Homeಮುಖಪುಟಎಂಎಸ್‌ಪಿ ಕುರಿತು ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ: ಎಐಕೆಎಂಎಸ್ ಆರೋಪ

ಎಂಎಸ್‌ಪಿ ಕುರಿತು ಪ್ರಧಾನಿ ಮೋದಿ ಸುಳ್ಳು ಹೇಳುತ್ತಿದ್ದಾರೆ: ಎಐಕೆಎಂಎಸ್ ಆರೋಪ

ಭಾರತೀಯ ಸಂಪನ್ಮೂಲಗಳನ್ನು ವಿದೇಶಿ ಕಂಪನಿಗಳಿಗೆ ಹಸ್ತಾಂತರಿಸುವುದನ್ನು ಪ್ರಧಾನ ಮಂತ್ರಿ “ಆತ್ಮ್ ನಿರ್ಭರ್” ಎಂದು ಕರೆಯುತ್ತಾರೆ.

- Advertisement -
- Advertisement -

ಪ್ರಮುಖ ರೈತ ಸಂಘಟನೆಗಳಲ್ಲಿ ಒಂದಾದ ಆಲ್ ಇಂಡಿಯಾ ಕಿಸಾನ್ ಮಜ್ದೂರ್ ಸಭಾ, (ಎಐಕೆಎಂಎಸ್) ಪ್ರಧಾನ ಮಂತ್ರಿಯವರು ರೈತರ ಕುರಿತು ಸಂಸತ್ತಿನಲ್ಲಿ ಅಪಹಾಸ್ಯ ಮಾಡಿದ್ದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ.

ತಮ್ಮದೇ ದೇಶದ ಹೆಣಗಾಡುತ್ತಿರುವ ರೈತರನ್ನು ‘ವಿದೇಶಿ ವಿನಾಶಕಾರಿ ಸಿದ್ಧಾಂತಕ್ಕೆ’ (FDI-Foreign Destructive Ideology) ತಲೆ ಒಡ್ಡಿದವರು ಮತ್ತು ರೈತರ ಹೋರಾಟದ ವಿಷಯಗಳ ಬಗ್ಗೆ ಅಜ್ಞಾನವನ್ನು ಹೊಂದಿದವರು ಪ್ರತಿಭಟನೆ ಮಾಡುತ್ತಿದ್ದಾರೆ ಎಂಬ ಪ್ರಧಾನಿ ಹೇಳಿಕೆಗೆ ಸಂಘಟನೆ ಆಕ್ರೋಶ ವ್ಯಕ್ತಪಡಿಸಿದೆ. ಹಕ್ಕೊತ್ತಾಯಗಳನ್ನು ಮುಂದಿಡುತ್ತಿರುವ ರೈತರಿಗೆ ‘ಆಂದೋಲನ್ ಜೀವಿ’ ಎಂಬ ಹಣೆಪಟ್ಟೆ ಕಟ್ಟುವುದು ರೈತರಿಗೆ ಮಾಡಿದ ಅವಮಾನ ಮತ್ತು ಅವರ ಅಧಿಕಾರದ ದುರುಪಯೋಗವಾಗಿದೆ ಎಂದು ಸಂಘಟನೆಯ ಪ್ರಧಾನ ಕಾರ್ಯದರ್ಶಿ ಡಾ. ಆಶಿಶ್ ಮಿತ್ತಲ್ ತಿಳಿಸಿದ್ದಾರೆ.

