Homeಮುಖಪುಟ‘ಪ್ರಧಾನಿ ಮೋದಿಗೆ ಕೊರೊನಾ ಬಗ್ಗೆ ಏನೂ ಗೊತ್ತಿಲ್ಲ’ - ರಾಹುಲ್ ಗಾಂಧಿ ದಾಳಿ

‘ಪ್ರಧಾನಿ ಮೋದಿಗೆ ಕೊರೊನಾ ಬಗ್ಗೆ ಏನೂ ಗೊತ್ತಿಲ್ಲ’ – ರಾಹುಲ್ ಗಾಂಧಿ ದಾಳಿ

- Advertisement -
- Advertisement -

ಕೊರೊನಾ ಸಾಂಕ್ರಮಿಕವನ್ನು ನಿಭಾಯಿಸಿರುವುದು ಮತ್ತು ಮಾರಣಾಂತಿಕ ಎರಡನೇ ಅಲೆಯ ಉಲ್ಬಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಯು ಕೇಂದ್ರ ಸರ್ಕಾರದ ವಿರುದ್ದ ತೀಕ್ಷ್ಣವಾಗಿ ದಾಳಿ ನಡೆಸಿದ್ದು, “ಪ್ರಧಾನಿ ನರೇಂದ್ರ ಮೋದಿಯವರೆ ಕೊರೊನಾ ಎರಡನೆ ಅಲೆಗೆ ಜವಾಬ್ದಾರಿ, ಅವರಿಗೆ ಸೋಂಕಿನ ಬಗ್ಗೆ ಏನೂ ಗೊತ್ತಿಲ್ಲ” ಎಂದು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೊರೊನಾ ಮೊದಲ ಅಲೆ ಯಾರಿಗೂ ಅರ್ಥವಾಗಲಿಲ್ಲ…ಆದರೆ ಎರಡನೆಯ ಅಲೆಯ ಉಲ್ಬಣಕ್ಕೆ ಪ್ರಧಾನಮಂತ್ರಿಯೆ ಜವಾಬ್ದಾರರಾಗಿದ್ದಾರೆ. ಅವರ ಸಾಹಸಗಳು(ಸ್ಟಂಟ್‌ಗಳು), ಸಾವಿನ ಬಗ್ಗೆ ಅವರ ಸುಳ್ಳುಗಳು…” ಎಂದು ರಾಹುಲ್ ಗಾಂಧಿ ಆನ್‌ಲೈನ್‌ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ 2 ನೇ ಅಲೆಯ ಸಮಯದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

“ಪ್ರಧಾನಿ ಅವರು ‘ಕಾರ್ಯಕ್ರಮಗಳ ಮ್ಯಾನೇಜರ್’ ಆಗಿದ್ದಾರೆ. ಆದರೆ ನಮಗೆ ‘ಕಾರ್ಯಕ್ರಮ’ಗಳ ಅಗತ್ಯವಿಲ್ಲ. ನಮಗೆ ಬೇಕಾಗಿದ್ದು ಕಾರ್ಯತಂತ್ರಗಳಾಗಿವೆ” ಎಂದು ಅವರು ಹೇಳಿದ್ದು, ಮೋದಿಗೆ ವೈರಸ್ ಬಗ್ಗೆ ಏನೂ ಗೊತ್ತಿಲ್ಲ ಎಂದು ಆರೋಪಿಸಿದ್ದಾರೆ.

“ನೀವು ಬಾಗಿಲು ತೆರೆದಿದ್ದೀರಿ, ಆದರೆ ಇನ್ನೂ ಬಾಗಿಲು ಮುಚ್ಚಿಲ್ಲ. ಜನಸಂಖ್ಯೆಯ ಕೇವಲ ಮೂರು ಪ್ರತಿಶತದಷ್ಟು ಜನರಿಗೆ ಮಾತ್ರ ಲಸಿಕೆ ನೀಡಿದ್ದೀರಿ, ಉಳಿದವರು ಇನ್ನೂ ಅಪಾಯದಲ್ಲಿದ್ದಾರೆ. ಅಮೆರಿಕ ತನ್ನ ಅರ್ಧದಷ್ಟು ಜನಸಂಖ್ಯೆಗೆ ಲಸಿಕೆ ನೀಡಿದೆ. ಬ್ರೆಜಿಲ್ 8 ರಿಂದ 9% ದಷ್ಟು ಲಸಿಕೆ ನೀಡಿದೆ. ಅವರು ದೊಡ್ಡ ಮಟ್ಟದಲ್ಲಿ ಲಸಿಕೆ ಉತ್ಪಾದಿಸುವುದಿಲ್ಲ, ಆದರೆ ನಾವು ಲಸಿಕೆಗಳನ್ನು ಉತ್ಪಾದಿಸುತ್ತೇವೆ” ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

