Homeಮುಖಪುಟಇ-ರುಪಿ ವ್ಯವಸ್ಥೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಇ-ರುಪಿ ವ್ಯವಸ್ಥೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

- Advertisement -
- Advertisement -

ಪ್ರಧಾನಿ ಮೋದಿ ಇ-ರುಪಿ (ಎಲೆಕ್ಟ್ರಾನಿಕ್ ವೋಚರ್ ಆಧಾರಿತ ಡಿಜಿಟಲ್ ಪಾವತಿ) ವ್ಯವಸ್ಥೆಗೆ ಸೋಮವಾರ ಚಾಲನೆ ನೀಡಿದ್ದಾರೆ. e-RUPI ಡಿಜಿಟಲ್ ಪಾವತಿಯಾಗಿದ್ದು, ನಗದುರಹಿತ ಸಾಧನವಾಗಿದೆ. ಇದನ್ನು ಕ್ಯೂಆರ್ ಕೋಡ್ ಅಥವಾ ಎಸ್‌ಎಂಎಸ್ ಸ್ಟ್ರಿಂಗ್ ಮೂಲಕ ಹಣವನ್ನು ಸ್ವೀಕೃತಿದಾರರ ಮೊಬೈಲ್ ಫೋನ್‌ಗಳಿಗೆ ವರ್ಗಾಯಿಸಬಹುದು.

ಬಳಕೆದಾರರು ಕಾರ್ಡ್, ಡಿಜಿಟಲ್ ಪಾವತಿ ಅಪ್ಲಿಕೇಶನ್ ಅಥವಾ ಇಂಟರ್ನೆಟ್ ಬ್ಯಾಂಕಿಂಗ್‌ಗೆ ಹೋಗದೆಯೇ ಸೇವಾ ಪೂರೈಕೆದಾರರಿಂದ  ವೋಚರ್ ಅನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ.

ಇದನ್ನು ರಾಷ್ಟ್ರೀಯ ಪಾವತಿಗಳ ನಿಗಮವು (National Payment Corporation of India – NPCI) ತನ್ನ ಏಕೀಕೃತ ಪಾವತಿ ಇಂಟರ್ಫೇಸ್ (UPI) ವೇದಿಕೆಯ ಮೂಲಕ ಹಣಕಾಸು ಸೇವೆಗಳ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (MoHFW) ಮತ್ತು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಸಹಯೋಗದಲ್ಲಿ ಅಭಿವೃದ್ಧಿಪಡಿಸಿದೆ.

ಇದನ್ನೂ ಓದಿ: ಪೆಗಾಸಸ್ ತನಿಖೆಗೆ ಆಗ್ರಹಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌!

ಪ್ರಧಾನಮಂತ್ರಿ ಕಚೇರಿ(ಪಿಎಂಒ)ಯು ಇತ್ತೀಚೆಗೆ ನೀಡಿದ ಹೇಳಿಕೆಯಲ್ಲಿ ಇ-ರುಪಿ ಅನ್ನು ತಾಯಿ ಮತ್ತು ಮಕ್ಕಳ ಕಲ್ಯಾಣ ಯೋಜನೆ, ಔಷಧಗಳು ಮತ್ತು ರೋಗನಿರ್ಣಯಗಳ ಪೂರೈಕೆ, ಟಿಬಿ ನಿರ್ಮೂಲನೆ ಕಾರ್ಯಕ್ರಮಗಳು, ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಗಳ ಅಡಿಯಲ್ಲಿ ಔಷಧಗಳು ಮತ್ತು ಪೌಷ್ಠಿಕಾಂಶಗಳನ್ನು ಒದಗಿಸುವ ಯೋಜನೆಗಳ ಅಡಿಯಲ್ಲಿ ಸೇವೆಗಳನ್ನು ನೀಡಲು ಮತ್ತು ರಸಗೊಬ್ಬರ ಸಹಾಯಧನ ಸೇರಿದಂತೆ ಇತರ ಪ್ರಮುಖ ಯೋಜನೆಗಳಲ್ಲಿ ಬಳಸಬಹುದು ಎಂದು ಹೇಳಿದೆ.