11 ಸುತ್ತಿನ ಮಾತುಕತೆಯ ಸಂದರ್ಭದಲ್ಲಿ ರೈತರ ಹಕ್ಕುಗಳನ್ನು ಸ್ಪಷ್ಟವಾಗಿ ಹಾಳುಮಾಡುವ ವಿವಿಧ ಷರತ್ತುಗಳ ಕುರಿತು ರೈತ ಮುಖಂಡರು ಗಮನಸೆಳೆದಿದ್ದಾರೆ. ಇದೆಲ್ಲ ಪ್ರಧಾನ ಮಂತ್ರಿಗೆ ತಿಳಿದಿಲ್ಲ ಅನ್ನುವುದನ್ನು ಒಪ್ಪಲಾದೀತೆ? ಇದು ತಮಾಷೆಯಲ್ಲ, ಸತ್ಯವೆಂದರೆ ಪ್ರಧಾನಿ ಸಮಸ್ಯೆಯನ್ನು ಪರಿಹರಿಸಲು ಬಯಸುವುದಿಲ್ಲ ಮತ್ತು ಕಾರ್ಪೊರೇಟ್ ಲೂಟಿಯನ್ನು ಉತ್ತೇಜಿಸಲು ಮುಂದುವರಿಯಲು ಬಯಸುತ್ತಾರೆ ಎಂದು ಸಂಘಟನೆ ಆರೋಪಿಸಿದೆ.

ಮಂಡಿ ಬೈಪಾಸ್ ಕಾಯ್ದೆಯ ಸೆಕ್ಷನ್ 5 ಸ್ಪಷ್ಟವಾಗಿ ಹೇಳುವಂತೆ, ಖಾಸಗಿ ಮಂಡಿ ಮಾಲೀಕರು ಬೆಳೆ ದರವನ್ನು ಲೈನ್ (ರೂಟಿನ್) ವ್ಯಾಪಾರಕ್ಕೆ ಅನುಗುಣವಾಗಿ ನಿರ್ಧರಿಸುತ್ತಾರೆ, ಆದರೆ ಎಂಎಸ್ಪಿ ಪ್ರಕಾರವಲ್ಲ. ಇದರರ್ಥ ಖಾಸಗಿ ಮಂಡಿಗಳು ಪಂಜಾಬ್ ರೈತರಿಗೆ ಭತ್ತಕ್ಕಾಗಿ ಕ್ವಿಂಟಲ್‌ಗೆ 900 ರೂ. ದರವನ್ನು ನೀಡುತ್ತವೆ, ಆದರೆ 1886 ರೂ.ಗಳ ಎಂಎಸ್ಪಿ ನೀಡುವುದಿಲ್ಲ…..’ ಎಂದು ಎಐಕೆಎಂಎಸ್ ಆರೋಪಿಸಿದೆ.

ಸೆಕ್ಷನ್ 5 (2) ರ ಪ್ರಕಾರ ಖಾಸಗಿ ಕಂಪನಿಗಳು ತಮ್ಮದೇ ಆದ ವ್ಯಾಪಾರದ ನಿಯಮಗಳನ್ನು ನಿರ್ಧರಿಸುತ್ತವೆ ಮತ್ತು ಬೆಳೆ ವ್ಯಾಪಾರದ ಎಲ್ಲಾ ವಿವಾದ ಇತ್ಯರ್ಥಗಳು ಅವರ ನಿಯಮಗಳ ಪ್ರಕಾರವೇ ನಡೆಯುತ್ತವೆ, ಆದರೆ ಎಂಎಸ್ಪಿ ಪ್ರಜಾರ ಅಲ್ಲಿ ವಹಿವಾಟು ನಡೆಯುವುದೇ ಇಲ್ಲ’ ಎಂದು ಎಐಕೆಎಂಎಸ್ ವಿವರಣೆ ನೀಡಿದೆ.

