Homeಮುಖಪುಟಭಾರತ್‌ ಜೋಡೋ ನ್ಯಾಯ ಯಾತ್ರೆ: ನಾಗಾಲ್ಯಾಂಡ್ ಜನತೆಗೆ ಮೋದಿ ನೀಡಿದ್ದು ಸುಳ್ಳು ಭರವಸೆ; ರಾಹುಲ್‌ ಗಾಂಧಿ

ಭಾರತ್‌ ಜೋಡೋ ನ್ಯಾಯ ಯಾತ್ರೆ: ನಾಗಾಲ್ಯಾಂಡ್ ಜನತೆಗೆ ಮೋದಿ ನೀಡಿದ್ದು ಸುಳ್ಳು ಭರವಸೆ; ರಾಹುಲ್‌ ಗಾಂಧಿ

- Advertisement -
- Advertisement -

ಕಾಂಗ್ರೆಸ್‌ನ ಭಾರತ್‌ ಜೋಡೋ ನ್ಯಾಯ ಯಾತ್ರೆ 4ನೇ ದಿನಕ್ಕೆ ಕಾಲಿಟ್ಟಿದ್ದು, ನಾಗಾಲ್ಯಾಂಡ್‌ನ ಮೊಕೊಕ್‌ಚುಂಗ್‌ನಲ್ಲಿ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ ಬುಧವಾರ ಬೈಕ್ ಸವಾರರೊಂದಿಗೆ ಮಾತುಕತೆಯನ್ನು ನಡೆಸಿದ್ದಾರೆ. ಇದಲ್ಲದೆ ಮೋದಿ ವಿರುದ್ದ ವಾಗ್ಧಾಳಿಯನ್ನು ನಡೆಸಿದ್ದಾರೆ. ಮೋದಿ ನಾಗಾಲ್ಯಾಂಡ್‌ ಜನತೆಗೆ 9 ವರ್ಷಗಳ ಹಿಂದೆ ನಾಗಾ ಒಪ್ಪಂದ ಬಗ್ಗೆ ಸುಳ್ಳು ಭರವಸೆ ನೀಡಿದ್ದಾರೆ ಎಂದು ಹೇಳಿದ್ದಾರೆ.

ಅಸ್ಸಾಂನ ಬೈಕ್‌ ಸವಾರ ಶಹವರ್ ಹುಸೇನ್ ಅವರು ರಾಹುಲ್ ಗಾಂಧಿ ಜೊತೆ ಸಮಾಲೋಚನೆ ನಡೆಸಿರುವ ಬಗ್ಗೆ ಹೇಳಿಕೊಂಡಿದ್ದಾರೆ. ನಾವು ಇಬ್ಬರು ಬೈಕ್‌ಗಳ ಬಗ್ಗೆ ಮಾತ್ರ ಮಾತನಾಡಿದ್ದೇವೆ. ಅವರು ಬೈಕ್‌ ಸವಾರಿ ಮಾಡುತ್ತಾರೆ. ನಾನು ಬೈಕ್‌ ರೈಡರ್‌, ನಾವು ಅವರ ಲಡಾಖ್ ರೈಡಿಂಗ್‌ ಬಗ್ಗೆಯೂ ಮಾತನಾಡಿದ್ದೇವೆ ಎಂದು ಹೇಳಿಕೊಂಡಿದ್ದಾರೆ. ಈ ಹಿಂದೆ ಆಗಸ್ಟ್ 20 ರಂದು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರ ಜನ್ಮದಿನದ ಸ್ಮರಣಾರ್ಥವಾಗಿ ಕಾಂಗ್ರೆಸ್ ನಾಯಕ ಕಳೆದ ವರ್ಷ ಲಡಾಖ್‌ನ ಪಾಂಗಾಂಗ್ ಸರೋವರಕ್ಕೆ ಬೈಕ್ ರೈಡ್ ಕೈಗೊಂಡಿದ್ದರು.

