Homeಮುಖಪುಟಭಾರತ್‌ ಜೋಡೋ ನ್ಯಾಯ ಯಾತ್ರೆ: ನಾಗಾಲ್ಯಾಂಡ್ ಜನತೆಗೆ ಮೋದಿ ನೀಡಿದ್ದು ಸುಳ್ಳು ಭರವಸೆ; ರಾಹುಲ್‌ ಗಾಂಧಿ

ಭಾರತ್‌ ಜೋಡೋ ನ್ಯಾಯ ಯಾತ್ರೆ: ನಾಗಾಲ್ಯಾಂಡ್ ಜನತೆಗೆ ಮೋದಿ ನೀಡಿದ್ದು ಸುಳ್ಳು ಭರವಸೆ; ರಾಹುಲ್‌ ಗಾಂಧಿ

- Advertisement -
- Advertisement -

ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ ಯಾತ್ರೆ 4ನೇ ದಿನಕ್ಕೆ ಕಾಲಿಟ್ಟಿದ್ದು, ನಾಗಾಲ್ಯಾಂಡ್‌ನ ಮೊಕೊಕ್‌ಚುಂಗ್‌ನಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬುಧವಾರ ಬೈಕ್ ಸವಾರರೊಂದಿಗೆ ಮಾತುಕತೆಯನ್ನು ನಡೆಸಿದ್ದಾರೆ. ಇದಲ್ಲದೆ ಮೋದಿ ವಿರುದ್ದ ವಾಗ್ಧಾಳಿಯನ್ನು ನಡೆಸಿದ್ದಾರೆ. ಮೋದಿ ನಾಗಾಲ್ಯಾಂಡ್‌ ಜನತೆಗೆ 9 ವರ್ಷಗಳ ಹಿಂದೆ ನಾಗಾ ಒಪ್ಪಂದ ಬಗ್ಗೆ ಸುಳ್ಳು ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಅಸ್ಸಾಂನ ಬೈಕ್‌ ಸವಾರ ಶಹವರ್ ಹುಸೇನ್ ಅವರು ರಾಹುಲ್ ಗಾಂಧಿ ಜೊತೆ ಸಮಾಲೋಚನೆ ನಡೆಸಿರುವ ಬಗ್ಗೆ ಹೇಳಿಕೊಂಡಿದ್ದಾರೆ. ನಾವು ಇಬ್ಬರು ಬೈಕ್‌ಗಳ ಬಗ್ಗೆ ಮಾತ್ರ ಮಾತನಾಡಿದ್ದೇವೆ. ಅವರು ಬೈಕ್‌ ಸವಾರಿ ಮಾಡುತ್ತಾರೆ. ನಾನು ಬೈಕ್‌ ರೈಡರ್‌, ನಾವು ಅವರ ಲಡಾಖ್ ರೈಡಿಂಗ್‌ ಬಗ್ಗೆಯೂ ಮಾತನಾಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಈ ಹಿಂದೆ ಆಗಸ್ಟ್ 20 ರಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನದ ಸ್ಮರಣಾರ್ಥವಾಗಿ ಕಾಂಗ್ರೆಸ್ ನಾಯಕ ಕಳೆದ ವರ್ಷ ಲಡಾಖ್‌ನ ಪಾಂಗಾಂಗ್ ಸರೋವರಕ್ಕೆ ಬೈಕ್ ರೈಡ್ ಕೈಗೊಂಡಿದ್ದರು.

ಭಾರತ್‌ ಜೋಡೋ ನ್ಯಾಯ ಯಾತ್ರೆಯ 4ನೇ ದಿನ ಮೊಕೊಕ್‌ಚುಂಗ್‌ನಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಈಶಾನ್ಯ ರಾಜ್ಯಗಳ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದ್ದಾರೆ. ಭಾರತದ ಇತರ ಭಾಗಗಳಂತೆ ಈಶಾನ್ಯ ರಾಜ್ಯಗಳು ಮುಖ್ಯವಾಗಿದೆ ಎಂಬ ಸಂದೇಶವನ್ನು ನಾವು ಕಳುಹಿಸಲು ಬಯಸಿದ್ದೇವೆ. ಜನಸಂಖ್ಯೆ ಕಡಿಮೆಯಿದ್ದರೂ ಪರವಾಗಿಲ್ಲ, ಆದರೆ ಪ್ರಾಮುಖ್ಯತೆಯು ಒಂದೇ ಆಗಿರಬೇಕು ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ನಾಗಾ ಒಪ್ಪಂದ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ, ನಾಗಾಲ್ಯಾಂಡ್ ಜನತೆಗೆ ನೀಡಿದ ಭರವಸೆಗಳನ್ನು ಪ್ರಧಾನಿ ಈಡೇರಿಸಿಲ್ಲ. ನಾಗಾ ಶಾಂತಿ ಒಪ್ಪಂದದ ಕುರಿತಂತೆ ಪ್ರಧಾನಿ ಮೋದಿ ನಾಗಾಲ್ಯಾಂಡ್ ಜನರಿಗೆ ಸುಳ್ಳು ಭರವಸೆ ನೀಡಿ ದ್ರೋಹ ಮಾಡಿದ್ದಾರೆ. ನಿಮ್ಮ ಬಳಿ ಸಮಸ್ಯೆಗೆ ಪರಿಹಾರವಿಲ್ಲದಿದ್ದರೆ ಇದೆ ಎನ್ನುವ ಹಾಗೆ ನಾಟಕ ಮಾಡಬೇಡಿ. ನಮ್ಮ ಪ್ರಧಾನಿ ಮಣಿಪುರಕ್ಕೆ ಹೋಗದಿದ್ದಕ್ಕೆ ನನಗೆ ನಾಚಿಕೆಯಾಗುತ್ತಿದೆ. ನಾಗಾಲ್ಯಾಂಡ್, ಮಣಿಪುರ ಮತ್ತು ಅಸ್ಸಾಂ ಅಭಿವೃದ್ಧಿಯಿಂದ ದೂರ ಉಳಿದಿವೆ. ಇವುಗಳನ್ನು ಮುನ್ನೆಲೆಗೆ ತರುವುದೇ ಕಾಂಗ್ರೆಸ್‌ನ ಆಶಯವಾಗಿದೆ ಎಂದು ಹೇಳಿದರು.

