Homeಮುಖಪುಟಪಿಎಂ ಮೋದಿ ಸಂಪೂರ್ಣ ಸುಳ್ಳು ಹೇಳುತ್ತಿದ್ದಾರೆ: ದೆಹಲಿ, ಮಹಾರಾಷ್ಟ್ರ ಸರ್ಕಾರಗಳ ಆಕ್ರೋಶ

ಪಿಎಂ ಮೋದಿ ಸಂಪೂರ್ಣ ಸುಳ್ಳು ಹೇಳುತ್ತಿದ್ದಾರೆ: ದೆಹಲಿ, ಮಹಾರಾಷ್ಟ್ರ ಸರ್ಕಾರಗಳ ಆಕ್ರೋಶ

ದೇಶಾದ್ಯಂತ ಕೊರೊನಾ ಸಾಂಕ್ರಾಮಿಕ ಹರಡಲು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳೆ ಕಾರಣವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಆರೋಪಿಸಿದ್ದರು.

- Advertisement -
- Advertisement -

ದೇಶಾದ್ಯಂತ ಕೊರೊನಾ ಸಾಂಕ್ರಾಮಿಕ ಹರಡಲು ಕಾಂಗ್ರೆಸ್ ಮತ್ತು ಇತರ ವಿರೋಧ ಪಕ್ಷಗಳೆ ಕಾರಣವಾಗಿವೆ ಎಂದು ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ಮಾಡಿದ ಆರೋಪಕ್ಕೆ ದೆಹಲಿ ಮತ್ತು ಮಹರಾಷ್ಟ್ರ ಸರ್ಕಾರಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿವೆ. ಮೋದಿ ಸಂಪೂರ್ಣ ಸುಳ್ಳು ಹೇಳುತ್ತಿದ್ದಾರೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಿಡಿಕಾರಿದರೆ, 5 ರಾಜ್ಯಗಳ ಚುನಾವಣೆಗಾಗಿ ಮೋದಿ ವಾಸ್ತವವನ್ನು ತಿರುಚಿತ್ತಿದ್ದಾರೆ ಎಂದು ಮಹಾರಾಷ್ಟ್ರದ ಸಚಿವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದು ಕೇಂದ್ರ ಮತ್ತು ರಾಜ್ಯಗಳ ನಡುವಿನ ಹೊಸ ತಿಕ್ಕಾಟಕ್ಕೆ ದಾರಿ ಮಾಡಿಕೊಟ್ಟಿದೆ.

“ಪ್ರಧಾನಿಯವರ ಹೇಳಿಕೆ ಸಂಪೂರ್ಣ ಸುಳ್ಳು. ಕೊರೋನಾ ಅವಧಿಯ ಸಂಕಷ್ಟ ಅನುಭವಿಸಿದವರು, ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡವರ ಬಗ್ಗೆ ಪ್ರಧಾನಿ ಸಂವೇದನಾಶೀಲರಾಗುತ್ತಾರೆ ಎಂದು ದೇಶ ಭಾವಿಸುತ್ತದೆ. ಜನರ ನೋವಿನಲ್ಲಿ ರಾಜಕೀಯ ಮಾಡುವುದು ಪ್ರಧಾನಿಗೆ ಸರಿಹೊಂದುವುದಿಲ್ಲ ಎಂದು ಅರವಿಂದ್ ಕೇಜ್ರಿವಾಲ್ ಟ್ವೀಟ್ ಮಾಡಿದ್ದಾರೆ.

ನಿನ್ನೆ ಸಂಸತ್ತಿನಲ್ಲಿ ಮೋದಿ, “ವಿರೋಧ ಪಕ್ಷಗಳು ಸಕರಾತ್ಮಕವಾಗಿ ಏನನ್ನು ಮಾಡಲಿಲ್ಲ, ಕೋವಿಡ್ ಮುನ್ನೆಚ್ಚರಿಕೆಗೆ ತೆಗೆದುಕೊಳ್ಳಿ ಎಂದು ಜನರಿಗೆ ಮನವಿ ಮಾಡಲಿಲ್ಲ, ಆದರೆ ದೇಶಾದ್ಯಂತ ಕೋವಿಡ್ ಹರಡಲು ಅವರ ಕೊಡುಗೆ ಸಾಕಷ್ಟಿದೆ. ಮೊದಲ ಕೋವಿಡ್ ಅಲೆಯಲ್ಲಿ ನಾವು ಲಾಕ್‌ಡೌನ್ ಹೇರಿದ್ದೆವು. ವಿಶ್ವ ಆರೋಗ್ಯ ಸಂಸ್ಥೆಯು ನೀವು ಇರುವಲ್ಲಿಯೇ ಇರಿ ಎಂದು ಎಚ್ಚರಿಕೆ ನೀಡಿತ್ತು. ಆದರೆ ಕಾಂಗ್ರೆಸ್ ಪಕ್ಷವು ತನ್ನ ಮಿತಿಯನ್ನು ದಾಟಿತು. ಅದು ಮುಂಬೈ ರೈಲ್ವೆ ಸ್ಟೇಷನ್‌ನಲ್ಲಿ ವಲಸೆ ಕಾರ್ಮಿಕರಿಗೆ ಟಿಕೆಟ್ ಕೊಡಿಸಿ ದೇಶಾದ್ಯಂತ ವೈರಸ್ ಹರಡಿ ಎಂದು ಹುರಿದುಂಬಿಸಿತು” ಎಂದು ಆರೋಪಿಸಿದ್ದರು.

