Homeಮುಖಪುಟ‘ಪ್ರಧಾನಿ ಮೋದಿಗೆ ಕೊರೊನಾ ಬಗ್ಗೆ ಏನೂ ಗೊತ್ತಿಲ್ಲ’ - ರಾಹುಲ್ ಗಾಂಧಿ ದಾಳಿ

‘ಪ್ರಧಾನಿ ಮೋದಿಗೆ ಕೊರೊನಾ ಬಗ್ಗೆ ಏನೂ ಗೊತ್ತಿಲ್ಲ’ – ರಾಹುಲ್ ಗಾಂಧಿ ದಾಳಿ

- Advertisement -
- Advertisement -

ಕೊರೊನಾ ಸಾಂಕ್ರಮಿಕವನ್ನು ನಿಭಾಯಿಸಿರುವುದು ಮತ್ತು ಮಾರಣಾಂತಿಕ ಎರಡನೇ ಅಲೆಯ ಉಲ್ಬಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಯು ಕೇಂದ್ರ ಸರ್ಕಾರದ ವಿರುದ್ದ ತೀಕ್ಷ್ಣವಾಗಿ ದಾಳಿ ನಡೆಸಿದ್ದು, “ಪ್ರಧಾನಿ ನರೇಂದ್ರ ಮೋದಿಯವರೆ ಕೊರೊನಾ ಎರಡನೆ ಅಲೆಗೆ ಜವಾಬ್ದಾರಿ, ಅವರಿಗೆ ಸೋಂಕಿನ ಬಗ್ಗೆ ಏನೂ ಗೊತ್ತಿಲ್ಲ” ಎಂದು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೊರೊನಾ ಮೊದಲ ಅಲೆ ಯಾರಿಗೂ ಅರ್ಥವಾಗಲಿಲ್ಲ…ಆದರೆ ಎರಡನೆಯ ಅಲೆಯ ಉಲ್ಬಣಕ್ಕೆ ಪ್ರಧಾನಮಂತ್ರಿಯೆ ಜವಾಬ್ದಾರರಾಗಿದ್ದಾರೆ. ಅವರ ಸಾಹಸಗಳು(ಸ್ಟಂಟ್‌ಗಳು), ಸಾವಿನ ಬಗ್ಗೆ ಅವರ ಸುಳ್ಳುಗಳು…” ಎಂದು ರಾಹುಲ್ ಗಾಂಧಿ ಆನ್‌ಲೈನ್‌ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ 2 ನೇ ಅಲೆಯ ಸಮಯದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

“ಪ್ರಧಾನಿ ಅವರು ‘ಕಾರ್ಯಕ್ರಮಗಳ ಮ್ಯಾನೇಜರ್’ ಆಗಿದ್ದಾರೆ. ಆದರೆ ನಮಗೆ ‘ಕಾರ್ಯಕ್ರಮ’ಗಳ ಅಗತ್ಯವಿಲ್ಲ. ನಮಗೆ ಬೇಕಾಗಿದ್ದು ಕಾರ್ಯತಂತ್ರಗಳಾಗಿವೆ” ಎಂದು ಅವರು ಹೇಳಿದ್ದು, ಮೋದಿಗೆ ವೈರಸ್ ಬಗ್ಗೆ ಏನೂ ಗೊತ್ತಿಲ್ಲ ಎಂದು ಆರೋಪಿಸಿದ್ದಾರೆ.

“ನೀವು ಬಾಗಿಲು ತೆರೆದಿದ್ದೀರಿ, ಆದರೆ ಇನ್ನೂ ಬಾಗಿಲು ಮುಚ್ಚಿಲ್ಲ. ಜನಸಂಖ್ಯೆಯ ಕೇವಲ ಮೂರು ಪ್ರತಿಶತದಷ್ಟು ಜನರಿಗೆ ಮಾತ್ರ ಲಸಿಕೆ ನೀಡಿದ್ದೀರಿ, ಉಳಿದವರು ಇನ್ನೂ ಅಪಾಯದಲ್ಲಿದ್ದಾರೆ. ಅಮೆರಿಕ ತನ್ನ ಅರ್ಧದಷ್ಟು ಜನಸಂಖ್ಯೆಗೆ ಲಸಿಕೆ ನೀಡಿದೆ. ಬ್ರೆಜಿಲ್ 8 ರಿಂದ 9% ದಷ್ಟು ಲಸಿಕೆ ನೀಡಿದೆ. ಅವರು ದೊಡ್ಡ ಮಟ್ಟದಲ್ಲಿ ಲಸಿಕೆ ಉತ್ಪಾದಿಸುವುದಿಲ್ಲ, ಆದರೆ ನಾವು ಲಸಿಕೆಗಳನ್ನು ಉತ್ಪಾದಿಸುತ್ತೇವೆ” ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

