Homeಮುಖಪುಟ‘ಪ್ರಧಾನಿ ಮೋದಿಗೆ ಕೊರೊನಾ ಬಗ್ಗೆ ಏನೂ ಗೊತ್ತಿಲ್ಲ’ - ರಾಹುಲ್ ಗಾಂಧಿ ದಾಳಿ

‘ಪ್ರಧಾನಿ ಮೋದಿಗೆ ಕೊರೊನಾ ಬಗ್ಗೆ ಏನೂ ಗೊತ್ತಿಲ್ಲ’ – ರಾಹುಲ್ ಗಾಂಧಿ ದಾಳಿ

- Advertisement -
- Advertisement -

ಕೊರೊನಾ ಸಾಂಕ್ರಮಿಕವನ್ನು ನಿಭಾಯಿಸಿರುವುದು ಮತ್ತು ಮಾರಣಾಂತಿಕ ಎರಡನೇ ಅಲೆಯ ಉಲ್ಬಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಯು ಕೇಂದ್ರ ಸರ್ಕಾರದ ವಿರುದ್ದ ತೀಕ್ಷ್ಣವಾಗಿ ದಾಳಿ ನಡೆಸಿದ್ದು, “ಪ್ರಧಾನಿ ನರೇಂದ್ರ ಮೋದಿಯವರೆ ಕೊರೊನಾ ಎರಡನೆ ಅಲೆಗೆ ಜವಾಬ್ದಾರಿ, ಅವರಿಗೆ ಸೋಂಕಿನ ಬಗ್ಗೆ ಏನೂ ಗೊತ್ತಿಲ್ಲ” ಎಂದು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೊರೊನಾ ಮೊದಲ ಅಲೆ ಯಾರಿಗೂ ಅರ್ಥವಾಗಲಿಲ್ಲ…ಆದರೆ ಎರಡನೆಯ ಅಲೆಯ ಉಲ್ಬಣಕ್ಕೆ ಪ್ರಧಾನಮಂತ್ರಿಯೆ ಜವಾಬ್ದಾರರಾಗಿದ್ದಾರೆ. ಅವರ ಸಾಹಸಗಳು(ಸ್ಟಂಟ್‌ಗಳು), ಸಾವಿನ ಬಗ್ಗೆ ಅವರ ಸುಳ್ಳುಗಳು…” ಎಂದು ರಾಹುಲ್ ಗಾಂಧಿ ಆನ್‌ಲೈನ್‌ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ 2 ನೇ ಅಲೆಯ ಸಮಯದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

“ಪ್ರಧಾನಿ ಅವರು ‘ಕಾರ್ಯಕ್ರಮಗಳ ಮ್ಯಾನೇಜರ್’ ಆಗಿದ್ದಾರೆ. ಆದರೆ ನಮಗೆ ‘ಕಾರ್ಯಕ್ರಮ’ಗಳ ಅಗತ್ಯವಿಲ್ಲ. ನಮಗೆ ಬೇಕಾಗಿದ್ದು ಕಾರ್ಯತಂತ್ರಗಳಾಗಿವೆ” ಎಂದು ಅವರು ಹೇಳಿದ್ದು, ಮೋದಿಗೆ ವೈರಸ್ ಬಗ್ಗೆ ಏನೂ ಗೊತ್ತಿಲ್ಲ ಎಂದು ಆರೋಪಿಸಿದ್ದಾರೆ.

“ನೀವು ಬಾಗಿಲು ತೆರೆದಿದ್ದೀರಿ, ಆದರೆ ಇನ್ನೂ ಬಾಗಿಲು ಮುಚ್ಚಿಲ್ಲ. ಜನಸಂಖ್ಯೆಯ ಕೇವಲ ಮೂರು ಪ್ರತಿಶತದಷ್ಟು ಜನರಿಗೆ ಮಾತ್ರ ಲಸಿಕೆ ನೀಡಿದ್ದೀರಿ, ಉಳಿದವರು ಇನ್ನೂ ಅಪಾಯದಲ್ಲಿದ್ದಾರೆ. ಅಮೆರಿಕ ತನ್ನ ಅರ್ಧದಷ್ಟು ಜನಸಂಖ್ಯೆಗೆ ಲಸಿಕೆ ನೀಡಿದೆ. ಬ್ರೆಜಿಲ್ 8 ರಿಂದ 9% ದಷ್ಟು ಲಸಿಕೆ ನೀಡಿದೆ. ಅವರು ದೊಡ್ಡ ಮಟ್ಟದಲ್ಲಿ ಲಸಿಕೆ ಉತ್ಪಾದಿಸುವುದಿಲ್ಲ, ಆದರೆ ನಾವು ಲಸಿಕೆಗಳನ್ನು ಉತ್ಪಾದಿಸುತ್ತೇವೆ” ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

