Homeಮುಖಪುಟಇ-ರುಪಿ ವ್ಯವಸ್ಥೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಇ-ರುಪಿ ವ್ಯವಸ್ಥೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

- Advertisement -
- Advertisement -

ಪ್ರಧಾನಿ ಮೋದಿ ಇ-ರುಪಿ (ಎಲೆಕ್ಟ್ರಾನಿಕ್ ವೋಚರ್ ಆಧಾರಿತ ಡಿಜಿಟಲ್ ಪಾವತಿ) ವ್ಯವಸ್ಥೆಗೆ ಸೋಮವಾರ ಚಾಲನೆ ನೀಡಿದ್ದಾರೆ. e-RUPI ಡಿಜಿಟಲ್ ಪಾವತಿಯಾಗಿದ್ದು, ನಗದುರಹಿತ ಸಾಧನವಾಗಿದೆ. ಇದನ್ನು ಕ್ಯೂಆರ್ ಕೋಡ್ ಅಥವಾ ಎಸ್‌ಎಂಎಸ್ ಸ್ಟ್ರಿಂಗ್ ಮೂಲಕ ಹಣವನ್ನು ಸ್ವೀಕೃತಿದಾರರ ಮೊಬೈಲ್ ಫೋನ್‌ಗಳಿಗೆ ವರ್ಗಾಯಿಸಬಹುದು.

ಬಳಕೆದಾರರು ಕಾರ್ಡ್, ಡಿಜಿಟಲ್ ಪಾವತಿ ಅಪ್ಲಿಕೇಶನ್ ಅಥವಾ ಇಂಟರ್ನೆಟ್ ಬ್ಯಾಂಕಿಂಗ್‌ಗೆ ಹೋಗದೆಯೇ ಸೇವಾ ಪೂರೈಕೆದಾರರಿಂದ  ವೋಚರ್ ಅನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ.

ಇದನ್ನು ರಾಷ್ಟ್ರೀಯ ಪಾವತಿಗಳ ನಿಗಮವು (National Payment Corporation of India – NPCI) ತನ್ನ ಏಕೀಕೃತ ಪಾವತಿ ಇಂಟರ್ಫೇಸ್ (UPI) ವೇದಿಕೆಯ ಮೂಲಕ ಹಣಕಾಸು ಸೇವೆಗಳ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (MoHFW) ಮತ್ತು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಸಹಯೋಗದಲ್ಲಿ ಅಭಿವೃದ್ಧಿಪಡಿಸಿದೆ.

ಇದನ್ನೂ ಓದಿ: ಪೆಗಾಸಸ್ ತನಿಖೆಗೆ ಆಗ್ರಹಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌!

ಪ್ರಧಾನಮಂತ್ರಿ ಕಚೇರಿ(ಪಿಎಂಒ)ಯು ಇತ್ತೀಚೆಗೆ ನೀಡಿದ ಹೇಳಿಕೆಯಲ್ಲಿ ಇ-ರುಪಿ ಅನ್ನು ತಾಯಿ ಮತ್ತು ಮಕ್ಕಳ ಕಲ್ಯಾಣ ಯೋಜನೆ, ಔಷಧಗಳು ಮತ್ತು ರೋಗನಿರ್ಣಯಗಳ ಪೂರೈಕೆ, ಟಿಬಿ ನಿರ್ಮೂಲನೆ ಕಾರ್ಯಕ್ರಮಗಳು, ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಗಳ ಅಡಿಯಲ್ಲಿ ಔಷಧಗಳು ಮತ್ತು ಪೌಷ್ಠಿಕಾಂಶಗಳನ್ನು ಒದಗಿಸುವ ಯೋಜನೆಗಳ ಅಡಿಯಲ್ಲಿ ಸೇವೆಗಳನ್ನು ನೀಡಲು ಮತ್ತು ರಸಗೊಬ್ಬರ ಸಹಾಯಧನ ಸೇರಿದಂತೆ ಇತರ ಪ್ರಮುಖ ಯೋಜನೆಗಳಲ್ಲಿ ಬಳಸಬಹುದು ಎಂದು ಹೇಳಿದೆ.

