HomeUncategorizedಸೆಂಟ್ರಲ್ ವಿಸ್ತಾ ಹೊಸ ಸಂಸತ್ ಭವನಕ್ಕೆ ಡಿಸೆಂಬರ್‌ನಲ್ಲಿ ಪ್ರಧಾನಿಯಿಂದ ಅಡಿಪಾಯ!

ಸೆಂಟ್ರಲ್ ವಿಸ್ತಾ ಹೊಸ ಸಂಸತ್ ಭವನಕ್ಕೆ ಡಿಸೆಂಬರ್‌ನಲ್ಲಿ ಪ್ರಧಾನಿಯಿಂದ ಅಡಿಪಾಯ!

ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್ ನೇತೃತ್ವದಲ್ಲಿ 861.90 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಹೊಸ ಸಂಸತ್ತಿನ ಕಟ್ಟಡ ನಿರ್ಮಿಸಲಾಗುತ್ತಿದೆ.

- Advertisement -
- Advertisement -

ಹೊಸದಾಗಿ ನಿರ್ಮಿಸಲಾಗುತ್ತಿರುವ ಸಂಸತ್ ಭವನಕ್ಕೆ ಡಿಸೆಂಬರ್‌ 10ಕ್ಕೆ ಪ್ರಧಾನಿ ನರೇಂದ್ರ ಮೋದಿ ಅಡಿಪಾಯ ಹಾಕುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್ ನೇತೃತ್ವದಲ್ಲಿ 861.90 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಹೊಸ ಸಂಸತ್ತಿನ ಕಟ್ಟಡ ನಿರ್ಮಿಸಲಾಗುತ್ತಿದೆ.

ಸಂಸತ್ತಿನ ಸಂಕೀರ್ಣದಲ್ಲಿರುವ ಮಹಾತ್ಮ ಗಾಂಧಿ ಮತ್ತು ಭೀಮ್ ರಾವ್ ಅಂಬೇಡ್ಕರ್ ಸೇರಿದಂತೆ ಸುಮಾರು ಐದು ಪ್ರತಿಮೆಗಳನ್ನು ನಿರ್ಮಾಣ ಕಾರ್ಯದಿಂದಾಗಿ ತಾತ್ಕಾಲಿಕವಾಗಿ ಸ್ಥಳಾಂತರಿಸುವ ಸಾಧ್ಯತೆಯಿದೆ. ಯೋಜನೆ ಪೂರ್ಣಗೊಂಡ ನಂತರ ಹೊಸ ಸಂಸತ್ ಭವನ ಆವರಣದ ಪ್ರಮುಖ ತಾಣಗಳಲ್ಲಿ ಈ ಪುತ್ಥಳಿಗಳನ್ನು ಮರು ಸ್ಥಾಪಿಸಲಾಗುತ್ತದೆ ಎಂದು ಹೇಳಲಾಗಿದೆ.

ಹೊಸ ಸಂಸತ್ತಿನ ಕಟ್ಟಡಕ್ಕೆ ಶಂಕುಸ್ಥಾಪನೆ ದಿನಾಂಕ ಡಿಸೆಂಬರ್ 10ರ ಆಸುಪಾಸಿನಲ್ಲಿ ನಿಗದಿಯಾಗುವ ಸೂಚನೆಗಳಿದ್ದರೂ, ಪ್ರಧಾನಿ ಮೋದಿಯವರ ಲಭ್ಯತೆ ಆಧರಿಸಿ ದಿನಾಂಕವನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ದೆಹಲಿ ಚಲೋಗೆ ಮುನ್ನ ಡಜನ್‌ಗಟ್ಟಲೇ ರೈತ ಮುಖಂಡರ ಬಂಧನ: ಯೋಗೇಂದ್ರ ಯಾದವ್ ಆರೋಪ

ಸೆಂಟ್ರಲ್ ವಿಸ್ತಾ ಪುನರಾಭಿವೃದ್ಧಿ ಯೋಜನೆಯಡಿ ಹೊಸ ಕಟ್ಟಡವನ್ನು ಈಗಿರುವ ಕಟ್ಟಡದ ಸಮೀಪದಲ್ಲಿ ಹೊಸಕಟ್ಟಡ ನಿರ್ಮಿಸಲಾಗುವುದು ಮತ್ತು ನಿರ್ಮಾಣ ಕಾರ್ಯಗಳು ಪ್ರಾರಂಭವಾದಾಗಿನಿಂದ 21 ತಿಂಗಳಲ್ಲಿ ಪೂರ್ಣಗೊಳಿಸುವ ನಿರೀಕ್ಷೆಯಿದೆ.