ಮುಂದುವರಿದು ಮಹಾರಾಷ್ಟ್ರ ಮತ್ತು ದೆಹಲಿ ಸರ್ಕಾರಗಳೇ ಕೋವಿಡ್ ಹರಡಲು ಕಾರಣವಾಗಿವೆ. ಅವು ಕಾರ್ಮಿಕರನ್ನು ಸಂಕಷ್ಟಕ್ಕೆ ದೂಡಿದವು. ದೆಹಲಿ ಸರ್ಕಾರವು ವಾಹನಗಳಲ್ಲಿ ಮೈಕ್ ಹಾಕಿಕೊಂಡು ನಿಮಗಾಗಿ ಬಸ್ ವ್ಯವಸ್ಥೆ ಮಾಡಿದ್ದೇವೆ ಎಂದು ಸಾರಿತು. ಹಾಗಾಗಿ ಉತ್ತರ ಪ್ರದೇಶ ಸೇರಿದಂತೆ ಯಾವ ರಾಜ್ಯಗಳಲ್ಲಿ ಕೊರೊನಾ ಇರಲಿಲ್ಲವೋ ಅಲ್ಲಿಯೂ ಕೊರೊನಾ ಹರಡಲು ಕಾರಣವಾಯಿತು.ಕೆಲವರು ಕೊರೊನಾ ಮೋದಿಯವರ ವರ್ಚಸ್ಸನ್ನು ಹಾಳು ಮಾಡುತ್ತದೆ ಎಂದು ನಂಬಿದ್ದರು. ಹಾಗಾಗಿಯೇ ಈ ಕೆಲಸ ಮಾಡಿದರು ಎಂದು ನರೇಂದ್ರ ಮೋದಿ ಹೇಳಿದ್ದರು.

ಪ್ರಧಾನಿ ಹೇಳಿಕೆಗೆ ವಿರೋಧ ವ್ಯಕ್ತಪಡಿಸಿರುವ ಮಹಾರಾಷ್ಟ್ರದ ಕಾಂಗ್ರೆಸ್ ನಾಯಕ ಹಾಗೂ ಕಂದಾಯ ಸಚಿವ ಬಾಳಾಸಾಹೇಬ್ ಥೋರಟ್ “ಕೇಂದ್ರವು ಯಾವುದೇ ಪೂರ್ವಸಿದ್ದತೆ ಇಲ್ಲದೆ ಲಾಕ್‌ಡೌನ್ ಹೇರುವ ಮೂಲಕ ತನ್ನ ಜವಾಬ್ದಾರಿಯಿಂದ ನುಣುಚಿಕೊಂಡಿತ್ತು ಮತ್ತು ಕಾರ್ಮಿಕರನ್ನು ಸಾಯಲು ಬಿಟ್ಟಿತು. ಮುಂಬೈ ಮತ್ತು ಮಹಾರಾಷ್ಟ್ರದಲ್ಲಿರುವ ಉತ್ತರ ಪ್ರದೇಶ ಮತ್ತು ಬಿಹಾರದ ನಮ್ಮ ಸಹೋದರರ ಪರಿಸ್ಥಿತಿ ಹದಗೆಟ್ಟಿತು ಮತ್ತು ಅವರು ಹಸಿವಿನಿಂದ ಬಳಲುತ್ತಿದ್ದರು. ಕೊರೋನಾ ಅವಧಿಯಲ್ಲಿ ವಲಸೆ ಕಾರ್ಮಿಕರಿಗೆ ಮಹಾರಾಷ್ಟ್ರ ವಿಕಾಸ್ ಅಘಾಡಿ ಸರ್ಕಾರ ಮತ್ತು ಕಾಂಗ್ರೆಸ್ ನೀಡಿದ ಬೆಂಬಲದ ಬಗ್ಗೆ ನಾವು ಹೆಮ್ಮೆಪಡುತ್ತೇವೆ” ಎಂದು ತಿಳಿಸಿದ್ದಾರೆ.

ಎನ್‌ಸಿಪಿ ನಾಯಕ ನವಾಬ್ ಮಲ್ಲಿಕ್ ಪ್ರತಿಕ್ರಿಯಿಸಿ, “ದೇಶದಲ್ಲಿ ಕೋವಿಡ್ ಹರಡಲು ನರೇಂದ್ರ ಮೋದಿಯವರೆ ನೇರ ಕಾರಣ. ಅವರು ಫೆಬ್ರವರಿ 2020 ರಲ್ಲಿ ನಮಸ್ತೆ ಟ್ರಂಪ್ ಕಾರ್ಯಕ್ರಮ ಏರ್ಪಡಿಸಿ ಕೋವಿಡ್ ಹರಡಲು ಕಾರಣರಾದರು. ಅಲ್ಲದೆ ಸೂಕ್ತ ಸಮಯದಲ್ಲಿ ಅಂತರಾಷ್ಟ್ರೀಯ ಗಡಿ ಮತ್ತು ವಿಮಾನ ನಿಲ್ದಾಣಗಳನ್ನು ಮುಚ್ಚಿದ್ದರೆ ಕೊರೊನಾ ಹರಡದಂತೆ ತಡೆಯಬಹುದಿತ್ತು” ಎಂದಿದ್ದಾರೆ.