“ಭಾರತವು ತನ್ನ ವ್ಯಾಕ್ಸಿನೇಷನ್ ತಂತ್ರವನ್ನು ಸರಿಯಾಗಿ ಮಾಡದಿದ್ದರೆ, ವೈರಸ್‌ನ ಅನೇಕ ಅಲೆಗಳು ಉಂಟಾಗುತ್ತದೆ ಎಂದು ನಾನು ನೇರವಾಗಿ ಪ್ರಧಾನ ಮಂತ್ರಿಗೆ ಹೇಳುತ್ತೇನೆ”

ಇದನ್ನೂ ಓದಿ: ತೇಜಸ್ವಿ ಸೂರ್ಯರಿಗೆ ಒಂದು ಪತ್ರ

ಕೊರೊನಾ ಮತ್ತು ಲಾಕ್‌ಡೌನ್‌ಗಳಿಗೆ ಲಸಿಕೆಗಳು ಮಾತ್ರ ಶಾಶ್ವತ ಪರಿಹಾರವಾಗಿದೆ. ಸಾಮಾಜಿಕ ಅಂತರ ಮತ್ತು ಮಾಸ್ಕ್‌ಗಳು ತಾತ್ಕಾಲಿಕವಾದವು. ಸರಿಯಾದ ವ್ಯಾಕ್ಸಿನೇಷನ್ ತಂತ್ರವಿಲ್ಲದಿದ್ದರೆ, ಭಾರತವು ಸೋಂಕಿನ ಅನೇಕ ಅಲೆಗಳಿಗೆ ಸಾಕ್ಷಿಯಾಗಲಿದೆ ಎಂದು ರಾಹುಲ್‌ ಗಾಂಧಿ ಒತ್ತಿ ಹೇಳಿದ್ದಾರೆ.

“ಲಸಿಕೆ ನೀಡುವ ಪ್ರಕ್ರಿಯೆ ಈ ವೇಗದಲ್ಲಿ ಮುಂದುವರಿದರೆ, ಸೋಂಕಿನ ಮೂರನೆಯ ಮತ್ತು ನಾಲ್ಕನೆಯ ಅಲೆಗಳೂ ಬರಲಿದೆ. ಏಕೆಂದರೆ ವೈರಸ್ ರೂಪಾಂತರಗೊಳ್ಳುತ್ತದೆ. ನಾವು ರೂಪಾಂತರ ಹೊಂದುತ್ತಿರುವ ಕಾಯಿಲೆಯಾದ ಕೊರೊನಾ ವೈರಸ್‌ನೊಂದಿಗೆ ಯುದ್ಧ ಮಾಡುತ್ತಿದ್ದೇವೆ. ಆದರೆ ಸರ್ಕಾರವು ವಿರೋಧ ಪಕ್ಷದ ವಿರುದ್ಧ ಹೋರಾಡುತ್ತಿದ್ದೇವೆ ಎಂದು ಭಾವಿಸುತ್ತಿದೆಯೆ ಹೊರತು ವೈರಸ್ ಜೊತೆ ಹೋರಾಡುತ್ತಿದ್ದೇವೆ ಎಂದಲ್ಲ” ಎಂದು ಅವರು ಹೇಳಿದ್ದಾರೆ.

“ಇದು ಸುಳ್ಳನ್ನು ಹರಡುವ ಸಮಯವಲ್ಲ. ಸರ್ಕಾರ ಸತ್ಯಸಂಧತೆಯಿಂದ ಕೂಡಿರಬೇಕು. ಇದು ದೇಶದ ಭವಿಷ್ಯವನ್ನು, ಜೀವಗಳನ್ನು ಉಳಿಸುವ ಪ್ರಶ್ನೆಯಾಗಿದೆ. ನಾವು ಸರ್ಕಾರದ ಶತ್ರುಗಳಲ್ಲ, ಪ್ರತಿಪಕ್ಷಗಳು ದಾರಿ ತೋರಿಸುತ್ತಿವೆ. ಅವರು ಫೆಬ್ರವರಿಯಲ್ಲೇ ನಮ್ಮ ಮಾತನ್ನು ಆಲಿಸುತ್ತಿದ್ದರೆ ನಾವು ಈ ಬಿಕ್ಕಟ್ಟನ್ನು ಎದುರಿಸ ಬೇಕಾಗುತ್ತಿರಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ದ ಬಳಸುವ ಔಷಧಗಳಿಗೆ ಜಿಎಸ್‌ಟಿ ಹೇರುವುದು ‘ಕ್ರೌರ್ಯ’: ಪ್ರಿಯಾಂಕ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...