ತ್ರಿಕೋನ ಆಕಾರದಲ್ಲಿ ನಿರ್ಮಾಣವಾಗಲಿರುವ ಸಂಸತ್ ಭವನದ ಜತೆಗೆ ಕೇಂದ್ರೀಯ ಸಚಿವಾಲಯಗಳ ಮತ್ತು ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್‌ವರೆಗಿನ 3 ಕಿ.ಮೀ ಉದ್ದದ ರಾಜ್‌ಪತ್‌ ಮಾರ್ಗವನ್ನು ಪುನರುಜ್ಜೀವನಗೊಳಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.

ಯೋಜನೆಯ ಪ್ರಕಾರ, ಎಲ್ಲಾ ಸಂಸದರಿಗೆ ಪ್ರತ್ಯೇಕ ಕಚೇರಿಗಳನ್ನು ಹೊಂದಿರುವ ಹೊಸ ಸಂಸತ್ತಿನ ಕಟ್ಟಡವು ಇತ್ತೀಚಿನ ಡಿಜಿಟಲ್ ಸಂಪರ್ಕಸಾಧನಗಳನ್ನು ಹೊಂದಲಿದೆ. ಭವ್ಯವಾದ ಸಂವಿಧಾನ ಭವನ, ಸಂಸತ್ತಿನ ಸದಸ್ಯರಿಗೆ ವಿಶ್ರಾಂತಿ ಕೋಣೆ, ಗ್ರಂಥಾಲಯ, ಬಹು ಸಮಿತಿ ಕೊಠಡಿಗಳು, ಊಟದ ಪ್ರದೇಶಗಳು ಮತ್ತು ಸಾಕಷ್ಟು ಪಾರ್ಕಿಂಗ್ ಸ್ಥಳವನ್ನು ಹೊಂದಿರಲಿದೆ.

ಈಗಿರುವ ಸಂಸತ್ ಭವನಕ್ಕೆ ಫೆಬ್ರವರಿ 12, 1921 ರಂದು ಅಡಿಪಾಯ ಹಾಕಲಾಗಿತ್ತು. ಭವನ ನಿರ್ಮಾಣಕ್ಕೆ 83 ಲಕ್ಷ ರೂಪಾಯಿ ವೆಚ್ಚವಾಗಿತ್ತು, ಸಂಸತ್ ಭವನ ಪೂರ್ಣಗೊಳ್ಳಲು ಆರು ವರ್ಷಗಳನ್ನು ತೆಗೆದುಕೊಂಡಿತು.  ಜನವರಿ 18, 1927 ರಂದು ಅಂದಿನ ಭಾರತದ ಗವರ್ನರ್ ಜನರಲ್ ಲಾರ್ಡ್ ಇರ್ವಿನ್ ಉದ್ಘಾಟನೆ ಮಾಡಿದ್ದರು. ಈಗಿನ ಸೆಂಟ್ರಲ್ ವಿಸ್ತಾಗೆ 861 ಕೋಟಿ ರೂ ವೆಚ್ಚ ಮಾಡುವ ಅಗತ್ಯವಿದೆಯೇ ಎಂಬ ಪ್ರಶ್ನೆಗಳು ಸಹ ಎದ್ದಿವೆ.


ಇದನ್ನೂ ಓದಿ: ನವೆಂಬರ್ 26-27 ಸಾರ್ವತ್ರಿಕ ಮುಷ್ಕರ: ಕೇಂದ್ರ ಮೊಂಡುತನ ಬಿಟ್ಟು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...