Homeಮುಖಪುಟ‘ಪ್ರಧಾನಿ ಮೋದಿಗೆ ಕೊರೊನಾ ಬಗ್ಗೆ ಏನೂ ಗೊತ್ತಿಲ್ಲ’ - ರಾಹುಲ್ ಗಾಂಧಿ ದಾಳಿ

‘ಪ್ರಧಾನಿ ಮೋದಿಗೆ ಕೊರೊನಾ ಬಗ್ಗೆ ಏನೂ ಗೊತ್ತಿಲ್ಲ’ – ರಾಹುಲ್ ಗಾಂಧಿ ದಾಳಿ

- Advertisement -
- Advertisement -

ಕೊರೊನಾ ಸಾಂಕ್ರಮಿಕವನ್ನು ನಿಭಾಯಿಸಿರುವುದು ಮತ್ತು ಮಾರಣಾಂತಿಕ ಎರಡನೇ ಅಲೆಯ ಉಲ್ಬಣಕ್ಕೆ ಸಂಬಂಧಿಸಿದಂತೆ ರಾಹುಲ್ ಗಾಂಧಿಯು ಕೇಂದ್ರ ಸರ್ಕಾರದ ವಿರುದ್ದ ತೀಕ್ಷ್ಣವಾಗಿ ದಾಳಿ ನಡೆಸಿದ್ದು, “ಪ್ರಧಾನಿ ನರೇಂದ್ರ ಮೋದಿಯವರೆ ಕೊರೊನಾ ಎರಡನೆ ಅಲೆಗೆ ಜವಾಬ್ದಾರಿ, ಅವರಿಗೆ ಸೋಂಕಿನ ಬಗ್ಗೆ ಏನೂ ಗೊತ್ತಿಲ್ಲ” ಎಂದು ಶುಕ್ರವಾರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

“ಕೊರೊನಾ ಮೊದಲ ಅಲೆ ಯಾರಿಗೂ ಅರ್ಥವಾಗಲಿಲ್ಲ…ಆದರೆ ಎರಡನೆಯ ಅಲೆಯ ಉಲ್ಬಣಕ್ಕೆ ಪ್ರಧಾನಮಂತ್ರಿಯೆ ಜವಾಬ್ದಾರರಾಗಿದ್ದಾರೆ. ಅವರ ಸಾಹಸಗಳು(ಸ್ಟಂಟ್‌ಗಳು), ಸಾವಿನ ಬಗ್ಗೆ ಅವರ ಸುಳ್ಳುಗಳು…” ಎಂದು ರಾಹುಲ್ ಗಾಂಧಿ ಆನ್‌ಲೈನ್‌ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ 2 ನೇ ಅಲೆಯ ಸಮಯದಲ್ಲಿ ಹಸಿರು ಬಣ್ಣಕ್ಕೆ ತಿರುಗಿದ ಗಂಗಾ ನದಿ!

“ಪ್ರಧಾನಿ ಅವರು ‘ಕಾರ್ಯಕ್ರಮಗಳ ಮ್ಯಾನೇಜರ್’ ಆಗಿದ್ದಾರೆ. ಆದರೆ ನಮಗೆ ‘ಕಾರ್ಯಕ್ರಮ’ಗಳ ಅಗತ್ಯವಿಲ್ಲ. ನಮಗೆ ಬೇಕಾಗಿದ್ದು ಕಾರ್ಯತಂತ್ರಗಳಾಗಿವೆ” ಎಂದು ಅವರು ಹೇಳಿದ್ದು, ಮೋದಿಗೆ ವೈರಸ್ ಬಗ್ಗೆ ಏನೂ ಗೊತ್ತಿಲ್ಲ ಎಂದು ಆರೋಪಿಸಿದ್ದಾರೆ.

“ನೀವು ಬಾಗಿಲು ತೆರೆದಿದ್ದೀರಿ, ಆದರೆ ಇನ್ನೂ ಬಾಗಿಲು ಮುಚ್ಚಿಲ್ಲ. ಜನಸಂಖ್ಯೆಯ ಕೇವಲ ಮೂರು ಪ್ರತಿಶತದಷ್ಟು ಜನರಿಗೆ ಮಾತ್ರ ಲಸಿಕೆ ನೀಡಿದ್ದೀರಿ, ಉಳಿದವರು ಇನ್ನೂ ಅಪಾಯದಲ್ಲಿದ್ದಾರೆ. ಅಮೆರಿಕ ತನ್ನ ಅರ್ಧದಷ್ಟು ಜನಸಂಖ್ಯೆಗೆ ಲಸಿಕೆ ನೀಡಿದೆ. ಬ್ರೆಜಿಲ್ 8 ರಿಂದ 9% ದಷ್ಟು ಲಸಿಕೆ ನೀಡಿದೆ. ಅವರು ದೊಡ್ಡ ಮಟ್ಟದಲ್ಲಿ ಲಸಿಕೆ ಉತ್ಪಾದಿಸುವುದಿಲ್ಲ, ಆದರೆ ನಾವು ಲಸಿಕೆಗಳನ್ನು ಉತ್ಪಾದಿಸುತ್ತೇವೆ” ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

“ಭಾರತವು ತನ್ನ ವ್ಯಾಕ್ಸಿನೇಷನ್ ತಂತ್ರವನ್ನು ಸರಿಯಾಗಿ ಮಾಡದಿದ್ದರೆ, ವೈರಸ್‌ನ ಅನೇಕ ಅಲೆಗಳು ಉಂಟಾಗುತ್ತದೆ ಎಂದು ನಾನು ನೇರವಾಗಿ ಪ್ರಧಾನ ಮಂತ್ರಿಗೆ ಹೇಳುತ್ತೇನೆ”

