Homeಮುಖಪುಟಇ-ರುಪಿ ವ್ಯವಸ್ಥೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

ಇ-ರುಪಿ ವ್ಯವಸ್ಥೆಗೆ ಚಾಲನೆ ನೀಡಿದ ಪ್ರಧಾನಿ ಮೋದಿ

- Advertisement -
- Advertisement -

ಪ್ರಧಾನಿ ಮೋದಿ ಇ-ರುಪಿ (ಎಲೆಕ್ಟ್ರಾನಿಕ್ ವೋಚರ್ ಆಧಾರಿತ ಡಿಜಿಟಲ್ ಪಾವತಿ) ವ್ಯವಸ್ಥೆಗೆ ಸೋಮವಾರ ಚಾಲನೆ ನೀಡಿದ್ದಾರೆ. e-RUPI ಡಿಜಿಟಲ್ ಪಾವತಿಯಾಗಿದ್ದು, ನಗದುರಹಿತ ಸಾಧನವಾಗಿದೆ. ಇದನ್ನು ಕ್ಯೂಆರ್ ಕೋಡ್ ಅಥವಾ ಎಸ್‌ಎಂಎಸ್ ಸ್ಟ್ರಿಂಗ್ ಮೂಲಕ ಹಣವನ್ನು ಸ್ವೀಕೃತಿದಾರರ ಮೊಬೈಲ್ ಫೋನ್‌ಗಳಿಗೆ ವರ್ಗಾಯಿಸಬಹುದು.

ಬಳಕೆದಾರರು ಕಾರ್ಡ್, ಡಿಜಿಟಲ್ ಪಾವತಿ ಅಪ್ಲಿಕೇಶನ್ ಅಥವಾ ಇಂಟರ್ನೆಟ್ ಬ್ಯಾಂಕಿಂಗ್‌ಗೆ ಹೋಗದೆಯೇ ಸೇವಾ ಪೂರೈಕೆದಾರರಿಂದ  ವೋಚರ್ ಅನ್ನು ಉಳಿಸಿಕೊಳ್ಳಲು ಸಾಧ್ಯವಾಗುತ್ತದೆ.

ಇದನ್ನು ರಾಷ್ಟ್ರೀಯ ಪಾವತಿಗಳ ನಿಗಮವು (National Payment Corporation of India – NPCI) ತನ್ನ ಏಕೀಕೃತ ಪಾವತಿ ಇಂಟರ್ಫೇಸ್ (UPI) ವೇದಿಕೆಯ ಮೂಲಕ ಹಣಕಾಸು ಸೇವೆಗಳ ಇಲಾಖೆ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ (MoHFW) ಮತ್ತು ರಾಷ್ಟ್ರೀಯ ಆರೋಗ್ಯ ಪ್ರಾಧಿಕಾರದ ಸಹಯೋಗದಲ್ಲಿ ಅಭಿವೃದ್ಧಿಪಡಿಸಿದೆ.

ಇದನ್ನೂ ಓದಿ: ಪೆಗಾಸಸ್ ತನಿಖೆಗೆ ಆಗ್ರಹಿಸಿದ ಬಿಹಾರ ಮುಖ್ಯಮಂತ್ರಿ ನಿತೀಶ್‌ ಕುಮಾರ್‌!

ಪ್ರಧಾನಮಂತ್ರಿ ಕಚೇರಿ(ಪಿಎಂಒ)ಯು ಇತ್ತೀಚೆಗೆ ನೀಡಿದ ಹೇಳಿಕೆಯಲ್ಲಿ ಇ-ರುಪಿ ಅನ್ನು ತಾಯಿ ಮತ್ತು ಮಕ್ಕಳ ಕಲ್ಯಾಣ ಯೋಜನೆ, ಔಷಧಗಳು ಮತ್ತು ರೋಗನಿರ್ಣಯಗಳ ಪೂರೈಕೆ, ಟಿಬಿ ನಿರ್ಮೂಲನೆ ಕಾರ್ಯಕ್ರಮಗಳು, ಆಯುಷ್ಮಾನ್ ಭಾರತ್ ಪ್ರಧಾನ ಮಂತ್ರಿ ಜನ ಆರೋಗ್ಯ ಯೋಜನೆಗಳ ಅಡಿಯಲ್ಲಿ ಔಷಧಗಳು ಮತ್ತು ಪೌಷ್ಠಿಕಾಂಶಗಳನ್ನು ಒದಗಿಸುವ ಯೋಜನೆಗಳ ಅಡಿಯಲ್ಲಿ ಸೇವೆಗಳನ್ನು ನೀಡಲು ಮತ್ತು ರಸಗೊಬ್ಬರ ಸಹಾಯಧನ ಸೇರಿದಂತೆ ಇತರ ಪ್ರಮುಖ ಯೋಜನೆಗಳಲ್ಲಿ ಬಳಸಬಹುದು ಎಂದು ಹೇಳಿದೆ.

