Homeಮುಖಪುಟಪ್ರಧಾನಿ ಮೋದಿ ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ: ರಾಹುಲ್ ಗಾಂಧಿ

ಪ್ರಧಾನಿ ಮೋದಿ ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ: ರಾಹುಲ್ ಗಾಂಧಿ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಭಾರತೀಯ ಸಮಾಜದ ಕತ್ತು ಹಿಸುಕುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಗುರುವಾರ ವಾಷಿಂಗ್ಟನ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ವಾಷಿಂಗ್ಟನ್‌ ನ್ಯಾಷನಲ್ ಪ್ರೆಸ್ ಕ್ಲಬ್‌ನಲ್ಲಿ ಗುರುವಾರ ಪತ್ರಕರ್ತರೊಂದಿಗೆ ಸಂವಾದ ನಡೆಸಿದ ಅವರು, ”ನರೇಂದ್ರ ಮೋದಿ ಅವರು ಭಾರತೀಯ ಸಮಾಜವನ್ನು ಧ್ರುವೀಕರಿಸುತ್ತಿದ್ದಾರೆ ಮತ್ತು ಒಡೆಯುತ್ತಿದ್ದಾರೆ. ಅವರ ಆಡಳಿತದಲ್ಲಿ ಸಾಂವಿಧಾನಿಕ ಸಂಸ್ಥೆಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ” ಎಂದು ಆರೋಪಿಸಿದರು.

”140 ಕೋಟಿ ಜನರಿರುವ, ವಿವಿಧ ನಂಬಿಕೆಗಳ, ಜಾತ್ಯತೀತ ಸಂವಿಧಾನದ ದೇಶದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ಹಿಂದುತ್ವವನ್ನು ಪ್ರತಿಪಾದಿಸುತ್ತಿದೆ” ಎಂದು ಅವರು ಆರೋಪ ಮಾಡಿದರು.

ಅವರು ಏನೇ ಮಾಡಿದರೂ ಅದೆಲ್ಲವನ್ನು ಮೀರಿ 2024ರ ಚುನಾವಣೆಯಲ್ಲಿ ಪ್ರತಿಪಕ್ಷಗಳು ಬಿಜೆಪಿಯನ್ನು ಸೋಲಿಸಲಿವೆ ಎಂದು ರಾಹುಲ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

”ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಉತ್ತಮ ಸಾಧನೆ ಮಾಡುತ್ತದೆ ಎಂದು ನಾನು ನಂಬಿದ್ದೇನೆ. ಆಶ್ಚರ್ಯಕರ ರೀತಿಯಲ್ಲಿ ಪಕ್ಷ ಹೊರಹೊಮ್ಮಲಿದೆ. ನೋಡುತ್ತಿರಿ, ವಿರೋಧ ಪಕ್ಷಗಳ ಒಗ್ಗಟ್ಟು ಬಿಜೆಪಿಯನ್ನು ಸೋಲಿಸಲಿದ” ಎಂದು ಅವರು ಹೇಳಿದರು.

ಕ್ಯಾಲಿಫೋರ್ನಿಯಾದ ಸ್ಟ್ಯಾನ್‌ಫೋರ್ಡ್ ವಿಶ್ವವಿದ್ಯಾನಿಲಯದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದಾತ್ಮಕ ಅಧಿವೇಶನದಲ್ಲಿ ಮಾತನಾಡಿದ ಅವರು, ”2004ರಲ್ಲಿ ನಾನು ರಾಜಕೀಯಕ್ಕೆ ಸೇರಿದಾಗ, ಮುಂದೆ ಯಾವತ್ತೋ ಒಂದು ದಿನ ಸಂಸತ್ತಿನಿಂದ ಅನರ್ಹಗೊಳಿಸಲಾಗುತ್ತದೆ” ಎಂದು ನಾನು ಊಹಿಸಿರಲಿಲ್ಲ ಎಂದು ಹೇಳಿದರು.

ಇದನ್ನೂ ಓದಿ: ಮೋದಿಯನ್ನು ದೇವರೊಂದಿಗೆ ಚರ್ಚೆಗೆ ಕೂರಿಸಿದರೆ, ದೇವರೇ ಗೊಂದಲಕ್ಕಿಡಾಗುತ್ತಾನೆ: ರಾಹುಲ್ ವ್ಯಂಗ್ಯ

ಅವರು ಹೀಗೆ ಮಾಡುತ್ತಾರೆ ಎಂದು ನಾನು ಎಂದಿಗೂ ಯೋಚಿಸಿರಲಿಲ್ಲ ಎಂದು ಹೇಳಿದರು.