“ಭಾರತವು ತನ್ನ ವ್ಯಾಕ್ಸಿನೇಷನ್ ತಂತ್ರವನ್ನು ಸರಿಯಾಗಿ ಮಾಡದಿದ್ದರೆ, ವೈರಸ್‌ನ ಅನೇಕ ಅಲೆಗಳು ಉಂಟಾಗುತ್ತದೆ ಎಂದು ನಾನು ನೇರವಾಗಿ ಪ್ರಧಾನ ಮಂತ್ರಿಗೆ ಹೇಳುತ್ತೇನೆ”

ಇದನ್ನೂ ಓದಿ: ತೇಜಸ್ವಿ ಸೂರ್ಯರಿಗೆ ಒಂದು ಪತ್ರ

ಕೊರೊನಾ ಮತ್ತು ಲಾಕ್‌ಡೌನ್‌ಗಳಿಗೆ ಲಸಿಕೆಗಳು ಮಾತ್ರ ಶಾಶ್ವತ ಪರಿಹಾರವಾಗಿದೆ. ಸಾಮಾಜಿಕ ಅಂತರ ಮತ್ತು ಮಾಸ್ಕ್‌ಗಳು ತಾತ್ಕಾಲಿಕವಾದವು. ಸರಿಯಾದ ವ್ಯಾಕ್ಸಿನೇಷನ್ ತಂತ್ರವಿಲ್ಲದಿದ್ದರೆ, ಭಾರತವು ಸೋಂಕಿನ ಅನೇಕ ಅಲೆಗಳಿಗೆ ಸಾಕ್ಷಿಯಾಗಲಿದೆ ಎಂದು ರಾಹುಲ್‌ ಗಾಂಧಿ ಒತ್ತಿ ಹೇಳಿದ್ದಾರೆ.

“ಲಸಿಕೆ ನೀಡುವ ಪ್ರಕ್ರಿಯೆ ಈ ವೇಗದಲ್ಲಿ ಮುಂದುವರಿದರೆ, ಸೋಂಕಿನ ಮೂರನೆಯ ಮತ್ತು ನಾಲ್ಕನೆಯ ಅಲೆಗಳೂ ಬರಲಿದೆ. ಏಕೆಂದರೆ ವೈರಸ್ ರೂಪಾಂತರಗೊಳ್ಳುತ್ತದೆ. ನಾವು ರೂಪಾಂತರ ಹೊಂದುತ್ತಿರುವ ಕಾಯಿಲೆಯಾದ ಕೊರೊನಾ ವೈರಸ್‌ನೊಂದಿಗೆ ಯುದ್ಧ ಮಾಡುತ್ತಿದ್ದೇವೆ. ಆದರೆ ಸರ್ಕಾರವು ವಿರೋಧ ಪಕ್ಷದ ವಿರುದ್ಧ ಹೋರಾಡುತ್ತಿದ್ದೇವೆ ಎಂದು ಭಾವಿಸುತ್ತಿದೆಯೆ ಹೊರತು ವೈರಸ್ ಜೊತೆ ಹೋರಾಡುತ್ತಿದ್ದೇವೆ ಎಂದಲ್ಲ” ಎಂದು ಅವರು ಹೇಳಿದ್ದಾರೆ.

“ಇದು ಸುಳ್ಳನ್ನು ಹರಡುವ ಸಮಯವಲ್ಲ. ಸರ್ಕಾರ ಸತ್ಯಸಂಧತೆಯಿಂದ ಕೂಡಿರಬೇಕು. ಇದು ದೇಶದ ಭವಿಷ್ಯವನ್ನು, ಜೀವಗಳನ್ನು ಉಳಿಸುವ ಪ್ರಶ್ನೆಯಾಗಿದೆ. ನಾವು ಸರ್ಕಾರದ ಶತ್ರುಗಳಲ್ಲ, ಪ್ರತಿಪಕ್ಷಗಳು ದಾರಿ ತೋರಿಸುತ್ತಿವೆ. ಅವರು ಫೆಬ್ರವರಿಯಲ್ಲೇ ನಮ್ಮ ಮಾತನ್ನು ಆಲಿಸುತ್ತಿದ್ದರೆ ನಾವು ಈ ಬಿಕ್ಕಟ್ಟನ್ನು ಎದುರಿಸ ಬೇಕಾಗುತ್ತಿರಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ದ ಬಳಸುವ ಔಷಧಗಳಿಗೆ ಜಿಎಸ್‌ಟಿ ಹೇರುವುದು ‘ಕ್ರೌರ್ಯ’: ಪ್ರಿಯಾಂಕ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...