‘ಗುತ್ತಿಗೆ ಕಾಯ್ದೆಯ ಸೆಕ್ಷನ್ 9, ರೈತರಿಗೆ ಸಾಲಕ್ಕಾಗಿ ಬ್ಯಾಂಕುಗಳೊಂದಿಗೆ ಭೂಮಿಯನ್ನು ಅಡಮಾನ ಇಡಲು ಆದೇಶಿಸುತ್ತದೆ. ಸೆಕ್ಷನ್ 14 (2 ಮತ್ತು 7) ರ ಪ್ರಕಾರ ಅವರು ಪ್ರಾಯೋಜಕ ಕಂಪನಿಯಿಂದ ಮುಂಗಡ ಪಡೆದರೆ, ವಸೂಲಿಗಳು ‘ಭೂ ಆದಾಯದ ಬಾಕಿ’ ಆಗಿರುತ್ತವೆ….’
‘ಈ ಕಾಯಿದೆಗಳು ಆಹಾರಧಾನ್ಯವನ್ನು ಅನಧಿಕೃತವಾಗಿ ಶೇಖರಿಸಲು, ಕಪ್ಪು ಮಾರುಕಟ್ಟೆ (ಬ್ಲಾಕ್ ಮಾರ್ಕೆಟ್) ಸೃಷ್ಟಿಸಲು, ಆಹಾರದ ಬೆಲೆಗಳನ್ನು ಹೆಚ್ಚಿಸಲು ಮತ್ತು ಸರ್ಕಾರಿ ಖರೀದಿ ಮತ್ತು ಪಿಡಿಎಸ್ ಅನ್ನು ರದ್ದುಗೊಳಿಸಲು ಪರವಾನಗಿ ನೀಡುತ್ತವೆ’ ಎಂದು ಎಐಕೆಎಂಎಸ್ ಆರೋಪಿಸಿದೆ.

‘ಈ ಕಾಯ್ದೆಗಳ ಯಾವುದೇ ವಿಳಂಬ ಅನುಷ್ಠಾನ / ಅಮಾನತು ಪ್ರಕ್ರಿಯೆಗಳನ್ನು ಸ್ವೀಕರಿಸಲು ರೈತರು ನಿರಾಕರಿಸುವುದು ಈ ಕಾಯಿದೆಗಳಲ್ಲಿನ ಅಂತಹ ನಿಬಂಧನೆಗಳು ಅವರ ವಿರುದ್ಧ ಇವೆ ಎಂಬ ಕಾರಣಕ್ಕೇ. ಈ ಕಾನೂನುಗಳನ್ನು ಖಾಸಗಿ ಬಂಡವಾಳಶಾಹಿಗಳ ಲಾಭಕ್ಕಷ್ಟೇ ಜಾರಿ ಮಾಡಲಾಗಿದೆ’ಎಂದು ಎಐಕೆಎಂಎಸ್ ಪ್ರಕಟನೆಯಲ್ಲಯ ತಿಳಿಸಿದೆ.

ಸಿಂಘು
ಟಿಕ್ರಿ ಗಡಿಯಲ್ಲಿ ರೈತರು ಪ್ರತಿಭಟಿಸುತ್ತಿರುವುದು

ಭಾರತೀಯ ಪಶುಸಂಗೋಪನೆ ಮತ್ತು ಹಸಿರು ಕ್ರಾಂತಿಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳು ಸತ್ಯವನ್ನು ತಪ್ಪಾಗಿ ನಿರೂಪಿಸಿದ್ದಾರೆ. ಹಾಲು ಉತ್ಪಾದನೆಯು ರೈತರಿಗೆ ಪ್ರಯೋಜನಕಾರಿಯಾಗಿದೆ, ಅಲ್ಲಿ ಸರ್ಕಾರ ಸಹಕಾರಿ ಹಾಲು ವಲಯವು ಲಾಭದಾಯಕ ದರವನ್ನು ನೀಡಿದರೆ, ಹಸಿರು ಕ್ರಾಂತಿಯು ಎಂಎಸ್ಪಿ ದರಗಳು ಮತ್ತು ಸರ್ಕಾರಿ ಸಂಗ್ರಹಣೆಯ ಮೇಲೆ ಮಾತ್ರ ಉಳಿದಿದೆ. ಈಗ ಈ ಕಾನೂನುಗಳ ಪ್ರಕಾರ ಸರ್ಕಾರಿ ಖರೀದಿ ಮತ್ತು ಸರ್ಕಾರಿ ಮಂಡಳಿಗಳನ್ನು ಖಾಸಗೀಕರಣ ಮಾಡಲು ಹೊರಟಿದೆ. ಇದರಿಂದ ಈ ವರ್ಗದ ರೈತರು ಸಹ ತಮ್ಮ ಭೂಮಿ ಮತ್ತು ಜೀವನೋಪಾಯದಿಂದ ವಂಚಿತರಾಗುತ್ತಾರೆ.