ಇದನ್ನೂ ಓದಿ: ತೇಜಸ್ವಿ ಸೂರ್ಯರಿಗೆ ಒಂದು ಪತ್ರ

ಕೊರೊನಾ ಮತ್ತು ಲಾಕ್‌ಡೌನ್‌ಗಳಿಗೆ ಲಸಿಕೆಗಳು ಮಾತ್ರ ಶಾಶ್ವತ ಪರಿಹಾರವಾಗಿದೆ. ಸಾಮಾಜಿಕ ಅಂತರ ಮತ್ತು ಮಾಸ್ಕ್‌ಗಳು ತಾತ್ಕಾಲಿಕವಾದವು. ಸರಿಯಾದ ವ್ಯಾಕ್ಸಿನೇಷನ್ ತಂತ್ರವಿಲ್ಲದಿದ್ದರೆ, ಭಾರತವು ಸೋಂಕಿನ ಅನೇಕ ಅಲೆಗಳಿಗೆ ಸಾಕ್ಷಿಯಾಗಲಿದೆ ಎಂದು ರಾಹುಲ್‌ ಗಾಂಧಿ ಒತ್ತಿ ಹೇಳಿದ್ದಾರೆ.

“ಲಸಿಕೆ ನೀಡುವ ಪ್ರಕ್ರಿಯೆ ಈ ವೇಗದಲ್ಲಿ ಮುಂದುವರಿದರೆ, ಸೋಂಕಿನ ಮೂರನೆಯ ಮತ್ತು ನಾಲ್ಕನೆಯ ಅಲೆಗಳೂ ಬರಲಿದೆ. ಏಕೆಂದರೆ ವೈರಸ್ ರೂಪಾಂತರಗೊಳ್ಳುತ್ತದೆ. ನಾವು ರೂಪಾಂತರ ಹೊಂದುತ್ತಿರುವ ಕಾಯಿಲೆಯಾದ ಕೊರೊನಾ ವೈರಸ್‌ನೊಂದಿಗೆ ಯುದ್ಧ ಮಾಡುತ್ತಿದ್ದೇವೆ. ಆದರೆ ಸರ್ಕಾರವು ವಿರೋಧ ಪಕ್ಷದ ವಿರುದ್ಧ ಹೋರಾಡುತ್ತಿದ್ದೇವೆ ಎಂದು ಭಾವಿಸುತ್ತಿದೆಯೆ ಹೊರತು ವೈರಸ್ ಜೊತೆ ಹೋರಾಡುತ್ತಿದ್ದೇವೆ ಎಂದಲ್ಲ” ಎಂದು ಅವರು ಹೇಳಿದ್ದಾರೆ.

“ಇದು ಸುಳ್ಳನ್ನು ಹರಡುವ ಸಮಯವಲ್ಲ. ಸರ್ಕಾರ ಸತ್ಯಸಂಧತೆಯಿಂದ ಕೂಡಿರಬೇಕು. ಇದು ದೇಶದ ಭವಿಷ್ಯವನ್ನು, ಜೀವಗಳನ್ನು ಉಳಿಸುವ ಪ್ರಶ್ನೆಯಾಗಿದೆ. ನಾವು ಸರ್ಕಾರದ ಶತ್ರುಗಳಲ್ಲ, ಪ್ರತಿಪಕ್ಷಗಳು ದಾರಿ ತೋರಿಸುತ್ತಿವೆ. ಅವರು ಫೆಬ್ರವರಿಯಲ್ಲೇ ನಮ್ಮ ಮಾತನ್ನು ಆಲಿಸುತ್ತಿದ್ದರೆ ನಾವು ಈ ಬಿಕ್ಕಟ್ಟನ್ನು ಎದುರಿಸ ಬೇಕಾಗುತ್ತಿರಲಿಲ್ಲ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ಕೊರೊನಾ ವಿರುದ್ದ ಬಳಸುವ ಔಷಧಗಳಿಗೆ ಜಿಎಸ್‌ಟಿ ಹೇರುವುದು ‘ಕ್ರೌರ್ಯ’: ಪ್ರಿಯಾಂಕ ಗಾಂಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR | ಸೆಕ್ಸ್ ವರ್ಕರ್ಸ್, ಅವರ ಮಕ್ಕಳ ಬಳಿ ದಾಖಲೆಗಳಿಲ್ಲ : ಮಹಾರಾಷ್ಟ್ರ ಸಿಇಒಗೆ ಪತ್ರ ಬರೆದ ರಾಷ್ಟ್ರೀಯ ಸಂಸ್ಥೆ

ದಾಖಲಾತಿ ಮತ್ತು ಪರಿಶೀಲನೆ ಅಗತ್ಯತೆಗಳ ಕಾರಣದಿಂದಾಗಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಿಂದ ಲೈಂಗಿಕ ಕಾರ್ಯಕರ್ತೆಯರು ಮತ್ತು ಅವರ ಮಕ್ಕಳನ್ನು ಹೊರಗಿಡದಂತೆ ನೋಡಿಕೊಳ್ಳಲು ವಿಶೇಷ ಕ್ರಮಗಳನ್ನು ಕೈಗೊಳ್ಳಬೇಕೆಂದು...

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...