Homeಮುಖಪುಟ‘ಪ್ರಧಾನಿ ಮೋದಿಗೆ ಕೊರೊನಾ ಬಗ್ಗೆ ಏನೂ ಗೊತ್ತಿಲ್ಲ’ - ರಾಹುಲ್ ಗಾಂಧಿ ದಾಳಿ

‘ಪ್ರಧಾನಿ ಮೋದಿಗೆ ಕೊರೊನಾ ಬಗ್ಗೆ ಏನೂ ಗೊತ್ತಿಲ್ಲ’ – ರಾಹುಲ್ ಗಾಂಧಿ ದಾಳಿ

- Advertisement -
- Advertisement -

ಕೊರೊನಾ ಸಾಂಕ್ರಮಿಕವನ್ನು ನಿಭಾಯಿಸಿರುವುದು ಮತ್ತು ಮಾರಣಾಂತಿಕ ಎರಡನೇ ಅಲೆಯ ಉಲ್ಬಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಯು ಕೇಂದ್ರ ಸರ್ಕಾರದ ವಿರುದ್ದ ತೀಕ್ಷ್ಣವಾಗಿ ದಾಳಿ ನಡೆಸಿದ್ದು, “ಪ್ರಧಾನಿ ನರೇಂದ್ರ ಮೋದಿಯವರೆ ಕೊರೊನಾ ಎರಡನೆ ಅಲೆಗೆ ಜವಾಬ್ದಾರಿ, ಅವರಿಗೆ ಸೋಂಕಿನ ಬಗ್ಗೆ ಏನೂ ಗೊತ್ತಿಲ್ಲ” ಎಂದು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೊರೊನಾ ಮೊದಲ ಅಲೆ ಯಾರಿಗೂ ಅರ್ಥವಾಗಲಿಲ್ಲ…ಆದರೆ ಎರಡನೆಯ ಅಲೆಯ ಉಲ್ಬಣಕ್ಕೆ ಪ್ರಧಾನಮಂತ್ರಿಯೆ ಜವಾಬ್ದಾರರಾಗಿದ್ದಾರೆ. ಅವರ ಸಾಹಸಗಳು(ಸ್ಟಂಟ್‌ಗಳು), ಸಾವಿನ ಬಗ್ಗೆ ಅವರ ಸುಳ್ಳುಗಳು…” ಎಂದು ರಾಹುಲ್ ಗಾಂಧಿ ಆನ್‌ಲೈನ್‌ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ 2 ನೇ ಅಲೆಯ ಸಮಯದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

“ಪ್ರಧಾನಿ ಅವರು ‘ಕಾರ್ಯಕ್ರಮಗಳ ಮ್ಯಾನೇಜರ್’ ಆಗಿದ್ದಾರೆ. ಆದರೆ ನಮಗೆ ‘ಕಾರ್ಯಕ್ರಮ’ಗಳ ಅಗತ್ಯವಿಲ್ಲ. ನಮಗೆ ಬೇಕಾಗಿದ್ದು ಕಾರ್ಯತಂತ್ರಗಳಾಗಿವೆ” ಎಂದು ಅವರು ಹೇಳಿದ್ದು, ಮೋದಿಗೆ ವೈರಸ್ ಬಗ್ಗೆ ಏನೂ ಗೊತ್ತಿಲ್ಲ ಎಂದು ಆರೋಪಿಸಿದ್ದಾರೆ.

“ನೀವು ಬಾಗಿಲು ತೆರೆದಿದ್ದೀರಿ, ಆದರೆ ಇನ್ನೂ ಬಾಗಿಲು ಮುಚ್ಚಿಲ್ಲ. ಜನಸಂಖ್ಯೆಯ ಕೇವಲ ಮೂರು ಪ್ರತಿಶತದಷ್ಟು ಜನರಿಗೆ ಮಾತ್ರ ಲಸಿಕೆ ನೀಡಿದ್ದೀರಿ, ಉಳಿದವರು ಇನ್ನೂ ಅಪಾಯದಲ್ಲಿದ್ದಾರೆ. ಅಮೆರಿಕ ತನ್ನ ಅರ್ಧದಷ್ಟು ಜನಸಂಖ್ಯೆಗೆ ಲಸಿಕೆ ನೀಡಿದೆ. ಬ್ರೆಜಿಲ್ 8 ರಿಂದ 9% ದಷ್ಟು ಲಸಿಕೆ ನೀಡಿದೆ. ಅವರು ದೊಡ್ಡ ಮಟ್ಟದಲ್ಲಿ ಲಸಿಕೆ ಉತ್ಪಾದಿಸುವುದಿಲ್ಲ, ಆದರೆ ನಾವು ಲಸಿಕೆಗಳನ್ನು ಉತ್ಪಾದಿಸುತ್ತೇವೆ” ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