ನಾಗಾಲ್ಯಾಂಡ್‌ನ ಕೈಗಾರಿಕೆಗಳ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ವಿದ್ಯುತ್ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಹೊಂದಿರುವ ಒಂದು ಮಗುವಿನ ಜೊತೆ ಮೂಲ ಸೌಕರ್ಯಗಳಿಂದ ವಂಚಿತವಾಗಿರುವ ನಾಗಾಲ್ಯಾಂಡ್‌ನ ಒಂದು ಮಗು ಸ್ಪರ್ಧಿಸಲು ಸಾಧ್ಯವೇ? ಇಬ್ಬರು ಮಾತ್ರ ದೇಶವನ್ನು ನಡೆಸುತ್ತಿದ್ದಾರೆ. ದೇಶದಲ್ಲಿರುವ 500 ದೊಡ್ಡ ಕಂಪನಿಗಳಲ್ಲಿ ಒಂದೇ ಒಂದು ನಾಗಾಲ್ಯಾಂಡ್‌ನ ಜನರಿಗೆ ಸೇರಿಲ್ಲ. ಬಿಜೆಪಿ ಮತ್ತು ಆರೆಸ್ಸೆಸ್ ದೇಶದ ವೈವಿಧ್ಯಮಯ ಸಂಸ್ಕೃತಿಗಳು ಮತ್ತು ಆಚಾರಗಳನ್ನು ಅಗೌರವಿಸುತ್ತಿದ್ದಾರೆ. ನೀವು (ನಾಗಾಲ್ಯಾಂಡ್‌ನ ಜನರು) ಏನು ತಿನ್ನುತ್ತೀರಿ ಮತ್ತು ನೀವು ಯಾವ ಧರ್ಮವನ್ನು ನಂಬುತ್ತೀರಿ ಎಂಬುದು ನಿಮ್ಮ ವೈಯಕ್ತಿಕ ಆಯ್ಕೆಯಾಗಿದೆ. ಅದರ ಮೇಲೆ ದಾಳಿ ಮಾಡುವುದು ಸರಿಯಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ನಾಗಾಲ್ಯಾಂಡ್‌ನ ರಸ್ತೆಗಳ ಸ್ಥಿತಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಒಂಬತ್ತು ವರ್ಷಗಳ ಹಿಂದೆ ನಾಗಾಲ್ಯಾಂಡ್ ಮತ್ತು ನಾಗಾ ಜನರಿಗೆ ನೀಡಿದ ಒಂದೇ ಒಂದು ಭರವಸೆಯನ್ನು ನರೇಂದ್ರ ಮೋದಿ ಈಡೇರಿಸಿಲ್ಲ, ನಾಗಾಲ್ಯಾಂಡ್‌ನ ರಸ್ತೆಗಳ ಸ್ಥಿತಿ ತುಂಬಾ ಕೆಟ್ಟದಾಗಿದೆ. ಬಿಜೆಪಿಯ ರಾಜಕೀಯ ಕುತಂತ್ರದಿಂದ ಮಣಿಪುರ ಛಿಧ್ರವಾಗಿದೆ. ದಂಗೆ ಎಬ್ಬಿಸುವ ಮೂಲಕ ಇಡೀ ರಾಜ್ಯವನ್ನೇ ಸುಟ್ಟು ಹಾಕಲಾಯಿತು. ಆದರೆ ಆ ರಾಜ್ಯಕ್ಕೆ ಕಾಲಿಡಲು ಪ್ರಧಾನಿಗೆ ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

ಕಳೆದ ವರ್ಷ ನಾವು ಭಾರತ್ ಜೋಡೋ ಯಾತ್ರೆಯಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆದಿದ್ದೇವೆ.  ವಿಭಿನ್ನ ಧರ್ಮಗಳು, ವಿಭಿನ್ನ ಭಾಷೆಗಳು, ವಿಭಿನ್ನ ಸಂಸ್ಕೃತಿಗಳು ಮತ್ತು ವಿಭಿನ್ನ ಆಲೋಚನೆಗಳಿರುವ ಜನರನ್ನು ನಾವು ಒಟ್ಟಿಗೆ ಸೇರಿಸಿದ್ದೇವೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಇದನ್ನು ಓದಿ: ‘ಹಿಂದುತ್ವ ವಾಚ್’ ಎಕ್ಸ್‌ ಖಾತೆಗೆ ಭಾರತದಲ್ಲಿ ನಿರ್ಬಂಧ!

 

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...