HomeUncategorizedಸೆಂಟ್ರಲ್ ವಿಸ್ತಾ ಹೊಸ ಸಂಸತ್ ಭವನಕ್ಕೆ ಡಿಸೆಂಬರ್‌ನಲ್ಲಿ ಪ್ರಧಾನಿಯಿಂದ ಅಡಿಪಾಯ!

ಸೆಂಟ್ರಲ್ ವಿಸ್ತಾ ಹೊಸ ಸಂಸತ್ ಭವನಕ್ಕೆ ಡಿಸೆಂಬರ್‌ನಲ್ಲಿ ಪ್ರಧಾನಿಯಿಂದ ಅಡಿಪಾಯ!

ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್ ನೇತೃತ್ವದಲ್ಲಿ 861.90 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಹೊಸ ಸಂಸತ್ತಿನ ಕಟ್ಟಡ ನಿರ್ಮಿಸಲಾಗುತ್ತಿದೆ.

- Advertisement -
- Advertisement -

ಹೊಸದಾಗಿ ನಿರ್ಮಿಸಲಾಗುತ್ತಿರುವ ಸಂಸತ್ ಭವನಕ್ಕೆ ಡಿಸೆಂಬರ್‌ 10ಕ್ಕೆ ಪ್ರಧಾನಿ ನರೇಂದ್ರ ಮೋದಿ ಅಡಿಪಾಯ ಹಾಕುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ. ಟಾಟಾ ಪ್ರಾಜೆಕ್ಟ್ಸ್ ಲಿಮಿಟೆಡ್ ನೇತೃತ್ವದಲ್ಲಿ 861.90 ಕೋಟಿ ರೂಪಾಯಿಗಳ ವೆಚ್ಚದಲ್ಲಿ ಹೊಸ ಸಂಸತ್ತಿನ ಕಟ್ಟಡ ನಿರ್ಮಿಸಲಾಗುತ್ತಿದೆ.

ಸಂಸತ್ತಿನ ಸಂಕೀರ್ಣದಲ್ಲಿರುವ ಮಹಾತ್ಮ ಗಾಂಧಿ ಮತ್ತು ಭೀಮ್ ರಾವ್ ಅಂಬೇಡ್ಕರ್ ಸೇರಿದಂತೆ ಸುಮಾರು ಐದು ಪ್ರತಿಮೆಗಳನ್ನು ನಿರ್ಮಾಣ ಕಾರ್ಯದಿಂದಾಗಿ ತಾತ್ಕಾಲಿಕವಾಗಿ ಸ್ಥಳಾಂತರಿಸುವ ಸಾಧ್ಯತೆಯಿದೆ. ಯೋಜನೆ ಪೂರ್ಣಗೊಂಡ ನಂತರ ಹೊಸ ಸಂಸತ್ ಭವನ ಆವರಣದ ಪ್ರಮುಖ ತಾಣಗಳಲ್ಲಿ ಈ ಪುತ್ಥಳಿಗಳನ್ನು ಮರು ಸ್ಥಾಪಿಸಲಾಗುತ್ತದೆ ಎಂದು ಹೇಳಲಾಗಿದೆ.

ಹೊಸ ಸಂಸತ್ತಿನ ಕಟ್ಟಡಕ್ಕೆ ಶಂಕುಸ್ಥಾಪನೆ ದಿನಾಂಕ ಡಿಸೆಂಬರ್ 10ರ ಆಸುಪಾಸಿನಲ್ಲಿ ನಿಗದಿಯಾಗುವ ಸೂಚನೆಗಳಿದ್ದರೂ, ಪ್ರಧಾನಿ ಮೋದಿಯವರ ಲಭ್ಯತೆ ಆಧರಿಸಿ ದಿನಾಂಕವನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: ದೆಹಲಿ ಚಲೋಗೆ ಮುನ್ನ ಡಜನ್‌ಗಟ್ಟಲೇ ರೈತ ಮುಖಂಡರ ಬಂಧನ: ಯೋಗೇಂದ್ರ ಯಾದವ್ ಆರೋಪ

ಸೆಂಟ್ರಲ್ ವಿಸ್ತಾ ಪುನರಾಭಿವೃದ್ಧಿ ಯೋಜನೆಯಡಿ ಹೊಸ ಕಟ್ಟಡವನ್ನು ಈಗಿರುವ ಕಟ್ಟಡದ ಸಮೀಪದಲ್ಲಿ ಹೊಸಕಟ್ಟಡ ನಿರ್ಮಿಸಲಾಗುವುದು ಮತ್ತು ನಿರ್ಮಾಣ ಕಾರ್ಯಗಳು ಪ್ರಾರಂಭವಾದಾಗಿನಿಂದ 21 ತಿಂಗಳಲ್ಲಿ ಪೂರ್ಣಗೊಳಿಸುವ ನಿರೀಕ್ಷೆಯಿದೆ.