ಖಾಸಗಿ ವಲಯವೂ ಸಹ ಈ ಡಿಜಿಟಲ್ ವೋಚರ್‌ಗಳನ್ನು ತಮ್ಮ ಉದ್ಯೋಗಿಗಳ ಕಲ್ಯಾಣ ಮತ್ತು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮಗಳ ಭಾಗವಾಗಿ ಬಳಸಿಕೊಳ್ಳಬಹುದು ಎಂದು ಪಿಎಂಒ ತಿಳಿಸಿದೆ.

ಇ-ರುಪಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಮೋದಿ, ಸರ್ಕಾರದಿಂದ ನೇರ ಲಾಭ ವರ್ಗಾವಣೆ (ಡಿಬಿಟಿ) ಯೋಜನೆಯನ್ನು ಬಲಪಡಿಸುವಲ್ಲಿ ಇ-ರುಪಿ ವೋಚರ್ ಪ್ರಮುಖ ಪಾತ್ರ ವಹಿಸಲಿದೆ. ಎಲ್ಲರಿಗೂ ಉದ್ದೇಶಿತ, ಪಾರದರ್ಶಕ ಮತ್ತು ಸೋರಿಕೆ ರಹಿತ ವಿತರಣೆಯನ್ನು ಖಾತ್ರಿಪಡಿಸಿಕೊಳ್ಳಲು ಇ-ರೂ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆಗಸ್ಟ್‌‌ 5 ರಂದು ಬಿಜೆಪಿ ಸೇರಲಿರುವ ಉಚ್ಚಾಟಿತ ಬಿಎಸ್‌ಪಿ ಶಾಸಕ ಎನ್‌. ಮಹೇಶ್‌

ತಂತ್ರಜ್ಞಾನವನ್ನು ಬಡವರಿಗೆ ಸಹಾಯ ಮಾಡುವ ಸಾಧನವಾಗಿ ಬಳಸಲಾಗುತ್ತಿದೆ. ಡಿಬಿಟಿಯಲ್ಲಿ ತಂತ್ರಜ್ಞಾನವು ಪಾರದರ್ಶಕತೆಯನ್ನು ತರುತ್ತಿದೆ ಎಂದು ಅವರು ಹೇಳಿದ್ದಾರೆ.

ತಂತ್ರಜ್ಞಾನ ಅಳವಡಿಕೆ ಕುರಿತು ಮಾತನಾಡಿದ ಮೋದಿ, ಭಾರತವು ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ಮುನ್ನುಗ್ಗುತ್ತಿದೆ ಎಂಬುದನ್ನು ಜಗತ್ತಿಗೆ ತೋರಿಸುತ್ತಿದೆ. ಸೇವೆಗಳ ವಿತರಣೆಯಲ್ಲಿ ಆವಿಷ್ಕಾರಗಳು ಅಥವಾ ತಂತ್ರಜ್ಞಾನದ ಬಳಕೆಯಲ್ಲಿ ಭಾರತವು ಜಾಗತಿಕ ನಾಯಕ ಸ್ಥಾನಕ್ಕೇರಲು ಸಮರ್ಥವಾಗಿದೆ ಎಂದು ಹೇಳಿದ್ದಾರೆ.

ಕಳೆದ 6-7 ವರ್ಷಗಳಲ್ಲಿ ದೇಶದಾದ್ಯಂತ ಡಿಜಿಟಲ್ ಮೂಲಸೌಕರ್ಯ ಮತ್ತು ಡಿಜಿಟಲ್ ವಹಿವಾಟು ಕ್ಷೇತ್ರದಲ್ಲಾದ ಕೆಲಸವನ್ನು ಇಂದು ವಿಶ್ವವು ಶ್ಲಾಘಿಸುತ್ತಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಎಲ್‌ಪಿಜಿ, ಪಡಿತರ, ಪಿಂಚಣಿ ಸೇರಿದಂತೆ 300 ಯೋಜನೆಗಳ ಪ್ರಯೋಜನಗಳನ್ನು ನೇರವಾಗಿ ಫಲಾನುಭವಿಗಳಿಗೆ ಒದಗಿಸಲು ಸರ್ಕಾರವು ನೇರ ಲಾಭ ವರ್ಗಾವಣೆಯನ್ನು ಬಳಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಆಗಸ್ಟ್‌‌ 5 ರಂದು ಬಿಜೆಪಿ ಸೇರಲಿರುವ ಉಚ್ಚಾಟಿತ ಬಿಎಸ್‌ಪಿ ಶಾಸಕ ಎನ್‌. ಮಹೇಶ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...