ಭಾರತ್‌ ಜೋಡೋ ನ್ಯಾಯ ಯಾತ್ರೆಯ 4ನೇ ದಿನ ಮೊಕೊಕ್‌ಚುಂಗ್‌ನಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಈಶಾನ್ಯ ರಾಜ್ಯಗಳ ಪ್ರಾಮುಖ್ಯತೆಯನ್ನು ಒತ್ತಿ ಹೇಳಿದ್ದಾರೆ. ಭಾರತದ ಇತರ ಭಾಗಗಳಂತೆ ಈಶಾನ್ಯ ರಾಜ್ಯಗಳು ಮುಖ್ಯವಾಗಿದೆ ಎಂಬ ಸಂದೇಶವನ್ನು ನಾವು ಕಳುಹಿಸಲು ಬಯಸಿದ್ದೇವೆ. ಜನಸಂಖ್ಯೆ ಕಡಿಮೆಯಿದ್ದರೂ ಪರವಾಗಿಲ್ಲ, ಆದರೆ ಪ್ರಾಮುಖ್ಯತೆಯು ಒಂದೇ ಆಗಿರಬೇಕು ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಮತ್ತು ನಾಗಾ ಒಪ್ಪಂದ ಬಗ್ಗೆ ಮಾತನಾಡಿದ ರಾಹುಲ್ ಗಾಂಧಿ, ನಾಗಾಲ್ಯಾಂಡ್ ಜನತೆಗೆ ನೀಡಿದ ಭರವಸೆಗಳನ್ನು ಪ್ರಧಾನಿ ಈಡೇರಿಸಿಲ್ಲ. ನಾಗಾ ಶಾಂತಿ ಒಪ್ಪಂದದ ಕುರಿತಂತೆ ಪ್ರಧಾನಿ ಮೋದಿ ನಾಗಾಲ್ಯಾಂಡ್ ಜನರಿಗೆ ಸುಳ್ಳು ಭರವಸೆ ನೀಡಿ ದ್ರೋಹ ಮಾಡಿದ್ದಾರೆ. ನಿಮ್ಮ ಬಳಿ ಸಮಸ್ಯೆಗೆ ಪರಿಹಾರವಿಲ್ಲದಿದ್ದರೆ ಇದೆ ಎನ್ನುವ ಹಾಗೆ ನಾಟಕ ಮಾಡಬೇಡಿ. ನಮ್ಮ ಪ್ರಧಾನಿ ಮಣಿಪುರಕ್ಕೆ ಹೋಗದಿದ್ದಕ್ಕೆ ನನಗೆ ನಾಚಿಕೆಯಾಗುತ್ತಿದೆ. ನಾಗಾಲ್ಯಾಂಡ್, ಮಣಿಪುರ ಮತ್ತು ಅಸ್ಸಾಂ ಅಭಿವೃದ್ಧಿಯಿಂದ ದೂರ ಉಳಿದಿವೆ. ಇವುಗಳನ್ನು ಮುನ್ನೆಲೆಗೆ ತರುವುದೇ ಕಾಂಗ್ರೆಸ್‌ನ ಆಶಯವಾಗಿದೆ ಎಂದು ಹೇಳಿದರು.

