವಿದೇಶಿ ಕಂಪನಿಗಳಿಗೆ ಹಸ್ತಾಂತರಿಸುವುದನ್ನು ಪ್ರಧಾನ ಮಂತ್ರಿ “ಆತ್ಮ್ ನಿರ್ಭರ್” ಎಂದು ಕರೆಯುತ್ತಾರೆ. ವಿದೇಶಿ ಶೋಷಕರ ಸೇವೆ, ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ ಜನರಿಗೆ ದ್ರೋಹ ಬಗೆದ ಅವರ ಪಾತ್ರದ ಪುನರಾವರ್ತನೆಯಾಗಿದೆ ಎಂದು ಸಂಘಟನೆ ಹೇಳಿಕೆ ನೀಡಿದೆ.


ಇದನ್ನೂ ಓದಿ: ಆಂದೋಲನ್ ಜೀವಿಗಳಾಗಲು ಹೆಮ್ಮೆ ಪಡುತ್ತೇವೆ: ಮೋದಿಗೆ ತಿರುಗೇಟು ನೀಡಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...