ಸರ್ಕಾರವು ಕಿವುಡ ಕಿವಿ ಹೊಂದಿದ್ದು, ಕಾರಣಗಳನ್ನು ಸ್ಪಷ್ಟಪಡಿಸಲು ಶಕ್ತಿ ಇಲ್ಲದ ಕಾರಣಕ್ಕೆ ರೈತರನ್ನು ದೂಷಿಸುತ್ತಿದೆ ಎಂಬುದು ಈಗ ಸ್ಪಷ್ಟವಾಗಿದೆ ಎಂದು ಎಐಕೆಎಂಎಸ್ ಹೇಳಿದೆ.
ಒಬ್ಬ ಪ್ರಧಾನ ಮಂತ್ರಿಯು ತನ್ನ ಜನರನ್ನು ಮರುಳು ಮಾಡಲು ಇಂತಹ ಮಟ್ಟಕ್ಕೆ ಇಳಿಯಬಹುದು ಎಂಬುದು ವಿಚಿತ್ರವಾಗಿದೆ! ದೇಶದ ಸಂಸತ್ತು ಭಾರತೀಯ ಕಾರ್ಪೊರೇಟ್‌ನೊಂದಿಗೆ ಸಂಪರ್ಕ ಹೊಂದಿದ್ದು, ವಿದೇಶಿ ಶೋಷಕ ಕಾರ್ಪೊರೇಟ್ ಶಕ್ತಿಗಳ ಗುಲಾಮ ಆಗಿರುವುದನ್ನು ಇದು ಸೂಚಿಸುತ್ತದೆಯಲ್ಲವೆ? ಸಂಪೂರ್ಣ ಕೃಷಿ ಪ್ರಕ್ರಿಯೆಗಳು, ಕೃಷಿ ಭೂಮಿ, ನೈಸರ್ಗಿಕ ಸಂಪನ್ಮೂಲಗಳು, ಕೃಷಿ ಸಂಸ್ಕರಣೆ, ಸಂಗ್ರಹಣೆ ಮತ್ತು ಮಾರುಕಟ್ಟೆಗಳ ಮೇಲಿನ ನಿಯಂತ್ರಣವನ್ನು ಎಂಎನ್ಸಿ ಮತ್ತು ಭಾರತೀಯ ಕಾರ್ಪೊರೇಟ್ಗೆ ಹಸ್ತಾಂತರಿಸಲು ಕಾನೂನುಗಳು ಅವಕಾಶ ಮಾಡಿಕೊಡುತ್ತಿವೆ. ಇದು ಆರ್ಎಸ್ಎಸ್ ನಿಯಮ ಮತ್ತು ಅದರ ಮೋಸಗೊಳಿಸುವ ಸಿದ್ಧಾಂತದ ಲಕ್ಷಣವಾಗಿದೆ ಎಂದು ಎಐಕೆಎಂಎಸ್ ವಿವರಿಸಿದೆ. ಭಾರತೀಯ ಸಂಪನ್ಮೂಲಗಳನ್ನು ವಿದೇಶಿ ಕಂಪನಿಗಳಿಗೆ ಹಸ್ತಾಂತರಿಸುವುದನ್ನು ಪ್ರಧಾನ ಮಂತ್ರಿ “ಆತ್ಮ್ ನಿರ್ಭರ್” ಎಂದು ಕರೆಯುತ್ತಾರೆ. ವಿದೇಶಿ ಶೋಷಕರ ಸೇವೆ, ಸ್ವಾತಂತ್ರ್ಯ ಚಳವಳಿಯ ಸಮಯದಲ್ಲಿ ಜನರಿಗೆ ದ್ರೋಹ ಬಗೆದ ಅವರ ಪಾತ್ರದ ಪುನರಾವರ್ತನೆಯಾಗಿದೆ ಎಂದು ಸಂಘಟನೆ ಹೇಳಿಕೆ ನೀಡಿದೆ.


ಇದನ್ನೂ ಓದಿ: ಆಂದೋಲನ್ ಜೀವಿಗಳಾಗಲು ಹೆಮ್ಮೆ ಪಡುತ್ತೇವೆ: ಮೋದಿಗೆ ತಿರುಗೇಟು ನೀಡಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....