ಖಾಸಗಿ ವಲಯವೂ ಸಹ ಈ ಡಿಜಿಟಲ್ ವೋಚರ್‌ಗಳನ್ನು ತಮ್ಮ ಉದ್ಯೋಗಿಗಳ ಕಲ್ಯಾಣ ಮತ್ತು ಕಾರ್ಪೊರೇಟ್ ಸಾಮಾಜಿಕ ಜವಾಬ್ದಾರಿ ಕಾರ್ಯಕ್ರಮಗಳ ಭಾಗವಾಗಿ ಬಳಸಿಕೊಳ್ಳಬಹುದು ಎಂದು ಪಿಎಂಒ ತಿಳಿಸಿದೆ.

ಇ-ರುಪಿ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ಮೋದಿ, ಸರ್ಕಾರದಿಂದ ನೇರ ಲಾಭ ವರ್ಗಾವಣೆ (ಡಿಬಿಟಿ) ಯೋಜನೆಯನ್ನು ಬಲಪಡಿಸುವಲ್ಲಿ ಇ-ರುಪಿ ವೋಚರ್ ಪ್ರಮುಖ ಪಾತ್ರ ವಹಿಸಲಿದೆ. ಎಲ್ಲರಿಗೂ ಉದ್ದೇಶಿತ, ಪಾರದರ್ಶಕ ಮತ್ತು ಸೋರಿಕೆ ರಹಿತ ವಿತರಣೆಯನ್ನು ಖಾತ್ರಿಪಡಿಸಿಕೊಳ್ಳಲು ಇ-ರೂ ಸಹಾಯ ಮಾಡುತ್ತದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ: ಆಗಸ್ಟ್‌‌ 5 ರಂದು ಬಿಜೆಪಿ ಸೇರಲಿರುವ ಉಚ್ಚಾಟಿತ ಬಿಎಸ್‌ಪಿ ಶಾಸಕ ಎನ್‌. ಮಹೇಶ್‌

ತಂತ್ರಜ್ಞಾನವನ್ನು ಬಡವರಿಗೆ ಸಹಾಯ ಮಾಡುವ ಸಾಧನವಾಗಿ ಬಳಸಲಾಗುತ್ತಿದೆ. ಡಿಬಿಟಿಯಲ್ಲಿ ತಂತ್ರಜ್ಞಾನವು ಪಾರದರ್ಶಕತೆಯನ್ನು ತರುತ್ತಿದೆ ಎಂದು ಅವರು ಹೇಳಿದ್ದಾರೆ.

ತಂತ್ರಜ್ಞಾನ ಅಳವಡಿಕೆ ಕುರಿತು ಮಾತನಾಡಿದ ಮೋದಿ, ಭಾರತವು ಹೊಸ ತಂತ್ರಜ್ಞಾನವನ್ನು ಅಳವಡಿಸಿಕೊಳ್ಳುವಲ್ಲಿ ಮುನ್ನುಗ್ಗುತ್ತಿದೆ ಎಂಬುದನ್ನು ಜಗತ್ತಿಗೆ ತೋರಿಸುತ್ತಿದೆ. ಸೇವೆಗಳ ವಿತರಣೆಯಲ್ಲಿ ಆವಿಷ್ಕಾರಗಳು ಅಥವಾ ತಂತ್ರಜ್ಞಾನದ ಬಳಕೆಯಲ್ಲಿ ಭಾರತವು ಜಾಗತಿಕ ನಾಯಕ ಸ್ಥಾನಕ್ಕೇರಲು ಸಮರ್ಥವಾಗಿದೆ ಎಂದು ಹೇಳಿದ್ದಾರೆ.

ಕಳೆದ 6-7 ವರ್ಷಗಳಲ್ಲಿ ದೇಶದಾದ್ಯಂತ ಡಿಜಿಟಲ್ ಮೂಲಸೌಕರ್ಯ ಮತ್ತು ಡಿಜಿಟಲ್ ವಹಿವಾಟು ಕ್ಷೇತ್ರದಲ್ಲಾದ ಕೆಲಸವನ್ನು ಇಂದು ವಿಶ್ವವು ಶ್ಲಾಘಿಸುತ್ತಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.

ಎಲ್‌ಪಿಜಿ, ಪಡಿತರ, ಪಿಂಚಣಿ ಸೇರಿದಂತೆ 300 ಯೋಜನೆಗಳ ಪ್ರಯೋಜನಗಳನ್ನು ನೇರವಾಗಿ ಫಲಾನುಭವಿಗಳಿಗೆ ಒದಗಿಸಲು ಸರ್ಕಾರವು ನೇರ ಲಾಭ ವರ್ಗಾವಣೆಯನ್ನು ಬಳಸುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಇದನ್ನೂ ಓದಿ: ಆಗಸ್ಟ್‌‌ 5 ರಂದು ಬಿಜೆಪಿ ಸೇರಲಿರುವ ಉಚ್ಚಾಟಿತ ಬಿಎಸ್‌ಪಿ ಶಾಸಕ ಎನ್‌. ಮಹೇಶ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....