“ಭಾರತವು ತನ್ನ ವ್ಯಾಕ್ಸಿನೇಷನ್ ತಂತ್ರವನ್ನು ಸರಿಯಾಗಿ ಮಾಡದಿದ್ದರೆ, ವೈರಸ್‌ನ ಅನೇಕ ಅಲೆಗಳು ಉಂಟಾಗುತ್ತದೆ ಎಂದು ನಾನು ನೇರವಾಗಿ ಪ್ರಧಾನ ಮಂತ್ರಿಗೆ ಹೇಳುತ್ತೇನೆ”

ಇದನ್ನೂ ಓದಿ: ತೇಜಸ್ವಿ ಸೂರ್ಯರಿಗೆ ಒಂದು ಪತ್ರ

ಕೊರೊನಾ ಮತ್ತು ಲಾಕ್‌ಡೌನ್‌ಗಳಿಗೆ ಲಸಿಕೆಗಳು ಮಾತ್ರ ಶಾಶ್ವತ ಪರಿಹಾರವಾಗಿದೆ. ಸಾಮಾಜಿಕ ಅಂತರ ಮತ್ತು ಮಾಸ್ಕ್‌ಗಳು ತಾತ್ಕಾಲಿಕವಾದವು. ಸರಿಯಾದ ವ್ಯಾಕ್ಸಿನೇಷನ್ ತಂತ್ರವಿಲ್ಲದಿದ್ದರೆ, ಭಾರತವು ಸೋಂಕಿನ ಅನೇಕ ಅಲೆಗಳಿಗೆ ಸಾಕ್ಷಿಯಾಗಲಿದೆ ಎಂದು ರಾಹುಲ್‌ ಗಾಂಧಿ ಒತ್ತಿ ಹೇಳಿದ್ದಾರೆ.

“ಲಸಿಕೆ ನೀಡುವ ಪ್ರಕ್ರಿಯೆ ಈ ವೇಗದಲ್ಲಿ ಮುಂದುವರಿದರೆ, ಸೋಂಕಿನ ಮೂರನೆಯ ಮತ್ತು ನಾಲ್ಕನೆಯ ಅಲೆಗಳೂ ಬರಲಿದೆ. ಏಕೆಂದರೆ ವೈರಸ್ ರೂಪಾಂತರಗೊಳ್ಳುತ್ತದೆ. ನಾವು ರೂಪಾಂತರ ಹೊಂದುತ್ತಿರುವ ಕಾಯಿಲೆಯಾದ ಕೊರೊನಾ ವೈರಸ್‌ನೊಂದಿಗೆ ಯುದ್ಧ ಮಾಡುತ್ತಿದ್ದೇವೆ. ಆದರೆ ಸರ್ಕಾರವು ವಿರೋಧ ಪಕ್ಷದ ವಿರುದ್ಧ ಹೋರಾಡುತ್ತಿದ್ದೇವೆ ಎಂದು ಭಾವಿಸುತ್ತಿದೆಯೆ ಹೊರತು ವೈರಸ್ ಜೊತೆ ಹೋರಾಡುತ್ತಿದ್ದೇವೆ ಎಂದಲ್ಲ” ಎಂದು ಅವರು ಹೇಳಿದ್ದಾರೆ.

“ಇದು ಸುಳ್ಳನ್ನು ಹರಡುವ ಸಮಯವಲ್ಲ. ಸರ್ಕಾರ ಸತ್ಯಸಂಧತೆಯಿಂದ ಕೂಡಿರಬೇಕು. ಇದು ದೇಶದ ಭವಿಷ್ಯವನ್ನು, ಜೀವಗಳನ್ನು ಉಳಿಸುವ ಪ್ರಶ್ನೆಯಾಗಿದೆ. ನಾವು ಸರ್ಕಾರದ ಶತ್ರುಗಳಲ್ಲ, ಪ್ರತಿಪಕ್ಷಗಳು ದಾರಿ ತೋರಿಸುತ್ತಿವೆ. ಅವರು ಫೆಬ್ರವರಿಯಲ್ಲೇ ನಮ್ಮ ಮಾತನ್ನು ಆಲಿಸುತ್ತಿದ್ದರೆ ನಾವು ಈ ಬಿಕ್ಕಟ್ಟನ್ನು ಎದುರಿಸ ಬೇಕಾಗುತ್ತಿರಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ದ ಬಳಸುವ ಔಷಧಗಳಿಗೆ ಜಿಎಸ್‌ಟಿ ಹೇರುವುದು ‘ಕ್ರೌರ್ಯ’: ಪ್ರಿಯಾಂಕ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...