ನಾಗಾಲ್ಯಾಂಡ್‌ನ ಕೈಗಾರಿಕೆಗಳ ಸ್ಥಿತಿಯ ಬಗ್ಗೆ ಕಳವಳ ವ್ಯಕ್ತಪಡಿಸಿದ ರಾಹುಲ್ ಗಾಂಧಿ, ವಿದ್ಯುತ್ ಸೇರಿದಂತೆ ಎಲ್ಲಾ ಸೌಲಭ್ಯಗಳನ್ನು ಹೊಂದಿರುವ ಒಂದು ಮಗುವಿನ ಜೊತೆ ಮೂಲ ಸೌಕರ್ಯಗಳಿಂದ ವಂಚಿತವಾಗಿರುವ ನಾಗಾಲ್ಯಾಂಡ್‌ನ ಒಂದು ಮಗು ಸ್ಪರ್ಧಿಸಲು ಸಾಧ್ಯವೇ? ಇಬ್ಬರು ಮಾತ್ರ ದೇಶವನ್ನು ನಡೆಸುತ್ತಿದ್ದಾರೆ. ದೇಶದಲ್ಲಿರುವ 500 ದೊಡ್ಡ ಕಂಪನಿಗಳಲ್ಲಿ ಒಂದೇ ಒಂದು ನಾಗಾಲ್ಯಾಂಡ್‌ನ ಜನರಿಗೆ ಸೇರಿಲ್ಲ. ಬಿಜೆಪಿ ಮತ್ತು ಆರೆಸ್ಸೆಸ್ ದೇಶದ ವೈವಿಧ್ಯಮಯ ಸಂಸ್ಕೃತಿಗಳು ಮತ್ತು ಆಚಾರಗಳನ್ನು ಅಗೌರವಿಸುತ್ತಿದ್ದಾರೆ. ನೀವು (ನಾಗಾಲ್ಯಾಂಡ್‌ನ ಜನರು) ಏನು ತಿನ್ನುತ್ತೀರಿ ಮತ್ತು ನೀವು ಯಾವ ಧರ್ಮವನ್ನು ನಂಬುತ್ತೀರಿ ಎಂಬುದು ನಿಮ್ಮ ವೈಯಕ್ತಿಕ ಆಯ್ಕೆಯಾಗಿದೆ. ಅದರ ಮೇಲೆ ದಾಳಿ ಮಾಡುವುದು ಸರಿಯಲ್ಲ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ನಾಗಾಲ್ಯಾಂಡ್‌ನ ರಸ್ತೆಗಳ ಸ್ಥಿತಿಯನ್ನು ಉದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಒಂಬತ್ತು ವರ್ಷಗಳ ಹಿಂದೆ ನಾಗಾಲ್ಯಾಂಡ್ ಮತ್ತು ನಾಗಾ ಜನರಿಗೆ ನೀಡಿದ ಒಂದೇ ಒಂದು ಭರವಸೆಯನ್ನು ನರೇಂದ್ರ ಮೋದಿ ಈಡೇರಿಸಿಲ್ಲ, ನಾಗಾಲ್ಯಾಂಡ್‌ನ ರಸ್ತೆಗಳ ಸ್ಥಿತಿ ತುಂಬಾ ಕೆಟ್ಟದಾಗಿದೆ. ಬಿಜೆಪಿಯ ರಾಜಕೀಯ ಕುತಂತ್ರದಿಂದ ಮಣಿಪುರ ಛಿಧ್ರವಾಗಿದೆ. ದಂಗೆ ಎಬ್ಬಿಸುವ ಮೂಲಕ ಇಡೀ ರಾಜ್ಯವನ್ನೇ ಸುಟ್ಟು ಹಾಕಲಾಯಿತು. ಆದರೆ ಆ ರಾಜ್ಯಕ್ಕೆ ಕಾಲಿಡಲು ಪ್ರಧಾನಿಗೆ ಸಾಧ್ಯವಾಗಲಿಲ್ಲ ಎಂದು ಹೇಳಿದ್ದಾರೆ.

ಕಳೆದ ವರ್ಷ ನಾವು ಭಾರತ್ ಜೋಡೋ ಯಾತ್ರೆಯಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆದಿದ್ದೇವೆ.  ವಿಭಿನ್ನ ಧರ್ಮಗಳು, ವಿಭಿನ್ನ ಭಾಷೆಗಳು, ವಿಭಿನ್ನ ಸಂಸ್ಕೃತಿಗಳು ಮತ್ತು ವಿಭಿನ್ನ ಆಲೋಚನೆಗಳಿರುವ ಜನರನ್ನು ನಾವು ಒಟ್ಟಿಗೆ ಸೇರಿಸಿದ್ದೇವೆ ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ.

ಇದನ್ನು ಓದಿ: ‘ಹಿಂದುತ್ವ ವಾಚ್’ ಎಕ್ಸ್‌ ಖಾತೆಗೆ ಭಾರತದಲ್ಲಿ ನಿರ್ಬಂಧ!

 

 

 

 

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...