”ಮಾನನಷ್ಟಕ್ಕಾಗಿ ಕ್ರಿಮಿನಲ್ ಶಿಕ್ಷೆಗೆ ಒಳಗಾದ ಮೊದಲ ವ್ಯಕ್ತಿ ನಾನು” ಅದರಿಂದ ನನ್ನನ್ನು ವಸಂಸತ್ತಿನಿಂದ ಅಮಾನತು ಮಾಡಲಾಯಿತು. ಆದರೆ ಇದು ನನಗೆ ಒಂದು ದೊಡ್ಡ ಅವಕಾಶವನ್ನು ನೀಡಿದೆ ಎಂದು ನಾನು ಭಾವಿಸುತ್ತೇನೆ, ಬಹುಶಃ ಸಂಸತ್ತಿನಲ್ಲಿ ನನಗೆ ಸಿಗುವ ಅವಕಾಶಕ್ಕಿಂತ ದೊಡ್ಡದಾಗಿದೆ ಎಂದು ಸಕಾರಾತ್ಮಕವಾಗಿ ಮಾತನಾಡಿದರು.

ಪ್ರಧಾನಿ ನರೇಂದ್ರ ಮೋದಿಯವರ ಉಪನಾಮದ ಬಗ್ಗೆ ಹೇಳಿಕೆ ನೀಡಿದ್ದರಿಂದ ಮಾನನಷ್ಟ ಮೊಕದ್ದಮೆಯಲ್ಲಿ ಗುಜರಾತ್‌ನ ನ್ಯಾಯಾಲಯವು ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಒಂದು ದಿನದ ನಂತರ, ಮಾರ್ಚ್ 24 ರಂದು ಗಾಂಧಿ ಅವರನ್ನು ಲೋಕಸಭೆಯ ಸದಸ್ಯರಾಗಿ ಅನರ್ಹಗೊಳಿಸಲಾಯಿತು.

ಪ್ರಜಾಪ್ರತಿನಿಧಿ ಕಾಯಿದೆ, 1951 ರ ಸೆಕ್ಷನ್ 8(3) ರ ಪ್ರಕಾರ, ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ಜೈಲು ಶಿಕ್ಷೆಗೆ ಗುರಿಯಾದ ಶಾಸಕನನ್ನು ಶಿಕ್ಷೆಯ ದಿನಾಂಕದಿಂದ ಆರು ವರ್ಷಗಳ ಅವಧಿಯ ನಂತರ ಅನರ್ಹಗೊಳಿಸಲಾಗುತ್ತದೆ.

ರಾಹುಲ್ ಗಾಂಧಿ ಅವರ ಮೇಲಿನ ಅಪರಾಧವನ್ನು ತಡೆಹಿಡಿದರೆ ಲೋಕಸಭೆಯ ಸದಸ್ಯತ್ವವನ್ನು ಮರುಸ್ಥಾಪಿಸಬಹುದು. ಮೇ 2 ರಂದು, ಗುಜರಾತ್ ಹೈಕೋರ್ಟ್ ರಾಜಕಾರಣಿಗೆ ಮಧ್ಯಂತರ ರಕ್ಷಣೆ ನೀಡಲು ನಿರಾಕರಿಸಿತು ಮತ್ತು ಜೂನ್ 5 ರ ನಂತರ ಶಿಕ್ಷೆಗೆ ತಡೆ ಕೋರಿ ಸಲ್ಲಿಸಿದ ಅರ್ಜಿಯಲ್ಲಿ ತನ್ನ ತೀರ್ಪನ್ನು ಪ್ರಕಟಿಸುವುದಾಗಿ ಹೇಳಿದೆ.

ಪ್ರಧಾನಿ ಮೋದಿ ಅವರು ಜೂನ್ 22 ರಂದು ಮೋದಿ ಅಮೆರಿಕ ಭೇಟಿ ಕೈಗೊಳ್ಳಲಿದ್ದಾರೆ. ಅವರ ಸ್ವಾಗತಕ್ಕೆ ಶ್ವೇತಭವನದಲ್ಲಿ ಭಾರಿ ಸಿದ್ಧತೆಗಳು ನಡೆಯುತ್ತಿವೆ. ಇದರ ನಡುವೆಯೇ ರಾಹುಲ್ ಅಮೆರಿಕಕ್ಕೆ ಭೇಟಿ ನೀಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...