ಖಾಸಗಿ ವಲಯವೂ ಸಹ ಈ ಡಿಜಿಟಲ್ ವೋಚರ್‌ಗಳನ್ನು ತಮ್ಮ ಉದ್ಯೋಗಿಗಳ ಕಲ್ಯಾಣ ಮತ್ತು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮಗಳ ಭಾಗವಾಗಿ ಬಳಸಿಕೊಳ್ಳಬಹುದು ಎಂದು ಪಿಎಂಒ ತಿಳಿಸಿದೆ.

ಇ-ರುಪಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಮೋದಿ, ಸರ್ಕಾರದಿಂದ ನೇರ ಲಾಭ ವರ್ಗಾವಣೆ (ಡಿಬಿಟಿ) ಯೋಜನೆಯನ್ನು ಬಲಪಡಿಸುವಲ್ಲಿ ಇ-ರುಪಿ ವೋಚರ್ ಪ್ರಮುಖ ಪಾತ್ರ ವಹಿಸಲಿದೆ. ಎಲ್ಲರಿಗೂ ಉದ್ದೇಶಿತ, ಪಾರದರ್ಶಕ ಮತ್ತು ಸೋರಿಕೆ ರಹಿತ ವಿತರಣೆಯನ್ನು ಖಾತ್ರಿಪಡಿಸಿಕೊಳ್ಳಲು ಇ-ರೂ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆಗಸ್ಟ್‌‌ 5 ರಂದು ಬಿಜೆಪಿ ಸೇರಲಿರುವ ಉಚ್ಚಾಟಿತ ಬಿಎಸ್‌ಪಿ ಶಾಸಕ ಎನ್‌. ಮಹೇಶ್‌

ತಂತ್ರಜ್ಞಾನವನ್ನು ಬಡವರಿಗೆ ಸಹಾಯ ಮಾಡುವ ಸಾಧನವಾಗಿ ಬಳಸಲಾಗುತ್ತಿದೆ. ಡಿಬಿಟಿಯಲ್ಲಿ ತಂತ್ರಜ್ಞಾನವು ಪಾರದರ್ಶಕತೆಯನ್ನು ತರುತ್ತಿದೆ ಎಂದು ಅವರು ಹೇಳಿದ್ದಾರೆ.

ತಂತ್ರಜ್ಞಾನ ಅಳವಡಿಕೆ ಕುರಿತು ಮಾತನಾಡಿದ ಮೋದಿ, ಭಾರತವು ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ಮುನ್ನುಗ್ಗುತ್ತಿದೆ ಎಂಬುದನ್ನು ಜಗತ್ತಿಗೆ ತೋರಿಸುತ್ತಿದೆ. ಸೇವೆಗಳ ವಿತರಣೆಯಲ್ಲಿ ಆವಿಷ್ಕಾರಗಳು ಅಥವಾ ತಂತ್ರಜ್ಞಾನದ ಬಳಕೆಯಲ್ಲಿ ಭಾರತವು ಜಾಗತಿಕ ನಾಯಕ ಸ್ಥಾನಕ್ಕೇರಲು ಸಮರ್ಥವಾಗಿದೆ ಎಂದು ಹೇಳಿದ್ದಾರೆ.

ಕಳೆದ 6-7 ವರ್ಷಗಳಲ್ಲಿ ದೇಶದಾದ್ಯಂತ ಡಿಜಿಟಲ್ ಮೂಲಸೌಕರ್ಯ ಮತ್ತು ಡಿಜಿಟಲ್ ವಹಿವಾಟು ಕ್ಷೇತ್ರದಲ್ಲಾದ ಕೆಲಸವನ್ನು ಇಂದು ವಿಶ್ವವು ಶ್ಲಾಘಿಸುತ್ತಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಎಲ್‌ಪಿಜಿ, ಪಡಿತರ, ಪಿಂಚಣಿ ಸೇರಿದಂತೆ 300 ಯೋಜನೆಗಳ ಪ್ರಯೋಜನಗಳನ್ನು ನೇರವಾಗಿ ಫಲಾನುಭವಿಗಳಿಗೆ ಒದಗಿಸಲು ಸರ್ಕಾರವು ನೇರ ಲಾಭ ವರ್ಗಾವಣೆಯನ್ನು ಬಳಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಆಗಸ್ಟ್‌‌ 5 ರಂದು ಬಿಜೆಪಿ ಸೇರಲಿರುವ ಉಚ್ಚಾಟಿತ ಬಿಎಸ್‌ಪಿ ಶಾಸಕ ಎನ್‌. ಮಹೇಶ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...