“ಭಾರತವು ತನ್ನ ವ್ಯಾಕ್ಸಿನೇಷನ್ ತಂತ್ರವನ್ನು ಸರಿಯಾಗಿ ಮಾಡದಿದ್ದರೆ, ವೈರಸ್‌ನ ಅನೇಕ ಅಲೆಗಳು ಉಂಟಾಗುತ್ತದೆ ಎಂದು ನಾನು ನೇರವಾಗಿ ಪ್ರಧಾನ ಮಂತ್ರಿಗೆ ಹೇಳುತ್ತೇನೆ”

ಇದನ್ನೂ ಓದಿ: ತೇಜಸ್ವಿ ಸೂರ್ಯರಿಗೆ ಒಂದು ಪತ್ರ

ಕೊರೊನಾ ಮತ್ತು ಲಾಕ್‌ಡೌನ್‌ಗಳಿಗೆ ಲಸಿಕೆಗಳು ಮಾತ್ರ ಶಾಶ್ವತ ಪರಿಹಾರವಾಗಿದೆ. ಸಾಮಾಜಿಕ ಅಂತರ ಮತ್ತು ಮಾಸ್ಕ್‌ಗಳು ತಾತ್ಕಾಲಿಕವಾದವು. ಸರಿಯಾದ ವ್ಯಾಕ್ಸಿನೇಷನ್ ತಂತ್ರವಿಲ್ಲದಿದ್ದರೆ, ಭಾರತವು ಸೋಂಕಿನ ಅನೇಕ ಅಲೆಗಳಿಗೆ ಸಾಕ್ಷಿಯಾಗಲಿದೆ ಎಂದು ರಾಹುಲ್‌ ಗಾಂಧಿ ಒತ್ತಿ ಹೇಳಿದ್ದಾರೆ.

“ಲಸಿಕೆ ನೀಡುವ ಪ್ರಕ್ರಿಯೆ ಈ ವೇಗದಲ್ಲಿ ಮುಂದುವರಿದರೆ, ಸೋಂಕಿನ ಮೂರನೆಯ ಮತ್ತು ನಾಲ್ಕನೆಯ ಅಲೆಗಳೂ ಬರಲಿದೆ. ಏಕೆಂದರೆ ವೈರಸ್ ರೂಪಾಂತರಗೊಳ್ಳುತ್ತದೆ. ನಾವು ರೂಪಾಂತರ ಹೊಂದುತ್ತಿರುವ ಕಾಯಿಲೆಯಾದ ಕೊರೊನಾ ವೈರಸ್‌ನೊಂದಿಗೆ ಯುದ್ಧ ಮಾಡುತ್ತಿದ್ದೇವೆ. ಆದರೆ ಸರ್ಕಾರವು ವಿರೋಧ ಪಕ್ಷದ ವಿರುದ್ಧ ಹೋರಾಡುತ್ತಿದ್ದೇವೆ ಎಂದು ಭಾವಿಸುತ್ತಿದೆಯೆ ಹೊರತು ವೈರಸ್ ಜೊತೆ ಹೋರಾಡುತ್ತಿದ್ದೇವೆ ಎಂದಲ್ಲ” ಎಂದು ಅವರು ಹೇಳಿದ್ದಾರೆ.

“ಇದು ಸುಳ್ಳನ್ನು ಹರಡುವ ಸಮಯವಲ್ಲ. ಸರ್ಕಾರ ಸತ್ಯಸಂಧತೆಯಿಂದ ಕೂಡಿರಬೇಕು. ಇದು ದೇಶದ ಭವಿಷ್ಯವನ್ನು, ಜೀವಗಳನ್ನು ಉಳಿಸುವ ಪ್ರಶ್ನೆಯಾಗಿದೆ. ನಾವು ಸರ್ಕಾರದ ಶತ್ರುಗಳಲ್ಲ, ಪ್ರತಿಪಕ್ಷಗಳು ದಾರಿ ತೋರಿಸುತ್ತಿವೆ. ಅವರು ಫೆಬ್ರವರಿಯಲ್ಲೇ ನಮ್ಮ ಮಾತನ್ನು ಆಲಿಸುತ್ತಿದ್ದರೆ ನಾವು ಈ ಬಿಕ್ಕಟ್ಟನ್ನು ಎದುರಿಸ ಬೇಕಾಗುತ್ತಿರಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ದ ಬಳಸುವ ಔಷಧಗಳಿಗೆ ಜಿಎಸ್‌ಟಿ ಹೇರುವುದು ‘ಕ್ರೌರ್ಯ’: ಪ್ರಿಯಾಂಕ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...