ತ್ರಿಕೋನ ಆಕಾರದಲ್ಲಿ ನಿರ್ಮಾಣವಾಗಲಿರುವ ಸಂಸತ್ ಭವನದ ಜತೆಗೆ ಕೇಂದ್ರೀಯ ಸಚಿವಾಲಯಗಳ ಮತ್ತು ರಾಷ್ಟ್ರಪತಿ ಭವನದಿಂದ ಇಂಡಿಯಾ ಗೇಟ್‌ವರೆಗಿನ 3 ಕಿ.ಮೀ ಉದ್ದದ ರಾಜ್‌ಪತ್‌ ಮಾರ್ಗವನ್ನು ಪುನರುಜ್ಜೀವನಗೊಳಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ.

ಯೋಜನೆಯ ಪ್ರಕಾರ, ಎಲ್ಲಾ ಸಂಸದರಿಗೆ ಪ್ರತ್ಯೇಕ ಕಚೇರಿಗಳನ್ನು ಹೊಂದಿರುವ ಹೊಸ ಸಂಸತ್ತಿನ ಕಟ್ಟಡವು ಇತ್ತೀಚಿನ ಡಿಜಿಟಲ್ ಸಂಪರ್ಕಸಾಧನಗಳನ್ನು ಹೊಂದಲಿದೆ. ಭವ್ಯವಾದ ಸಂವಿಧಾನ ಭವನ, ಸಂಸತ್ತಿನ ಸದಸ್ಯರಿಗೆ ವಿಶ್ರಾಂತಿ ಕೋಣೆ, ಗ್ರಂಥಾಲಯ, ಬಹು ಸಮಿತಿ ಕೊಠಡಿಗಳು, ಊಟದ ಪ್ರದೇಶಗಳು ಮತ್ತು ಸಾಕಷ್ಟು ಪಾರ್ಕಿಂಗ್ ಸ್ಥಳವನ್ನು ಹೊಂದಿರಲಿದೆ.

ಈಗಿರುವ ಸಂಸತ್ ಭವನಕ್ಕೆ ಫೆಬ್ರವರಿ 12, 1921 ರಂದು ಅಡಿಪಾಯ ಹಾಕಲಾಗಿತ್ತು. ಭವನ ನಿರ್ಮಾಣಕ್ಕೆ 83 ಲಕ್ಷ ರೂಪಾಯಿ ವೆಚ್ಚವಾಗಿತ್ತು, ಸಂಸತ್ ಭವನ ಪೂರ್ಣಗೊಳ್ಳಲು ಆರು ವರ್ಷಗಳನ್ನು ತೆಗೆದುಕೊಂಡಿತು.  ಜನವರಿ 18, 1927 ರಂದು ಅಂದಿನ ಭಾರತದ ಗವರ್ನರ್ ಜನರಲ್ ಲಾರ್ಡ್ ಇರ್ವಿನ್ ಉದ್ಘಾಟನೆ ಮಾಡಿದ್ದರು. ಈಗಿನ ಸೆಂಟ್ರಲ್ ವಿಸ್ತಾಗೆ 861 ಕೋಟಿ ರೂ ವೆಚ್ಚ ಮಾಡುವ ಅಗತ್ಯವಿದೆಯೇ ಎಂಬ ಪ್ರಶ್ನೆಗಳು ಸಹ ಎದ್ದಿವೆ.


ಇದನ್ನೂ ಓದಿ: ನವೆಂಬರ್ 26-27 ಸಾರ್ವತ್ರಿಕ ಮುಷ್ಕರ: ಕೇಂದ್ರ ಮೊಂಡುತನ ಬಿಟ್ಟು ಕೃಷಿ ಕಾಯ್ದೆಗಳನ್ನು ಹಿಂಪಡೆಯಬೇಕು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...