ಶಿವಸೇನೆ ಸಂಸದೆ ಪ್ರಿಯಾಂಕಾ ಚತುರ್ವೇದಿ, “ಲಾಕ್‌ಡೌನ್ ಘೋಷಣೆಯಾಗುವ 4 ಗಂಟೆಗಳ ಮೊದಲು, ರೈಲುಗಳು ನಿಂತುಹೋದವು, ಅಂತರರಾಜ್ಯ ಪ್ರಯಾಣವು ಸ್ಥಗಿತಗೊಂಡಿತು. ವಲಸಿಗರು – ಮುಖ್ಯವಾಗಿ ದೈನಂದಿನ ಕೂಲಿ ಕಾರ್ಮಿಕರು ಸಿಕ್ಕಿಹಾಕಿಕೊಂಡರು. ಅವರಿಗೆ ಆಹಾರ ಮತ್ತು ಆಶ್ರಯ ನೀಡಿ ನೋಡಿಕೊಳ್ಳುವುದು ಪ್ರಧಾನಿಯ ದೃಷ್ಟಿಯಲ್ಲಿ ತಪ್ಪಾಗಿದ್ದರೆ, ಮಾನವೀಯತೆಗಾಗಿ ಈ ತಪ್ಪನ್ನು 100 ಬಾರಿ ಮಾಡುತ್ತೇವೆ” ಎಂದು ಟ್ವೀಟ್ ಮಾಡಿದ್ದಾರೆ.

ಮೋದಿಯವರ ಸಂಸತ್ತಿನ ಭಾಷಣಕ್ಕೆ ವಿಪಕ್ಷಗಳು ಮಾತ್ರವಲ್ಲದೆ ನಾಗರೀಕರು ಸಹ ವಿರೋಧ ವ್ಯಕ್ತಪಡಿಸಿದ್ದಾರೆ. ಕೋವಿಡ್ ನಿಭಾಯಿಸುವಲ್ಲಿ ತಮ್ಮ ಸಂಪೂರ್ಣ ವೈಫಲ್ಯವನ್ನು ಮುಚ್ಚಿಹಾಕಲು ವಿಪಕ್ಷಗಳನ್ನು ಟೀಕಿಸುವುದು ಸರಿಯಲ್ಲ ಎಂಬ ಅಭಿಪ್ರಾಯ ಸಾಮಾಜಿಕ ಜಾಲತಾಣಗಳಲ್ಲಿ ವ್ಯಕ್ತವಾಗಿದೆ.

ಒಂದೆಡೆ ವಲಸೆ ಕಾರ್ಮಿಕರಿಗೆ ಉಚಿತ ಟಿಕೆಟ್, ಬಸ್ ವ್ಯವಸ್ಥೆ ಮಾಡಿದ್ದಕ್ಕೆ ಮೋದಿ ವಿಪಕ್ಷಗಳನ್ನು ಕೋವಿಡ್ ಹರಡಲು ಕಾರಣ ಎಂದು ದೂರುತ್ತಿದ್ದಾರೆ. ಅದೇ ಸಂದರ್ಭದಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ರಾಜ್ಯ ಸಚಿವರು ಲೋಕಸಭೆಯಲ್ಲಿ ನೀಡಿದ ಲಿಖಿತ ಉತ್ತರದ ಪ್ರಕಾರ, 2020ರ ಮಾರ್ಚ್-ಜೂನ್ ನಡುವಿನ ಅವಧಿಯಲ್ಲಿ 1 ಕೋಟಿಗೂ ಹೆಚ್ಚು ವಲಸೆ ಕಾರ್ಮಿಕರು ದೇಶಾದ್ಯಂತ ಕಾಲ್ನಡಿಗೆಯಲ್ಲಿ ತಮ್ಮ ರಾಜ್ಯಗಳಿಗೆ ಮರಳಿದ್ದಾರೆ. ಆ ಸಂದರ್ಭದಲ್ಲಿ ಸಾವಿರಾರು ಕಿ.ಮೀ ಅಂತರವನ್ನು ನಡೆದು ಸಾಗುತ್ತಿದ್ದ ದೃಶ್ಯಗಳು ಮನಕಲಕುವಂತಿದ್ದವು.


ಇದನ್ನೂ ಓದಿ: ಕಾಂಗ್ರೆಸ್ ವಲಸೆ ಕಾರ್ಮಿಕರನ್ನು ಅವರವರ ಊರಿಗೆ ಕಳುಹಿಸುವ ಮೂಲಕ ದೇಶಾದ್ಯಂತ ಕೊರೊನಾ ಹರಡಿತು: ಪಿಎಂ ಮೋದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...